ಹಾವೇರಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ೫೦ ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಜ.೧೮, ೧೯ ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ “ವಿಶ್ವಾಮಿತ್ರ” ಘೋಷವಾಕ್ಯದಡಿ ಬ್ರಾಹ್ಮಣ ಮಹಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ಅಗಡಿ ಆನಂದವನದ ಗುರುದತ್ತ ಮೂರ್ತಿ ಚಕ್ರವರ್ತಿಗಳು ತಿಳಿಸಿದರು.
ಗುರುವಾರ ಇಲ್ಲಿನ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭೆಯು ಸಾರ್ಥಕ ೫೦ ವಸಂತಗಳನ್ನು ಪೂರೈಸಿರುವುದರಿಂದ ವಿಶ್ವಾಮಿತ್ರ ಘೋಷವಾಕ್ಯದಡಿ ಬ್ರಾಹ್ಮಣ ಮಹಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ವಿಶ್ವದೆಲ್ಲೆಡೆ ಬೆಳಕು ಪಸರಿಸಲಿ, ಸರ್ವಜನಾಂಗಕ್ಕೂ ಒಳಿತಾಗಲಿ ಎಂಬ ಸದಾಶಯ ಇದರ ಹಿಂದಿದೆ. ೨ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.
ಸನಾತನ ಧರ್ಮದ ಸಂರಕ್ಷಣೆ, ಬ್ರಾಹ್ಮಣ ಸಮಾಜದ ಸಂಘಟನೆ- ಸಮನ್ವಯ ಉಂಟು ಮಾಡುವುದೂ ಕಾರ್ಯಕ್ರಮದ ಉದ್ದೇಶ. ಅನೇಕ ಶ್ರೀಗಳೂ ಆಗಮಿಸಲಿದ್ದು, ಶಂಕರಾಚಾರ್ಯರು, ರಾಮಾನುಜಾಚಾರ್ಯರು, ಮಧ್ವಾಚಾರ್ಯರು ಸಮಾಜಕ್ಕೆ ನೀಡಿರುವ ಕೊಡುಗೆ ಬಗ್ಗೆ ಗೋಷ್ಠಿಗಳನ್ನು ಆಯೋಜಿಸಲಾಗಿದೆ ಎಂದರು.
ಜ.೧೮ ರಂದು ಬೆಳಗ್ಗೆ ೫.೩೦ಕ್ಕೆ ಶೃಂಗೇರಿ ಶಾರದಾ ಪೀಠದ ವಿಧುಶೇಖರಭಾರತೀ ಸ್ವಾಮೀಜಿ ಉಪಸ್ಥಿತಿಯಲ್ಲಿ ಗಾಯತ್ರಿ ಮಹಾಯಾಗ ಆರಂಭವಾಗಲಿದೆ. ೭.೩೦ಕ್ಕೆ ಸಮ್ಮೇಳನದ ಧ್ವಜಾರೋಹಣ ನೆರವೇರಲಿದೆ. ೮.೩೦ ರಿಂದ ೯ ಗಂಟೆಗೆ ಹೋಮ ಪೂರ್ಣಾಹುತಿ ನಡೆಯಲಿದ್ದು ಬಳಿಕ ಸಮ್ಮೇಳನ ಉದ್ಘಾಟನೆಯಾಗಲಿದೆ ಎಂದು ವಿವರಿಸಿದರು.
ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ, ಶೃಂಗೇರಿ ಶಿವಗಂಗಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ, ಮನ್ನಲೆಮಾವು ಮಠದ ಮಾಧವಾನಂದ ಭಾರತೀ ಸ್ವಾಮೀಜಿ, ಆವನಿ ಶೃಂಗೇರಿ ಮಠದ ಅದ್ವೈತಾನಂದ ಭಾರತೀ ಸ್ವಾಮೀಜಿ ಉಪಸ್ಥಿತರಿರುವರು. ಮಧ್ಯಾಹ್ನ ೧೧.೩೦ಕ್ಕೆ ಸಭಾ ಕಾರ್ಯಕ್ರಮವಿದ್ದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸ್ಮರಣ ಸಂಚಿಕೆ ಲೋಕಾರ್ಪಣೆ: ಸಚಿವ ದಿನೇಶ್ ಗುಂಡೂರಾವ್ ಅವರು ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಲಿದ್ದಾರೆ. ಸಮುದಾಯದಲ್ಲಿ ವಧುವಿಗೆ ಹೆಚ್ಚಿನ ಹುಡುಕಾಟ ನಡೆಯುತ್ತಿರುವುದರಿಂದ ಮಾಹಿತಿ ನೀಡುವ ಪಾಣಿಗ್ರಹಣ ವೇದಿಕೆಯನ್ನು ಸಂಸದ ತೇಜಸ್ವಿ ಸೂರ್ಯ ಉದ್ಘಾಟಿಸಲಿದ್ದಾರೆ. ವೇದಾಂತ ತತ್ವ ಚಿಂತನಂ, ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಾಹ್ಮಣರ ಪಾತ್ರ, ಮರೆಯಲಾಗದ ಮಹನೀಯರು ಮತ್ತಿತರ ಕೃತಿಗಳು ಬಿಡುಗಡೆಯಾಗಲಿವೆ ಎಂದು ಮಾಹಿತಿ ನೀಡಿದರು.
