ಕಾಂತರಾಜು- ಸದಾಶಿವ ಆಯೋಗದ ವರದಿ ಜಾರಿಮಾಡಿ, ಇಲ್ಲದಿದ್ದರೆ ಖುರ್ಚಿ ಖಾಲಿ ಮಾಡಿ: ಅಶೋಕ ಮರೆಣ್ಣನವರ
ಹಾವೇರಿ: ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕಾಂತರಾಜು ಆಯೋಗದ ವರದಿ ಮತ್ತು ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು, ಇಲ್ಲದಿದ್ದರೇ ಖುರ್ಚಿ ಖಾಲಿ ಮಾಡಿ ಎಂದು ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಬಿಎಸ್ಪಿ ಆಂದೋಲನ ನಡೆಸಿ ನ.೨೧ ಮಂಗಳವಾರ ಇಲ್ಲಿನ ಜಿಲ್ಲಾಡಳಿತಭವನದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್ಪಿ ಜಿಲ್ಲಾ ಅಧ್ಯಕ್ಷ ಅಶೋಕ ಮರೆಣ್ಣನವರ ಸಿದ್ದರಾಮಯ್ಯನವರು ಈಹಿಂದೆ ಮುಖ್ಯಮಂತ್ರಿಆಗಿದ್ದಾಗ, ಹಿಂದುಳಿದ ವರ್ಗಗಳ ಸಾಮಾಜಿಕ- ಆರ್ಥಿಕ-ಶೈಕ್ಷಣಿಕ ಸ್ಥಿತಿಗತಿಯ ಕುರಿತು ಅಧ್ಯಯನ ಮತ್ತು ಜಾತಿವಾರು ಜನಗಣತಿ ನಡೆಸಲು ನೇಮಿಸಿದ್ದ ಕಾಂತರಾಜು ಆಯೋಗವು ೨೦೧೫ರಲ್ಲಿ ತನ್ನ ವರದಿಯನ್ನು ಸಿದ್ದಗೊಳಿಸಿತು. ಈ ವರದಿಯು ಸೋರಿಕೆಯಾದಾಗ, ಎಸ್. ಸಿ./ಎಸ್. ಟಿ. ಗಳ ಜನಸಂಖ್ಯೆಯು ೧ಕೋಟಿ ೫೦ ಲಕ್ಷ, ಮುಸ್ಲಿಮರು ೮೫ಲಕ್ಷ, ಲಿಂಗಾಯತರು ೬೦ ಲಕ್ಷ ಮತ್ತು ಒಕ್ಕಲಿಗರು ೫೦ ಲಕ್ಷ ಇರುವುದಾಗಿ ತಿಳಿಯಿತು.
ಈ ವರದಿ ಜಾರಿಯಾದರೆ ತಾವು ಇದುವರೆಗೂ ಅನುಭವಿಸಿಕೊಂಡು ಬರುತ್ತಿರುವ ಸವಲತ್ತು ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಸಹಜವಾಗಿ ಅಳುಕಿದ ಲಿಂಗಾಯತ-ಒಕ್ಕಲಿಗರು ಈ ವರದಿಯು ಬಹಿರಂಗಗೊಳ್ಳುವುದನ್ನು ತಡೆದರು. ನಂತರ ಕುಮಾರಸ್ವಾಮಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾದ ಮೇಲೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಆಧಾರದ ಕಾಂತರಾಜು ಆಯೋಗದ ಜಾತಿಗಣತಿ ವರದಿಯ ಜಾರಿಗೆ ಮುಂದಾಗಲಿಲ್ಲ.
೨೦೨೩ರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂತರಾಜ್ ವರದಿಯನ್ನು ಮತ್ತು ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಿಯೇ ತೀರುತ್ತೇವೆಂದು ಆಶ್ವಾಸನೆ ನೀಡಿ ಅಧಿಕಾರ ಹಿಡಿದ ಕಾಂಗ್ರೆಸ್ ಸರ್ಕಾರವು ಇದೀಗ ೬ ತಿಂಗಳಾದರೂ ಸಹ ಈ ಬಗ್ಗೆ ಏನೂ ಮಾತಾಡುತ್ತಿಲ್ಲ.
