ಕಾಂಗ್ರೆಸ್‌ನಲ್ಲಿ ಸದ್ಯಕ್ಕೆ “ಆನಂದ”, ಬಿಜಪಿಯಲ್ಲಿ ಬೇಗುದಿ

Date:


ಕಾಂಗ್ರೆಸ್‌ನಲ್ಲಿ ಸದ್ಯಕ್ಕೆ “ಆನಂದ”, ಬಿಜಪಿಯಲ್ಲಿ ಬೇಗುದಿ
ಹಾವೇರಿ: ಪ್ರತಿ ಬಾರಿ ಚುನಾವಣೆಯ ಸಂದರ್ಭದಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಗೂಡಾಗಿ, ಅಭ್ಯರ್ಥಿಯ ಹೆಸರು ಪ್ರಕಟಗೊಳ್ಳುವುದು ವಿಳಂಬವಾಗುತ್ತಿತ್ತು. ಇದರಿಂದ ರಾಜಕೀಯ ನಷ್ಟಕ್ಕೂ ಕಾರಣವಾಗುತ್ತಿದ್ದುದನ್ನು ಮನಗಂಡು ಎಚ್ಚೆತ್ತುಕೊಂಡು ಕಾಂಗ್ರೆಸ್ ವರಿಷ್ಠರು ಬಿಜೆಪಿಗಿಂತ ಮೊದಲೇ ತಮ್ಮ ಅಭ್ಯರ್ಥಿಯನ್ನು ಫೈನಲ್ ಮಾಡಿ, ರಾಜಕೀಯ ದಾಳ ಉರುಳಿಸಿದ್ದಾರೆ. ಕಾಂಗ್ರೆಸ್‌ನ ಮೊದಲ ಪಟ್ಟಿಯಲ್ಲಿ ಟಿಕೆಟ್ ಗಿಟ್ಟಿಸುವಲ್ಲಿ ಆನಂದ ಗಡ್ಡದೇವರಮಠ ಯಶಸ್ವಿಯಾಗಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್‌ನಲ್ಲಿ ಆನಂದ ಗಡ್ಡದ್ದೇವರಮಠಗೆ ಅಂತ ವಿರೋಧ ವ್ಯಕ್ತವಾಗಿಲ್ಲ.
ಘಟಾನುಘಟಿಗಳು ಕಾಂಗ್ರೆಸ್ ಟಿಕೆಟ್‌ಗೆ ಸರದಿಸಾಲಿನಲ್ಲಿ ನಿಂತಿದ್ದರೂ ಸಹ ಮೊದಲ ಪಟ್ಟಿಯಲ್ಲಿಯೇ ಆನಂದಗೆ ಅವಕಾಶ ಸಿಕ್ಕಿರುವುದು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಜಕೀಯವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಜಿಲ್ಲೆಯ ಐದೂ ಜನ ಕಾಂಗ್ರೆಸ್ ಶಾಸಕರು, ಕಾಂಗ್ರೆಸ್ ಪದಾಧಿಕಾರಿಗಳು ಒಮ್ಮತ ಹಾಗೂ ಸರ್ವಾನುಮತದಿಂದ ಮೊದಲ ಪಟ್ಟಿಯಲ್ಲಿಯೇ ಅಭ್ಯರ್ಥಿಯ ಹೆಸರು ಪ್ರಕಟವಾಗುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ.ಪಾಟೀಲ ಈ ಬಾರಿ ಕ್ಷೇತ್ರದಲ್ಲಿ ಗೆದ್ದೆ ತೀರಬೇಕೆನ್ನುವ ಉತ್ಸಾಹದಿಂದ ತಾಲೀಮು ನಡೆಸಿರುವುದು ಕಂಡು ಬರುತ್ತಿದ್ದು, ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಗೂಡಾಗಿದ್ದು, ಈ ಮಧ್ಯೆ ಕಾಂಗ್ರೆಸ್ ರಾಜಕೀಯ ಲೆಕ್ಕಾಚಾರದಲ್ಲಿ ಮುಂದಿರುವುದು ಕಾರ್ಯಕರ್ತರ ಉತ್ಸಾಹಕ್ಕೂ ಕಾರಣವಾಗಿದೆ.