ಹಾವೇರಿಲೋಕಸಭಾ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಯಾಗುವರೇ ಸಂಜೀವಕುಮಾರ ನೀರಲಗಿ!

Date:

ಹಾವೇರಿಲೋಕಸಭಾ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಯಾಗುವರೇ ಸಂಜೀವಕುಮಾರ ನೀರಲಗಿ!
ಹಾವೇರಿ: ೨೦೨೪ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ೨೮ ಸ್ಥಾನಗಳಲ್ಲಿ ೨೦ ಕ್ಷೇತ್ರಗಳನ್ನು ಗೆಲ್ಲುವ ಸಂಬಂಧ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷದ ನಾಯಕರು ಆಗಸ್ಟ್ ೨ ರಂದು ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆ. ಇದೇ ಹೊತ್ತಲ್ಲಿ ಹಾವೇರಿಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಗೆಲ್ಲಬಲ್ಲ ಪಕ್ಷದ ಅಭ್ಯರ್ಥಿ ಯಾರು? ಎನ್ನುವ ಚರ್ಚೆಬಹಳದಿನಗಳಿಂದ ಆರಂಭವಾಗಿದೆ.
ಹಾವೇರಿಲೋಕಸಭಾ ಕ್ಷೇತ್ರದ ಸಂಸದರಾಗಿರುವ ಶಿವಕುಮಾರ ಉದಾಸಿ ಸತತ ಮೂರುಬಾರಿ ಲೋಕಸಭಾ ಸದಸ್ಯರಾಗಿದ್ದವರು ೨೦೨೪ರ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಕೇಂದ್ರರಾಜಕಾರಣದಿಂದ ದೂರ ಉಳಿಯಲು ನಿರ್ಧರಿಸಿರುವುದು ಅನೇಕ ಚರ್ಚೆಗಳನ್ನು ಹುಟ್ಟುಹಾಕಿದೆ. ಉದಾಸಿ ಅವರ ಈಹೇಳಿಕೆ ಬಿಜೆಪಿಯಲ್ಲಿ ಅನೇಕ ಹಿರಿ-ಕಿರಿ ರಾಜಕಾರಣಿಗಳಿಗೆ ವರದಾನವಾಗಿದ್ದು, ಅವರು ತಾವು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಲು ಸಿದ್ದೆಂದು ಈಗಾಗಲೇ ಫೇಸ್‌ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್‌ಗಳಲ್ಲಿ ಪ್ರಚಾರ ಆರಂಭಿಸಿದ್ದಾರೆ. ಈಮಧ್ಯೆ ಕಾಂಗ್ರೆಸ್‌ನಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾರು? ಎನ್ನುವ ಚರ್ಚೆ ಬಹಳಜೋರಾಗಿ ನಡೆಯುತ್ತಿದೆ.
ಕಳೆದ ಬಾರಿ ಸ್ಪರ್ಧಿಸಿ ಸೋತಿದ್ದ ಡಿ.ಆರ್.ಪಾಟೀಲರು ಈಬಾರಿ ಸ್ಪರ್ಧಿಸಲು ಅಷ್ಟಾಗಿ ಆಸಕಿ ತೋರುತ್ತಿಲ್ಲ ಎನ್ನುತ್ತವೆ ಅವರ ಆಪ್ತ ಮೂಲಗಳು. ಹಾಗಾದರೇ ಕಾಂಗ್ರೆಸ್‌ನಿಂದ ಬೇರೆ ಅಭ್ಯರ್ಥಿಯಾಗುವವರು ಯಾರು? ಎಂದು ವಿಚಾರಿಸಿದಾಗ ಹಲವು ಹತ್ತು ಹೆಸರುಗಳು ಕೇಳಿಬರುತ್ತಿವೆ. ಆ ಹೆಸರುಗಳಲ್ಲಿ ಮುದಲನೆಯದಾಗಿ ಕೇಳಿ ಬರುವ ಹೆಸರು ಹಾವೇರಿನಗರಸಭೆಯ ಮಾಜಿ ಅಧ್ಯಕ್ಷ, ಯುವಮುಖಂಡ ಸಂಜೀವಕುಮಾರ ನೀರಲಗಿಅವರದ್ದು.