ರಾಜ್ಯದಲ್ಲಿ ಅತಿ ದೊಡ್ಡ ಸಂಖ್ಯೆಯಲ್ಲಿರುವ ಎಸ್. ಸಿ./ಎಸ್.ಟಿ. ಗಳಾಗಲೀ ಮುಸ್ಲಿಮರಾಗಲೀ ಇಲ್ಲಿಯತನಕ ಸಿ. ಎಂ. ಗಳಾಗಿಲ್ಲ! ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ೧೦೧ ಜಾತಿಗಳ ಪೈಕಿ ಮಾದಿಗ ಮತ್ತು ಮಾದಿಗ ಸಂಬಂಧಿತ ೪೯ ಜಾತಿಗಳ ಜನಸಂಖ್ಯೆ ಹೆಚ್ಚಾಗಿರುತ್ತದೆ. ಈ ಸಮಾಜಕ್ಕೆ ಶಿಕ್ಷಣ, ಸರ್ಕಾರಿ ಸೇವೆ ಮತ್ತು ರಾಜಕೀಯ ಮತ್ತಿತರರ ಎಲ್ಲಾ ರಂಗಗಳಲ್ಲಿ ಸೂಕ್ತ ಪ್ರಾತಿನಿಧ್ಯ ಇಲ್ಲದೆ ತೀರ ಹಿಂದುಳಿದಿವೆ. ೨೦೦೫ ರಲ್ಲಿ ರಚನೆಯಾದ ನ್ಯಾಯಮೂರ್ತಿ ಸದಾಶಿವ ಆಯೋಗವು ಸತತವಾಗಿ ೭ ವರ್ಷ ಅಧ್ಯಯನ ನಡೆಸಿ ೨೦೧೨ ರಲ್ಲಿ ಬಿಜೆಪಿಯ ಸದಾಸಂದಗೌಡರ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತು.
. ಆದರೆ ಇದೂವರೆಗೂ ಸದಾಶಿವ ಆಯೋಗದ ವರದಿಯನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಜಾತಿವ್ಯವಸ್ಥೆಯಲ್ಲಿ ಅತ್ಯಂತ ತಳಸಮುದಾಯವಾದ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಕಣ್ಣೀರು ಒರೆಸಲು ಮೇಲಾ ತಿ ಪಕ್ಷ ಗಳ ರಾಜಕೀಯ ಇಚಾ ಶಕ್ತಿ ಕೊರತೆಯಿಂದಲೋ, ಅಸಹಾಯಕತೆಯಿಂದಲೋ ಅಥವಾ ಅಸಮರ್ಥತೆಯಿಂದಲೋ ಪರಿಹರಿಸಲು ಮುಂದಾಗುತ್ತಿಲ್ಲ. ಈ ಪ್ರಕರಣವನ್ನು ಜೀವಂತವಾಗಿ ಉಳಿಸಿಕೊಂಡು ಪರಿಶಿಷ್ಟಜಾತಿಗಳ ಮಧ್ಯೆ ವೈರುಧ್ಯವನ್ನು ಮುಂದುವರಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಂವಿಧಾನದ ಅಶಯದಂತೆ ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕಾಂತರಾಜು ಆಯೋಗದ ವರದಿ ಮತ್ತು ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಕರ್ನಾಟಕ ಸರ್ಕಾರವನ್ನು ಅಶೋಕ ಮರೆಣ್ಣನವರ ಆಗ್ರಹಿಸಿದರು.
ಮನವಿ ಅರ್ಪಿಸುವ ಸಂದರ್ಭದಲ್ಲಿ ಬಿಎಸ್ಪಿ ಜಿಲ್ಲಾ ಉಪಾಧ್ಯಕ್ಷ ಎಮ್.ಕೆ.ಮಕಬೂಲ, ಪ್ರಧಾನ ಕಾರ್ಯದರ್ಶಿ ಬಸವರಾಜ ಹಾದಿ, ಪ್ರಮುಖರಾದ ವಿಜಯಕುಮಾರ ಬೆನಕವಾಡಿ, ಎಸ್.ಎಸ್.ಹನಗೋಡಿಮಠ, ವಿಜಯಕುಮಾರ ವೀರಕ್ತಮಠ, ಬಸೀರಹ್ಮದ ಅಗಡಿ, ಶ್ರೀಕಾಂತ ಮರೆಣ್ಣನವರ ಸೇರಿದಂತೆ ಅನೇಕರು ಹಾಜರಿದ್ದರು.