ಕಾಂಗ್ರೆಸ್‌ನಲ್ಲಿ ಸದ್ಯಕ್ಕೆ “ಆನಂದ”ಮಯವಾಗಿದ್ದು, ಬಿಜಪಿಯಲ್ಲಿ ಬೇಗುದಿಕಾಣತ್ತಿದೆ. ಟಿಕೆಟ್‌ಗಾಗಿ ಹಲವರು ಹರಸಾಹಸ ಪಡುತ್ತಿದ್ದಾರೆ. ಮಾಜಿ ಸಚಿವ ಬಿ.ಸಿ.ಪಾಟೀಲ ತಮಗೆ ಟಿಕೆಟ್ ನೀಡಲೇ ಬೇಕೆಂದು ಪಟ್ಟು ಹಿಡಿದಿದ್ದಾರೆ. ಅತ್ತ ಮಾಜಿ ಸಚಿವ ಈಶ್ವರಪ್ಪ ತಮ್ ಪುತ್ರನಿಗೆ ಟಿಕೆಟ್ ನೀಡಲೇಬೇಕು, ಟಿಕೆಟ್ ನೀಡದಿದ್ದರೇ  ಸರಿಯಾಗಿರಲ್ಲ ಎಂದು ಬಿಜೆಪಿ ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳೆಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ಸರ್ವಾನುಮತದಿಂದ ಆನಂದ ಗಡ್ಡದೇವರಮಠ ಅವರ ಹೆಸರು ಅಂತಿಮಗೊಳಿಸಿ, ಪ್ರಕಟಿಸುವಲ್ಲಿ ಯಶಸ್ವಿಯಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಡ್ಡದೇವರಮಠ ಕುಟುಂಬ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಮಾಜಿ ಶಾಸಕರಾದ ಜಿ.ಎಸ್.ಗಡ್ಡದೇವರಮಠ ಅವರು ಸಜ್ಜನ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ.
ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಮೀಸಲು ಕ್ಷೇತ್ರವಾಗಿದ್ದರಿಂದ ರಾಜಕೀಯ ಅವಕಾಶ ಕಳೆದುಕೊಂಡಿದ್ದಾರೆ ಎನ್ನುವ ಭಾವನೆಯೂ ಜನರಲ್ಲಿದೆ. ಲೋಕಸಭಾ ಅಭ್ಯರ್ಥಿಯಾಗಿ ಗದಗ ಜಿಲ್ಲೆಯ ಆನಂದ ಗಡ್ಡದೇವರಮಠ ಆಯ್ಕೆಯಾಗಿರುವುದರಿಂದ ವಿಶೇಷವಾಗಿ ಗದಗ ಜಿಲ್ಲೆಯ ಜನರ ಸಂಭ್ರಮಕ್ಕೂ ಕಾರಣವಾಗಿದೆ.
೨೦೦೯ ರಿಂದಲೇ ಯುವ ಕಾಂಗ್ರೆಸ್ ಮೂಲಕ ರಾಜಕಾರಣದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಆನಂದ ಗಡ್ಡದೇವರಮಠಹೊಸಮುಖವಾಗಿದ್ದು ಆಯ್ಕೆಯೆ ನಿರೀಕ್ಷೆ ಹೆಚ್ಚಿದೆ.

