ಹಾವೇರಿ; ಮೀಸಲಾತಿ ಬದಲು ನೇರಪಾವತಿ ವ್ಯವಸ್ಥೆ ಜಾರಿಗೊಳಿಸಲು ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಹಾವೇರಿ: ರಾಜ್ಯ ಸರಕಾರವು ಸಿ ಮತ್ತು ಡಿ ದರ್ಜೆಯ ಹೊರಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ ಮತ್ತು ಮಹಿಳಾ ಮೀಸಲಾತಿ ಘೋಷಿಸಿದೆ. ಸರ್ಕಾರ ಮೀಸಲಾತಿ ಬದಲು ನೇರಪಾವತಿ ವ್ಯವಸ್ಥೆ ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಪಾಲಿಕೆ,ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘದ ಹಾವೇರಿಜಿಲ್ಲಾ ಘಟಕದವತಿಯಿಂದ ಗುರುವಾರ ಇಲ್ಲಿನ ಜಿಲ್ಲಾಡಳಿತ ಮುಂಭಾಗದಲ್ಲಿ ನೂರಾರು ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ವೀರಮಲ್ಲಪ್ಪ ಪೂಜಾರ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ನಗರ ಸ್ಥಳೀಯ ಸಂಸ್ಥೆಗಳು, ಸರಕಾರಿ ಆಸ್ಪತ್ರೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಒಂದು ಮುಕ್ಕಾಲು ಲಕ್ಷಕ್ಕೂ ಅಧಿಕ ಮಂದಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ ಬಹುತೇಕ ನೌಕರರಿಗೆ ಸಕಾಲಕ್ಕೆ ವೇತನ, ಭವಿಷ್ಯ ನಿಧಿ, ಕನಿಷ್ಠ ವೇತನ ಯಾವುದು ಸಹ ಸಮರ್ಪಕವಾಗಿ ಸಿಗುತ್ತಿಲ್ಲ. ಈ ಬಗ್ಗೆ ಹಕ್ಕುಗಳನ್ನು ಕೇಳಿದರೆ ಕೆಲಸದಿಂದ ಕೈ ಬಿಡುವ ಬೆದರಿಕೆ ಒಡ್ಡಲಾಗುತ್ತದೆ. ಇಂತಹ ಸ್ಥಿತಿಯಲ್ಲಿ ಗುತ್ತಿಗೆ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ನೇರಪಾವತಿ ವ್ಯವಸ್ಥೆ ಜಾರಿಗೊಳಿಸುವುದು ಸೂಕ್ತವಾದ ಕ್ರಮವಾಗಿದೆ.
ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ನೇಮಕ ಗೊಳಿಸುವಾಗ ದಲಿತ, ಹಿಂದುಳಿದ ವರ್ಗಗಳಿಗೆ ಮತ್ತು ಮಹಿಳೆಯರಿಗೆ ಮೀಸಲಾತಿ ಘೋಷಿಸಲಾಗಿದೆ. ವಾಸ್ತವದಲ್ಲಿ ಈಗಾಗಲೇ ಈ ಹುದ್ದೆಗಳಲ್ಲಿರುವ ಬಹುತೇಕರು ದಲಿತ ಇಲ್ಲವೆ ಹಿಂದುಳಿದ ವರ್ಗಗಳಿಗೆ ಸೇರಿದವರೇ ಆಗಿದ್ದಾರೆ. ಸರಕಾರದ ಈ ಮೀಸಲಾತಿ ಘೋಷಣೆ ಅಪ್ರಸ್ತುತವಾಗಿದೆ. ನೂತನ ಮೀಸಲಾತಿ ಜಾರಿ ಹೆಸರಿನಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಯಾವುದೆ ತೊಂದರೆಯಾಗದಂತೆ, ಹೊಸ ನೇಮಕಾತಿಗಳಿಗೆ ಮಾತ್ರ ಮೀಸಲಾತಿ ಅನ್ವಯಿಸುವಂತೆ ತಿದ್ದುಪಡಿ ಮಾಡಬೇಕಿದೆ. ಇಲ್ಲದಿದ್ದಲ್ಲಿ ಇಪ್ಪತ್ತು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಹೊರಗುತ್ತಿಗೆ ನೌಕರರನ್ನು ಏಜೆನ್ಸಿಗಳು ಸಂಕಷ್ಟಕ್ಕೆ ಸಿಲುಕಿಸುವ ಆಪಾಯವಿದೆ.
ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದಂತೆ ರಾಜ್ಯದ ಎಲ್ಲ ಹೊರಗುತ್ತಿಗೆ ನೌಕರರನ್ನು ಗುತ್ತಿಗೆ ಪದ್ಧತಿ ಬದಲು ನೇರಪಾವತಿ ವ್ಯವಸ್ಥೆಜಾರಿಗೆ ತರಬೇಕು. ಇದರಿಂದ ಏಜೆನ್ಸಿಗಳ ಶೋಷಣೆ ನಿಲ್ಲಲಿದೆ. ಕಾರ್ಮಿಕರಿಗೆ ಸೇವಾ ಭದ್ರತೆಯು ದೊರೆಯಲಿದೆ. ರಾಜ್ಯ ಕಾಂಗ್ರೆಸ್ ಸರಕಾರ ಈ ದಿಕ್ಕಿನಲ್ಲಿ ಸ್ಪಷ್ಟವಾದ ತನ್ನ ಬದ್ಧತೆ ತೋರುವಂತೆ ಪ್ರತಿಭಟನಾ ಕಾರರು ಆಗ್ರಹಿಸಿದರ.
ಪ್ರತಿಭಟನೆಗೆ ಬೆಂಬಲ ಸೂಚಿಸಿದ ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪದೇ ಪದೆ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಾ ಬರುತ್ತಿದೆ. ಸರ್ಕಾರಿ, ಅರೇ ಸರ್ಕಾರಿ ನೌಕರಿ ತುಂಬಿಕೊಳ್ಳಲು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಸಚಿವ ಸಂಪುಟದಲ್ಲಿ ನಿರ್ಣಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿರೋಧಿ ನಿರ್ಣಯವಾಗಿದೆ.
ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ತುಂಬಲು ಹಾಗೂ ೨೦ ಸಿಬ್ಬಂದಿ ತುಂಬುವ ಸಂದರ್ಭದಲ್ಲಿ ಮೀಸಲಾತಿಯನ್ನು ಅನುಸರಿಸುತ್ತೇವೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ. ಗುಮಾಸ್ತ, ಡಿ ಹುದ್ದೆ ತುಂಬುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ, ಜನಾಂಗದವರನ್ನು ಟೆಂಡರ ಪಡೆದ ಏಜನ್ಸಿಯವರು ಆಯ್ಕೆ ಮಾಡಿಕೊಳ್ಳುವುದಿಲ್ಲ, ಸರ್ಕಾರದ ನಿರ್ಣಯ ಪರಿಶಿಷ್ಟ ಜಾತಿಯವರಿಗೆ ಘೋರ ಅನ್ಯಾಯ ಮಾಡಿ ಗುತ್ತಿಗೆದಾರರನ್ನು ಶ್ರೀಮಂತರನ್ನಾಗಿ ಮಾಡಿ ಅವರಿಂದ ಕಿಕ್ ಬ್ಯಾಕ್ ಪಡೆದುಕೊಳ್ಳುವ ಹುನ್ನಾರ ಇದೆ ಎಂದರು.
ಮುಖ್ಯಮಂತ್ರಿಗಳು ದಲಿತರ ಪರಿ, ಹಿಂದುಳಿದವರಪರ, ಬಸವ ತತ್ವದ ಪರಿಪಾಲಕ, ಸಾಮಾಜಿಕ ನ್ಯಾಯದ ಹರಿಕಾರ ಎಂದು ತಮ್ಮನ್ನು ಕೆಲವೊಂದು ವೇದಿಕೆಯಲ್ಲಿ ಬಣ್ಣಿಸಿಕೊಳ್ಳುತ್ತಾರೆ. ಆ ಪ್ರಕಾರ ಸಿಎಂ ನಡೆಯುವುದಾದರೆ ಅವರು ಹೊರಡಿಸಿದ ಹೊರಗುತ್ತಿಗೆಯಲ್ಲಿ ಮೀಸಲು ಆದೇಶ ರದ್ದುಪಡಿಸಿ, ಸರ್ಕಾರಿ, ಅರೇಸರ್ಕಾರಿ ವಿವಿಧ ನೆ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸರ್ಕಾರಿ ಮೀಸಲಾತಿ ನಿಯಮದಡಿಯಲ್ಲಿ ನೇಮಕಾತಿ ಮಾಡಿಕೊಡಲು ಆದೇಶಮಾಡಬೇಕೆಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜಪ್ಪ ಹೊಸಮನಿ, ಪದಾಧಿಕಾರಿಗಳಾದ ಶಿವಪ್ಪ ಕಟ್ಟಿಮನಿ, ಗುರುನಾಥ ಡವೆಣ್ಣನವರ, ರಮೇಶ್ ಭೋವಿ, ಪ್ರಶಾಂತ್ ಇಂಗಳಗಿ, ನಾಗರಾಜ್ ಹಿರೇಕೆರೂರ್, ದಲಿತ ಮುಖಂಡರಾದ ಪರಮೇಶ್ವರಪ್ಪ ಮೇಗಳಮನಿ, ನಾಗರಾಜ್ ಮಾಳಗಿ, ಹೊನ್ನಪ್ಪ ತಗಡಿನಮನಿ, ಸುಭಾಷ್ ಬೆಂಗಳೂರು, ಅಶೋಕ್ ಮರಿಯಾಣ್ಣನವರ್ ಮತ್ತಿತರರು ಭಾಗವಹಿಸಿದ್ದರು.