ಇಂಜನಿಯರ ಪದವಿಧರರಾಗಿರುವ ಸಂಜೀವಕುಮಾರ ನೀರಲಗಿ ಅವರು ಆಯ್ಕೆಮಾಡಿಕೊಂಡಿರುವ ಕ್ಷೇತ್ರ ಸಮಾಜಸೇವೆ. ಉದ್ಯಮಿಯಾಗಿ ಯಶಸ್ಸು ಕಂಡಿರುವ ಇವರು ಉದ್ಯಮ, ರಾಜಕಾರಣ, ಸಮಾಜಸೇವೆಯನ್ನು ಸಮರ್ಥವಾಗಿ ನಿಬಾಯಿಸುತ್ತಾ ಬಂದಿದ್ದು, ಪ್ರಸ್ತುತ ಹಾವೇರಿನಗರಸಭೆಯ ಸದಸ್ಯರಾಗಿರುವ ಇವರು ನಗರಸಭೆಯ ಅಧ್ಯಕ್ಷರಾಗಿಯು ಕಳೆದ ಎರಡುವರೆವರ್ಷಗಳಿದ ಕಾರ್ಯನಿರ್ವಹಿಸಿದ್ದಾರೆ.
ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷರಾಗಿ, ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ, ಕ್ರೀಡಾ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಇವರು ತಮ್ಮದೇ ಆದ ಯುವಪಡೆಯನ್ನು ಹೊಂದಿದ್ದಾರೆ. ಅನೇಕ ಹಿರಿಯ-ಕಿರಿಯ ರಾಜಕಾರಣಿಗಳ ನಿಕಟ ಸಂಪರ್ಕದಲ್ಲಿರುವ ಸಂಜೀವಕುಮಾರ ನೀರಲಗಿ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಾತ್ಯತಿತ ಮನೋಭಾವದ ಸಂಜೀವಕುಮಾರ ನೀರಲಗಿ ಅವರು ತಮ್ಮ ಕ್ರಿಯಾಶೀಲ ಚಟುವಟಿಕೆಗಳಿಂದ ರಾಜಕಾರಣದಲ್ಲಿ ಹಾಗೂ ಸಮಾಜಸೇವೆಯಲ್ಲಿ ಸಕ್ರಿಯರಾಗಿದ್ದಾರೆ. ಈ ಹಿಂದೆಯು ಕೂಡಾ ಇವರು ಹಾವೇರಿಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷದ ತೀರ್ಮಾನಕ್ಕೆ ಬದ್ದರಾಗಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಲು ಹಲವಾರು ಪ್ರಮುಖರು ತುದಿಗಾಲಲ್ಲಿ ಇಂತಿದ್ದಾರೆ. ರಾಜ್ಯದ ೨೮ಲೋಕಸಭಾ ಕ್ಷೇತ್ರಗಳಲ್ಲಿ ಶತಾಯಗತಾಯ ೨೦ಕ್ಕೂ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲೇಬೇಕೆನ್ನುವ ಸ್ಪಷ್ಟಗುರಿಯೊಂದಿಗೆ ಕಾಂಗ್ರೆಸ್ ವರಿಷ್ಠರು “ಗೆಲ್ಲುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಗೆಲ್ಲಬಹುದಾದಂತಹ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಲಾಗುತ್ತದೆ” ಎಂದು ಹೇಳುತ್ತಾರೆ.
ಇತ್ತೀಚೆಗೆ ನಡೆದ ವಿಧಾನಸಬಾ ಚುನಾವಣೆಯಲ್ಲಿ ಹಾವೇರಿಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ಪಕ್ಷದ ಸಾಧನೆ ತೃಪ್ತಿಕರವಾಗಿದ್ದು, ಮೇಲಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಪಕ್ಷಕ್ಕೆ ನೆರವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಕಾಂಗ್ರೆಸ್ ಉತ್ತಮ ಸಾಧನೆ ಮಾಡುವ ವಿಶ್ವಾಸವಿದ್ದು, ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನಮ್ಮಲ್ಲಿ ಉತ್ತಮ ಅಭ್ಯರ್ಥಿಗಳಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.
