ಕೋವಿಡ್ ಸಾಂಕ್ರಾಮಿಕ ರೋಗ ಹತೋಟಿಗೆ ಕ್ರಮ: ಡಿಸಿ ವಿಜಯಮಹಾಂತೇಶ ದಾನಮ್ಮನವರ

Date:

ಕೋವಿಡ್ ಸಾಂಕ್ರಾಮಿಕ ರೋಗ ಹತೋಟಿಗೆ ಕ್ರಮ: ಡಿಸಿ ವಿಜಯಮಹಾಂತೇಶ ದಾನಮ್ಮನವರ
ಹಾವೇರಿ :ರಾಜ್ಯದಲ್ಲಿ ವ್ಯಾಪಾಕ ಮಳೆಯಿಂದ ಸಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ, ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವುದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಜಿಲ್ಲೆಯಲ್ಲಿ ಅಗತ್ಯ ಆರೋಗ್ಯ ಮುಂಜಾಗೃತೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್-೧೯ ಪೂರ್ವ ಮುಂಜಾಗೃತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತುರ್ತು ಆರೋಗ್ಯ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಕೋವಿಡದಂತಹ ಸಾಂಕ್ರಾಮಿಕ ರೋಗಗಳ ಹತೋಟಿಗೆ ತರಲು ಅಗತ್ಯ ವೈದ್ಯಕೀಯ ವ್ಯವಸ್ಥೆಯನ್ನು ಈಗಿನಿಂದಲೇ ಮಾಡಿಕೊಳ್ಳಿ, ಕಲುಷಿತ ವಾತಾವರಣದಿಂದ ಜನರಿಗೆ ಕೆಮ್ಮು, ಜ್ವರ, ಶೀತದಂತ ಕಾಯಿಲೆಗಳು ಕೋವಿಡ್ ಪ್ರಾಥಮಿಕ ಲಕ್ಷಣಗಳಾಗಿದ್ದು, ಇವುಗಳ ನಿವಾರಣೆಗೆ ಔ?ಧಿಗಳ ಸಂಗ್ರಹಣೆ ತುಂಬಾ ಅಗತ್ಯವಾಗಿದೆ . ಆಸ್ಪತ್ರೆಗೆ ಬರುವ ರೋಗಿಗಳಿಗೆ ಔ?ಧಿಗಳ ಕೊರತೆಯಾಗಬಾರದು ಎಂದರು.
ವೈದ್ಯರು ಯಾವುದನ್ನು ನಿರ್ಲಕ್ಷಿಸದೆ ಎಚ್ಚರಿಕೆಯಿಂದ ಕೆಲಸಮಾಡಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು, ಮಾಸ್ಕ್, ಗ್ಲೌಸ್, ವೆಂಟಿಲೇಟರ್, ಪಿಎಸ್‌ಎ ಪ್ಲಾಂಟ್ಸ್, ಆಕ್ಸಿಜನ್ ಟ್ಯಾಂಕ್, ಐಸೋಲೇ?ನ್ ಸೆಂಟರ್ ಮೊದಲಾದವುಗಳನ್ನು ಪರಿಶೀಲಿಸಿ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಿ ಕೆಲಸಮಾಡಿದರೆ ಮುಂದೆ ಆಗಬಹುದಾದ ಸಮಸ್ಯೆಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದರು.