ಕಾಂಗ್ರೆಸ್‌ನಲ್ಲಿ ಆನಂದ ನಿಜ


ಹಾವೇರಿ: ಈಗಾಗಲೇ ರಾಷ್ಟ್ರೀಯ ವಾಹಿನಿ ನಡೆಸಿದ ಸಮೀಕ್ಷೆಯಲ್ಲಿ ಹಾವೇರಿಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಹೇಳಿದೆ. ಮೇಲಾಗಿ ಈಕ್ಷೇತ್ರಕ್ಕೆ ಮಾಜಿ ಶಾಸಕ ಜಿ.ಎಸ್.ಗಡ್ಡದ್ದೇವರಮಠ ಅವರ ಪುತ್ರ ಖ್ಯಾತ ಉದ್ಯಮಿ ಆನಂದ ಗಡ್ಡದ್ದೇವರಮಠ ಹೆಸರನ್ನು ಅಂತಿಮಗೊಳಿಸಿ ಘೋಷಿಸಲಾಗಿದ್ದು, ಚನಾವಣೆ ಘೋಷಣೆಗೂ ಮುನ್ನವೆ ಟಿಕೆಟ್ ಘೋಷಣೆಮಾಡಿರುವುದು ಕಾಂಗ್ರೆಸ್ ಕಾರ್ಯರ್ತರ ಸಂತಸಕ್ಕೆ ಕಾರಣವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಗರಸಭಾ ಸದಸ್ಯ ಸಂಜೀವಕುಮಾರ ನೀರಲಗಿ ತಿಳಿಸಿದ್ದಾರೆ.
ಕಳೆದ ಮೂರು ಅವಧಿಗಳಿಂದ ಕ್ಷೇತ್ರ ಪ್ರತಿನಿಧಿಸಿರುವ ಬಿಜೆಪಿಯ ಸಂಸದ ಶಿವಕುಮಾರ ಉದಾಸಿ ಅವರು ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದು ಅಪರೂಪ. ಮತದಾರರು ಅಲ್ಲದೇ ಸ್ವತಃ ಬಿಜೆಪಿಯ ಕಾರ್ಯಕರ್ತರೊಂದಿಗೂ ಉತ್ತಮ ಒಡನಾಟ, ಸಂಬಂಧ ಇಟ್ಟುಕೊಂಡಿಲ್ಲ. ಹಾಗಾಗಿ ಸಹಜವಾಗಿ ಗಡ್ಡದೇವರಮಠ ಅವರ ಪರವಾದ ವಾತಾವರಣ ಸೃಷ್ಟಿಯಾಗುತ್ತಿದೆ. ಆನಂದ ಅವರು ಕಳೆದ ಒಂದು ವರ್ಷದಿಂದ ಲೋಕಸಭಾ ಕ್ಷೇತ್ರದ ತುಂಬೆಲ್ಲಾ ಓಡಾಡಿ ಮತದಾರರ ಪ್ರೀತಿ, ವಿಶ್ವಾಸ ಗಳಿಸಿದ್ದಾರೆ.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ.ಪಾಟೀಲ ಅವರು ೭ಕಾಂಗ್ರೆಸ್‌ನ ಶಾಸಕರು, ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿಯೋಜನೆಗಳು ಆನಂದ ಅವರ ಗೆಲುವಿಗೆ ಪೂರವಾಗಲಿವೆ. ಈ ಬಾರಿ ಕ್ಷೇತ್ರದಲ್ಲಿ ಗೆದ್ದೆ ತೀರಬೇಕೆನ್ನುವ ಉತ್ಸಾಹದಿಂದ ತಾಲೀಮು ಕಾಂಗ್ರೆಸ್ ಮುಖಂಡರಲ್ಲಿ, ಕಾರ್ಯಕರ್ತರಲ್ಲಿದೆ ಎನ್ನುತ್ತಾರೆ ಸಂಜೀವಕುಮಾರ ನೀರಲಗಿ.

 

