ಶಿಗ್ಗಾಂವ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡಲು ಜಿಲ್ಲಾಧ್ಯಕ್ಷರಿಗೆ ಮಾಳಗಿ ಮನವಿ

Date:

 

ಶಿಗ್ಗಾಂವ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡಲು ಜಿಲ್ಲಾಧ್ಯಕ್ಷರಿಗೆ ಮಾಳಗಿ ಮನವಿ  
ಹಾವೇರಿ:  ಬರುವ ದಿನಗಳಲ್ಲಿ ಘೋಷಣೆಯಾಗಲಿರುವ ಶಿಗ್ಗಾಂವ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಲು ತಮಗೆ ಟಿಕೆಟ್ ನೀಡುವಂತೆ ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಶುಕ್ರವಾರ ಇಲ್ಲಿನ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಅರುಣಕುಮಾರ ಪೂಜಾರ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಕಳೆದ ೨೦ ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದು, ಮಾಜಿ ಮುಖ್ಯ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರಾದ  ಬಸವರಾಜ ಎಸ್. ಬೊಮ್ಮಾಯಿಯವರ ಕಟ್ಟಾ ಅಭಿಮಾನಿಯಾಗಿ ಅಂದಿನಿಂದ ಇಂದಿನವರೆಗೂ ನಡೆದ ಎಲ್ಲ ಚುನಾವಣೆಗಳಲ್ಲಿ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಸಂಘಟನೆ ಮತ್ತು ಪ್ರಚಾರ ಮಾಡುತ್ತಾ ಬಂದಿರುವುದಾಗಿ ಮಾಳಗಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯ(ಎಡಗೈ) ಮಾದಿಗ ಸಮಾಜಕ್ಕೆ ಸೇರಿದವನಾಗಿದ್ದು, ಅವಿಭಾಜ್ಯ ಧಾರವಾಡ ಜಿಲ್ಲೆಯ ಮಾದಿಗ ಸಮಾಜದ ಅಧ್ಯಕ್ಷನಾಗಿ, ಧಾರವಾಡ, ಹಾವೇರಿ ಗದಗ ಮೂರು ಜಿಲ್ಲೆಗಳಲ್ಲಿ ಸಮಾಜದ ಸಂಘಟನೆ ಮಾಡುತ್ತಿದ್ದೇನೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಟ ೧೫ ರಿಂದ ೨೫ ಸಾವಿರ ಮತದಾರರನ್ನು ಹೊಂದಿದ ಬಹುದೊಡ್ಡ ಸಮಾಜವಿದ್ದು, ಈ ಭಾಗದಲ್ಲಿ  ಮಾದಿಗ ಸಮಾಜಕ್ಕೆ ರಾಜಕೀಯ ಸ್ಥಾನಮಾನಗಳು ಇಲ್ಲದೇ ವಂಚಿತಗೊಂಡ ಸಮಾಜ ನಮ್ಮದಾಗಿದೆ.
ಬಸವರಾಜ ಬೊಮ್ಮಾಯಿ ಅವರು ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ ನನ್ನನ್ನು ಮೂರು ತಿಂಗಳ ಮಟ್ಟಿಗೆ ಡಾ. ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಆ ಅಲ್ಪ ಅವಧಿಯಲ್ಲಿ ನಿಗಮದ ಯೋಜನೆಗಳನ್ನು ಚರ್ಮ ಕುಶಲ ಕರ್ಮಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಚರ್ಮ ಕುಶಲ ಕರ್ಮಿಗಳಿಗೆ ಸಹಾಯ ಮಾಡಿರುವೆ.
ಮೂರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಪರವಾಗಿ ಮತ ಪರಿವರ್ತನೆ ಮಾಡಿ ಧಾರವಾಡ ಲೋಕಸಭಾ ಹಾಗೂ ಹಾವೇರಿ-ಗದಗ ಲೋಕಸಭಾ  ಕ್ಷೇತ್ರಗಳಲ್ಲಿ ಮಾದಿಗರು ಸಂಪೂರ್ಣ ಸಂಘಟಿತರಾಗಿ ಎರಡು ಲೋಕಸಭಾ ಬಿಜೆಪಿ ಅಭ್ಯರ್ಥಿಗಳು ಗೆಲ್ಲಿಸಲು ನಮ್ಮ ಸಮಾಜ ಪ್ರಮುಖವಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ. ಸದ್ಯ ಜರುಗಲಿರುವ ಶಿಗ್ಗಾಂವ ವಿಧಾನಸಭಾ ಮತ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು  ಪಕ್ಷದ ಟಿಕೆಟ್ ನೀಡಬೇಕೆಂದು ಡಿ.ಎಸ್.ಮಾಳಗಿ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಮನವಿ ನೀಡಿದ್ದಾರೆ.
ಈ ಸಂದರ್ಭದಲ್ಲಿ  ಜಿಲ್ಲಾ ಪಂಚಾಯತಿ ಮಾಜಿ  ಸದಸ್ಯ ಮಹಾಲಿಂಗಪ್ಪ ಹಳವಳ್ಳಿ, ಜಿಲ್ಲಾ ಅಹಿಂದ ಒಕ್ಕೂಟದ ಅಧ್ಯಕ್ಷ   ಮಹದೇವಪ್ಪ ವಡ್ಡರ್ ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

