ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ೩ ಕೋಟಿ ರೂ. ಅನುದಾನ: ಕೊಟ್ಟ ಮಾತುಳಿಸಿಕೊಂಡ ಸಿ.ಎಂ ಬಸವರಾಜ ಬೊಮ್ಮಾಯಿ

Date:

ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ೩ ಕೋಟಿ ರೂ. ಅನುದಾನ: ಕೊಟ್ಟ ಮಾತುಳಿಸಿಕೊಂಡ ಸಿ.ಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ? ನಿರ್ಮಾಣಕ್ಕಾಗಿ ಸರಕಾರ ೩ (ಮೂರು ಕೋಟಿ) ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕನ್ನಡಿರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಮಸ್ತ ಕನ್ನಡಿಗರ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಗೌರವದಿಂದ ಅಭಿನಂದಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು, ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ೩ ಕೋಟಿ ರೂ ಅನುದಾನ ಸರ್ಕಾರ ನೀಡಬೇಕು, ಎನ್ನುವ ಬೇಡಿಕೆಯನ್ನು ಸಿಎಂ ಅವರ ಬಳಿ ಕನ್ನಡ ಸಾಹಿತ್ಯ ಪರಿಷತ್ತು ಮಂಡಿಸಿತ್ತು. ಪರಿಷತ್ತಿನ ಬೇಡಿಕೆಗೆ ತಕ್ಷಣದಲ್ಲಿ ಸ್ಪಂದಿಸಿ, ಹಾವೇರಿಯಲ್ಲಿ ನಡೆದ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ತಮ್ಮ ಭಾಷಣದಲ್ಲಿ ?ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ? ನಿರ್ಮಾಣಕ್ಕೆ ಸರಕಾರದಿಂದ ೩ ಕೋಟಿ ರೂ ಅನುದಾನ? ಕೊಡುವ ವಾಗ್ಧಾನವನ್ನು ನೀಡಿದ್ದರು ಎಂದ ನಾಡೋಜ ಡಾ. ಮಹೇಶ ಜೋಶಿ ನೆನಪಿಸಿಕೊಂಡಿದ್ದಾರೆ.
ಸದ್ಯ ಕೊಟ್ಟ ಮಾತಿನಂತೆ ಹಾವೇರಿಯಲ್ಲಿ ನಿಮಾರ್ಣ ಮಾಡಲಾಗುವ ಕನ್ನಡ ಸಾಹಿತ್ಯ ಭವನಕ್ಕೆ ೩ ಕೋಟಿ ರೂ. ಸರಕಾರದಿಂದ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ. ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ?ಕನ್ನಡ ಸಾಹಿತ್ಯ ಭವನ? ನಿರ್ಮಾಣಮಾಡಲು ಈಗಾಗಲೇ ಪರಿಷತ್ತು ಜಾಗ ನೊಂದಣಿ ಮಾಡಿಕೊಂಡಿದ್ದು, ಸದ್ಯದಲ್ಲಿಯೇ ಕಟ್ಟಡ ನಿರ್ಮಾಣದ ಕಾಮಗಾರಿ ಆರಂಭಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಸಿದ್ದಾರೆ.
