ದೀಕ್ಷಾ ಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳ ಆಯ್ಕೆಗೆ ಅರ್ಜಿ ಆಹ್ವಾನ

Date:

ದೀಕ್ಷಾ ಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳ ಆಯ್ಕೆಗೆ ಅರ್ಜಿ ಆಹ್ವಾನ
ಹಾವೇರಿ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳನ್ನು ಹಾವೇರಿ ಜಿಲ್ಲೆಯಿಂದ ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯಾತ್ರಾರ್ಥಿಗಳು ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಹೊಂದಿರಬೇಕು ಹಾಗೂ ೧೮ ವರ್ಷ ಮೆಲ್ಪಟ್ಟವರಾಗಿರಬೇಕು. ಎಸ್.ಸಿ. ಮತ್ತು ಎಸ್.ಟಿ. ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.
ಜಿಲ್ಲೆಗೆ ನಿಗದಿಪಡಿಸಿದ ಗುರಿ ಅನುಸಾರ ಯಾತ್ರಾರ್ಥಿಗಳು ಕೆ.ಎಸ್.ಆರ್.ಟಿ.ಸಿ., ಖಾಸಗಿ ಸಂಸ್ಥೆಗಳ ಬಸ್‌ಗಳಲ್ಲಿ ಹೋಗಬಯಸಿದ್ದಲ್ಲಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾವೇರಿ ಇವರ ಒಪ್ಪಿಗೆ ಮೇರೆಗೆ ಬಸ್‌ಗಳನ್ನು ಬಾಡಿಗೆ ಆಧಾರದಲ್ಲಿ ಮೇಲೆ ತೆಗೆದುಕೊಂಡು ಹೋಗಬಹುದು. ಟೋಲ್ ಶುಲ್ಕ ಒಳಗೊಂಡಂತೆ ಪ್ರಯಾಣದ ವೆಚ್ಚವನ್ನು ಜಿಲ್ಲಾ ಮಟ್ಟದಲ್ಲಿ ಭರಿಸಲಾಗುವುದು.
ಆಯ್ಕೆಯಾದ ಯಾತ್ರಾರ್ಥಿಗಳು ಒಂದು ವೇಳೆ ಸ್ವಂತ ವಾಹನಗಳಲ್ಲಿ ಪ್ರಯಣ ಮಾಡಿದಲ್ಲಿ ಈ ಪ್ರಯಣ ಕೈಗೊಂಡಂತೆ ದೃಢೀಕರಿಸಿ ಅಫಿಡವಿಟ್ ಸಲ್ಲಿಸಬೇಕು ಹಾಗೂ ಪೆಟ್ರೋಲ್/ಡಿಸೈಲ್ ಬಿಲ್ಲುಗಳನ್ನು ಸಹ ಸಲ್ಲಿಸಬೇಕು. ಅಲ್ಲಿಗೆ ಪ್ರಯಾಣ ಮಾಡಿದ್ದಕ್ಕೆ ಸೂಕ್ತ ದಾಖಲಾತಿಗಳನ್ನು ಉಪನಿರ್ದೇಶಕ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ದೇವಗಿರಿ-ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು.
ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು ಎರಡನೇ ಬಾರಿ ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ ಹಾಗೂ ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರರಲ್ಲ.