ಸಮಸ್ಯೆ ಏನೆಂದರೆ, ಕಾಂಗ್ರೆಸ್ ಪಕ್ಷವು ಹಾವೇರಿಲೋಕಸಭಾ ಕ್ಷೇತ್ರದಲ್ಲಿ ಹಲುವಬಾರಿಸೋತಿದೆ. ೨೦೨೪ ರ ಚುನಾವಣೆಗೆ, ಕಾಂಗ್ರೆಸ್ ಹೊಸ ಮುಖಗಳನ್ನು ತರಬಹುದು, ಏಕೆಂದರೆ ಪಕ್ಷಕ್ಕೆ ಅನುಭವಿ ಅಭ್ಯರ್ಥಿಗಳ ಕೊರತೆಯಿದೆ. ವಿಧಾನಸಭೆ ಚುನಾವಣೆಯಲ್ಲಿ ಎಂಎಲ್‌ಎ ಟಿಕೆಟ್ ಗಾಗಿ ಭಾರೀ ಬೇಡಿಕೆಯಿತ್ತು, ಆದರೆ ಲೋಕಸಭೆ ಚುನಾವಣೆಗೆ ನಿಲ್ಲಲು ಹೆಚ್ಚಿನ ನಾಯಕರು ಮುಂದೆ ಬರುತ್ತಿಲ್ಲ. ಹಾಗಂತ ಟಿಕೆಟ್ ಕೇಳುವವರ ಸಂಖ್ಯೆ ಕಡಿಮೆಇಲ್ಲ, ಈಬಗ್ಗೆ ಮಾತನಾಡಿ ಸಂಜೀವಕುಮಾರ ನೀರಲಗಿ ಅವರು ನಾನು ಕಾಂಗ್ರೆಸ್‌ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವೆ. ಅನೇಕ ವರ್ಷಗಳಿಂದ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸುತ್ತಿರುವೆ. ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವೆ. ಪಕ್ಷ ಅವಕಾಶ ಮಾಡಿಕೊಟ್ಟರೆ ಹಾವೇರಿಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಮರ್ಥನಾಗಿರುವೆ ಎನ್ನುತ್ತಾರೆ ಸಂಜೀವಕುಮಾರ ನೀರಲಗಿ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿಲೋಕಸಭಾ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಯಾಗುವರೇ ಸಂಜೀವಕುಮಾರ ನೀರಲಗಿ!
ಹಾವೇರಿ: ೨೦೨೪ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ೨೮ ಸ್ಥಾನಗಳಲ್ಲಿ ೨೦ ಕ್ಷೇತ್ರಗಳನ್ನು ಗೆಲ್ಲುವ ಸಂಬಂಧ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷದ ನಾಯಕರು ಆಗಸ್ಟ್ ೨ ರಂದು ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆ. ಇದೇ ಹೊತ್ತಲ್ಲಿ ಹಾವೇರಿಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಗೆಲ್ಲಬಲ್ಲ ಪಕ್ಷದ ಅಭ್ಯರ್ಥಿ ಯಾರು? ಎನ್ನುವ ಚರ್ಚೆಬಹಳದಿನಗಳಿಂದ ಆರಂಭವಾಗಿದೆ.
ಹಾವೇರಿಲೋಕಸಭಾ ಕ್ಷೇತ್ರದ ಸಂಸದರಾಗಿರುವ ಶಿವಕುಮಾರ ಉದಾಸಿ ಸತತ ಮೂರುಬಾರಿ ಲೋಕಸಭಾ ಸದಸ್ಯರಾಗಿದ್ದವರು ೨೦೨೪ರ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಕೇಂದ್ರರಾಜಕಾರಣದಿಂದ ದೂರ ಉಳಿಯಲು ನಿರ್ಧರಿಸಿರುವುದು ಅನೇಕ ಚರ್ಚೆಗಳನ್ನು ಹುಟ್ಟುಹಾಕಿದೆ. ಉದಾಸಿ ಅವರ ಈಹೇಳಿಕೆ ಬಿಜೆಪಿಯಲ್ಲಿ ಅನೇಕ ಹಿರಿ-ಕಿರಿ ರಾಜಕಾರಣಿಗಳಿಗೆ ವರದಾನವಾಗಿದ್ದು, ಅವರು ತಾವು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಲು ಸಿದ್ದೆಂದು ಈಗಾಗಲೇ ಫೇಸ್‌ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್‌ಗಳಲ್ಲಿ ಪ್ರಚಾರ ಆರಂಭಿಸಿದ್ದಾರೆ. ಈಮಧ್ಯೆ ಕಾಂಗ್ರೆಸ್‌ನಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾರು? ಎನ್ನುವ ಚರ್ಚೆ ಬಹಳಜೋರಾಗಿ ನಡೆಯುತ್ತಿದೆ.
