ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ- ೧೯,೫೦೦ ಮೆಗಾವ್ಯಾಟ್ ವಿದ್ಯುತ್ ಖರೀದಿ -ಇಂಧನ ಸಚಿವ ಕೆ.ಜೆ.ಜಾರ್ಜ್

Date:

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ- ೧೯,೫೦೦ ಮೆಗಾವ್ಯಾಟ್ ವಿದ್ಯುತ್ ಖರೀದಿ
-ಇಂಧನ ಸಚಿವ ಕೆ.ಜೆ.ಜಾರ್ಜ್
ಹಾವೇರಿ : ರಾಜ್ಯದಲ್ಲಿ ಯಾವುದೇ ವಿದ್ಯುತ್ ಸಮಸ್ಯೆ ಇರುವುದಿಲ್ಲ. ಬೇಸಿಗೆ ಸಮಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ೧೯,೫೦೦ ಮೆಗಾವ್ಯಾಟ್ ವಿದ್ಯುತ್‌ನ್ನು ಬೇರೆ ಬೇರೆ ರಾಜ್ಯಗಳಿಂದ ಖರೀದಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.
ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯ ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೈತರ ಪಂಪ್‌ಸೆಟ್‌ಗಳಿಗೆ ಏಳು ತಾಸ್ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವಿದ್ಯುತ್ ತಂತಿ ಬದಲಾವಣೆ: ಹಳೆ ವಿದ್ಯುತ್ ತಂತಿ ಬದಲಾವಣೆಗೆ , ಹೊಸ ಸ್ಟೇಷನ್ ಮಂಜೂರಾತಿಗೆ ಹಾಗೂ ಗ್ರಿಡ್ ಅಪ್‌ಗ್ರೇಡಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರ ಪಂಪಸೆಟ್‌ಗಳ ಅಕ್ರಮ-ಸಕ್ರಮಕ್ಕೆ ೪.೫೦ ಲಕ್ಷ ಅರ್ಜಿಗಳು ಬಂದಿದ್ದು, ಈ ಪೈಕಿ ೨.೫೦ ಲಕ್ಷ ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದರು.
ರೂ.೬ ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್, ಪುರಸಭೆ ಸೇರಿದಂತೆ ಸರ್ಕಾರಿ ಕಚೇರಿಗಳ ರೂ. ಆರು ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಇದ್ದು, ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಚರ್ಚಿಸಲಾಗಿದೆ.
ಫ್ಯಾಕ್ಟರಿಗೆ ಕೊಕ್ಕಿ ಹಾಕಿ ವಿದ್ಯುತ್ ಬಳಕೆ: ಜಿ.ಎಂ.ಶುಗರ್‍ಸ್‌ನವರು ಕೊಕ್ಕಿ ಹಾಕಿ ವಿದ್ಯುತ್ ಬಳಕೆಮಾಡಿದ ಕುರಿತು ದೂರು ಬಂದಿದ್ದು, ಇದನ್ನು ಪರಿಶೀಲಿಸಿ ವರದಿ ನೀಡಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರು ಕೊಕ್ಕೆ ಹಾಕುವುದು ಸಾಮಾನ್ಯ ಆದರೆ ಫ್ಯಾಕ್ಟರಿ ಹಾಕಿರುವುದು ಸರಿಯಾದ ಕ್ರಮವಲ್ಲ. ಅದು ಸಾಬೀತಾದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಅಜೀಮ್‌ಪೀರ ಖಾದ್ರಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ವೈಶಾಲಿ ಎಂ.ಎಲ್, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ- ೧೯,೫೦೦ ಮೆಗಾವ್ಯಾಟ್ ವಿದ್ಯುತ್ ಖರೀದಿ
-ಇಂಧನ ಸಚಿವ ಕೆ.ಜೆ.ಜಾರ್ಜ್
ಹಾವೇರಿ : ರಾಜ್ಯದಲ್ಲಿ ಯಾವುದೇ ವಿದ್ಯುತ್ ಸಮಸ್ಯೆ ಇರುವುದಿಲ್ಲ. ಬೇಸಿಗೆ ಸಮಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ೧೯,೫೦೦ ಮೆಗಾವ್ಯಾಟ್ ವಿದ್ಯುತ್‌ನ್ನು ಬೇರೆ ಬೇರೆ ರಾಜ್ಯಗಳಿಂದ ಖರೀದಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.
ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯ ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೈತರ ಪಂಪ್‌ಸೆಟ್‌ಗಳಿಗೆ ಏಳು ತಾಸ್ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವಿದ್ಯುತ್ ತಂತಿ ಬದಲಾವಣೆ: ಹಳೆ ವಿದ್ಯುತ್ ತಂತಿ ಬದಲಾವಣೆಗೆ , ಹೊಸ ಸ್ಟೇಷನ್ ಮಂಜೂರಾತಿಗೆ ಹಾಗೂ ಗ್ರಿಡ್ ಅಪ್‌ಗ್ರೇಡಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರ ಪಂಪಸೆಟ್‌ಗಳ ಅಕ್ರಮ-ಸಕ್ರಮಕ್ಕೆ ೪.೫೦ ಲಕ್ಷ ಅರ್ಜಿಗಳು ಬಂದಿದ್ದು, ಈ ಪೈಕಿ ೨.೫೦ ಲಕ್ಷ ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದರು.
ರೂ.೬ ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್, ಪುರಸಭೆ ಸೇರಿದಂತೆ ಸರ್ಕಾರಿ ಕಚೇರಿಗಳ ರೂ. ಆರು ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಇದ್ದು, ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಚರ್ಚಿಸಲಾಗಿದೆ.
ಫ್ಯಾಕ್ಟರಿಗೆ ಕೊಕ್ಕಿ ಹಾಕಿ ವಿದ್ಯುತ್ ಬಳಕೆ: ಜಿ.ಎಂ.ಶುಗರ್‍ಸ್‌ನವರು ಕೊಕ್ಕಿ ಹಾಕಿ ವಿದ್ಯುತ್ ಬಳಕೆಮಾಡಿದ ಕುರಿತು ದೂರು ಬಂದಿದ್ದು, ಇದನ್ನು ಪರಿಶೀಲಿಸಿ ವರದಿ ನೀಡಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರು ಕೊಕ್ಕೆ ಹಾಕುವುದು ಸಾಮಾನ್ಯ ಆದರೆ ಫ್ಯಾಕ್ಟರಿ ಹಾಕಿರುವುದು ಸರಿಯಾದ ಕ್ರಮವಲ್ಲ. ಅದು ಸಾಬೀತಾದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಅಜೀಮ್‌ಪೀರ ಖಾದ್ರಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ವೈಶಾಲಿ ಎಂ.ಎಲ್, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...