ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹಮದ್ ನೇಮಕ
ಹಾವೇರಿ: ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್ ಅವರನ್ನು ಸೋಮವಾರ ಸರ್ಕಾರದಿಂದ ನೇಮಕ ಮಾಡಲಾಗಿದೆ.
ಸಚಿವಸ್ಥಾನದ ನಿರೀಕ್ಷೆಯಲ್ಲಿದ್ದ ಸಲೀಂ ಅಹ್ಮದ್ ಅವರಿಗೆ ಇದೀಗ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರ ಹುದ್ದೆಯನ್ನು ನೀಡಲಾಗಿದೆ. ಸಲೀಂ ಅಹ್ಮದ್ ಅವರು ಈಹಿಂದೆಯು ಸಹ ಮುಖ್ಯ ಸಚೇತಕರ ಕಾರ್ಯನಿರ್ವಹಿಸಿದ್ದರು.
ಹುಬ್ಬಳ್ಳಿ-ಧಾರವಾಡ , ಹಾವೇರಿ ,ಗದಗ ಜಿಲ್ಲೆ ಸ್ಥಳೀಯ ಸಂಸ್ಥೆಳಿಂದ ಕರ್ನಾಟಕ ವಿಧಾನ
ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಸಲೀಂ ಅಹ್ಮದ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರು ಸಹ ಆಗಿದ್ದಾರೆ.
ಭಾರತ ಸರ್ಕಾರದ ನೆಹರು ಯುವ ಕೇಂದ್ರ ಸಂಘಟನೆ , ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಸಲೀಂ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.
ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ,ಎನ್.ಎಸ್.ಯು.ಐ ಅಧ್ಯಕ್ಷರಾಗಿ ಅನೇಕ ಮಹತ್ವದ ಜವಾಬ್ದಾರಿಗಳುನ್ನು ಇವರು ನಿರ್ವಹಿಸಿದ್ದಾರೆ. ೧೯೯೭ ರಲ್ಲಿ ಮೊದಲ ಬಾರಿಗೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾದರು. ಮತ್ತು ಕೆಎಲ್ಸಿ ರಚಿಸಿದ ವಿವಿಧ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ನಂತರ ೨೦೦೦ ರಲ್ಲಿ ಅವರು ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕರಾಗಿ ನೇಮಕಗೊಂಡರು. ಇದೀಗ ಸರ್ಕಾರ ಸಲೀಂ ಅಹ್ಮದ್ ಅವರನ್ನು ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್ ಅವರನ್ನು ನೇಮಕ ಮಾಡಿದೆ.