ಸಿಎಂ ಸಿದ್ದರಾಮಯ್ಯ ನೇತೃತ್ವ ಕಾಂಗ್ರೆಸ್ ಸರ್ಕಾರದಿಂದ ಭಾರೀ ಉಡುಗೊರೆ! ಸಚಿವ ಸಂಪುಟದಲ್ಲಿ ಹಾವೇರಿಜಿಲ್ಲೆಗೆ ದೊಡ್ಡ ಂ
ಹಾವೇರಿ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಹಾವೇರಿಜಿಲ್ಲೆಗೆ ಭಾರಿ ಉಡುಗೊರೆದೊರೆತಿದ್ದು!, ಹಾವೇರಿಜಿಲ್ಲೆಗೆ ದೊಡ್ಡಸೊನ್ನೆಯನ್ನು ನೀಡಲಾಗಿದೆ.
ಜಿಲ್ಲೆಯಜನರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಐದು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದರು. ಆ ಮೂಲಕ ಕೈಗೆ ಬೆಂಬಲಿಸಿದ್ದರು.
ಆದರೆ ಶನಿವಾರ ರಚನೆ ಯಾಗುತ್ತಿರುವ ಸಚಿವ ಸಂಪುಟದಲ್ಲಿ ಜಿಲ್ಲೆಯ ಯಾವ ಒಬ್ಬ ಶಾಸಕರನ್ನು ಪರಿಗಣಿಸದೆ ನಿರ್ಲಕ್ಷ್ಯ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಬೆಂಬಲಿಸಿದ ಮತದರರಿಗೆ ಅವಮಾನ ಮಾಡಿದ್ದಾರೆ ಎನ್ನುವುದು ಜಿಲ್ಲೆಯ ಜನಾಭಿಪ್ರಾಯವಾಗಿದೆ.
ನಾಲ್ಕು ಬಾರಿ ಶಾಸಕರಾಗಿದ್ದ ಬಸವರಾಜ ಶಿವಣ್ಣನವರ, ಮೂರು ಬಾರಿ ಶಾಸಕರಾಗಿರುವ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶವನ್ನು ನೀಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಸಿದ್ದರಾಮಯ್ಯ ನೇvತೃತ್ವದ ಕಾಂಗ್ರೆಸ್ ಸರಕಾರ ಜಿಲ್ಲೆಗೆ ಸಚಿವ ಸ್ಥಾನ ನೀಡದೇ ಹಾವೇರಿ ಜಿಲ್ಲೆಯ ಶಾಸಕರು ಪರಿಗಣಿದೇ ನಿರ್ಲಕ್ಷ್ಯ ತೋರಿರುವು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಈಹಿಂದಿನ ಸರ್ಕಾರದಲ್ಲಿ ಅಂದರೆ ಕಾಂಗ್ರೆಸ್ಸೇತರ ಸರಕಾರ ಅಸ್ತಿತ್ವಕ್ಕೆ ಬಂದಾಗಲೆಲ್ಲ ಇಬ್ಬರಿಗೆ ಮಹತ್ವದ ಖಾತೆಯನ್ನು ನೀಡಿದ ಉದಾಹರಣೆಗಳಿವೆ. ಈಹಿಂದಿನ ಬಿಜೆಪಿ ಸರ್ಕಾರದಲ್ಲಿ ಶಿಗ್ಗಾವಿ ಕ್ಷೇತ್ರವನ್ನು ಪ್ರತಿನಿಧಿಸುವ ಬಸವರಾಜ ಬೊಮ್ಮಾಯ ಮುಖ್ಯಮಂತ್ರಿಯಾಗಿದ್ದರು, ಹಿರೇಕೆರೂರು ಕ್ಷೇತ್ರದ ಶಾಸಕರಾಗಿದ್ದ ಬಿ.ಸಿ.ಪಾಟೀಲರು ಕೃಷಿಖಾತೆಯನ್ನು ಹೊಂದಿದ್ದರು.
ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಮಹತ್ವ ಹೊಂದಿರುವ ಹಾವೇರಿಜಿಲ್ಲೆಯಲ್ಲಿ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಶ್ರೀನಿವಾಸ ಮಾನೆ, ಯು.ಬಿ.ಬಣಕಾರ, ಪ್ರಕಾಶ ಕೋಳಿವಾಡ ಅವರಂತ ಘಟಾನುಘಟಿನಾಯಕರು ಗೆದ್ದಿದ್ದರೂ ಸಹ ಇವರುಗಳಿಗೆ ಸಚಿವಸ್ಥಾನ ನಿರಾಕರಿಸಿರುವುದು ವ್ಯಾಪಕ ಚರ್ಚೆಯಾಗುತ್ತಿದೆ. ಮೇಲಾ ಹಾವೇರಿಜಿಲ್ಲೆಯನ್ನು ಪ್ರತಿನಿಧಿಸುವ ಕಾಂಗ್ರೆಸ್ ಪಕ್ಷ ಸಂಘಟಿಸಲು ಹಗಲಿರುಳು ಶ್ರಮಿಸುತ್ತಿರುವ ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರ ಹೆಸರನ್ನು ಸಹ ಕಡೆಗಣಿಸಿರುವುದು ಸಹಜವಾಗಿ ಅವರ ಬೆಂಬಲಿಗರಲ್ಲಿ ಬೇಸರ ತರಿಸಿದೆ.
ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿಜಿಲ್ಲೆ ರಾಜ್ಯ ರಾಜಕಾರಣದಲ್ಲಿ ಮೊದಲಬಾರಿಗೆ ಎಐಸಿಸಿ, ಕೆಪಿಸಿಸಿಯಿಂದ ನಿರ್ಲಕ್ಷಿಸಲಾಗಿದೆ. ಸಚಿವ ಸಂಪುಟದಲ್ಲಿ ಖಾಲಿ ಇರುವ ಎಲ್ಲ ಸಚಿವಸ್ಥಾನಗಳನ್ನು ಶನಿವಾರ ಭರ್ತಿಮಾಡಲಾಗುತ್ತಿದ್ದು, ಮುಂದಿನ ಸಚಿವ ಸಂಪುಟ ವಿಸ್ತರಣೆಯವರೆಗೂ ಜಿಲ್ಲೆಯವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆಳಿಲ್ಲ. ಜಿಲ್ಲೆಯ ಶಾಸಕರಿಗೆ ಇನ್ನೇನಿದ್ದರೂ ನಿಗಮ-ಮಂಡಳಿಗಳ ಅಧ್ಯಕ್ಷಸ್ಥಾನಗಳೇ ಗತಿಎನ್ನುವಂತಾಗಿದೆ.ಜಿಲ್ಲೆಯ ಶಾಸಕರ ನಿಲುವು ಏನಾಗಲಿದೆ?ಕಾದುನೋಡಬೇಕಷ್ಟೆ. ಒಟ್ಟಾರೆ ಅಂತು-ಇಂತು ಕುಂತಿಮಕ್ಕಳಿಗೆ ರಾಜ್ಯ ಇಲ್ಲ ಎನ್ನುವ ಮಾತು ಜಿಲ್ಲೆಯ ಕಾಂಗ್ರೆಸ್ ಶಾಸಕರನ್ನು ನೋಡಿದಾಗ ನೆನಪಿಗೆ ಬರುತ್ತದೆ.