ಕಳೆದ ಬಾರಿ ಸ್ಪರ್ಧಿಸಿ ಸೋತಿದ್ದ ಡಿ.ಆರ್.ಪಾಟೀಲರು ಈಬಾರಿ ಸ್ಪರ್ಧಿಸಲು ಅಷ್ಟಾಗಿ ಆಸಕಿ ತೋರುತ್ತಿಲ್ಲ ಎನ್ನುತ್ತವೆ ಅವರ ಆಪ್ತ ಮೂಲಗಳು. ಹಾಗಾದರೇ ಕಾಂಗ್ರೆಸ್‌ನಿಂದ ಬೇರೆ ಅಭ್ಯರ್ಥಿಯಾಗುವವರು ಯಾರು? ಎಂದು ವಿಚಾರಿಸಿದಾಗ ಹಲವು ಹತ್ತು ಹೆಸರುಗಳು ಕೇಳಿಬರುತ್ತಿವೆ. ಆ ಹೆಸರುಗಳಲ್ಲಿ ಮುದಲನೆಯದಾಗಿ ಕೇಳಿ ಬರುವ ಹೆಸರು ಹಾವೇರಿನಗರಸಭೆಯ ಮಾಜಿ ಅಧ್ಯಕ್ಷ, ಯುವಮುಖಂಡ ಸಂಜೀವಕುಮಾರ ನೀರಲಗಿಅವರದ್ದು.
ಇಂಜನಿಯರ ಪದವಿಧರರಾಗಿರುವ ಸಂಜೀವಕುಮಾರ ನೀರಲಗಿ ಅವರು ಆಯ್ಕೆಮಾಡಿಕೊಂಡಿರುವ ಕ್ಷೇತ್ರ ಸಮಾಜಸೇವೆ. ಉದ್ಯಮಿಯಾಗಿ ಯಶಸ್ಸು ಕಂಡಿರುವ ಇವರು ಉದ್ಯಮ, ರಾಜಕಾರಣ, ಸಮಾಜಸೇವೆಯನ್ನು ಸಮರ್ಥವಾಗಿ ನಿಬಾಯಿಸುತ್ತಾ ಬಂದಿದ್ದು, ಪ್ರಸ್ತುತ ಹಾವೇರಿನಗರಸಭೆಯ ಸದಸ್ಯರಾಗಿರುವ ಇವರು ನಗರಸಭೆಯ ಅಧ್ಯಕ್ಷರಾಗಿಯು ಕಳೆದ ಎರಡುವರೆವರ್ಷಗಳಿದ ಕಾರ್ಯನಿರ್ವಹಿಸಿದ್ದಾರೆ.
ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷರಾಗಿ, ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ, ಕ್ರೀಡಾ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಇವರು ತಮ್ಮದೇ ಆದ ಯುವಪಡೆಯನ್ನು ಹೊಂದಿದ್ದಾರೆ. ಅನೇಕ ಹಿರಿಯ-ಕಿರಿಯ ರಾಜಕಾರಣಿಗಳ ನಿಕಟ ಸಂಪರ್ಕದಲ್ಲಿರುವ ಸಂಜೀವಕುಮಾರ ನೀರಲಗಿ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಾತ್ಯತಿತ ಮನೋಭಾವದ ಸಂಜೀವಕುಮಾರ ನೀರಲಗಿ ಅವರು ತಮ್ಮ ಕ್ರಿಯಾಶೀಲ ಚಟುವಟಿಕೆಗಳಿಂದ ರಾಜಕಾರಣದಲ್ಲಿ ಹಾಗೂ ಸಮಾಜಸೇವೆಯಲ್ಲಿ ಸಕ್ರಿಯರಾಗಿದ್ದಾರೆ. ಈ ಹಿಂದೆಯು ಕೂಡಾ ಇವರು ಹಾವೇರಿಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷದ ತೀರ್ಮಾನಕ್ಕೆ ಬದ್ದರಾಗಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಲು ಹಲವಾರು ಪ್ರಮುಖರು ತುದಿಗಾಲಲ್ಲಿ ಇಂತಿದ್ದಾರೆ. ರಾಜ್ಯದ ೨೮ಲೋಕಸಭಾ ಕ್ಷೇತ್ರಗಳಲ್ಲಿ ಶತಾಯಗತಾಯ ೨೦ಕ್ಕೂ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲೇಬೇಕೆನ್ನುವ ಸ್ಪಷ್ಟಗುರಿಯೊಂದಿಗೆ ಕಾಂಗ್ರೆಸ್ ವರಿಷ್ಠರು “ಗೆಲ್ಲುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಗೆಲ್ಲಬಹುದಾದಂತಹ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಲಾಗುತ್ತದೆ” ಎಂದು ಹೇಳುತ್ತಾರೆ.
ಇತ್ತೀಚೆಗೆ ನಡೆದ ವಿಧಾನಸಬಾ ಚುನಾವಣೆಯಲ್ಲಿ ಹಾವೇರಿಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ಪಕ್ಷದ ಸಾಧನೆ ತೃಪ್ತಿಕರವಾಗಿದ್ದು, ಮೇಲಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಪಕ್ಷಕ್ಕೆ ನೆರವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಕಾಂಗ್ರೆಸ್ ಉತ್ತಮ ಸಾಧನೆ ಮಾಡುವ ವಿಶ್ವಾಸವಿದ್ದು, ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನಮ್ಮಲ್ಲಿ ಉತ್ತಮ ಅಭ್ಯರ್ಥಿಗಳಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.
ಸಮಸ್ಯೆ ಏನೆಂದರೆ, ಕಾಂಗ್ರೆಸ್ ಪಕ್ಷವು ಹಾವೇರಿಲೋಕಸಭಾ ಕ್ಷೇತ್ರದಲ್ಲಿ ಹಲುವಬಾರಿಸೋತಿದೆ. ೨೦೨೪ ರ ಚುನಾವಣೆಗೆ, ಕಾಂಗ್ರೆಸ್ ಹೊಸ ಮುಖಗಳನ್ನು ತರಬಹುದು, ಏಕೆಂದರೆ ಪಕ್ಷಕ್ಕೆ ಅನುಭವಿ ಅಭ್ಯರ್ಥಿಗಳ ಕೊರತೆಯಿದೆ. ವಿಧಾನಸಭೆ ಚುನಾವಣೆಯಲ್ಲಿ ಎಂಎಲ್‌ಎ ಟಿಕೆಟ್ ಗಾಗಿ ಭಾರೀ ಬೇಡಿಕೆಯಿತ್ತು, ಆದರೆ ಲೋಕಸಭೆ ಚುನಾವಣೆಗೆ ನಿಲ್ಲಲು ಹೆಚ್ಚಿನ ನಾಯಕರು ಮುಂದೆ ಬರುತ್ತಿಲ್ಲ. ಹಾಗಂತ ಟಿಕೆಟ್ ಕೇಳುವವರ ಸಂಖ್ಯೆ ಕಡಿಮೆಇಲ್ಲ, ಈಬಗ್ಗೆ ಮಾತನಾಡಿ ಸಂಜೀವಕುಮಾರ ನೀರಲಗಿ ಅವರು ನಾನು ಕಾಂಗ್ರೆಸ್‌ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವೆ. ಅನೇಕ ವರ್ಷಗಳಿಂದ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸುತ್ತಿರುವೆ. ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವೆ. ಪಕ್ಷ ಅವಕಾಶ ಮಾಡಿಕೊಟ್ಟರೆ ಹಾವೇರಿಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಮರ್ಥನಾಗಿರುವೆ ಎನ್ನುತ್ತಾರೆ ಸಂಜೀವಕುಮಾರ ನೀರಲಗಿ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...