LEAVE A REPLY

Please enter your comment!
Please enter your name here

Subscribe

spot_imgspot_img

Popular


ಕಾಂಗ್ರೆಸ್‌ನಲ್ಲಿ ಸದ್ಯಕ್ಕೆ “ಆನಂದ”, ಬಿಜಪಿಯಲ್ಲಿ ಬೇಗುದಿ
ಹಾವೇರಿ: ಪ್ರತಿ ಬಾರಿ ಚುನಾವಣೆಯ ಸಂದರ್ಭದಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಗೂಡಾಗಿ, ಅಭ್ಯರ್ಥಿಯ ಹೆಸರು ಪ್ರಕಟಗೊಳ್ಳುವುದು ವಿಳಂಬವಾಗುತ್ತಿತ್ತು. ಇದರಿಂದ ರಾಜಕೀಯ ನಷ್ಟಕ್ಕೂ ಕಾರಣವಾಗುತ್ತಿದ್ದುದನ್ನು ಮನಗಂಡು ಎಚ್ಚೆತ್ತುಕೊಂಡು ಕಾಂಗ್ರೆಸ್ ವರಿಷ್ಠರು ಬಿಜೆಪಿಗಿಂತ ಮೊದಲೇ ತಮ್ಮ ಅಭ್ಯರ್ಥಿಯನ್ನು ಫೈನಲ್ ಮಾಡಿ, ರಾಜಕೀಯ ದಾಳ ಉರುಳಿಸಿದ್ದಾರೆ. ಕಾಂಗ್ರೆಸ್‌ನ ಮೊದಲ ಪಟ್ಟಿಯಲ್ಲಿ ಟಿಕೆಟ್ ಗಿಟ್ಟಿಸುವಲ್ಲಿ ಆನಂದ ಗಡ್ಡದೇವರಮಠ ಯಶಸ್ವಿಯಾಗಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್‌ನಲ್ಲಿ ಆನಂದ ಗಡ್ಡದ್ದೇವರಮಠಗೆ ಅಂತ ವಿರೋಧ ವ್ಯಕ್ತವಾಗಿಲ್ಲ.
ಘಟಾನುಘಟಿಗಳು ಕಾಂಗ್ರೆಸ್ ಟಿಕೆಟ್‌ಗೆ ಸರದಿಸಾಲಿನಲ್ಲಿ ನಿಂತಿದ್ದರೂ ಸಹ ಮೊದಲ ಪಟ್ಟಿಯಲ್ಲಿಯೇ ಆನಂದಗೆ ಅವಕಾಶ ಸಿಕ್ಕಿರುವುದು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಜಕೀಯವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಜಿಲ್ಲೆಯ ಐದೂ ಜನ ಕಾಂಗ್ರೆಸ್ ಶಾಸಕರು, ಕಾಂಗ್ರೆಸ್ ಪದಾಧಿಕಾರಿಗಳು ಒಮ್ಮತ ಹಾಗೂ ಸರ್ವಾನುಮತದಿಂದ ಮೊದಲ ಪಟ್ಟಿಯಲ್ಲಿಯೇ ಅಭ್ಯರ್ಥಿಯ ಹೆಸರು ಪ್ರಕಟವಾಗುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ.ಪಾಟೀಲ ಈ ಬಾರಿ ಕ್ಷೇತ್ರದಲ್ಲಿ ಗೆದ್ದೆ ತೀರಬೇಕೆನ್ನುವ ಉತ್ಸಾಹದಿಂದ ತಾಲೀಮು ನಡೆಸಿರುವುದು ಕಂಡು ಬರುತ್ತಿದ್ದು, ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಗೂಡಾಗಿದ್ದು, ಈ ಮಧ್ಯೆ ಕಾಂಗ್ರೆಸ್ ರಾಜಕೀಯ ಲೆಕ್ಕಾಚಾರದಲ್ಲಿ ಮುಂದಿರುವುದು ಕಾರ್ಯಕರ್ತರ ಉತ್ಸಾಹಕ್ಕೂ ಕಾರಣವಾಗಿದೆ.ಕಾಂಗ್ರೆಸ್‌ನಲ್ಲಿ ಸದ್ಯಕ್ಕೆ “ಆನಂದ”ಮಯವಾಗಿದ್ದು, ಬಿಜಪಿಯಲ್ಲಿ ಬೇಗುದಿಕಾಣತ್ತಿದೆ. ಟಿಕೆಟ್‌ಗಾಗಿ ಹಲವರು ಹರಸಾಹಸ ಪಡುತ್ತಿದ್ದಾರೆ. ಮಾಜಿ ಸಚಿವ ಬಿ.ಸಿ.ಪಾಟೀಲ ತಮಗೆ ಟಿಕೆಟ್ ನೀಡಲೇ ಬೇಕೆಂದು ಪಟ್ಟು ಹಿಡಿದಿದ್ದಾರೆ. ಅತ್ತ ಮಾಜಿ ಸಚಿವ ಈಶ್ವರಪ್ಪ ತಮ್ ಪುತ್ರನಿಗೆ ಟಿಕೆಟ್ ನೀಡಲೇಬೇಕು, ಟಿಕೆಟ್ ನೀಡದಿದ್ದರೇ  ಸರಿಯಾಗಿರಲ್ಲ ಎಂದು ಬಿಜೆಪಿ ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳೆಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ಸರ್ವಾನುಮತದಿಂದ ಆನಂದ ಗಡ್ಡದೇವರಮಠ ಅವರ ಹೆಸರು ಅಂತಿಮಗೊಳಿಸಿ, ಪ್ರಕಟಿಸುವಲ್ಲಿ ಯಶಸ್ವಿಯಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಡ್ಡದೇವರಮಠ ಕುಟುಂಬ ರಾಜಕೀಯದಲ್ಲಿ ಸಕ್ರಿಯವಾಗಿದ್ದು, ಮಾಜಿ ಶಾಸಕರಾದ ಜಿ.ಎಸ್.ಗಡ್ಡದೇವರಮಠ ಅವರು ಸಜ್ಜನ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ.
ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಮೀಸಲು ಕ್ಷೇತ್ರವಾಗಿದ್ದರಿಂದ ರಾಜಕೀಯ ಅವಕಾಶ ಕಳೆದುಕೊಂಡಿದ್ದಾರೆ ಎನ್ನುವ ಭಾವನೆಯೂ ಜನರಲ್ಲಿದೆ. ಲೋಕಸಭಾ ಅಭ್ಯರ್ಥಿಯಾಗಿ ಗದಗ ಜಿಲ್ಲೆಯ ಆನಂದ ಗಡ್ಡದೇವರಮಠ ಆಯ್ಕೆಯಾಗಿರುವುದರಿಂದ ವಿಶೇಷವಾಗಿ ಗದಗ ಜಿಲ್ಲೆಯ ಜನರ ಸಂಭ್ರಮಕ್ಕೂ ಕಾರಣವಾಗಿದೆ.
೨೦೦೯ ರಿಂದಲೇ ಯುವ ಕಾಂಗ್ರೆಸ್ ಮೂಲಕ ರಾಜಕಾರಣದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಆನಂದ ಗಡ್ಡದೇವರಮಠಹೊಸಮುಖವಾಗಿದ್ದು ಆಯ್ಕೆಯೆ ನಿರೀಕ್ಷೆ ಹೆಚ್ಚಿದೆ.

