ಐತಿಹಾಸಿಕ ಮೈಲಾರ ಕಾರ್ಣಿಕ “ತುಂಬಿದಕೊಡ ತುಳುಕಿತಲೇ ಪರಾಕ್” ಕಾರ್ಣಿಕ ನುಡಿ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆಯಾಗಲಿದೆ ಎಂದು ಕಾರ್ಣಿಕದ ವಿಶ್ಲೇಷಣೆ

Date:

 

ಐತಿಹಾಸಿಕ ಮೈಲಾರ ಕಾರ್ಣಿಕ “ತುಂಬಿದಕೊಡ ತುಳುಕಿತಲೇ ಪರಾಕ್” ಕಾರ್ಣಿಕ ನುಡಿ
ರಾಜ್ಯದಲ್ಲಿ ಉತ್ತಮ ಮಳೆ, ಬೆಳೆಯಾಗಲಿದೆ ಎಂದು ಕಾರ್ಣಿಕದ ವಿಶ್ಲೇಷಣೆ
ಹಾವೇರಿ: ರಾಜ್ಯ ಹಾಗೂ ಹೊರರಾಜ್ಯಗಳ ಜನ ಕುತೂಹಲದಿಂದ ಕಾಯುತ್ತಿದ್ದ

ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗ ಕಾರ್ಣಿಕದ ಭವಿಷ್ಯವಾಣಿ ಶುಕ್ರವಾರ ಸಂಜೆ ಹೊರಬಿದ್ದಿದೆ, “ತುಂಬಿದಕೊಡ ತುಳುಕಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ರಾಮಪ್ಪ ನುಡಿದಿದ್ದು, ಈ ವರ್ಷ ರಾಜ್ಯದಲ್ಲಿ ಮಳೆ – ಬೆಳೆ ಸಮೃದ್ಧವಾಗಿರಲಿದೆ ಎಂದು ಕಾರ್ಣಿಕದ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಲಾಗುತ್ತಿದೆ.
ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. ೧೫ ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ, ಸಂಪಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾನೆ. ಮೈಲಾರ ಲಿಂಗೇಶ್ವರನ ಕಾರ್ಣಿಕ ಕೇಳಿ ಲಕ್ಷಾಂತರ ಭಕ್ತರು ಪುನೀತರಾಗಿದ್ದಾರೆ. ಈ ಭವಿಷ್ಯವಾಣಿ ಬಗ್ಗೆ ರಾಜ್ಯದಲ್ಲಿ ಈಗ ಭಾರೀ ಚರ್ಚೆಯಾಗುತ್ತಿದೆ.
ಅತಿವೃಷ್ಟಯಿಂದ ಕಂಗೆಟ್ಟಿದ್ದ ನಾಡಿನ ಜನತೆಗೆ ಮೈಲಾರಲಿಂಗದ ಕಾರ್ಣಿಕ ಸಿಹಿ ಸುದ್ದಿ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ, ಬೆಳೆ ಸಮೃದ್ಧಿಯಾಗಿ ಬರಲಿದೆ. ಇದರಿಂದ ನಾಡಿನ ರೈತರ ಮುಖದಲ್ಲಿ ನಗುವಿನ ಸಿಂಚನ ಮೂಡಿಸುವ ಭರವಸೆ ಸಿಕ್ಕಂತಾಗಿದೆ. ಈ ಹಿನ್ನೆಲೆ ಮೈಲಾರ ಲಿಂಗದ ಕಾರ್ಣಿಕ ರಾಜ್ಯದಲ್ಲಿ ಗಮನ ಸೆಳೆದಿದೆ.
ಕಳೆದ ಬಾರಿಯ ಕಾರ್ಣಿಕ ಏನಿತ್ತು? ಕಳೆದ ಬಾರಿ “ಸಂಪಾಯಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ನುಡಿದಿದ್ದ. ಕೇವಲ ಮಳೆ-ಬೆಳೆಗೆ ಸಂಬಂಧಿಸಿದಂತೆ ಕಾರ್ಣಿಕವನ್ನು ನುಡಿಯಲಾಗಿದೆ ಎನ್ನಲಾಗಿದೆ. ಐತಿಹಾಸಿಕ ಮೈಲಾರ ಕಾರ್ಣಿಕ “ತುಂಬಿದಕೊಡ ತುಳುಕಿತಲೇ ಪರಾಕ್” ಕಾರ್ಣಿಕ ನುಡಿ ಕೇಳಿ ಲಕ್ಷಾಂತರ ಭಕ್ತರು ಪುನೀತರಾಗಿದ್ದಾರೆ. ಈ ಭವಿಷ್ಯವಾಣಿ ಬಗ್ಗೆ ರಾಜ್ಯದಲ್ಲಿ ಈಗ ಭಾರೀ ಚರ್ಚೆಯಾಗುತ್ತಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

 

ಐತಿಹಾಸಿಕ ಮೈಲಾರ ಕಾರ್ಣಿಕ “ತುಂಬಿದಕೊಡ ತುಳುಕಿತಲೇ ಪರಾಕ್” ಕಾರ್ಣಿಕ ನುಡಿ
ರಾಜ್ಯದಲ್ಲಿ ಉತ್ತಮ ಮಳೆ, ಬೆಳೆಯಾಗಲಿದೆ ಎಂದು ಕಾರ್ಣಿಕದ ವಿಶ್ಲೇಷಣೆ
ಹಾವೇರಿ: ರಾಜ್ಯ ಹಾಗೂ ಹೊರರಾಜ್ಯಗಳ ಜನ ಕುತೂಹಲದಿಂದ ಕಾಯುತ್ತಿದ್ದ

ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗ ಕಾರ್ಣಿಕದ ಭವಿಷ್ಯವಾಣಿ ಶುಕ್ರವಾರ ಸಂಜೆ ಹೊರಬಿದ್ದಿದೆ, “ತುಂಬಿದಕೊಡ ತುಳುಕಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ರಾಮಪ್ಪ ನುಡಿದಿದ್ದು, ಈ ವರ್ಷ ರಾಜ್ಯದಲ್ಲಿ ಮಳೆ – ಬೆಳೆ ಸಮೃದ್ಧವಾಗಿರಲಿದೆ ಎಂದು ಕಾರ್ಣಿಕದ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಲಾಗುತ್ತಿದೆ.
ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. ೧೫ ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ, ಸಂಪಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾನೆ. ಮೈಲಾರ ಲಿಂಗೇಶ್ವರನ ಕಾರ್ಣಿಕ ಕೇಳಿ ಲಕ್ಷಾಂತರ ಭಕ್ತರು ಪುನೀತರಾಗಿದ್ದಾರೆ. ಈ ಭವಿಷ್ಯವಾಣಿ ಬಗ್ಗೆ ರಾಜ್ಯದಲ್ಲಿ ಈಗ ಭಾರೀ ಚರ್ಚೆಯಾಗುತ್ತಿದೆ.
ಅತಿವೃಷ್ಟಯಿಂದ ಕಂಗೆಟ್ಟಿದ್ದ ನಾಡಿನ ಜನತೆಗೆ ಮೈಲಾರಲಿಂಗದ ಕಾರ್ಣಿಕ ಸಿಹಿ ಸುದ್ದಿ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ, ಬೆಳೆ ಸಮೃದ್ಧಿಯಾಗಿ ಬರಲಿದೆ. ಇದರಿಂದ ನಾಡಿನ ರೈತರ ಮುಖದಲ್ಲಿ ನಗುವಿನ ಸಿಂಚನ ಮೂಡಿಸುವ ಭರವಸೆ ಸಿಕ್ಕಂತಾಗಿದೆ. ಈ ಹಿನ್ನೆಲೆ ಮೈಲಾರ ಲಿಂಗದ ಕಾರ್ಣಿಕ ರಾಜ್ಯದಲ್ಲಿ ಗಮನ ಸೆಳೆದಿದೆ.
ಕಳೆದ ಬಾರಿಯ ಕಾರ್ಣಿಕ ಏನಿತ್ತು? ಕಳೆದ ಬಾರಿ “ಸಂಪಾಯಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ನುಡಿದಿದ್ದ. ಕೇವಲ ಮಳೆ-ಬೆಳೆಗೆ ಸಂಬಂಧಿಸಿದಂತೆ ಕಾರ್ಣಿಕವನ್ನು ನುಡಿಯಲಾಗಿದೆ ಎನ್ನಲಾಗಿದೆ. ಐತಿಹಾಸಿಕ ಮೈಲಾರ ಕಾರ್ಣಿಕ “ತುಂಬಿದಕೊಡ ತುಳುಕಿತಲೇ ಪರಾಕ್” ಕಾರ್ಣಿಕ ನುಡಿ ಕೇಳಿ ಲಕ್ಷಾಂತರ ಭಕ್ತರು ಪುನೀತರಾಗಿದ್ದಾರೆ. ಈ ಭವಿಷ್ಯವಾಣಿ ಬಗ್ಗೆ ರಾಜ್ಯದಲ್ಲಿ ಈಗ ಭಾರೀ ಚರ್ಚೆಯಾಗುತ್ತಿದೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ

೨೦೨೮ರ ಚುನಾವಣೆಯಲ್ಲಿ ನಾನೆ ಅಭ್ಯರ್ಥಿ: ಬಸವರಾಜ ಶಿವಣ್ಣನವರ ಹಾವೇರಿ: ೨೦೨೮ ವಿಧಾನಸಭೆ ಚುನಾವಣೆಯಲ್ಲಿ...

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಾಕೀತು

೨ ತಿಂಗಳು ಒಳಗೆ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಉಪಸಭಾಧ್ಯಕ್ಷ ರುದ್ರಪ್ಪ...

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ

ಹಾವೇರಿ ವಿಶ್ವವಿದ್ಯಾಲಯದ ಘಟಿಕೋತ್ಸವ ವಿವಿ ಕ್ಯಾಂಪಸ್‌ನಲ್ಲಿಯೇ ನಡೆಸಲು ಎಸ್‌ಎಫ್‌ಐ ಒತ್ತಾಯ ಹಾವೇರಿ: ಹಾವೇರಿ...

ಏ. ೧೦ರಂದು ರಾಜ್ಯಾದ್ಯಂತ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರದ ಬಿಡುಗಡೆ

ಏ. ೧೦ರಂದು ರಾಜ್ಯಾದ್ಯಂತ "ಗ್ಯಾಂಗ್ಸ್ ಆಫ್ ಯುಕೆ" ಚಿತ್ರದ ಬಿಡುಗಡೆ ಹಾವೇರಿ: ಡೆಡ್ಲಿ...