ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಗೆ “ಕೈ”ಟಿಕೆಟ್ ಕೊಡಿಸುವಂತೆ ಉಸ್ತುವಾರಿ ಸಚಿವರಿಗೆ ಆಕಾಂಕ್ಷಿಗಳ ದುಂಬಾಲು
ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಿದ ನಂತರ ಶಿಗ್ಗಾವಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುವುದು ಖಚಿತವಾಗಿದೆ. ಈ ಮಧ್ಯೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಲ್ಲಿ ನಿತ್ಯ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹಿಗ್ಗುತ್ತಿದೆ. ಬುಧವಾರ ಜಿಲ್ಲೆಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲರನ್ನು ಭೇಟಿಯಾದ ಹಲವಾರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಕಾಂಗ್ರೆಸ್ ಟಿಕೆಟ್ ಕೊಡಿಸುವಂತೆ ಮನವಿ ಅಲ್ಲಿಸಿ ದುಂಬಾಲು ಬಿದ್ದಿದ್ದಾರೆ. ಇವರಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹನುಮಂತ ನಾಗಪ್ಪ ಬಂಡಿವಡ್ಡರ ಸಹ ಉಸ್ತುವಾರಿ ಸಚಿವರಿಗೆ ಟಿಕೆಟ್ಗಾಗಿಮನವಿ ಸಲ್ಲಿಸಿದ್ದಾರೆ.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ರನ್ನು ಹಾಗೂ ಜಿಲ್ಲೆಯ ಶಾಸಕರುಗಳನ್ನು ಭೇಟಿಯದ ಹನುಮಂತಪ್ಪ ಬಂಡಿವಡ್ಡರ ‘ಕಳೆದ ೨೫ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾದ ಸಾಕಷ್ಟು ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದವತಿಯಿಂದ ಪ್ರಭಲ ಟಿಕೆಟ್ ಆಕಾಂಕ್ಷಿಯಾಗಿರುವೆ. ಟಿಕೆಟ್ ಗಾಗಿ ಪ್ರಬಲ ಆಕಾಂಕ್ಷಿ ಆಗಿದ್ದೇನೆ. ನನಗೆ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.
ಕಾನೂನು ಪದವೀಧರನಾಗಿದ್ದು, ವಕೀಲ ವೃತ್ತಿಯೊಂದಿಗೆ ಸಮಾಜಸೇವೆ ಜೊತೆಯಲ್ಲಿ ಕಳೆದ ಎರಡು ದಶಕದಿಂದ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಪ್ರತಿಯೊಂದು ಹೋರಾಟದೊಂದಿಗೆ ಪಕ್ಷಕೊಟ್ಟ ಜವಾಬ್ದಾರಿಯನ್ನು ಚಾಚು ತಪ್ಪದೇ ನಿಬಾಯಿಸಿಕೊಂಡು ಬಂದಿದ್ದೇನೆ. ಪ್ರಸ್ತುತ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯಾಗಿ ಪಕ್ಷದ ಕೆಲಸ ಮಾಡುತ್ತಿದ್ದೇನೆ. ಕಳೆದ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿ ನಾನು ಪಕ್ಷದ ಟಿಕೆಟ್ ಕೇಳಿದ್ದೆ, ಅವಕಾಶ ಸಿಗಿಲ್ಲ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಗೆಲುವಿಗಾಗಿ ಕೆಲಸ ಮಾಡಿದ್ದೇನೆ.
ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ನನಗೆ ಕ್ಷೇತ್ರ ಸರ್ವ ಸಮುದಾಯದ ಜನರು ನನಗೆ ಪ್ರೋತ್ಸಾಹ, ಬೆಂಬಲ ನನಗಿದೆ. ರಾಜ್ಯ ಹೈ ಕಮಾಂಡ್ ಈಗಾಗಲೇ ಕ್ಷೇತ್ರಕ್ಕೆ ನೇಮಿಸಿರುವ ಏಳು ಜನ ವೀಕ್ಷಕರನ್ನು ಹಾಗೂ ಆರು ವಿಧಾನಸಭಾ ಕ್ಷೇತ್ರದ ಶಾಸಕರ ಅಭಿಪ್ರಾಯ ತಂಡ ರಚನೆ ಮಾಡಿದ್ದು ನಾನು ಅವರೆಲ್ಲರನ್ನು ಭೇಟಿಯಾಗಿ ಟಿಕೆಟ್ ಕೊಡಿಸುವಂತೆ ಅವರ ಗಮನಕ್ಕೆ ತಂದಿದ್ದೇನೆ. ಅವರೆಲ್ಲರೂ ಸಕಾರಾತ್ಮಕ ಭರವಸೆ ನೀಡಿದ್ದಾರೆ. ನನ್ನಂಯ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದರೇ ಗೆಲವು ಸುಲಭವಾಗಿದೆ. ಕ್ಷೇತ್ರದ ಜನಾಶೀರ್ವಾದ ನನ್ನ ಪರವಾಗಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ನ್ನು ತನಗೆ ಕೊಡಿಸುವಂತೆ ಹನುಮಂತ ಬಂಡಿವಡ್ಡರ ಸಚಿವರಲ್ಲಿ ವಿನಂತಿಸಿಕೊಂಡಿದ್ದಾರೆ.