
ದೀಕ್ಷಾ ಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳ ಆಯ್ಕೆಗೆ ಅರ್ಜಿ ಆಹ್ವಾನ
ಹಾವೇರಿ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೫-೨೬ನೇ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ ೨ ರಂದು ಜರುಗುವ ಪ್ರವರ್ತನಾ ದಿನಕ್ಕೆ(ವಿಜಯದಶಮಿ ದಿನದಂದು) ದಿಕ್ಷಾ ಭೂಮಿಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯಾತ್ರಾರ್ಥಿಗಳು ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಹೊಂದಿರಬೇಕು ಹಾಗೂ ೧೮ ವರ್ಷ ಮೆಲ್ಪಟ್ಟವರಾಗಿರಬೇಕು. ಎಸ್.ಸಿ. ಮತ್ತು ಎಸ್.ಟಿ. ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.
ರಾಜ್ಯದ ಆಯಾ ಜಿಲ್ಲೆಗಳಿಂದಲೇ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುವುದು, ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸಬೇಕು. ಜಿಲ್ಲಾ ಮಟ್ಟದಲ್ಲಿ ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು ಎರಡನೇ ಬಾರಿ ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ ಹಾಗೂ ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರರಲ್ಲ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಪಾಲ್ಗೊಳ್ಳಲು ಅವಕಾಶವಿದ್ದು, ಅರ್ಜಿದಾರರು ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಪ್ರತಿಗಳನ್ನು ಆನ್ಲೈನ್ ಅರ್ಜಿಯಲ್ಲಿ ಅಪ್ಲೋಡ್ ಮಾಡಬೇಕು.
ಆಸಕ್ತರು ದಿನಾಂಕ ೦೯-೦೯-೨೦೨೫೫ಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ನಲ್ಲಿ https://swdservices.karnataka.gov.in ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಅರ್ಜಿ ನಮೂನೆ ಹಾಗೂ ಅವಶ್ಯಕ ದಾಖಲಾತಿಗಳನ್ನು ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಹಾವೇರಿ ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ನಲ್ಲಿ https://swdservices.karnataka.gov.in ಅಥವಾ ದೂ.೯೪೮೦೮೪೩೧೪೯ ಹಾಗೂ ಅಥವಾ ಹಾವೇರಿ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆಚಿಜನೇಯ ಹುಲ್ಲಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