ಅಗತ್ಯ ಸಿಬ್ಬಂದಿಗಳ ನಿಯೋಜನೆ: ಜಿಲ್ಲಾ ಆಸ್ಪತ್ರೆ ಹಾಗೂ ಪ್ರತಿಯೊಂದು ತಾಲೂಕು ಆಸ್ಪತ್ರೆಯಲ್ಲಿ ಅಗತ್ಯ ಸಿಬ್ಬಂದಿಗಳನ್ನು ನಿಯೋಜನೆ ಮಾಡಿಟ್ಟುಕೊಳ್ಳಬೇಕು. ಸರ್ಕಾರ ನೀಡಿರುವ ಎಲ್ಲ ಆಂಬುಲೆನ್ಸಳಿಗೆ ಚಾಲಕರನ್ನು ನಿಯೋಜಿಸಬೇಕು ಯಾವುದೇ ಆಂಬುಲೆನ್ಸ್‌ಗಳು ಖಾಲಿ ನಿಂತು ಹಾಳಾಗಬಾರದು. ಅವುಗಳು ರೋಗಿಗಳ ಉಪಯೋಗಕ್ಕೆ ಬಳಕೆಯಾಗಬೇಕು ಹಾಗೆಯೇ ಕೋವಿಡದಂತಹ ಸಾಂಕ್ರಾಮಿಕ ರೋಗಗಳನ್ನು ಪತ್ತೆಹಚ್ಚಲು ಆಶಾ ಕಾರ್ಯಕರ್ತೆಯರನ್ನು ಸಕ್ರಿಯವಾಗಿ ಬಳಸಿಕೊಳ್ಳಿ ಎಂದರು
ಸಾರ್ವಜನಿಕರಿಗೆ ಜಾಗೃತಿ: ಜಿಲ್ಲೆಯ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳ ಕುರಿತಾದ ಜಾಗೃತಿ ಅತಿ ಅವಶ್ಯಕವಾಗಿದೆ. ಆರೋಗ್ಯ ಜಾಥಾಗಳ ಮೂಲಕ ಸಾಂಕ್ರಾಮಿಕ ರೋಗಗಳ ಗಂಭೀರತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಜನ ಜಾಗೃತರಾದರೆ ಮಾತ್ರ ಕೋವಿಡ್ ನಂತಹ ಸಾಂಕ್ರಾಮಿಕ ರೋಗಗಳನ್ನು ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಅವರು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ತಡೆಗೆ ತೆಗೆದುಕೊಂಡ ಅಗತ್ಯ ಪೂರ್ವ ತಯಾರಿ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ಜಿಲ್ಲಾ ಶಸ್ತ್ರ ಚಿಕಿತ್ಸ ಡಾ.ಪಿ.ಆರ್.ಹಾವನೂರ, ಆರ್.ಸಿ.ಎಚ್.ಅಧಿಕಾರಿ ಡಾ.ಜಯಾನಂದ, ಡಾ.ಸರಿತಾ, ತಾಲೂಕು ವೈದ್ಯಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆ ಅಧಿಕರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಕೋವಿಡ್ ಸಾಂಕ್ರಾಮಿಕ ರೋಗ ಹತೋಟಿಗೆ ಕ್ರಮ: ಡಿಸಿ ವಿಜಯಮಹಾಂತೇಶ ದಾನಮ್ಮನವರ
ಹಾವೇರಿ :ರಾಜ್ಯದಲ್ಲಿ ವ್ಯಾಪಾಕ ಮಳೆಯಿಂದ ಸಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ, ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವುದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಜಿಲ್ಲೆಯಲ್ಲಿ ಅಗತ್ಯ ಆರೋಗ್ಯ ಮುಂಜಾಗೃತೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್-೧೯ ಪೂರ್ವ ಮುಂಜಾಗೃತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತುರ್ತು ಆರೋಗ್ಯ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಕೋವಿಡದಂತಹ ಸಾಂಕ್ರಾಮಿಕ ರೋಗಗಳ ಹತೋಟಿಗೆ ತರಲು ಅಗತ್ಯ ವೈದ್ಯಕೀಯ ವ್ಯವಸ್ಥೆಯನ್ನು ಈಗಿನಿಂದಲೇ ಮಾಡಿಕೊಳ್ಳಿ, ಕಲುಷಿತ ವಾತಾವರಣದಿಂದ ಜನರಿಗೆ ಕೆಮ್ಮು, ಜ್ವರ, ಶೀತದಂತ ಕಾಯಿಲೆಗಳು ಕೋವಿಡ್ ಪ್ರಾಥಮಿಕ ಲಕ್ಷಣಗಳಾಗಿದ್ದು, ಇವುಗಳ ನಿವಾರಣೆಗೆ ಔ?ಧಿಗಳ ಸಂಗ್ರಹಣೆ ತುಂಬಾ ಅಗತ್ಯವಾಗಿದೆ . ಆಸ್ಪತ್ರೆಗೆ ಬರುವ ರೋಗಿಗಳಿಗೆ ಔ?ಧಿಗಳ ಕೊರತೆಯಾಗಬಾರದು ಎಂದರು.
