ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಿ, ಖಾಯಂಗೊಳಿಸಲು ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಹಾವೇರಿ: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಪೌರಕಾರ್ಮಿಕರ ಮಾದರಿಯಲ್ಲಿ ಇತರೆ ನೌಕರರನ್ನು ನೇರಪಾವತಿಗೆ ಒಳಪಡಿಸಿ ಹಂತಹಂತವಾಗಿ ಕಾಯಂಗೊಳಿಸುವಂತೆ ಆಗ್ರಹಿಸಿ ಫೆ.೧ರಂದು ಬುಧವಾರ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಹಾವೇರಿಜಿಲ್ಲಾ ಘಟಕದವತಿಯಿಂದ ನೂರಾರು ಹೊರಗುತ್ತಿಗೆ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ವಿರಮಲ್ಲಪ್ಪ ಪೂಜಾರ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಅರ್ಪಿಸಿದರು.
ಇಲ್ಲಿನ ಹುತಾತ್ಮ ಮೈಲಾರ ಮಹದೇವಪ್ಪನವರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಹೊರಗುತ್ತಿಗೆ ನೌಕರರು ಹಾಗೂ ವಿವಿಧ ದಲಿತ ಸಂಗಟನೆಗಳ ಮುಖಂಡರು ಹೊಸಮನಿ ಸಿದ್ದಪ್ಪವೃತ್ತಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ ಅಲ್ಲಿ ತಮ್ಮ ಹಕ್ಕೋತ್ತಾಯ ಮಂಡಿಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು.
ಮನವಿಯಲ್ಲಿ ರಾಜ್ಯ ಸರಕಾರವೂ ಎರಡನೇ ಬಾರಿಗೆ ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿ ನಡೆಸುತ್ತಿದೆ. ಆದರೆ ಇನ್ನುಳಿದ ಸಚ್ಛತಾ ಕಾರ್ಮಿಕರಾದ ಕಸ ಸಾಗಿಸುವ ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್, ಒಳಚರಂಡಿ ಕಾರ್ಮಿಕರು, ನೀರು ಸರಬರಾಜು ಸಹಾಯಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ಒಳಪಡಿಸದೆ ಗುತ್ತಿಗೆಯಲ್ಲಿ ಮುಂದುವರಿಸುವ ಸರಕಾರದ ತಾರತಮ್ಯು ಖಂಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ಆಗ್ರಹಿಸಿ ಫೆ.೧ರಿಂದ g ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ನಗರಗಳ ಸ್ವಚ್ಛತೆಯಲ್ಲಿ ಪೌರಕಾರ್ಮಿಕರೊಂದಿಗೆ ಪೂರಕವಾಗಿ ದುಡಿಯುವ ಹೊರಗುತ್ತಿಗೆ ನೌಕರರನ್ನು ಈ ಹಿಂದಿನ ರಾಜ್ಯ ಸರಕಾರವೂ ಕಡೆಗಾಣಿಸಿದ್ದು ಈಗಿನ ಸರಕಾರವೂ ಗುತ್ತಿಗೆಯಲ್ಲಿ ಮುಂದುವರಿಸುವ ಮೂಲಕ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬ ಧೋರಣೆ ಅನುಸರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹೊರಗುತ್ತಿಗೆ ನೌಕರರು ನೇರಪಾವತಿಗೆ ಆಗ್ರಹಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಅನಿರ್ದಿಷ್ಟವಧಿ ಮುಷ್ಕರ ನಡೆಸುತ್ತಿರುವುದಾಗಿ ತಿಳಸಲಾಗಿದೆ.
ಸರ್ಕಾರ ಪೌರಕಾರ್ಮಿಕರೊಟ್ಟಿಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ವಾಹನ ಚಾಲಕರು, ನೀರುಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್ ,ಹೆಲರ್ಸ್ ಗಳು, ಡಾಟ ಆಪರೇಟರುಗಳು, ಸ್ಯಾನಿಟರಿ ಸೂಪರ್ ವೈಸರುಗಳು ಸೇರಿದಂತೆ ಸಾವಿರಕ್ಕು ಹೆಚ್ಚು ನೌಕರರನ್ನು ಗುತ್ತಿಗೆಯಲ್ಲಿ ಉಳಿಸಿ ತಾರತಮ್ಯ ಎಸಗಿದ್ದು ಹೊರಗುತ್ತಿಗೆ ನೌಕರರ ನೇರಪಾವತಿ ಹಾಗೂ ಖಾಯಂಗಾಗಿ ಫೆ.೧ರಿಂದ ಕುಡಿಯುವ ನೀರು ಹಾಗೂ ಸ್ವಚ್ಚತೆ ಸ್ಥಗಿತಗೊಳಿಸಿ ಅನಿರ್ದಿಷ್ಟವಧಿ ಧರಣಿ ನಡೆಸಲಾಗುವುದು.
ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. ೨೦೧೭ರಲ್ಲಿ ಪೌರಕಾರ್ಮಿಕರ ನೇಮಕಾತಿಗೊಳಿಸಿದಾಗಲೂ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಯಿತು. ಈಗಲೂ ಸಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಮುಂದುವರಿಸುವ ಸರಕಾರದ ನೀತಿ ಒಂದುಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಪೌರಕಾರ್ಮಿಕರ ನೇರನೇಮಕಾತಿಯನ್ನು ಸ್ವಾಗತಿಸುತ್ತೇವೆ. ಆದರೆ ಹೊರಗುತ್ತಿಗೆ ನೌಕರರ ನ್ಯಾಯಬದ್ಧ ಹಕ್ಕಿಗಾಗಿ ಆಗ್ರಹಿಸುವುದು ನಮ್ಮ ಹಕ್ಕಾಗಿದೆ. ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ಮಧ್ಯೆ ಒಡೆದಾಳುವ ನೀತಿ ಅನುಸರಿಸುವುದು ಯಾವುದೇ ಸರಕಾರಕ್ಕೆ ಶೋಭೆಯಲ್ಲ.ಸರಕಾರ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಹಾಗೂ ಪೌರಕಾರ್ಮಿಕರನ್ನು ವಿಭಜಿಸಿದೆ. ವಾಸ್ತವವಾಗಿ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರು ಸಹ ನಗರಗಳ ಸ್ವಚ್ಛತೆಗೆ ಕುಡಿಯುವ ನೀರು ಪೂರೈಕೆಗೆ ಪರಸ್ಪರ ಪೂರಕವಾಗಿ ದುಡಿಯುವವರೆ ಆಗಿದ್ದಾರೆ .
ಸರಕಾರ ಆಗಿರುವ ಲೋಪವನ್ನು ಸರಿಪಡಿಸಿ ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಿ ಹಂತಹಂತವಾಗಿ ಖಾಯಂಗೊಳಿಸುವಂv ಸಂಘಟನೆಯ ಮುಖಂಡರು ಕೋರಿದ್ದು, ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಕುಡಿಯುವ ನೀರು ಹಾಗೂ ಕಸ ವಿಲೇವಾರಿಯಲ್ಲಿ ನಾಗರೀಕರಿಗೆ ಆಗುವ ಅನಾನೂಕೂಲಕ್ಕೆ ವಿಷಾದ ವ್ಯಕ್ತಪಡಿಸಿದ್ದು,. ನಾಗರೀಕ ಸಹ ಈ ಹೋರಾಟದಲ್ಲಿ ಕೈ ಜೋಡಿಸುವಂತೆ ಮನವಿಮಾಡಿಕೊಂಡಿದ್ದಾರೆ.
ಪ್ರತಿಭಟನೆಯಲ್ಲಿ ಹೊರಗುತ್ತಿಗೆ ನೌಕರರ ಸಂಗದ ಅಧ್ಯಕ್ಷ ರಾಜು ಹೊಸಮನಿ, ಶಿವರಾಜ ಕಟ್ಟಿಮನಿ, ರಮೇಶ ಭೋವಿ, ಗುರುನಾಥ ಅಡಿವೆಣ್ಣನವರ, ಹೊನ್ನೇಶ್ವರ ತಗಡಿಮನಿ, ಅಶೋಕ ಮರೆಣ್ಣನವರ,ಉಡಚಪ್ಪ ಮಾಳಗಿ, ಅಕ್ಷತಾ ಕೆ.ಸಿ, ನಾಗರಾಜ ಮಾಳಗಿ, ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಿ, ಖಾಯಂಗೊಳಿಸಲು ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
Date:
ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಿ, ಖಾಯಂಗೊಳಿಸಲು ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಹಾವೇರಿ: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಪೌರಕಾರ್ಮಿಕರ ಮಾದರಿಯಲ್ಲಿ ಇತರೆ ನೌಕರರನ್ನು ನೇರಪಾವತಿಗೆ ಒಳಪಡಿಸಿ ಹಂತಹಂತವಾಗಿ ಕಾಯಂಗೊಳಿಸುವಂತೆ ಆಗ್ರಹಿಸಿ ಫೆ.೧ರಂದು ಬುಧವಾರ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಹಾವೇರಿಜಿಲ್ಲಾ ಘಟಕದವತಿಯಿಂದ ನೂರಾರು ಹೊರಗುತ್ತಿಗೆ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ವಿರಮಲ್ಲಪ್ಪ ಪೂಜಾರ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಅರ್ಪಿಸಿದರು.