ಕಾಂತರಾಜು- ಸದಾಶಿವ ಆಯೋಗದ ವರದಿ ಜಾರಿಮಾಡಿ, ಇಲ್ಲದಿದ್ದರೆ ಖುರ್ಚಿ ಖಾಲಿ ಮಾಡಿ: ಅಶೋಕ ಮರೆಣ್ಣನವರ
Date:
ಕಾಂತರಾಜು- ಸದಾಶಿವ ಆಯೋಗದ ವರದಿ ಜಾರಿಮಾಡಿ, ಇಲ್ಲದಿದ್ದರೆ ಖುರ್ಚಿ ಖಾಲಿ ಮಾಡಿ: ಅಶೋಕ ಮರೆಣ್ಣನವರ
ಹಾವೇರಿ: ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕಾಂತರಾಜು ಆಯೋಗದ ವರದಿ ಮತ್ತು ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು, ಇಲ್ಲದಿದ್ದರೇ ಖುರ್ಚಿ ಖಾಲಿ ಮಾಡಿ ಎಂದು ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಬಿಎಸ್ಪಿ ಆಂದೋಲನ ನಡೆಸಿ ನ.೨೧ ಮಂಗಳವಾರ ಇಲ್ಲಿನ ಜಿಲ್ಲಾಡಳಿತಭವನದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್ಪಿ ಜಿಲ್ಲಾ ಅಧ್ಯಕ್ಷ ಅಶೋಕ ಮರೆಣ್ಣನವರ ಸಿದ್ದರಾಮಯ್ಯನವರು ಈಹಿಂದೆ ಮುಖ್ಯಮಂತ್ರಿಆಗಿದ್ದಾಗ, ಹಿಂದುಳಿದ ವರ್ಗಗಳ ಸಾಮಾಜಿಕ- ಆರ್ಥಿಕ-ಶೈಕ್ಷಣಿಕ ಸ್ಥಿತಿಗತಿಯ ಕುರಿತು ಅಧ್ಯಯನ ಮತ್ತು ಜಾತಿವಾರು ಜನಗಣತಿ ನಡೆಸಲು ನೇಮಿಸಿದ್ದ ಕಾಂತರಾಜು ಆಯೋಗವು ೨೦೧೫ರಲ್ಲಿ ತನ್ನ ವರದಿಯನ್ನು ಸಿದ್ದಗೊಳಿಸಿತು. ಈ ವರದಿಯು ಸೋರಿಕೆಯಾದಾಗ, ಎಸ್. ಸಿ./ಎಸ್. ಟಿ. ಗಳ ಜನಸಂಖ್ಯೆಯು ೧ಕೋಟಿ ೫೦ ಲಕ್ಷ, ಮುಸ್ಲಿಮರು ೮೫ಲಕ್ಷ, ಲಿಂಗಾಯತರು ೬೦ ಲಕ್ಷ ಮತ್ತು ಒಕ್ಕಲಿಗರು ೫೦ ಲಕ್ಷ ಇರುವುದಾಗಿ ತಿಳಿಯಿತು.
ಈ ವರದಿ ಜಾರಿಯಾದರೆ ತಾವು ಇದುವರೆಗೂ ಅನುಭವಿಸಿಕೊಂಡು ಬರುತ್ತಿರುವ ಸವಲತ್ತು ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಸಹಜವಾಗಿ ಅಳುಕಿದ ಲಿಂಗಾಯತ-ಒಕ್ಕಲಿಗರು ಈ ವರದಿಯು ಬಹಿರಂಗಗೊಳ್ಳುವುದನ್ನು ತಡೆದರು. ನಂತರ ಕುಮಾರಸ್ವಾಮಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾದ ಮೇಲೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಆಧಾರದ ಕಾಂತರಾಜು ಆಯೋಗದ ಜಾತಿಗಣತಿ ವರದಿಯ ಜಾರಿಗೆ ಮುಂದಾಗಲಿಲ್ಲ.
೨೦೨೩ರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂತರಾಜ್ ವರದಿಯನ್ನು ಮತ್ತು ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಿಯೇ ತೀರುತ್ತೇವೆಂದು ಆಶ್ವಾಸನೆ ನೀಡಿ ಅಧಿಕಾರ ಹಿಡಿದ ಕಾಂಗ್ರೆಸ್ ಸರ್ಕಾರವು ಇದೀಗ ೬ ತಿಂಗಳಾದರೂ ಸಹ ಈ ಬಗ್ಗೆ ಏನೂ ಮಾತಾಡುತ್ತಿಲ್ಲ.