ಹಾವೇರಿ ಸಮ್ಮೇಳನದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ -೨೦೨೨ನ್ನು ಕಾನೂನು ಮಾಡಬೇಕು ಎನ್ನುವ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡ ಬಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨?ನ್ನು ಸದನದಲ್ಲಿ ಮಂಡಿಸಿ ಕಾನೂನು ಮಾಡುವ ಭರವಸೆ ನೀಡಿದ್ದರು. ಅವರು ನೀಡಿದ್ದ ಭರವಸೆಯಂತೆ ?ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-೨೦೨೨ ನ್ನು ಕಾನೂನು ಮಾಡಿ ನಾಡಿನಲ್ಲಿ ಕನ್ನಡ ಅನುಷ್ಠಾನಕ್ಕೆ ಮುಂದಾಗಿದ್ದಾರೆ. ಈ ಕಾನೂನಿನ ಮೂಲಕ ಕನ್ನಡವನ್ನು ಸಮಗ್ರವಾಗಿ ಜಾರಿ ಮಾಡುವುದರ ಜೊತೆ ಕನ್ನಡಿಗರ ಬಹು ದಿನದ ಕನಸಾಗಿರುವ ಕನ್ನಡವನ್ನು ಅನ್ನದ ಭಾಷೆಯಾಗಿ ಮಾಡಲು ಅನುಕೂಲವಾಗಲಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಅದೇ ರೀತಿ ಹಾವೇರಿಯ ನಡೆದ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೂರನೆಯ ವಿಶ್ವಕನ್ನಡ ಸಮ್ಮೇಳನ? ವನ್ನು ದಾವಣಗೆರೆಯಲ್ಲಿ ಆಯೋಜಿಸುವ ಪ್ರಸ್ತಾಪವನ್ನು ಮಾಡಿದ್ದರು. ಅವರು ಹೇಳಿದ ಮಾತಿನಂತೆ ಈ ಬಾರಿಯ ಆಯವ್ಯದಲ್ಲಿ ದಾವಣಗೆರೆಯಲ್ಲಿ ಮೂರನೆಯ ವಿಶ್ವ ಕನ್ನಡ ಸಮ್ಮೇಳನ?ವನ್ನು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸೇರಿ ಸರ್ಕಾರ ನಡೆಸಲು ಅಧಿಕೃತ ಘೊಷಣೆ ಮಾಡಿರುವುದು ಮುಖ್ಯಮಂತ್ರಿಗಳಿಗೆ ಕನ್ನಡ ಭಾಷೆಯ ಮೇಲಿರುವ ಅಭಿಮಾನ ಹಾಗೂ ಕೊಟ್ಟ ಮಾತನ್ನು ನಡೆಸಿಕೊಡುವ ಛಲಗಾರಿಕೆ ಎತ್ತಿ ತೋರಿಸುತ್ತದೆ ಎಂದಿದ್ದಾರೆ.
ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಕನ್ನಡದ ಅಸ್ಮಿತೆಯ ಎಲ್ಲ ಸಂಘ ಸಂಸ್ಥೆಗಳ ಮಾತ್ರ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಪೂರ್ವಕ ಅಭಿನಂದಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ. ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ೩ ಕೋಟಿ ರೂ. ಅನುದಾನ: ಕೊಟ್ಟ ಮಾತುಳಿಸಿಕೊಂಡ ಸಿ.ಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ? ನಿರ್ಮಾಣಕ್ಕಾಗಿ ಸರಕಾರ ೩ (ಮೂರು ಕೋಟಿ) ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕನ್ನಡಿರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಮಸ್ತ ಕನ್ನಡಿಗರ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಗೌರವದಿಂದ ಅಭಿನಂದಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು, ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ೩ ಕೋಟಿ ರೂ ಅನುದಾನ ಸರ್ಕಾರ ನೀಡಬೇಕು, ಎನ್ನುವ ಬೇಡಿಕೆಯನ್ನು ಸಿಎಂ ಅವರ ಬಳಿ ಕನ್ನಡ ಸಾಹಿತ್ಯ ಪರಿಷತ್ತು ಮಂಡಿಸಿತ್ತು. ಪರಿಷತ್ತಿನ ಬೇಡಿಕೆಗೆ ತಕ್ಷಣದಲ್ಲಿ ಸ್ಪಂದಿಸಿ, ಹಾವೇರಿಯಲ್ಲಿ ನಡೆದ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ತಮ್ಮ ಭಾಷಣದಲ್ಲಿ ?ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಭವನ? ನಿರ್ಮಾಣಕ್ಕೆ ಸರಕಾರದಿಂದ ೩ ಕೋಟಿ ರೂ ಅನುದಾನ? ಕೊಡುವ ವಾಗ್ಧಾನವನ್ನು ನೀಡಿದ್ದರು ಎಂದ ನಾಡೋಜ ಡಾ. ಮಹೇಶ ಜೋಶಿ ನೆನಪಿಸಿಕೊಂಡಿದ್ದಾರೆ.
