ಫೆ.೧೨ ರಂದು ಜಿಲ್ಲೆಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳ ಆಗಮನ ಫೆ.೧೩ ರಂದು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ

Date:

 

ಫೆ.೧೨ ರಂದು ಜಿಲ್ಲೆಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳ ಆಗಮನ
ಫೆ.೧೩ ರಂದು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ
-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ಹಾವೇರಿ: ಕರ್ನಾಟಕ ಲೋಕಾಯುಕ್ತ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರು ಫೆಬ್ರವರಿ ೧೨ ರಿಂದ ೧೪ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಫೆ.೧೩ ರಂದು ಸಾರ್ವಜನಿಕರಿಂದ ದೂರು ಹಾಗೂ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮಾನ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳೊಂದಿಗೆ, ಕರ್ನಾಟಕ ಲೋಕಾಯುಕ್ತ ಹೆಚ್ಚುವರಿ ವಿಚಾರಣಾ ನಿಬಂಧಕರಾದ ಕೆ.ಎಂ.ರಾಜಶೇಖರ, ಪಿ.ಶ್ರೀನಿವಾಸ ಹಾಗೂ ವಿಚಾರಣಾ ಉಪ ನಿಬಂಧಕರಾದ ಅರವಿಂದ ಎನ್.ವಿ. ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದರು.
ವಿವಿಧ ಸ್ಥಳಗಳಿಗೆ ಭೇಟಿ: ಮಾನ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳು ಫೆ.೧೨ ರಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಲಿದ್ದಾರೆ. ಅಂದು ಮ. ೧-೪೫ ರಿಂದ ೨-೪೫ರವರೆಗೆ ಹಾವೇರಿ ನಗರದ ನ್ಯಾಯಾಲಯದ ಆವರಣದಲ್ಲಿರುವ ಹಾವೇರಿ ಬಾರ್ ಅಸೋಸಿಯೇಷನ್‌ನಲ್ಲಿ ವಕೀಲರೊಂದಿಗೆ ಸಂಹವನ ನಡೆಸಲಿದ್ದಾರೆ. ಮಧ್ಯಾಹ್ನ ೨-೪೫ ರಿಂದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕರ ಅಹವಾಲು ಸ್ವೀಕಾರ: ಫೆ.೧೩ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ ರಿಂದ ಸಂಜೆ ೫ ಗಂಟೆಗೆವರೆಗೆ ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದಾರೆ.
ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ ಹಾಗೂ ನೌಕರರಿಂದ ತಮಗೆ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ ಅಥವಾ ಅಧಿಕಾರಿ ಮತ್ತು ನೌಕರರು ನ್ಯಾಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಉಪ ಲೋಕಾಯುಕ್ತ ನ್ಯಾಯಮೂರ್ತಿಗಳ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು.
ಸೌಲಭ್ಯಗಳಿಂದ ವಂಚಿತರಾಗಬಾರದು: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ದೊರೆಯಬೇಕು ಹಾಗೂ ಯಾವುದೇ ವ್ಯಕ್ತಿ ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬುದು ಮಾನ್ಯ ಉಪ ಲೋಕಾಯುಕ್ತರ ಆಶಯವಾಗಿದ್ದು, ಸರ್ಕಾರಿ ಸೌಲಭ್ಯಗಳಿಂದ ವಂಚಿತರಾದ ಹಾಗೂ ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಕ್ಕೆ ಅನಗತ್ಯ ವಿಳಂಬ ಮಾಡುತ್ತಿದ್ದರೆ ಈ ವಿಷಯವಾಗಿ ಸಾರ್ವಜನಿಕರು ಮಾನ್ಯ ಉಪ ಲೋಕಾಯುಕ್ತರಿಗೆ ದೂರು ಸಲ್ಲಿಸಬಹುದು. ಜಿಲ್ಲೆಯ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

