
ಪತ್ರಕರ್ತ ಮಾಲತೇಶ ಅಂಗೂರ ಮನೆಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
ಹಾವೇರಿ: ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜು.೩ರಂದು ಶುಕ್ರವಾರ ಸಂಜೆ ನಗರದ ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅಂಗೂರ ಅವರ ಮನೆಗೆ ಭೇಟಿ ಕೊಟ್ಟು ಅಂಗೂರ ಅವರ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಅವರು ಹಿರಿಯ ಪತ್ರಕರ್ತ, ಸಾಹಿತಿ ಮಾಲತೇಶ ಅವರು ಕಾಲು ಕಳೆದುಕೊಂಡು ಅನಾರೋಗ್ಯಕ್ಕೆ ಒಳಗಾಗಿವುದು ಬಹಳ ನೋವಿನ ಸಂಗತಿಯಾಗಿದೆ. ಸರ್ಕಾರದ ನೆರವು ದೊರಕಿಸುವ ಭರವಸೆ ನೀಡಿದರು. ನಿಮ್ಮೊಂದಿಗೆ ನಾವು ಇರುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಚಿವರ ಜೊತೆಗೆ ಶಾಸಕ ಯಾಸೀರ್ ಖಾನ್ ಪಠಾಣ, ಜಿಲ್ಲಾ ಕಾಂಗ್ರೆಸ್ ವಕ್ತಾರ ಡಾ.ಸಂಜಯ ಡಾಂಗೆ, ಮಂಜುನಾಥ ಮನ್ನಂಗಿ, ಮಲ್ಲಿಕಾರ್ಜುನ ಬೂದಗಟ್ಟಿ, ಬಸವರಾಜ್ ತಳವಾರ, ಮನೋಹರ ಹಾದಿಮನಿ, ಉಮೇಶ್ ತಳವಾರ ಮತ್ತಿತರರು ಆಗಮಿಸಿದ್ದರು.