ವೈದ್ಯರು ಯಾವುದನ್ನು ನಿರ್ಲಕ್ಷಿಸದೆ ಎಚ್ಚರಿಕೆಯಿಂದ ಕೆಲಸಮಾಡಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು, ಮಾಸ್ಕ್, ಗ್ಲೌಸ್, ವೆಂಟಿಲೇಟರ್, ಪಿಎಸ್‌ಎ ಪ್ಲಾಂಟ್ಸ್, ಆಕ್ಸಿಜನ್ ಟ್ಯಾಂಕ್, ಐಸೋಲೇ?ನ್ ಸೆಂಟರ್ ಮೊದಲಾದವುಗಳನ್ನು ಪರಿಶೀಲಿಸಿ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಿ ಕೆಲಸಮಾಡಿದರೆ ಮುಂದೆ ಆಗಬಹುದಾದ ಸಮಸ್ಯೆಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದರು.
ಅಗತ್ಯ ಸಿಬ್ಬಂದಿಗಳ ನಿಯೋಜನೆ: ಜಿಲ್ಲಾ ಆಸ್ಪತ್ರೆ ಹಾಗೂ ಪ್ರತಿಯೊಂದು ತಾಲೂಕು ಆಸ್ಪತ್ರೆಯಲ್ಲಿ ಅಗತ್ಯ ಸಿಬ್ಬಂದಿಗಳನ್ನು ನಿಯೋಜನೆ ಮಾಡಿಟ್ಟುಕೊಳ್ಳಬೇಕು. ಸರ್ಕಾರ ನೀಡಿರುವ ಎಲ್ಲ ಆಂಬುಲೆನ್ಸಳಿಗೆ ಚಾಲಕರನ್ನು ನಿಯೋಜಿಸಬೇಕು ಯಾವುದೇ ಆಂಬುಲೆನ್ಸ್‌ಗಳು ಖಾಲಿ ನಿಂತು ಹಾಳಾಗಬಾರದು. ಅವುಗಳು ರೋಗಿಗಳ ಉಪಯೋಗಕ್ಕೆ ಬಳಕೆಯಾಗಬೇಕು ಹಾಗೆಯೇ ಕೋವಿಡದಂತಹ ಸಾಂಕ್ರಾಮಿಕ ರೋಗಗಳನ್ನು ಪತ್ತೆಹಚ್ಚಲು ಆಶಾ ಕಾರ್ಯಕರ್ತೆಯರನ್ನು ಸಕ್ರಿಯವಾಗಿ ಬಳಸಿಕೊಳ್ಳಿ ಎಂದರು
ಸಾರ್ವಜನಿಕರಿಗೆ ಜಾಗೃತಿ: ಜಿಲ್ಲೆಯ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳ ಕುರಿತಾದ ಜಾಗೃತಿ ಅತಿ ಅವಶ್ಯಕವಾಗಿದೆ. ಆರೋಗ್ಯ ಜಾಥಾಗಳ ಮೂಲಕ ಸಾಂಕ್ರಾಮಿಕ ರೋಗಗಳ ಗಂಭೀರತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಜನ ಜಾಗೃತರಾದರೆ ಮಾತ್ರ ಕೋವಿಡ್ ನಂತಹ ಸಾಂಕ್ರಾಮಿಕ ರೋಗಗಳನ್ನು ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಅವರು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ತಡೆಗೆ ತೆಗೆದುಕೊಂಡ ಅಗತ್ಯ ಪೂರ್ವ ತಯಾರಿ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ಜಿಲ್ಲಾ ಶಸ್ತ್ರ ಚಿಕಿತ್ಸ ಡಾ.ಪಿ.ಆರ್.ಹಾವನೂರ, ಆರ್.ಸಿ.ಎಚ್.ಅಧಿಕಾರಿ ಡಾ.ಜಯಾನಂದ, ಡಾ.ಸರಿತಾ, ತಾಲೂಕು ವೈದ್ಯಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆ ಅಧಿಕರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...