ರಾಜ್ಯದಲ್ಲಿ ಅತಿ ದೊಡ್ಡ ಸಂಖ್ಯೆಯಲ್ಲಿರುವ ಎಸ್. ಸಿ./ಎಸ್.ಟಿ. ಗಳಾಗಲೀ ಮುಸ್ಲಿಮರಾಗಲೀ ಇಲ್ಲಿಯತನಕ ಸಿ. ಎಂ. ಗಳಾಗಿಲ್ಲ! ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ೧೦೧ ಜಾತಿಗಳ ಪೈಕಿ ಮಾದಿಗ ಮತ್ತು ಮಾದಿಗ ಸಂಬಂಧಿತ ೪೯ ಜಾತಿಗಳ ಜನಸಂಖ್ಯೆ ಹೆಚ್ಚಾಗಿರುತ್ತದೆ. ಈ ಸಮಾಜಕ್ಕೆ ಶಿಕ್ಷಣ, ಸರ್ಕಾರಿ ಸೇವೆ ಮತ್ತು ರಾಜಕೀಯ ಮತ್ತಿತರರ ಎಲ್ಲಾ ರಂಗಗಳಲ್ಲಿ ಸೂಕ್ತ ಪ್ರಾತಿನಿಧ್ಯ ಇಲ್ಲದೆ ತೀರ ಹಿಂದುಳಿದಿವೆ. ೨೦೦೫ ರಲ್ಲಿ ರಚನೆಯಾದ ನ್ಯಾಯಮೂರ್ತಿ ಸದಾಶಿವ ಆಯೋಗವು ಸತತವಾಗಿ ೭ ವರ್ಷ ಅಧ್ಯಯನ ನಡೆಸಿ ೨೦೧೨ ರಲ್ಲಿ ಬಿಜೆಪಿಯ ಸದಾಸಂದಗೌಡರ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತು.
. ಆದರೆ ಇದೂವರೆಗೂ ಸದಾಶಿವ ಆಯೋಗದ ವರದಿಯನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಜಾತಿವ್ಯವಸ್ಥೆಯಲ್ಲಿ ಅತ್ಯಂತ ತಳಸಮುದಾಯವಾದ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಕಣ್ಣೀರು ಒರೆಸಲು ಮೇಲಾ ತಿ ಪಕ್ಷ ಗಳ ರಾಜಕೀಯ ಇಚಾ ಶಕ್ತಿ ಕೊರತೆಯಿಂದಲೋ, ಅಸಹಾಯಕತೆಯಿಂದಲೋ ಅಥವಾ ಅಸಮರ್ಥತೆಯಿಂದಲೋ ಪರಿಹರಿಸಲು ಮುಂದಾಗುತ್ತಿಲ್ಲ. ಈ ಪ್ರಕರಣವನ್ನು ಜೀವಂತವಾಗಿ ಉಳಿಸಿಕೊಂಡು ಪರಿಶಿಷ್ಟಜಾತಿಗಳ ಮಧ್ಯೆ ವೈರುಧ್ಯವನ್ನು ಮುಂದುವರಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಂವಿಧಾನದ ಅಶಯದಂತೆ ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕಾಂತರಾಜು ಆಯೋಗದ ವರದಿ ಮತ್ತು ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಕರ್ನಾಟಕ ಸರ್ಕಾರವನ್ನು ಅಶೋಕ ಮರೆಣ್ಣನವರ ಆಗ್ರಹಿಸಿದರು.
ಮನವಿ ಅರ್ಪಿಸುವ ಸಂದರ್ಭದಲ್ಲಿ ಬಿಎಸ್ಪಿ ಜಿಲ್ಲಾ ಉಪಾಧ್ಯಕ್ಷ ಎಮ್.ಕೆ.ಮಕಬೂಲ, ಪ್ರಧಾನ ಕಾರ್ಯದರ್ಶಿ ಬಸವರಾಜ ಹಾದಿ, ಪ್ರಮುಖರಾದ ವಿಜಯಕುಮಾರ ಬೆನಕವಾಡಿ, ಎಸ್.ಎಸ್.ಹನಗೋಡಿಮಠ, ವಿಜಯಕುಮಾರ ವೀರಕ್ತಮಠ, ಬಸೀರಹ್ಮದ ಅಗಡಿ, ಶ್ರೀಕಾಂತ ಮರೆಣ್ಣನವರ ಸೇರಿದಂತೆ ಅನೇಕರು ಹಾಜರಿದ್ದರು.