 

ಶಿಗ್ಗಾಂವ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡಲು ಜಿಲ್ಲಾಧ್ಯಕ್ಷರಿಗೆ ಮಾಳಗಿ ಮನವಿ  
ಹಾವೇರಿ:  ಬರುವ ದಿನಗಳಲ್ಲಿ ಘೋಷಣೆಯಾಗಲಿರುವ ಶಿಗ್ಗಾಂವ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಲು ತಮಗೆ ಟಿಕೆಟ್ ನೀಡುವಂತೆ ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಶುಕ್ರವಾರ ಇಲ್ಲಿನ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಅರುಣಕುಮಾರ ಪೂಜಾರ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಕಳೆದ ೨೦ ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದು, ಮಾಜಿ ಮುಖ್ಯ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರಾದ  ಬಸವರಾಜ ಎಸ್. ಬೊಮ್ಮಾಯಿಯವರ ಕಟ್ಟಾ ಅಭಿಮಾನಿಯಾಗಿ ಅಂದಿನಿಂದ ಇಂದಿನವರೆಗೂ ನಡೆದ ಎಲ್ಲ ಚುನಾವಣೆಗಳಲ್ಲಿ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಸಂಘಟನೆ ಮತ್ತು ಪ್ರಚಾರ ಮಾಡುತ್ತಾ ಬಂದಿರುವುದಾಗಿ ಮಾಳಗಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯ(ಎಡಗೈ) ಮಾದಿಗ ಸಮಾಜಕ್ಕೆ ಸೇರಿದವನಾಗಿದ್ದು, ಅವಿಭಾಜ್ಯ ಧಾರವಾಡ ಜಿಲ್ಲೆಯ ಮಾದಿಗ ಸಮಾಜದ ಅಧ್ಯಕ್ಷನಾಗಿ, ಧಾರವಾಡ, ಹಾವೇರಿ ಗದಗ ಮೂರು ಜಿಲ್ಲೆಗಳಲ್ಲಿ ಸಮಾಜದ ಸಂಘಟನೆ ಮಾಡುತ್ತಿದ್ದೇನೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಟ ೧೫ ರಿಂದ ೨೫ ಸಾವಿರ ಮತದಾರರನ್ನು ಹೊಂದಿದ ಬಹುದೊಡ್ಡ ಸಮಾಜವಿದ್ದು, ಈ ಭಾಗದಲ್ಲಿ  ಮಾದಿಗ ಸಮಾಜಕ್ಕೆ ರಾಜಕೀಯ ಸ್ಥಾನಮಾನಗಳು ಇಲ್ಲದೇ ವಂಚಿತಗೊಂಡ ಸಮಾಜ ನಮ್ಮದಾಗಿದೆ.
ಬಸವರಾಜ ಬೊಮ್ಮಾಯಿ ಅವರು ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ ನನ್ನನ್ನು ಮೂರು ತಿಂಗಳ ಮಟ್ಟಿಗೆ ಡಾ. ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಆ ಅಲ್ಪ ಅವಧಿಯಲ್ಲಿ ನಿಗಮದ ಯೋಜನೆಗಳನ್ನು ಚರ್ಮ ಕುಶಲ ಕರ್ಮಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಚರ್ಮ ಕುಶಲ ಕರ್ಮಿಗಳಿಗೆ ಸಹಾಯ ಮಾಡಿರುವೆ.
ಮೂರು ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಪರವಾಗಿ ಮತ ಪರಿವರ್ತನೆ ಮಾಡಿ ಧಾರವಾಡ ಲೋಕಸಭಾ ಹಾಗೂ ಹಾವೇರಿ-ಗದಗ ಲೋಕಸಭಾ  ಕ್ಷೇತ್ರಗಳಲ್ಲಿ ಮಾದಿಗರು ಸಂಪೂರ್ಣ ಸಂಘಟಿತರಾಗಿ ಎರಡು ಲೋಕಸಭಾ ಬಿಜೆಪಿ ಅಭ್ಯರ್ಥಿಗಳು ಗೆಲ್ಲಿಸಲು ನಮ್ಮ ಸಮಾಜ ಪ್ರಮುಖವಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ. ಸದ್ಯ ಜರುಗಲಿರುವ ಶಿಗ್ಗಾಂವ ವಿಧಾನಸಭಾ ಮತ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು  ಪಕ್ಷದ ಟಿಕೆಟ್ ನೀಡಬೇಕೆಂದು ಡಿ.ಎಸ್.ಮಾಳಗಿ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಮನವಿ ನೀಡಿದ್ದಾರೆ.
ಈ ಸಂದರ್ಭದಲ್ಲಿ  ಜಿಲ್ಲಾ ಪಂಚಾಯತಿ ಮಾಜಿ  ಸದಸ್ಯ ಮಹಾಲಿಂಗಪ್ಪ ಹಳವಳ್ಳಿ, ಜಿಲ್ಲಾ ಅಹಿಂದ ಒಕ್ಕೂಟದ ಅಧ್ಯಕ್ಷ   ಮಹದೇವಪ್ಪ ವಡ್ಡರ್ ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...