ಜ.೧೯ ರಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಡಾ.ಗಿರಿಧರ್ ಕಜೆ ಸೇರಿ ಸಮುದಾಯದ ಸಾಧಕರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಗುವುದು. ವಾಣಿಜ್ಯ ಸಮಾವೇಶವನ್ನೂ ಆಯೋಜಿಸಲಾಗಿದೆ. ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದ ಗಣ್ಯರನ್ನೂ ಸನ್ಮಾನಿಸಲಾಗುವುದು ಎಂದ ಅವರು ಹಾವೇರಿಜಿಲ್ಲೆಯಿಂದ ಗಣೇಶಭಟ್ ಜೋಶಿ ಹಾಗೂ ಉದ್ಯಮಿ ಪವನ್ ಬಹದ್ದೂರು ದೇಸಾಯಿ ಅವರುಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಸಮ್ಮೇಳನದ ಪ್ರಧಾನ ಸಂಚಾಲಕರಾದವಿಜಯ ನಾಡಜೋಶಿ, ನೆಹರು ಓಲೇಕಾರ ಶಾಸಕರಾಗಿದ್ದ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜಕ್ಕೆ ೧೧ಗುಂಠೆ ನಿವೇಶನ ನೀಡಿದ್ದು, ಈ ನಿವೇಶನವನ್ನು ಸಮಾಜಕ್ಕೆ ಅರ್ಪಣೆ ಮಾಡಿ ಸಮಾಜದ ಉನ್ನತಿಗೆ ಬಳಸಿಕೊಳ್ಳಲಾಗುವುದು, ಬೆಂಗಳೂರಲ್ಲಿ ನಡೆಯುವ ಸಮಾವೇಶಕ್ಕೆ ಹಾವೇರಿಜಿಲ್ಲೆಯಿಂದ ೨ಸಾವಿರಕ್ಕೂ ಅಧಿಕ ಬ್ರಾಹ್ಮಣ ಸಮಾಜದ ಬಂಧುಗಳು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಮಾವೇಶ ಸಮಿತಿಯ ರಾಜ್ಯ ಉಪಾಧ್ಯಕ್ಷ ಪವನ್ ಬಹದ್ದೂರ್ ದೇಸಾಯಿ, ಜಿಲ್ಲಾ ಬ್ರಾಹ್ಮಣ ಸಮಾಜದ ಜಿಲ್ಲಾಧ್ಯಕ್ಷ ವಸಂತ ಮೊಕ್ತಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತ ನಾಯಕ್ ಬಾದಾಮಿ, ಜಿಲ್ಲಾ ಮಹಿಳಾ ಸಂಚಾಲಕಿ ಶ್ರೀಮತಿ ದೀಪಾ ಪಾಟೀಲ್, ಸಮ್ಮೇಳನ ಸಮಿತಿಯ ಜಿಲ್ಲಾ ಸಂಘಟಕ ಸುಬ್ರಹ್ಮಣ್ಯ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿ, ತಾಲೂಕ ಕಾರ್ಯದರ್ಶಿ ದತ್ತಾತ್ರೇಯ ಕಳ್ಳಿಹಾಳ, ರಮೇಶ್ ಕುಲಕರ್ಣಿ ಪ್ರಕಾಶ ಪೂಜಾರ್ ಹಾಜರಿದ್ದರು.