ಸದ್ಯ ಕೊಟ್ಟ ಮಾತಿನಂತೆ ಹಾವೇರಿಯಲ್ಲಿ ನಿಮಾರ್ಣ ಮಾಡಲಾಗುವ ಕನ್ನಡ ಸಾಹಿತ್ಯ ಭವನಕ್ಕೆ ೩ ಕೋಟಿ ರೂ. ಸರಕಾರದಿಂದ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ. ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ?ಕನ್ನಡ ಸಾಹಿತ್ಯ ಭವನ? ನಿರ್ಮಾಣಮಾಡಲು ಈಗಾಗಲೇ ಪರಿಷತ್ತು ಜಾಗ ನೊಂದಣಿ ಮಾಡಿಕೊಂಡಿದ್ದು, ಸದ್ಯದಲ್ಲಿಯೇ ಕಟ್ಟಡ ನಿರ್ಮಾಣದ ಕಾಮಗಾರಿ ಆರಂಭಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಸಿದ್ದಾರೆ.
ಹಾವೇರಿ ಸಮ್ಮೇಳನದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ -೨೦೨೨ನ್ನು ಕಾನೂನು ಮಾಡಬೇಕು ಎನ್ನುವ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡ ಬಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨?ನ್ನು ಸದನದಲ್ಲಿ ಮಂಡಿಸಿ ಕಾನೂನು ಮಾಡುವ ಭರವಸೆ ನೀಡಿದ್ದರು. ಅವರು ನೀಡಿದ್ದ ಭರವಸೆಯಂತೆ ?ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-೨೦೨೨ ನ್ನು ಕಾನೂನು ಮಾಡಿ ನಾಡಿನಲ್ಲಿ ಕನ್ನಡ ಅನುಷ್ಠಾನಕ್ಕೆ ಮುಂದಾಗಿದ್ದಾರೆ. ಈ ಕಾನೂನಿನ ಮೂಲಕ ಕನ್ನಡವನ್ನು ಸಮಗ್ರವಾಗಿ ಜಾರಿ ಮಾಡುವುದರ ಜೊತೆ ಕನ್ನಡಿಗರ ಬಹು ದಿನದ ಕನಸಾಗಿರುವ ಕನ್ನಡವನ್ನು ಅನ್ನದ ಭಾಷೆಯಾಗಿ ಮಾಡಲು ಅನುಕೂಲವಾಗಲಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಅದೇ ರೀತಿ ಹಾವೇರಿಯ ನಡೆದ ೮೬ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೂರನೆಯ ವಿಶ್ವಕನ್ನಡ ಸಮ್ಮೇಳನ? ವನ್ನು ದಾವಣಗೆರೆಯಲ್ಲಿ ಆಯೋಜಿಸುವ ಪ್ರಸ್ತಾಪವನ್ನು ಮಾಡಿದ್ದರು. ಅವರು ಹೇಳಿದ ಮಾತಿನಂತೆ ಈ ಬಾರಿಯ ಆಯವ್ಯದಲ್ಲಿ ದಾವಣಗೆರೆಯಲ್ಲಿ ಮೂರನೆಯ ವಿಶ್ವ ಕನ್ನಡ ಸಮ್ಮೇಳನ?ವನ್ನು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸೇರಿ ಸರ್ಕಾರ ನಡೆಸಲು ಅಧಿಕೃತ ಘೊಷಣೆ ಮಾಡಿರುವುದು ಮುಖ್ಯಮಂತ್ರಿಗಳಿಗೆ ಕನ್ನಡ ಭಾಷೆಯ ಮೇಲಿರುವ ಅಭಿಮಾನ ಹಾಗೂ ಕೊಟ್ಟ ಮಾತನ್ನು ನಡೆಸಿಕೊಡುವ ಛಲಗಾರಿಕೆ ಎತ್ತಿ ತೋರಿಸುತ್ತದೆ ಎಂದಿದ್ದಾರೆ.
ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಕನ್ನಡದ ಅಸ್ಮಿತೆಯ ಎಲ್ಲ ಸಂಘ ಸಂಸ್ಥೆಗಳ ಮಾತ್ರ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಪೂರ್ವಕ ಅಭಿನಂದಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ. ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...