೧೨೪ ಪ್ರಕರಣಗಳು: ಜಿಲ್ಲೆಗೆ ಸಂಬಂಧಿಸಿದ ೧೨೪ ಲೋಕಾಯುಕ್ತ ಪ್ರಕರಣಗಳಿದ್ದು, ಫೆ.೧೪ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ ರಿಂದ ಸಂಜೆ ೫ ಗಂಟೆವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಾವೇರಿ ಜಿಲ್ಲೆಗೆ ಸಂಬಂಧಪಟ್ಟ ಲೋಕಾಯುಕ್ತ ಸಂಸ್ಥೆಗಳಲ್ಲಿ ದಾಖಲಾಗಿರುವ(ಗೌರವಾನ್ವಿತ ಉಪ ಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಮತ್ತು ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ (ಈಗಾಗಲೇ ಕಚೇರಿಯಿಂದ ನೋಟಿಸ್ ಕಳುಹಿಸಿರುವ) ದೂರುದಾರರು ಹಾಗೂ ಎದುರುಗಾರರ ಸಮ್ಮುಖದಲ್ಲಿ ಕಾನೂನು ರೀತ್ಯ ವಿಚಾರಣೆ ನಡೆಸಲಿದ್ದಾರೆ. ಇದರಿಂದ ದೂರುದಾರರು ಹಾಗೂ ಎದುರುದಾರರು ವಿಚಾರಣೆಗೆ ಬೆಂಗಳೂರು ತೆರಳುವುದು ತಪ್ಪುತ್ತದೆ ಹಾಗೂ ಸಮಯದ ಉಳಿತಾಯವಾಗಲಿದೆ ಎಂದರು.
ನಾಲ್ಕು ಕೌಂಟರ್: ಲೋಕಾಯುಕ್ತ ಡಿಎಸ್‌ಪಿ ಬಿ.ಪಿ.ಚಂದ್ರಶೇಖರ ಅವರು ಮಾತನಾಡಿ, ಫೆ.೧೩ ರಂದು ಗುರುಭವನದಲ್ಲಿ ಅಹವಾಲು ಹಾಗೂ ದೂರು ಸ್ವೀಕಾರ ಸಮಯದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಪ್ರತ್ಯೇಕ ನಾಲ್ಕು ಕೌಂಟರ್ ಸ್ಥಾಪಿಸಲಾಗುವುದು, ಅಲ್ಲಿ ಸಲ್ಲಿಸಲಾಗುವ ದೂರುಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗುವುದು. ಸಾರ್ವಜನಿಕರು ಅಹವಾಲು ಹಾಗೂ ದೂರು ಸಲ್ಲಿಸಲು ನಮೂನೆ ೧ ಮತ್ತು ೨ ಭರ್ತಿ ಮಾಡುವ ಕುರಿತು ಲೋಕಾಯುಕ್ತ ಸಿಬ್ಬಂದಿಗಳು ಮಾಹಿತಿ ನೀಡಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಕರ್ನಾಟಕ ಲೋಕಾಯುಕ್ತ ಎಸ್.ಪಿ. ಎಂ.ಎಸ್.ಕೌಲಾಪುರೆ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

 

ಫೆ.೧೨ ರಂದು ಜಿಲ್ಲೆಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳ ಆಗಮನ
ಫೆ.೧೩ ರಂದು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ
-ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ಹಾವೇರಿ: ಕರ್ನಾಟಕ ಲೋಕಾಯುಕ್ತ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರು ಫೆಬ್ರವರಿ ೧೨ ರಿಂದ ೧೪ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಫೆ.೧೩ ರಂದು ಸಾರ್ವಜನಿಕರಿಂದ ದೂರು ಹಾಗೂ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮಾನ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳೊಂದಿಗೆ, ಕರ್ನಾಟಕ ಲೋಕಾಯುಕ್ತ ಹೆಚ್ಚುವರಿ ವಿಚಾರಣಾ ನಿಬಂಧಕರಾದ ಕೆ.ಎಂ.ರಾಜಶೇಖರ, ಪಿ.ಶ್ರೀನಿವಾಸ ಹಾಗೂ ವಿಚಾರಣಾ ಉಪ ನಿಬಂಧಕರಾದ ಅರವಿಂದ ಎನ್.ವಿ. ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದರು.
ವಿವಿಧ ಸ್ಥಳಗಳಿಗೆ ಭೇಟಿ: ಮಾನ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳು ಫೆ.೧೨ ರಂದು ಬೆಳಿಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಲಿದ್ದಾರೆ. ಅಂದು ಮ. ೧-೪೫ ರಿಂದ ೨-೪೫ರವರೆಗೆ ಹಾವೇರಿ ನಗರದ ನ್ಯಾಯಾಲಯದ ಆವರಣದಲ್ಲಿರುವ ಹಾವೇರಿ ಬಾರ್ ಅಸೋಸಿಯೇಷನ್‌ನಲ್ಲಿ ವಕೀಲರೊಂದಿಗೆ ಸಂಹವನ ನಡೆಸಲಿದ್ದಾರೆ. ಮಧ್ಯಾಹ್ನ ೨-೪೫ ರಿಂದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕರ ಅಹವಾಲು ಸ್ವೀಕಾರ: ಫೆ.೧೩ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ ರಿಂದ ಸಂಜೆ ೫ ಗಂಟೆಗೆವರೆಗೆ ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದಾರೆ.
ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ ಹಾಗೂ ನೌಕರರಿಂದ ತಮಗೆ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ ಅಥವಾ ಅಧಿಕಾರಿ ಮತ್ತು ನೌಕರರು ನ್ಯಾಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಉಪ ಲೋಕಾಯುಕ್ತ ನ್ಯಾಯಮೂರ್ತಿಗಳ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು.
ಸೌಲಭ್ಯಗಳಿಂದ ವಂಚಿತರಾಗಬಾರದು: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ದೊರೆಯಬೇಕು ಹಾಗೂ ಯಾವುದೇ ವ್ಯಕ್ತಿ ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬುದು ಮಾನ್ಯ ಉಪ ಲೋಕಾಯುಕ್ತರ ಆಶಯವಾಗಿದ್ದು, ಸರ್ಕಾರಿ ಸೌಲಭ್ಯಗಳಿಂದ ವಂಚಿತರಾದ ಹಾಗೂ ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಕ್ಕೆ ಅನಗತ್ಯ ವಿಳಂಬ ಮಾಡುತ್ತಿದ್ದರೆ ಈ ವಿಷಯವಾಗಿ ಸಾರ್ವಜನಿಕರು ಮಾನ್ಯ ಉಪ ಲೋಕಾಯುಕ್ತರಿಗೆ ದೂರು ಸಲ್ಲಿಸಬಹುದು. ಜಿಲ್ಲೆಯ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