ಆಸಕ್ತರು ದಿನಾಂಕ ೩೧-೦೮-೨೦೨೪ರೊಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಲ್ಲಿ https://swdservices.karnataka.gov.in   ದೀಕ್ಷಾ ಭೂಮಿ ಯಾತ್ರೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಿದರು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಅರ್ಜಿ ಪ್ರತಿಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ದೇವಗಿರಿ-ಹಾವೇರಿ ಅಥವಾ ಆಯಾ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ನಲ್ಲಿ https://swdservices.karnataka.gov.in   ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಚೇರಿ, ಜಿಲ್ಲಾಡಳಿತ ಭವನ, ದೇವಗಿರಿ-ಹಾವೇರಿ ಅಥವಾ ಆಯಾ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ದೀಕ್ಷಾ ಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳ ಆಯ್ಕೆಗೆ ಅರ್ಜಿ ಆಹ್ವಾನ
ಹಾವೇರಿ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿ ಯಾತ್ರೆಗೆ ಡಾ.ಬಿ.ಆರ್.ಅಂಬೇಡ್ಕರ ಅನುಯಾಯಿಗಳನ್ನು ಹಾವೇರಿ ಜಿಲ್ಲೆಯಿಂದ ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯಾತ್ರಾರ್ಥಿಗಳು ಕಡ್ಡಾಯವಾಗಿ ಬಿಪಿಎಲ್ ಕಾರ್ಡ್ ಹೊಂದಿರಬೇಕು ಹಾಗೂ ೧೮ ವರ್ಷ ಮೆಲ್ಪಟ್ಟವರಾಗಿರಬೇಕು. ಎಸ್.ಸಿ. ಮತ್ತು ಎಸ್.ಟಿ. ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.
ಜಿಲ್ಲೆಗೆ ನಿಗದಿಪಡಿಸಿದ ಗುರಿ ಅನುಸಾರ ಯಾತ್ರಾರ್ಥಿಗಳು ಕೆ.ಎಸ್.ಆರ್.ಟಿ.ಸಿ., ಖಾಸಗಿ ಸಂಸ್ಥೆಗಳ ಬಸ್‌ಗಳಲ್ಲಿ ಹೋಗಬಯಸಿದ್ದಲ್ಲಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾವೇರಿ ಇವರ ಒಪ್ಪಿಗೆ ಮೇರೆಗೆ ಬಸ್‌ಗಳನ್ನು ಬಾಡಿಗೆ ಆಧಾರದಲ್ಲಿ ಮೇಲೆ ತೆಗೆದುಕೊಂಡು ಹೋಗಬಹುದು. ಟೋಲ್ ಶುಲ್ಕ ಒಳಗೊಂಡಂತೆ ಪ್ರಯಾಣದ ವೆಚ್ಚವನ್ನು ಜಿಲ್ಲಾ ಮಟ್ಟದಲ್ಲಿ ಭರಿಸಲಾಗುವುದು.
ಆಯ್ಕೆಯಾದ ಯಾತ್ರಾರ್ಥಿಗಳು ಒಂದು ವೇಳೆ ಸ್ವಂತ ವಾಹನಗಳಲ್ಲಿ ಪ್ರಯಣ ಮಾಡಿದಲ್ಲಿ ಈ ಪ್ರಯಣ ಕೈಗೊಂಡಂತೆ ದೃಢೀಕರಿಸಿ ಅಫಿಡವಿಟ್ ಸಲ್ಲಿಸಬೇಕು ಹಾಗೂ ಪೆಟ್ರೋಲ್/ಡಿಸೈಲ್ ಬಿಲ್ಲುಗಳನ್ನು ಸಹ ಸಲ್ಲಿಸಬೇಕು. ಅಲ್ಲಿಗೆ ಪ್ರಯಾಣ ಮಾಡಿದ್ದಕ್ಕೆ ಸೂಕ್ತ ದಾಖಲಾತಿಗಳನ್ನು ಉಪನಿರ್ದೇಶಕ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ದೇವಗಿರಿ-ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು.
ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು ಎರಡನೇ ಬಾರಿ ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ ಹಾಗೂ ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರರಲ್ಲ.
ಆಸಕ್ತರು ದಿನಾಂಕ ೩೧-೦೮-೨೦೨೪ರೊಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಲ್ಲಿ https://swdservices.karnataka.gov.in   ದೀಕ್ಷಾ ಭೂಮಿ ಯಾತ್ರೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಿದರು ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಅರ್ಜಿ ಪ್ರತಿಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ದೇವಗಿರಿ-ಹಾವೇರಿ ಅಥವಾ ಆಯಾ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ನಲ್ಲಿ https://swdservices.karnataka.gov.in   ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಚೇರಿ, ಜಿಲ್ಲಾಡಳಿತ ಭವನ, ದೇವಗಿರಿ-ಹಾವೇರಿ ಅಥವಾ ಆಯಾ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...