ಮಠ- ಮಾನ್ಯಗಳು ಸಮಾಜಕ್ಕೆ ಸಂಜೀವಿನಿಯಾಗಿವೆ: ಡಾ.ಟಿ.ಎಂ.ಭಾಸ್ಕರ

Date:

ಮಠ- ಮಾನ್ಯಗಳು ಸಮಾಜಕ್ಕೆ ಸಂಜೀವಿನಿಯಾಗಿವೆ: ಡಾ.ಟಿ.ಎಂ.ಭಾಸ್ಕರ
ಹಾವೇರಿ: ತನು, ಮನ, ಭಾವ ಶುದ್ಧಿಯಿಂದ ಮಾಡಿದ ಕಾಯಕವು ಸದಾ ಸ್ಮರಣೀಯವಾಗಿರುತ್ತದೆ. ಅನ್ನ, ಅರಿವು, ಆಶ್ರಯಗಳು ಶರಣ ಸಂಸ್ಕೃತಿಯ ಸಾಕ್ಷಿ ಪ್ರಜ್ಞೆಗಳು. ಅಂತಹ ಕಾಯಕ ಮಾಡಿದವರು ಬಸವಾದಿ ಶಿವಶರಣರು. ಕರ್ನಾಟಕದ ಮಠ ಮಾನ್ಯಗಳು ಅವರ ದಾರಿಯಲ್ಲಿಯೇ ಸಾಗಿ ಸಮಾಜಕ್ಕೆ ಸಂಜೀವಿನಿಯಾಗಿವೆ ಅಂತಹ ಶರಣ ಪರಂಪರೆಯು ಹಾವೇರಿಯ ಶ್ರೀ ಹುಕ್ಕೇರಿಮಠದ್ದಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ .ಎಂ. ಭಾಸ್ಕರ ಹೇಳಿದರು.
ನಗರದ ಹುಕ್ಕೇರಿಮಠದ ಶಿವಾನುಭವ ಮಂಟಪದಲ್ಲಿ ಹಮ್ಮಿಕೊಂಡಿದ್ದ ಲಿಂ. ಶಿವಲಿಂಗ ಶ್ರೀಗಳ ೧೦೯ ನೇ ಜಯಂತಿ ಹಾಗೂ ಜಾತ್ರಾ ಮಹೋತ್ಸವದ ಕಾರ್ಯಕರ್ತರ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆದರ್ಶವಿಲ್ಲದ ಬದುಕು ಬರಡು, ಸಾಧನೆ ಇಲ್ಲದ ಜೀವನ ನಿರರ್ಥಕ. ಸಾಧನೆಗೆ ಯಾವದೇ ಅಡ್ಡಿ, ಆತಂಕಗಳು ನೆಪವಾಗಬಾರದು. ಮಠಮಾನ್ಯಗಳು ನೀಡುವ ಶಿಕ್ಷಣವು ನಮ್ಮನ್ನು ಸಾಧನೆಗೆ ಪ್ರೇರೇಪಿಸುತ್ತವೆ. ತಪಸ್ಸಿನ ಶಕ್ತಿಯ ಮೂಲಕ ಗಳಿಸಿದ ಶಿವಯೋಗ ಶಕ್ತಿಯನ್ನು ಭಕ್ತರ ಉದ್ಧಾರಕ್ಕಾಗಿ ಧಾರೆಯೆರೆದು ಅವರನ್ನು ಅಧ್ಯಾತ್ಮಿಕವಾಗಿ ಶ್ರೀಮಂತಗೊಳಿಸಿ ಆ ಮೂಲಕ ಸಮಷ್ಠಿಯ ಹಿತವನ್ನು ಸಾಮಾಜೀಕರಣಗೊಳಿಸಿದ ಲಿಂ. ಶಿವಲಿಂಗ ಸಾಮೀಜಿಗಳು ಸದಾ ಸ್ಮರಣೀಯರು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ನಮಿಸುವ ಕೈಗಳಿಂತ ದುಡಿಯುವ ಕೈ ಶ್ರೇಷ್ಠ. ಶ್ರೀಮಠದಲ್ಲಿ ಕಳೆದ ತಿಂಗಳು ನಡೆದ ಶಾಲಾ ಸುವರ್ಣ ಮಹೋತ್ಸವ, ರಜತ ತುಲಾಭಾರ, ಜಾತ್ರಾ ಕಾರ್ಯಕ್ರಮಗಳು ನ ಭೋತೋ, ನ ಭವಿಷ್ಯತೆ ಎಂಬAತೆ ನಡೆದಿವೆ. ಇದಕ್ಕೆಲ್ಲಾ ಶ್ರೀಮಠದ ಭಕ್ತರ ಸೇವಾ ಕೈಕಂರ್ಯವೇ ಕಾರಣವಾಗಿದೆ. ದಿನನಿತ್ಯ ಸಾವಿರಾರು ಜನರಿಗೆ ದಾಸೋಹ, ಹಾಗೂ ಇತರೆ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆದು ಹಾವೇರಿಯ ಇತಿಹಾಸದಲ್ಲಿ ಹೊಸ ದಾಖಲೆ ಬರೆಯಲಾಯಿತು ಎಂದು ಹೇಳಿದರು.
