“ಒಳ ಮೀಸಲುಜಾರಿಗೆ ತನ್ನಿ ಇಲ್ಲವೇ ಕುರ್ಚೆ ಖಾಲಿ ಮಾಡಿ”
ಬೃಹತ್ ಹೋರಾಟದ ಮೂಲಕ ರಾಜ್ಯ ಸರ್ಕಾರಕ್ಕೆ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಎಚ್ಚರಿಕೆ
ಹಾವೇರಿ:ಸುಪ್ರೀಂ ಕೋರ್ಟಿನ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಿ, ನಿಮಗೆ ಸಾಧ್ಯವಾಗದಿದ್ದರೇ ಕುರ್ಚೆ ಖಾಲಿ ಮಾಡಿ ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಸಾವಿರಾರ ಕಾರ್ಯಕರ್ತರು ಬುಧವಾರ ಹಾವೇರಿಯಲ್ಲಿ ಬೃಹತ್ ಪ್ರತಿಭನಾ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇಲ್ಲಿನ ಪುರಸಿದ್ದೇಶ್ವರ ದೇವಸ್ಥಾನದಿಂದ ಹೊಸಮನಿ ಸಿದ್ದಪ್ಪ ವೃತ್ತದವರಿಗೆ ಸಾವಿರಾರು ಮಾದಿಗ ಸಮಾಜ ಸೇರಿದಂತೆ ವಿವಿಧ ಪರಿಶಿಷ್ಟ ಜಾತಿಗಳ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಗಾಂಧಿ ಸರ್ಕಲ್ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿ ಹೆದ್ದಾರಿ ರಸ್ತೆ ತಡೆ ನಡೆಸಿ, “ಒಳ ಮೀಸಲುಜಾರಿಗೆ ತನ್ನಿ ಇಲ್ಲವೇ ಕುರ್ಚೆ ಖಾಲಿಮಾಡಿ” ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಖಂಡರುಗಳು, ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಸರಕಾರಕ್ಕೆ ಹಕ್ಕಿದೆ ಎಂದು ಸುಪ್ರೀಂ ಪೀಠವು ತೀರ್ಪು ನೀಡಿದೆ ಸುಪ್ರೀಂ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಒಳಮೀಸಲಾತಿ ವರ್ಗಿಕರಣದಿಂದ ಎಲ್ಲ ಜಾತಿಗಳಿಗೆ ಸಮಾನ ಅವಕಾಶ ಲಭಿಸುತ್ತದೆ. ಹಾಗಾಗಿ ಹೋರಾಟಗಳನ್ನು ಮನಗಂಡಿದ್ದ ಸರ್ಕಾರವೂ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನ ನಡೆಸಿ ವರದಿ ನೀಡುವಂತೆ ೨೦೦೫ ರಲ್ಲಿ ರಚಿಸಿದ ನ್ಯಾಯಮೂರ್ತಿ ಎ. e. ಸದಾಶಿವ ಆಯೋಗವು ರಾಜ್ಯದಲ್ಲಿ ೧೦೧ ಎಸ್ಸಿ ಜಾತಿ ಸಮುದಾಯಗಳ ಕೌಟುಂಬಿಕ ಸಮೀಕ್ಷೆ ನಡೆಸಿ ಸಮಗ್ರ ಅಧ್ಯಯನದ ವರದಿಯನ್ನು ೨೦೧೨ ರಲ್ಲಿ ಸರಕಾರಕ್ಕೆ ಸಲ್ಲಿಸಿದ್ದಾರೆ. ಅದರ ದತ್ತಾಂಶಗಳು ಸರಕಾರದ ಬಳಿ ಇದೆ. ಒಳಮೀಸಲಾತಿ ಮಾಡಲು ಸರ್ಕಾರ ಮುಂದಾಗಬೇಕು ಎಂದರು.
ರಾಜ್ಯದಲ್ಲಿ ಒಳಮೀಸಲಾತಿ ಮಾಡಿದರೆ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿದಂತಾಗುತ್ತದೆ. ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಡಿ.ಎಸ್.ಮಾಳಗಿ, ಪರಮೇಶ್ವರಪ್ಪ ಮೇಗಳಮನಿ, ಡಾ.ಮಲ್ಲೇಶಪ್ಪ ಹರಿಜನ, ಬಸವರಾಜ ಹೆಡಿಗೊಂಡ, ನೀಲಕಂಠಪ್ಪ ಕುಸನೂರ, ಬಿ.ಆರ್.ಪುಟ್ಟಣ್ಣನವರ, ಪ್ರಕಾಶ ಪೂಜಾರ, ಉಡಚಪ್ಪ ಮಾಳಗಿ, ಎಮ್.ಆಜಂನೇಯ, ಎಸ್ಜಿ ಹೊನ್ನಪ್ಪನವರ, ನಾಗರಾಜ ಮಾಳಗಿ, ಹೊನ್ನಪ್ಪ ತಗಡಿನಮನಿ, ಅಶೋಕ ಮರೆಣ್ಣನವರ, ಸುಭಾಸ ಬೆಂಗಳೂರ, ಆನಂದ ಮುರಡೆಪ್ಪನವರ, ನೀಲಪ್ಪ ದೊಡ್ಡಮನಿ, ಮಲ್ಲೇಶ ಕಡಕೋಳ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
“ಒಳ ಮೀಸಲುಜಾರಿಗೆ ತನ್ನಿ ಇಲ್ಲವೇ ಕುರ್ಚೆ ಖಾಲಿ ಮಾಡಿ” ಬೃಹತ್ ಹೋರಾಟದ ಮೂಲಕ ರಾಜ್ಯ ಸರ್ಕಾರಕ್ಕೆ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಎಚ್ಚರಿಕೆ