ಕಾಂಗ್ರೆಸ್‌ನಲ್ಲಿ ಆನಂದ ನಿಜ


ಹಾವೇರಿ: ಈಗಾಗಲೇ ರಾಷ್ಟ್ರೀಯ ವಾಹಿನಿ ನಡೆಸಿದ ಸಮೀಕ್ಷೆಯಲ್ಲಿ ಹಾವೇರಿಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಹೇಳಿದೆ. ಮೇಲಾಗಿ ಈಕ್ಷೇತ್ರಕ್ಕೆ ಮಾಜಿ ಶಾಸಕ ಜಿ.ಎಸ್.ಗಡ್ಡದ್ದೇವರಮಠ ಅವರ ಪುತ್ರ ಖ್ಯಾತ ಉದ್ಯಮಿ ಆನಂದ ಗಡ್ಡದ್ದೇವರಮಠ ಹೆಸರನ್ನು ಅಂತಿಮಗೊಳಿಸಿ ಘೋಷಿಸಲಾಗಿದ್ದು, ಚನಾವಣೆ ಘೋಷಣೆಗೂ ಮುನ್ನವೆ ಟಿಕೆಟ್ ಘೋಷಣೆಮಾಡಿರುವುದು ಕಾಂಗ್ರೆಸ್ ಕಾರ್ಯರ್ತರ ಸಂತಸಕ್ಕೆ ಕಾರಣವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಗರಸಭಾ ಸದಸ್ಯ ಸಂಜೀವಕುಮಾರ ನೀರಲಗಿ ತಿಳಿಸಿದ್ದಾರೆ.
ಕಳೆದ ಮೂರು ಅವಧಿಗಳಿಂದ ಕ್ಷೇತ್ರ ಪ್ರತಿನಿಧಿಸಿರುವ ಬಿಜೆಪಿಯ ಸಂಸದ ಶಿವಕುಮಾರ ಉದಾಸಿ ಅವರು ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದು ಅಪರೂಪ. ಮತದಾರರು ಅಲ್ಲದೇ ಸ್ವತಃ ಬಿಜೆಪಿಯ ಕಾರ್ಯಕರ್ತರೊಂದಿಗೂ ಉತ್ತಮ ಒಡನಾಟ, ಸಂಬಂಧ ಇಟ್ಟುಕೊಂಡಿಲ್ಲ. ಹಾಗಾಗಿ ಸಹಜವಾಗಿ ಗಡ್ಡದೇವರಮಠ ಅವರ ಪರವಾದ ವಾತಾವರಣ ಸೃಷ್ಟಿಯಾಗುತ್ತಿದೆ. ಆನಂದ ಅವರು ಕಳೆದ ಒಂದು ವರ್ಷದಿಂದ ಲೋಕಸಭಾ ಕ್ಷೇತ್ರದ ತುಂಬೆಲ್ಲಾ ಓಡಾಡಿ ಮತದಾರರ ಪ್ರೀತಿ, ವಿಶ್ವಾಸ ಗಳಿಸಿದ್ದಾರೆ.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ.ಪಾಟೀಲ ಅವರು ೭ಕಾಂಗ್ರೆಸ್‌ನ ಶಾಸಕರು, ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿಯೋಜನೆಗಳು ಆನಂದ ಅವರ ಗೆಲುವಿಗೆ ಪೂರವಾಗಲಿವೆ. ಈ ಬಾರಿ ಕ್ಷೇತ್ರದಲ್ಲಿ ಗೆದ್ದೆ ತೀರಬೇಕೆನ್ನುವ ಉತ್ಸಾಹದಿಂದ ತಾಲೀಮು ಕಾಂಗ್ರೆಸ್ ಮುಖಂಡರಲ್ಲಿ, ಕಾರ್ಯಕರ್ತರಲ್ಲಿದೆ ಎನ್ನುತ್ತಾರೆ ಸಂಜೀವಕುಮಾರ ನೀರಲಗಿ.

 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...