ಇಂದು ಸಾವಿರ ವಿದ್ಯಾರ್ಥಿಗಳಿಗೆ ವಸತಿ ನಿಲಯದ ಭೂಮಿ ಪೂಜೆ ನಡೆದಿದ್ದು, ಇದೇ ಶೈಕ್ಷಣಿಕ ವರ್ಷದಿಂದ ಪ್ರವೇಶಾತಿ ನಡೆಯಲಿದೆ. ಅನ್ನ, ಅರಿವು, ಆಶ್ರಯವು ಪ್ರತಿ ಮಠಮಾನ್ಯಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಶ್ರೀ ಹುಕ್ಕೇರಿಮಠದ ಸರ್ವ ಸುಸಜ್ಜಿತ ವಸತಿ ನಿಲಯವು ಬಡ ಮಕ್ಕಳಿಗೆ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ಸದಾಶಿವ ಶ್ರೀಗಳಿಗೆ ಭಾವೈಕ್ಯತಾ ಪ್ರಶಸ್ತಿ ನೀಡಲಾಯಿತು. ಜಾತ್ರಾ ಸಮಯದಲ್ಲಿ ಶ್ರಮವಹಿಸಿದ ನಗರಸಭೆಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಜಾನಪದ ವಿವಿಯ ಪ್ರಸಾರಾಂಗ ಪ್ರಕಟಿಸಿದ ಅಂತೂರು-ಬೆAತೂರಿನ ಕುಮಾರ ಸ್ವಾಮಿಗಳ ವಿರಚಿತ ವಚನಾನುಶೀಲತೆ ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು.
ಸಮಾರಂಭದಲ್ಲಿ ರಾವೂರಿನ ಸಿದ್ಧಲಿಂಗ ಸ್ವಾಮೀಜಿ, ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ, ಹುಬ್ಬಳ್ಳಿಯ ಅಭಿನವ ಸಿದ್ಧಾರೂಢ ಸ್ವಾಮೀಜಿ, ಕುಮಾರ ಸ್ವಾಮೀಜಿ, ಅಕ್ಕಿಆಲೂರಿನ ಶಿವಬಸವ ಸ್ವಾಮೀಜಿ, ಸಂಜೀವಕುಮಾರ ನೀರಲಗಿ, ಕೆ. ಮಂಜಪ್ಪ, ಮಹೇಶ ಚಿನ್ನಿಕಟ್ಟಿ, ರಾಜಶೇಖರ ಮಾಗನೂರ, ಶಿವರಾಜ ಸಜ್ಜನರ, ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಅಗಡಿ, ಎಂ.ಎಸ್. ಕೋರಿಶೆಟ್ಟರ, ನಿರಂಜನ ತಾಂಡೂರ, ಮಹಾಂತೇಶ ಮಳಿಮಠ, ಪಿ.ಡಿ. ಶಿರೂರ, ಬಿ. ಬಸವರಾಜ, ಶಿವಬಸಪ್ಪ ಹಲಗಣ್ಣನವರ, ಸುಭಾಷ್ ಹುರಳಿಕುಪ್ಪಿ, ಅಶೋಕ ಹೇರೂರ, ಆನಂದ ಅಟವಾಳಗಿ, ಕೃಷ್ಣಮೂರ್ತಿ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.
ಅಕ್ಕನ ಬಳಗದ ಸದಸ್ಯರು ಪ್ರಾರ್ಥಿಸಿದರು. ಎಸ್.ಎಸ್.ಮುಷ್ಠಿ ಸ್ವಾಗತಿಸಿದರು. ಶಿವಬಸವ ಮರಳಿಹಳ್ಳಿ ನಿರೂಪಿಸಿದರು. ಕೊನೆಯಲ್ಲಿ ಶಿವಯೋಗಿ ವಾಲಿಶೆಟ್ಟರ ವಂದಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಮಠ- ಮಾನ್ಯಗಳು ಸಮಾಜಕ್ಕೆ ಸಂಜೀವಿನಿಯಾಗಿವೆ: ಡಾ.ಟಿ.ಎಂ.ಭಾಸ್ಕರ
ಹಾವೇರಿ: ತನು, ಮನ, ಭಾವ ಶುದ್ಧಿಯಿಂದ ಮಾಡಿದ ಕಾಯಕವು ಸದಾ ಸ್ಮರಣೀಯವಾಗಿರುತ್ತದೆ. ಅನ್ನ, ಅರಿವು, ಆಶ್ರಯಗಳು ಶರಣ ಸಂಸ್ಕೃತಿಯ ಸಾಕ್ಷಿ ಪ್ರಜ್ಞೆಗಳು. ಅಂತಹ ಕಾಯಕ ಮಾಡಿದವರು ಬಸವಾದಿ ಶಿವಶರಣರು. ಕರ್ನಾಟಕದ ಮಠ ಮಾನ್ಯಗಳು ಅವರ ದಾರಿಯಲ್ಲಿಯೇ ಸಾಗಿ ಸಮಾಜಕ್ಕೆ ಸಂಜೀವಿನಿಯಾಗಿವೆ ಅಂತಹ ಶರಣ ಪರಂಪರೆಯು ಹಾವೇರಿಯ ಶ್ರೀ ಹುಕ್ಕೇರಿಮಠದ್ದಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ .ಎಂ. ಭಾಸ್ಕರ ಹೇಳಿದರು.
