
ಕೂಲಿ ಕಾರ್ಮಿಕರಿಗೆ ನರೇಗಾ ಆಸರೆ: ಡಾ. ಪರಮೇಶ ಹುಬ್ಬಳ್ಳಿ
ಹಾವೇರಿ: ತಾಲೂಕಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿಗಳ ಸ್ಯಜನೆ ಮಾಡುವುದರೊಂದಿಗೆ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ವಲಸೆ ಹೋಗುವುದನ್ನು ತಡೆಗಟ್ಟಲು ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತರಿ ಬಲ ನೀಡಿದೆ ಎಂದು ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ ಪರಮೇಶ ಹುಬ್ಬಳ್ಳಿ ಕರೆ ನೀಡಿದರು
ಅವರು ಮೇ ೧೮ ರ ಬೆಳಗ್ಗೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳ ಹೂಳೆತ್ತುವ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿ ರೋಜ್ಗಾರ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡುತ್ತ ನರೇಗಾ ಯೋಜನೆ ಕೂಲಿಬೇಡಿಕೆ ಆಧಾರಿತ ಕಾರ್ಯಕ್ರಮವಾಗಿದ್ದು, ಸ್ಥಳೀಯವಾಗಿ ಗ್ರಾಮ ಪಂಚಾಯಿತಿ ಮೂಲಕ ನರೇಗಾ ಯೋಜನೆ ಅಡಿ ಕೂಲಿ ಕೆಲಸ ನೀಡಲಾಗುವುದು. ಇದರಲ್ಲಿ ತಾವುಗಳು ಯೋಜನೆ ಅಡಿ ವೈಯಕ್ತಿಕ ಕಾಮಗಾರಿಗಳಾದ ರೇ? ಕೃಷಿ ಹೊಂಡ ಬದು ನಿರ್ಮಾಣ ತೆಂಗು ಪೇರಲ ಗುಲಾಬಿ ದನದ ಕೊಟ್ಟಿಗೆ ಇತ್ಯಾದಿ ಕಾಮಗಾರಿಗಳನ್ನು ಮಾಡಿಕೊಳ್ಳಲು ತಿಳಿಸಿದರು
ಈ ಸಂದರ್ಭದಲ್ಲಿ ಪಂಚಾಯಿತಿ ಐಇಸಿ ಸಂಯೋಜಕರಾದ ಗಿರೀಶ ಯೋಜನೆ ಕುರಿತು ಸಮಗ್ರ ಮಾಹಿತಿ ಹೇಳಿದರು. ತಾಂತ್ರಿಕ ಸಹಾಯಕ ಕೃ? ಬಿ ಎಫ್ ಟಿ, ಪ್ರಕಾಶ ನಾಯ್ಕರ್, ಪಂಚಾಯತಿ ಸಿಬ್ಬಂದಿ ವರ್ಗ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.

