ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಹಗುರು ಮಾತು, ಸಚಿವ ಅಶ್ವಥ್ ನಾರಾಯಣ್ ವಜಾಕ್ಕೆ ಲಮಾಣಿ ಆಗ್ರಹ
ಹಾವೇರಿ: ರಾಜ್ಯದ ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿರುವ ಸಚಿವ ಡಾ. ಅಶ್ವಥ್ ನಾರಾಯಣ್ ಅವರನ್ನು ಸಚಿವ ಸ್ಥಾನದಿಂದ ಮುಖ್ಯಮಂತ್ರಿಗಳು ವಜಾಗೊಳಿಸಬೇಕು. ಸಚಿವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಈರಪ್ ಲಮಾಣಿ ಆಗ್ರಹಿಸಿದ್ದಾರೆ.
ಈಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯಕ್ಕೆ ಉತ್ತಮ ಜನಪರ ಆಡಳಿತ ನೀಡಿರುವ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರ ವಿರುದ್ದ ಸಚಿವ ಡಾ. ಅಶ್ವಥ್ ನಾರಾಯಣ್ ಮಾತನಾಡಿದ ಪದಗಳನ್ನು ಯಾರೂ ಕೂಡ ಒಪ್ಪುವಂತದಲ್ಲ. ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ. ರಾಜಕೀಯ ವಿಚಾರಗಳಲ್ಲಿ ಪರ ವಿರೋಧ ಮಾಡುವುದನ್ನು ಬಿಟ್ಟು ಹೊಡೆದು ಸಾಯಿಸಿ ಎಂಬ ಪ್ರಚೋದನಾತ್ಮಕ ಪದ ಬಳಸಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿಯ ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಸಹಿತ ಹಲವು ಬಿಜೆಪಿಗರು ಟಿಪ್ಪು ಸುಲ್ತಾನ್ ಅವರನ್ನು ಹಲವು ವೇದಿಕೆಗಳಲ್ಲಿ ಹೊಗಳಿದ ದಾಖಲೆಗಳಿದ್ದು ಅದೇ ಕೆಲಸವನ್ನು ಸಿದ್ದರಾಮಯ್ಯ ಮಾಡಿದರೆ ಇವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇವರ ಇಬ್ಬಗೆ ಧೋರಣೆಯನ್ನು ಎತ್ತಿತೋರಿಸುತ್ತದೆ. ಒಮ್ಮೆ ಪ್ರಚೋದನಾತ್ಮಕ ಹೇಳಿಕೆ ನೀಡಿ ಬಳಿಕ ಕ್ಷಮೆ ಕೇಳುವ ನಾಟಕ ಮಾಡಿದರೆ ಅವರು ಆಡಿದ ಮಾತು ಮರೆತು ಹೋಗುವುದಿಲ್ಲ. ಒಬ್ಬ ಸಚಿವರಾಗಿ ಇಂತಹ ಹೇಳಿಕೆ ನೀಡಿದ ಅಶ್ವಥ್ ನಾರಾಯಣ್ ಅವರನ್ನು ಸಿ.ಎಂ ಬಸವರಾಜ ಬೊಮ್ಮಾಯಿಅವರು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು .
ಸಿದ್ದರಾಮಯ್ಯ ಅವರನ್ನು ಕೊಲೆ ಮಾಡುವಂತೆ ಕರೆ ನೀಡಿದ ಅಶ್ವತ್ಥ್ ನಾರಾಯಣ ಅವರು ಬಿಜೆಪಿಯ ಕೊಲೆಗಡುಕ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರಿಗೆ ಕನಿಷ್ಠ ನೈತಿಕತೆ ಇದ್ದರೆ ಅಶ್ವಥ್ ನಾರಾಯಣರನ್ನು ವಜಾಗೊಳಿಸಿ, ಕಾನೂನು ಕ್ರಮ ಜರುಗಿಸಬೇಕು ಸಚಿವರ ವಿರುದ್ಧ ಕ್ರಮ ಕೈಗೊಳ್ಳದೇ ಹೋದರೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಬೆಂಬಲಿಗರೊಂದಿಗೆ ಸಚಿವರ ವಜಾಕ್ಕೆ ಆಗ್ರಹಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಈರಪ್ಪ ಲಮಾಣಿ ತಿಳಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಹಗುರು ಮಾತು, ಸಚಿವ ಅಶ್ವಥ್ ನಾರಾಯಣ್ ವಜಾಕ್ಕೆ ಲಮಾಣಿ ಆಗ್ರಹ
Date:
ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಹಗುರು ಮಾತು, ಸಚಿವ ಅಶ್ವಥ್ ನಾರಾಯಣ್ ವಜಾಕ್ಕೆ ಲಮಾಣಿ ಆಗ್ರಹ
ಹಾವೇರಿ: ರಾಜ್ಯದ ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿರುವ ಸಚಿವ ಡಾ. ಅಶ್ವಥ್ ನಾರಾಯಣ್ ಅವರನ್ನು ಸಚಿವ ಸ್ಥಾನದಿಂದ ಮುಖ್ಯಮಂತ್ರಿಗಳು ವಜಾಗೊಳಿಸಬೇಕು. ಸಚಿವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಈರಪ್ ಲಮಾಣಿ ಆಗ್ರಹಿಸಿದ್ದಾರೆ.
ಈಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯಕ್ಕೆ ಉತ್ತಮ ಜನಪರ ಆಡಳಿತ ನೀಡಿರುವ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರ ವಿರುದ್ದ ಸಚಿವ ಡಾ. ಅಶ್ವಥ್ ನಾರಾಯಣ್ ಮಾತನಾಡಿದ ಪದಗಳನ್ನು ಯಾರೂ ಕೂಡ ಒಪ್ಪುವಂತದಲ್ಲ. ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ. ರಾಜಕೀಯ ವಿಚಾರಗಳಲ್ಲಿ ಪರ ವಿರೋಧ ಮಾಡುವುದನ್ನು ಬಿಟ್ಟು ಹೊಡೆದು ಸಾಯಿಸಿ ಎಂಬ ಪ್ರಚೋದನಾತ್ಮಕ ಪದ ಬಳಸಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿಯ ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಸಹಿತ ಹಲವು ಬಿಜೆಪಿಗರು ಟಿಪ್ಪು ಸುಲ್ತಾನ್ ಅವರನ್ನು ಹಲವು ವೇದಿಕೆಗಳಲ್ಲಿ ಹೊಗಳಿದ ದಾಖಲೆಗಳಿದ್ದು ಅದೇ ಕೆಲಸವನ್ನು ಸಿದ್ದರಾಮಯ್ಯ ಮಾಡಿದರೆ ಇವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇವರ ಇಬ್ಬಗೆ ಧೋರಣೆಯನ್ನು ಎತ್ತಿತೋರಿಸುತ್ತದೆ. ಒಮ್ಮೆ ಪ್ರಚೋದನಾತ್ಮಕ ಹೇಳಿಕೆ ನೀಡಿ ಬಳಿಕ ಕ್ಷಮೆ ಕೇಳುವ ನಾಟಕ ಮಾಡಿದರೆ ಅವರು ಆಡಿದ ಮಾತು ಮರೆತು ಹೋಗುವುದಿಲ್ಲ. ಒಬ್ಬ ಸಚಿವರಾಗಿ ಇಂತಹ ಹೇಳಿಕೆ ನೀಡಿದ ಅಶ್ವಥ್ ನಾರಾಯಣ್ ಅವರನ್ನು ಸಿ.ಎಂ ಬಸವರಾಜ ಬೊಮ್ಮಾಯಿಅವರು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು .
ಸಿದ್ದರಾಮಯ್ಯ ಅವರನ್ನು ಕೊಲೆ ಮಾಡುವಂತೆ ಕರೆ ನೀಡಿದ ಅಶ್ವತ್ಥ್ ನಾರಾಯಣ ಅವರು ಬಿಜೆಪಿಯ ಕೊಲೆಗಡುಕ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರಿಗೆ ಕನಿಷ್ಠ ನೈತಿಕತೆ ಇದ್ದರೆ ಅಶ್ವಥ್ ನಾರಾಯಣರನ್ನು ವಜಾಗೊಳಿಸಿ, ಕಾನೂನು ಕ್ರಮ ಜರುಗಿಸಬೇಕು ಸಚಿವರ ವಿರುದ್ಧ ಕ್ರಮ ಕೈಗೊಳ್ಳದೇ ಹೋದರೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಬೆಂಬಲಿಗರೊಂದಿಗೆ ಸಚಿವರ ವಜಾಕ್ಕೆ ಆಗ್ರಹಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಈರಪ್ಪ ಲಮಾಣಿ ತಿಳಿಸಿದ್ದಾರೆ.