ಜ.೧೮-೧೯ರಂದು ಬೆಂಗಳೂರಲ್ಲಿ “ಬ್ರಾಹ್ಮಣ ಮಹಾ ಸಮ್ಮೇಳನ” ಹಾವೇರಿಜಿಲ್ಲೆಯಿಂದ ೨ಸಾವಿರಕ್ಕೂ ಅಧಿಕ ಜನರುಭಾಗಿ
Date:
ಹಾವೇರಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ೫೦ ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಜ.೧೮, ೧೯ ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ “ವಿಶ್ವಾಮಿತ್ರ” ಘೋಷವಾಕ್ಯದಡಿ ಬ್ರಾಹ್ಮಣ ಮಹಾ ಸಮ್ಮೇಳನ ಆಯೋಜಿಸಲಾಗಿದೆ ಎಂದು ಅಗಡಿ ಆನಂದವನದ ಗುರುದತ್ತ ಮೂರ್ತಿ ಚಕ್ರವರ್ತಿಗಳು ತಿಳಿಸಿದರು.
ಗುರುವಾರ ಇಲ್ಲಿನ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭೆಯು ಸಾರ್ಥಕ ೫೦ ವಸಂತಗಳನ್ನು ಪೂರೈಸಿರುವುದರಿಂದ ವಿಶ್ವಾಮಿತ್ರ ಘೋಷವಾಕ್ಯದಡಿ ಬ್ರಾಹ್ಮಣ ಮಹಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ವಿಶ್ವದೆಲ್ಲೆಡೆ ಬೆಳಕು ಪಸರಿಸಲಿ, ಸರ್ವಜನಾಂಗಕ್ಕೂ ಒಳಿತಾಗಲಿ ಎಂಬ ಸದಾಶಯ ಇದರ ಹಿಂದಿದೆ. ೨ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.
ಸನಾತನ ಧರ್ಮದ ಸಂರಕ್ಷಣೆ, ಬ್ರಾಹ್ಮಣ ಸಮಾಜದ ಸಂಘಟನೆ- ಸಮನ್ವಯ ಉಂಟು ಮಾಡುವುದೂ ಕಾರ್ಯಕ್ರಮದ ಉದ್ದೇಶ. ಅನೇಕ ಶ್ರೀಗಳೂ ಆಗಮಿಸಲಿದ್ದು, ಶಂಕರಾಚಾರ್ಯರು, ರಾಮಾನುಜಾಚಾರ್ಯರು, ಮಧ್ವಾಚಾರ್ಯರು ಸಮಾಜಕ್ಕೆ ನೀಡಿರುವ ಕೊಡುಗೆ ಬಗ್ಗೆ ಗೋಷ್ಠಿಗಳನ್ನು ಆಯೋಜಿಸಲಾಗಿದೆ ಎಂದರು.
ಜ.೧೮ ರಂದು ಬೆಳಗ್ಗೆ ೫.೩೦ಕ್ಕೆ ಶೃಂಗೇರಿ ಶಾರದಾ ಪೀಠದ ವಿಧುಶೇಖರಭಾರತೀ ಸ್ವಾಮೀಜಿ ಉಪಸ್ಥಿತಿಯಲ್ಲಿ ಗಾಯತ್ರಿ ಮಹಾಯಾಗ ಆರಂಭವಾಗಲಿದೆ. ೭.೩೦ಕ್ಕೆ ಸಮ್ಮೇಳನದ ಧ್ವಜಾರೋಹಣ ನೆರವೇರಲಿದೆ. ೮.೩೦ ರಿಂದ ೯ ಗಂಟೆಗೆ ಹೋಮ ಪೂರ್ಣಾಹುತಿ ನಡೆಯಲಿದ್ದು ಬಳಿಕ ಸಮ್ಮೇಳನ ಉದ್ಘಾಟನೆಯಾಗಲಿದೆ ಎಂದು ವಿವರಿಸಿದರು.
ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ, ಶೃಂಗೇರಿ ಶಿವಗಂಗಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ, ಮನ್ನಲೆಮಾವು ಮಠದ ಮಾಧವಾನಂದ ಭಾರತೀ ಸ್ವಾಮೀಜಿ, ಆವನಿ ಶೃಂಗೇರಿ ಮಠದ ಅದ್ವೈತಾನಂದ ಭಾರತೀ ಸ್ವಾಮೀಜಿ ಉಪಸ್ಥಿತರಿರುವರು. ಮಧ್ಯಾಹ್ನ ೧೧.೩೦ಕ್ಕೆ ಸಭಾ ಕಾರ್ಯಕ್ರಮವಿದ್ದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸ್ಮರಣ ಸಂಚಿಕೆ ಲೋಕಾರ್ಪಣೆ: ಸಚಿವ ದಿನೇಶ್ ಗುಂಡೂರಾವ್ ಅವರು ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಲಿದ್ದಾರೆ. ಸಮುದಾಯದಲ್ಲಿ ವಧುವಿಗೆ ಹೆಚ್ಚಿನ ಹುಡುಕಾಟ ನಡೆಯುತ್ತಿರುವುದರಿಂದ ಮಾಹಿತಿ ನೀಡುವ ಪಾಣಿಗ್ರಹಣ ವೇದಿಕೆಯನ್ನು ಸಂಸದ ತೇಜಸ್ವಿ ಸೂರ್ಯ ಉದ್ಘಾಟಿಸಲಿದ್ದಾರೆ. ವೇದಾಂತ ತತ್ವ ಚಿಂತನಂ, ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಾಹ್ಮಣರ ಪಾತ್ರ, ಮರೆಯಲಾಗದ ಮಹನೀಯರು ಮತ್ತಿತರ ಕೃತಿಗಳು ಬಿಡುಗಡೆಯಾಗಲಿವೆ ಎಂದು ಮಾಹಿತಿ ನೀಡಿದರು.
ಜ.೧೯ ರಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಡಾ.ಗಿರಿಧರ್ ಕಜೆ ಸೇರಿ ಸಮುದಾಯದ ಸಾಧಕರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಗುವುದು. ವಾಣಿಜ್ಯ ಸಮಾವೇಶವನ್ನೂ ಆಯೋಜಿಸಲಾಗಿದೆ. ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದ ಗಣ್ಯರನ್ನೂ ಸನ್ಮಾನಿಸಲಾಗುವುದು ಎಂದ ಅವರು ಹಾವೇರಿಜಿಲ್ಲೆಯಿಂದ ಗಣೇಶಭಟ್ ಜೋಶಿ ಹಾಗೂ ಉದ್ಯಮಿ ಪವನ್ ಬಹದ್ದೂರು ದೇಸಾಯಿ ಅವರುಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಸಮ್ಮೇಳನದ ಪ್ರಧಾನ ಸಂಚಾಲಕರಾದವಿಜಯ ನಾಡಜೋಶಿ, ನೆಹರು ಓಲೇಕಾರ ಶಾಸಕರಾಗಿದ್ದ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜಕ್ಕೆ ೧೧ಗುಂಠೆ ನಿವೇಶನ ನೀಡಿದ್ದು, ಈ ನಿವೇಶನವನ್ನು ಸಮಾಜಕ್ಕೆ ಅರ್ಪಣೆ ಮಾಡಿ ಸಮಾಜದ ಉನ್ನತಿಗೆ ಬಳಸಿಕೊಳ್ಳಲಾಗುವುದು, ಬೆಂಗಳೂರಲ್ಲಿ ನಡೆಯುವ ಸಮಾವೇಶಕ್ಕೆ ಹಾವೇರಿಜಿಲ್ಲೆಯಿಂದ ೨ಸಾವಿರಕ್ಕೂ ಅಧಿಕ ಬ್ರಾಹ್ಮಣ ಸಮಾಜದ ಬಂಧುಗಳು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಮಾವೇಶ ಸಮಿತಿಯ ರಾಜ್ಯ ಉಪಾಧ್ಯಕ್ಷ ಪವನ್ ಬಹದ್ದೂರ್ ದೇಸಾಯಿ, ಜಿಲ್ಲಾ ಬ್ರಾಹ್ಮಣ ಸಮಾಜದ ಜಿಲ್ಲಾಧ್ಯಕ್ಷ ವಸಂತ ಮೊಕ್ತಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತ ನಾಯಕ್ ಬಾದಾಮಿ, ಜಿಲ್ಲಾ ಮಹಿಳಾ ಸಂಚಾಲಕಿ ಶ್ರೀಮತಿ ದೀಪಾ ಪಾಟೀಲ್, ಸಮ್ಮೇಳನ ಸಮಿತಿಯ ಜಿಲ್ಲಾ ಸಂಘಟಕ ಸುಬ್ರಹ್ಮಣ್ಯ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿ, ತಾಲೂಕ ಕಾರ್ಯದರ್ಶಿ ದತ್ತಾತ್ರೇಯ ಕಳ್ಳಿಹಾಳ, ರಮೇಶ್ ಕುಲಕರ್ಣಿ ಪ್ರಕಾಶ ಪೂಜಾರ್ ಹಾಜರಿದ್ದರು.