ಇಲ್ಲಿನ ಹುತಾತ್ಮ ಮೈಲಾರ ಮಹದೇವಪ್ಪನವರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಹೊರಗುತ್ತಿಗೆ ನೌಕರರು ಹಾಗೂ ವಿವಿಧ ದಲಿತ ಸಂಗಟನೆಗಳ ಮುಖಂಡರು ಹೊಸಮನಿ ಸಿದ್ದಪ್ಪವೃತ್ತಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ ಅಲ್ಲಿ ತಮ್ಮ ಹಕ್ಕೋತ್ತಾಯ ಮಂಡಿಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು.
ಮನವಿಯಲ್ಲಿ ರಾಜ್ಯ ಸರಕಾರವೂ ಎರಡನೇ ಬಾರಿಗೆ ಪೌರಕಾರ್ಮಿಕರ ವಿಶೇಷ ನೇರ ನೇಮಕಾತಿ ನಡೆಸುತ್ತಿದೆ. ಆದರೆ ಇನ್ನುಳಿದ ಸಚ್ಛತಾ ಕಾರ್ಮಿಕರಾದ ಕಸ ಸಾಗಿಸುವ ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್, ಒಳಚರಂಡಿ ಕಾರ್ಮಿಕರು, ನೀರು ಸರಬರಾಜು ಸಹಾಯಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ಒಳಪಡಿಸದೆ ಗುತ್ತಿಗೆಯಲ್ಲಿ ಮುಂದುವರಿಸುವ ಸರಕಾರದ ತಾರತಮ್ಯು ಖಂಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ಆಗ್ರಹಿಸಿ ಫೆ.೧ರಿಂದ g ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ನಗರಗಳ ಸ್ವಚ್ಛತೆಯಲ್ಲಿ ಪೌರಕಾರ್ಮಿಕರೊಂದಿಗೆ ಪೂರಕವಾಗಿ ದುಡಿಯುವ ಹೊರಗುತ್ತಿಗೆ ನೌಕರರನ್ನು ಈ ಹಿಂದಿನ ರಾಜ್ಯ ಸರಕಾರವೂ ಕಡೆಗಾಣಿಸಿದ್ದು ಈಗಿನ ಸರಕಾರವೂ ಗುತ್ತಿಗೆಯಲ್ಲಿ ಮುಂದುವರಿಸುವ ಮೂಲಕ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬ ಧೋರಣೆ ಅನುಸರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹೊರಗುತ್ತಿಗೆ ನೌಕರರು ನೇರಪಾವತಿಗೆ ಆಗ್ರಹಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಅನಿರ್ದಿಷ್ಟವಧಿ ಮುಷ್ಕರ ನಡೆಸುತ್ತಿರುವುದಾಗಿ ತಿಳಸಲಾಗಿದೆ.
ಸರ್ಕಾರ ಪೌರಕಾರ್ಮಿಕರೊಟ್ಟಿಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ವಾಹನ ಚಾಲಕರು, ನೀರುಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್ ,ಹೆಲರ್ಸ್ ಗಳು, ಡಾಟ ಆಪರೇಟರುಗಳು, ಸ್ಯಾನಿಟರಿ ಸೂಪರ್ ವೈಸರುಗಳು ಸೇರಿದಂತೆ ಸಾವಿರಕ್ಕು ಹೆಚ್ಚು ನೌಕರರನ್ನು ಗುತ್ತಿಗೆಯಲ್ಲಿ ಉಳಿಸಿ ತಾರತಮ್ಯ ಎಸಗಿದ್ದು ಹೊರಗುತ್ತಿಗೆ ನೌಕರರ ನೇರಪಾವತಿ ಹಾಗೂ ಖಾಯಂಗಾಗಿ ಫೆ.೧ರಿಂದ ಕುಡಿಯುವ ನೀರು ಹಾಗೂ ಸ್ವಚ್ಚತೆ ಸ್ಥಗಿತಗೊಳಿಸಿ ಅನಿರ್ದಿಷ್ಟವಧಿ ಧರಣಿ ನಡೆಸಲಾಗುವುದು.
ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. ೨೦೧೭ರಲ್ಲಿ ಪೌರಕಾರ್ಮಿಕರ ನೇಮಕಾತಿಗೊಳಿಸಿದಾಗಲೂ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಯಿತು. ಈಗಲೂ ಸಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಮುಂದುವರಿಸುವ ಸರಕಾರದ ನೀತಿ ಒಂದುಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಪೌರಕಾರ್ಮಿಕರ ನೇರನೇಮಕಾತಿಯನ್ನು ಸ್ವಾಗತಿಸುತ್ತೇವೆ. ಆದರೆ ಹೊರಗುತ್ತಿಗೆ ನೌಕರರ ನ್ಯಾಯಬದ್ಧ ಹಕ್ಕಿಗಾಗಿ ಆಗ್ರಹಿಸುವುದು ನಮ್ಮ ಹಕ್ಕಾಗಿದೆ. ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ಮಧ್ಯೆ ಒಡೆದಾಳುವ ನೀತಿ ಅನುಸರಿಸುವುದು ಯಾವುದೇ ಸರಕಾರಕ್ಕೆ ಶೋಭೆಯಲ್ಲ.ಸರಕಾರ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಹಾಗೂ ಪೌರಕಾರ್ಮಿಕರನ್ನು ವಿಭಜಿಸಿದೆ. ವಾಸ್ತವವಾಗಿ ಪೌರಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರು ಸಹ ನಗರಗಳ ಸ್ವಚ್ಛತೆಗೆ ಕುಡಿಯುವ ನೀರು ಪೂರೈಕೆಗೆ ಪರಸ್ಪರ ಪೂರಕವಾಗಿ ದುಡಿಯುವವರೆ ಆಗಿದ್ದಾರೆ .
ಸರಕಾರ ಆಗಿರುವ ಲೋಪವನ್ನು ಸರಿಪಡಿಸಿ ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಿ ಹಂತಹಂತವಾಗಿ ಖಾಯಂಗೊಳಿಸುವಂv ಸಂಘಟನೆಯ ಮುಖಂಡರು ಕೋರಿದ್ದು, ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಕುಡಿಯುವ ನೀರು ಹಾಗೂ ಕಸ ವಿಲೇವಾರಿಯಲ್ಲಿ ನಾಗರೀಕರಿಗೆ ಆಗುವ ಅನಾನೂಕೂಲಕ್ಕೆ ವಿಷಾದ ವ್ಯಕ್ತಪಡಿಸಿದ್ದು,. ನಾಗರೀಕ ಸಹ ಈ ಹೋರಾಟದಲ್ಲಿ ಕೈ ಜೋಡಿಸುವಂತೆ ಮನವಿಮಾಡಿಕೊಂಡಿದ್ದಾರೆ.
ಪ್ರತಿಭಟನೆಯಲ್ಲಿ ಹೊರಗುತ್ತಿಗೆ ನೌಕರರ ಸಂಗದ ಅಧ್ಯಕ್ಷ ರಾಜು ಹೊಸಮನಿ, ಶಿವರಾಜ ಕಟ್ಟಿಮನಿ, ರಮೇಶ ಭೋವಿ, ಗುರುನಾಥ ಅಡಿವೆಣ್ಣನವರ, ಹೊನ್ನೇಶ್ವರ ತಗಡಿಮನಿ, ಅಶೋಕ ಮರೆಣ್ಣನವರ,ಉಡಚಪ್ಪ ಮಾಳಗಿ, ಅಕ್ಷತಾ ಕೆ.ಸಿ, ನಾಗರಾಜ ಮಾಳಗಿ, ಸೇರಿದಂತೆ ಅನೇಕರು ಭಾಗವಹಿಸಿದ್ದರು.