ನಗರ ಸ್ಥಳೀಯ ಸಂಸ್ಥೆಗಳು, ಸರಕಾರಿ ಆಸ್ಪತ್ರೆಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಒಂದು ಮುಕ್ಕಾಲು ಲಕ್ಷಕ್ಕೂ ಅಧಿಕ ಮಂದಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ ಬಹುತೇಕ ನೌಕರರಿಗೆ ಸಕಾಲಕ್ಕೆ ವೇತನ, ಭವಿಷ್ಯ ನಿಧಿ, ಕನಿಷ್ಠ ವೇತನ ಯಾವುದು ಸಹ ಸಮರ್ಪಕವಾಗಿ ಸಿಗುತ್ತಿಲ್ಲ. ಈ ಬಗ್ಗೆ ಹಕ್ಕುಗಳನ್ನು ಕೇಳಿದರೆ ಕೆಲಸದಿಂದ ಕೈ ಬಿಡುವ ಬೆದರಿಕೆ ಒಡ್ಡಲಾಗುತ್ತದೆ. ಇಂತಹ ಸ್ಥಿತಿಯಲ್ಲಿ ಗುತ್ತಿಗೆ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ನೇರಪಾವತಿ ವ್ಯವಸ್ಥೆ ಜಾರಿಗೊಳಿಸುವುದು ಸೂಕ್ತವಾದ ಕ್ರಮವಾಗಿದೆ.
ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ನೇಮಕ ಗೊಳಿಸುವಾಗ ದಲಿತ, ಹಿಂದುಳಿದ ವರ್ಗಗಳಿಗೆ ಮತ್ತು ಮಹಿಳೆಯರಿಗೆ ಮೀಸಲಾತಿ ಘೋಷಿಸಲಾಗಿದೆ. ವಾಸ್ತವದಲ್ಲಿ ಈಗಾಗಲೇ ಈ ಹುದ್ದೆಗಳಲ್ಲಿರುವ ಬಹುತೇಕರು ದಲಿತ ಇಲ್ಲವೆ ಹಿಂದುಳಿದ ವರ್ಗಗಳಿಗೆ ಸೇರಿದವರೇ ಆಗಿದ್ದಾರೆ. ಸರಕಾರದ ಈ ಮೀಸಲಾತಿ ಘೋಷಣೆ ಅಪ್ರಸ್ತುತವಾಗಿದೆ. ನೂತನ ಮೀಸಲಾತಿ ಜಾರಿ ಹೆಸರಿನಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಯಾವುದೆ ತೊಂದರೆಯಾಗದಂತೆ, ಹೊಸ ನೇಮಕಾತಿಗಳಿಗೆ ಮಾತ್ರ ಮೀಸಲಾತಿ ಅನ್ವಯಿಸುವಂತೆ ತಿದ್ದುಪಡಿ ಮಾಡಬೇಕಿದೆ. ಇಲ್ಲದಿದ್ದಲ್ಲಿ ಇಪ್ಪತ್ತು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಹೊರಗುತ್ತಿಗೆ ನೌಕರರನ್ನು ಏಜೆನ್ಸಿಗಳು ಸಂಕಷ್ಟಕ್ಕೆ ಸಿಲುಕಿಸುವ ಆಪಾಯವಿದೆ.
ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದಂತೆ ರಾಜ್ಯದ ಎಲ್ಲ ಹೊರಗುತ್ತಿಗೆ ನೌಕರರನ್ನು ಗುತ್ತಿಗೆ ಪದ್ಧತಿ ಬದಲು ನೇರಪಾವತಿ ವ್ಯವಸ್ಥೆಜಾರಿಗೆ ತರಬೇಕು. ಇದರಿಂದ ಏಜೆನ್ಸಿಗಳ ಶೋಷಣೆ ನಿಲ್ಲಲಿದೆ. ಕಾರ್ಮಿಕರಿಗೆ ಸೇವಾ ಭದ್ರತೆಯು ದೊರೆಯಲಿದೆ. ರಾಜ್ಯ ಕಾಂಗ್ರೆಸ್ ಸರಕಾರ ಈ ದಿಕ್ಕಿನಲ್ಲಿ ಸ್ಪಷ್ಟವಾದ ತನ್ನ ಬದ್ಧತೆ ತೋರುವಂತೆ ಪ್ರತಿಭಟನಾ ಕಾರರು ಆಗ್ರಹಿಸಿದರ.