Date:
“ಒಳ ಮೀಸಲುಜಾರಿಗೆ ತನ್ನಿ ಇಲ್ಲವೇ ಕುರ್ಚೆ ಖಾಲಿ ಮಾಡಿ”
ಬೃಹತ್ ಹೋರಾಟದ ಮೂಲಕ ರಾಜ್ಯ ಸರ್ಕಾರಕ್ಕೆ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಎಚ್ಚರಿಕೆ
ಹಾವೇರಿ:ಸುಪ್ರೀಂ ಕೋರ್ಟಿನ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಿ, ನಿಮಗೆ ಸಾಧ್ಯವಾಗದಿದ್ದರೇ ಕುರ್ಚೆ ಖಾಲಿ ಮಾಡಿ ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಸಾವಿರಾರ ಕಾರ್ಯಕರ್ತರು ಬುಧವಾರ ಹಾವೇರಿಯಲ್ಲಿ ಬೃಹತ್ ಪ್ರತಿಭನಾ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇಲ್ಲಿನ ಪುರಸಿದ್ದೇಶ್ವರ ದೇವಸ್ಥಾನದಿಂದ ಹೊಸಮನಿ ಸಿದ್ದಪ್ಪ ವೃತ್ತದವರಿಗೆ ಸಾವಿರಾರು ಮಾದಿಗ ಸಮಾಜ ಸೇರಿದಂತೆ ವಿವಿಧ ಪರಿಶಿಷ್ಟ ಜಾತಿಗಳ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಗಾಂಧಿ ಸರ್ಕಲ್ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿ ಹೆದ್ದಾರಿ ರಸ್ತೆ ತಡೆ ನಡೆಸಿ, “ಒಳ ಮೀಸಲುಜಾರಿಗೆ ತನ್ನಿ ಇಲ್ಲವೇ ಕುರ್ಚೆ ಖಾಲಿಮಾಡಿ” ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಖಂಡರುಗಳು, ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಸರಕಾರಕ್ಕೆ ಹಕ್ಕಿದೆ ಎಂದು ಸುಪ್ರೀಂ ಪೀಠವು ತೀರ್ಪು ನೀಡಿದೆ ಸುಪ್ರೀಂ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಒಳಮೀಸಲಾತಿ ವರ್ಗಿಕರಣದಿಂದ ಎಲ್ಲ ಜಾತಿಗಳಿಗೆ ಸಮಾನ ಅವಕಾಶ ಲಭಿಸುತ್ತದೆ. ಹಾಗಾಗಿ ಹೋರಾಟಗಳನ್ನು ಮನಗಂಡಿದ್ದ ಸರ್ಕಾರವೂ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನ ನಡೆಸಿ ವರದಿ ನೀಡುವಂತೆ ೨೦೦೫ ರಲ್ಲಿ ರಚಿಸಿದ ನ್ಯಾಯಮೂರ್ತಿ ಎ. e. ಸದಾಶಿವ ಆಯೋಗವು ರಾಜ್ಯದಲ್ಲಿ ೧೦೧ ಎಸ್ಸಿ ಜಾತಿ ಸಮುದಾಯಗಳ ಕೌಟುಂಬಿಕ ಸಮೀಕ್ಷೆ ನಡೆಸಿ ಸಮಗ್ರ ಅಧ್ಯಯನದ ವರದಿಯನ್ನು ೨೦೧೨ ರಲ್ಲಿ ಸರಕಾರಕ್ಕೆ ಸಲ್ಲಿಸಿದ್ದಾರೆ. ಅದರ ದತ್ತಾಂಶಗಳು ಸರಕಾರದ ಬಳಿ ಇದೆ. ಒಳಮೀಸಲಾತಿ ಮಾಡಲು ಸರ್ಕಾರ ಮುಂದಾಗಬೇಕು ಎಂದರು.
ರಾಜ್ಯದಲ್ಲಿ ಒಳಮೀಸಲಾತಿ ಮಾಡಿದರೆ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿದಂತಾಗುತ್ತದೆ. ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೆ ಕ್ರಮಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಡಿ.ಎಸ್.ಮಾಳಗಿ, ಪರಮೇಶ್ವರಪ್ಪ ಮೇಗಳಮನಿ, ಡಾ.ಮಲ್ಲೇಶಪ್ಪ ಹರಿಜನ, ಬಸವರಾಜ ಹೆಡಿಗೊಂಡ, ನೀಲಕಂಠಪ್ಪ ಕುಸನೂರ, ಬಿ.ಆರ್.ಪುಟ್ಟಣ್ಣನವರ, ಪ್ರಕಾಶ ಪೂಜಾರ, ಉಡಚಪ್ಪ ಮಾಳಗಿ, ಎಮ್.ಆಜಂನೇಯ, ಎಸ್ಜಿ ಹೊನ್ನಪ್ಪನವರ, ನಾಗರಾಜ ಮಾಳಗಿ, ಹೊನ್ನಪ್ಪ ತಗಡಿನಮನಿ, ಅಶೋಕ ಮರೆಣ್ಣನವರ, ಸುಭಾಸ ಬೆಂಗಳೂರ, ಆನಂದ ಮುರಡೆಪ್ಪನವರ, ನೀಲಪ್ಪ ದೊಡ್ಡಮನಿ, ಮಲ್ಲೇಶ ಕಡಕೋಳ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.