೧೨೪ ಪ್ರಕರಣಗಳು: ಜಿಲ್ಲೆಗೆ ಸಂಬಂಧಿಸಿದ ೧೨೪ ಲೋಕಾಯುಕ್ತ ಪ್ರಕರಣಗಳಿದ್ದು, ಫೆ.೧೪ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ ರಿಂದ ಸಂಜೆ ೫ ಗಂಟೆವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಾವೇರಿ ಜಿಲ್ಲೆಗೆ ಸಂಬಂಧಪಟ್ಟ ಲೋಕಾಯುಕ್ತ ಸಂಸ್ಥೆಗಳಲ್ಲಿ ದಾಖಲಾಗಿರುವ(ಗೌರವಾನ್ವಿತ ಉಪ ಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಮತ್ತು ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ (ಈಗಾಗಲೇ ಕಚೇರಿಯಿಂದ ನೋಟಿಸ್ ಕಳುಹಿಸಿರುವ) ದೂರುದಾರರು ಹಾಗೂ ಎದುರುಗಾರರ ಸಮ್ಮುಖದಲ್ಲಿ ಕಾನೂನು ರೀತ್ಯ ವಿಚಾರಣೆ ನಡೆಸಲಿದ್ದಾರೆ. ಇದರಿಂದ ದೂರುದಾರರು ಹಾಗೂ ಎದುರುದಾರರು ವಿಚಾರಣೆಗೆ ಬೆಂಗಳೂರು ತೆರಳುವುದು ತಪ್ಪುತ್ತದೆ ಹಾಗೂ ಸಮಯದ ಉಳಿತಾಯವಾಗಲಿದೆ ಎಂದರು.
ನಾಲ್ಕು ಕೌಂಟರ್: ಲೋಕಾಯುಕ್ತ ಡಿಎಸ್‌ಪಿ ಬಿ.ಪಿ.ಚಂದ್ರಶೇಖರ ಅವರು ಮಾತನಾಡಿ, ಫೆ.೧೩ ರಂದು ಗುರುಭವನದಲ್ಲಿ ಅಹವಾಲು ಹಾಗೂ ದೂರು ಸ್ವೀಕಾರ ಸಮಯದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಪ್ರತ್ಯೇಕ ನಾಲ್ಕು ಕೌಂಟರ್ ಸ್ಥಾಪಿಸಲಾಗುವುದು, ಅಲ್ಲಿ ಸಲ್ಲಿಸಲಾಗುವ ದೂರುಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗುವುದು. ಸಾರ್ವಜನಿಕರು ಅಹವಾಲು ಹಾಗೂ ದೂರು ಸಲ್ಲಿಸಲು ನಮೂನೆ ೧ ಮತ್ತು ೨ ಭರ್ತಿ ಮಾಡುವ ಕುರಿತು ಲೋಕಾಯುಕ್ತ ಸಿಬ್ಬಂದಿಗಳು ಮಾಹಿತಿ ನೀಡಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಕರ್ನಾಟಕ ಲೋಕಾಯುಕ್ತ ಎಸ್.ಪಿ. ಎಂ.ಎಸ್.ಕೌಲಾಪುರೆ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...