ಪ್ರತಿಭಟನೆಗೆ ಬೆಂಬಲ ಸೂಚಿಸಿದ ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪದೇ ಪದೆ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಾ ಬರುತ್ತಿದೆ. ಸರ್ಕಾರಿ, ಅರೇ ಸರ್ಕಾರಿ ನೌಕರಿ ತುಂಬಿಕೊಳ್ಳಲು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಸಚಿವ ಸಂಪುಟದಲ್ಲಿ ನಿರ್ಣಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿರೋಧಿ ನಿರ್ಣಯವಾಗಿದೆ.
ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ತುಂಬಲು ಹಾಗೂ ೨೦ ಸಿಬ್ಬಂದಿ ತುಂಬುವ ಸಂದರ್ಭದಲ್ಲಿ ಮೀಸಲಾತಿಯನ್ನು ಅನುಸರಿಸುತ್ತೇವೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ. ಗುಮಾಸ್ತ, ಡಿ ಹುದ್ದೆ ತುಂಬುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ, ಜನಾಂಗದವರನ್ನು ಟೆಂಡರ ಪಡೆದ ಏಜನ್ಸಿಯವರು ಆಯ್ಕೆ ಮಾಡಿಕೊಳ್ಳುವುದಿಲ್ಲ, ಸರ್ಕಾರದ ನಿರ್ಣಯ ಪರಿಶಿಷ್ಟ ಜಾತಿಯವರಿಗೆ ಘೋರ ಅನ್ಯಾಯ ಮಾಡಿ ಗುತ್ತಿಗೆದಾರರನ್ನು ಶ್ರೀಮಂತರನ್ನಾಗಿ ಮಾಡಿ ಅವರಿಂದ ಕಿಕ್ ಬ್ಯಾಕ್ ಪಡೆದುಕೊಳ್ಳುವ ಹುನ್ನಾರ ಇದೆ ಎಂದರು.
ಮುಖ್ಯಮಂತ್ರಿಗಳು ದಲಿತರ ಪರಿ, ಹಿಂದುಳಿದವರಪರ, ಬಸವ ತತ್ವದ ಪರಿಪಾಲಕ, ಸಾಮಾಜಿಕ ನ್ಯಾಯದ ಹರಿಕಾರ ಎಂದು ತಮ್ಮನ್ನು ಕೆಲವೊಂದು ವೇದಿಕೆಯಲ್ಲಿ ಬಣ್ಣಿಸಿಕೊಳ್ಳುತ್ತಾರೆ. ಆ ಪ್ರಕಾರ ಸಿಎಂ ನಡೆಯುವುದಾದರೆ ಅವರು ಹೊರಡಿಸಿದ ಹೊರಗುತ್ತಿಗೆಯಲ್ಲಿ ಮೀಸಲು ಆದೇಶ ರದ್ದುಪಡಿಸಿ, ಸರ್ಕಾರಿ, ಅರೇಸರ್ಕಾರಿ ವಿವಿಧ ನೆ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸರ್ಕಾರಿ ಮೀಸಲಾತಿ ನಿಯಮದಡಿಯಲ್ಲಿ ನೇಮಕಾತಿ ಮಾಡಿಕೊಡಲು ಆದೇಶಮಾಡಬೇಕೆಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜಪ್ಪ ಹೊಸಮನಿ, ಪದಾಧಿಕಾರಿಗಳಾದ ಶಿವಪ್ಪ ಕಟ್ಟಿಮನಿ, ಗುರುನಾಥ ಡವೆಣ್ಣನವರ, ರಮೇಶ್ ಭೋವಿ, ಪ್ರಶಾಂತ್ ಇಂಗಳಗಿ, ನಾಗರಾಜ್ ಹಿರೇಕೆರೂರ್, ದಲಿತ ಮುಖಂಡರಾದ ಪರಮೇಶ್ವರಪ್ಪ ಮೇಗಳಮನಿ, ನಾಗರಾಜ್ ಮಾಳಗಿ, ಹೊನ್ನಪ್ಪ ತಗಡಿನಮನಿ, ಸುಭಾಷ್ ಬೆಂಗಳೂರು, ಅಶೋಕ್ ಮರಿಯಾಣ್ಣನವರ್ ಮತ್ತಿತರರು ಭಾಗವಹಿಸಿದ್ದರು.