ನಗರದ ಹುಕ್ಕೇರಿಮಠದ ಶಿವಾನುಭವ ಮಂಟಪದಲ್ಲಿ ಹಮ್ಮಿಕೊಂಡಿದ್ದ ಲಿಂ. ಶಿವಲಿಂಗ ಶ್ರೀಗಳ ೧೦೯ ನೇ ಜಯಂತಿ ಹಾಗೂ ಜಾತ್ರಾ ಮಹೋತ್ಸವದ ಕಾರ್ಯಕರ್ತರ ಅಭಿನಂದನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆದರ್ಶವಿಲ್ಲದ ಬದುಕು ಬರಡು, ಸಾಧನೆ ಇಲ್ಲದ ಜೀವನ ನಿರರ್ಥಕ. ಸಾಧನೆಗೆ ಯಾವದೇ ಅಡ್ಡಿ, ಆತಂಕಗಳು ನೆಪವಾಗಬಾರದು. ಮಠಮಾನ್ಯಗಳು ನೀಡುವ ಶಿಕ್ಷಣವು ನಮ್ಮನ್ನು ಸಾಧನೆಗೆ ಪ್ರೇರೇಪಿಸುತ್ತವೆ. ತಪಸ್ಸಿನ ಶಕ್ತಿಯ ಮೂಲಕ ಗಳಿಸಿದ ಶಿವಯೋಗ ಶಕ್ತಿಯನ್ನು ಭಕ್ತರ ಉದ್ಧಾರಕ್ಕಾಗಿ ಧಾರೆಯೆರೆದು ಅವರನ್ನು ಅಧ್ಯಾತ್ಮಿಕವಾಗಿ ಶ್ರೀಮಂತಗೊಳಿಸಿ ಆ ಮೂಲಕ ಸಮಷ್ಠಿಯ ಹಿತವನ್ನು ಸಾಮಾಜೀಕರಣಗೊಳಿಸಿದ ಲಿಂ. ಶಿವಲಿಂಗ ಸಾಮೀಜಿಗಳು ಸದಾ ಸ್ಮರಣೀಯರು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ನಮಿಸುವ ಕೈಗಳಿಂತ ದುಡಿಯುವ ಕೈ ಶ್ರೇಷ್ಠ. ಶ್ರೀಮಠದಲ್ಲಿ ಕಳೆದ ತಿಂಗಳು ನಡೆದ ಶಾಲಾ ಸುವರ್ಣ ಮಹೋತ್ಸವ, ರಜತ ತುಲಾಭಾರ, ಜಾತ್ರಾ ಕಾರ್ಯಕ್ರಮಗಳು ನ ಭೋತೋ, ನ ಭವಿಷ್ಯತೆ ಎಂಬAತೆ ನಡೆದಿವೆ. ಇದಕ್ಕೆಲ್ಲಾ ಶ್ರೀಮಠದ ಭಕ್ತರ ಸೇವಾ ಕೈಕಂರ್ಯವೇ ಕಾರಣವಾಗಿದೆ. ದಿನನಿತ್ಯ ಸಾವಿರಾರು ಜನರಿಗೆ ದಾಸೋಹ, ಹಾಗೂ ಇತರೆ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆದು ಹಾವೇರಿಯ ಇತಿಹಾಸದಲ್ಲಿ ಹೊಸ ದಾಖಲೆ ಬರೆಯಲಾಯಿತು ಎಂದು ಹೇಳಿದರು.
ಇಂದು ಸಾವಿರ ವಿದ್ಯಾರ್ಥಿಗಳಿಗೆ ವಸತಿ ನಿಲಯದ ಭೂಮಿ ಪೂಜೆ ನಡೆದಿದ್ದು, ಇದೇ ಶೈಕ್ಷಣಿಕ ವರ್ಷದಿಂದ ಪ್ರವೇಶಾತಿ ನಡೆಯಲಿದೆ. ಅನ್ನ, ಅರಿವು, ಆಶ್ರಯವು ಪ್ರತಿ ಮಠಮಾನ್ಯಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಶ್ರೀ ಹುಕ್ಕೇರಿಮಠದ ಸರ್ವ ಸುಸಜ್ಜಿತ ವಸತಿ ನಿಲಯವು ಬಡ ಮಕ್ಕಳಿಗೆ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ಸದಾಶಿವ ಶ್ರೀಗಳಿಗೆ ಭಾವೈಕ್ಯತಾ ಪ್ರಶಸ್ತಿ ನೀಡಲಾಯಿತು. ಜಾತ್ರಾ ಸಮಯದಲ್ಲಿ ಶ್ರಮವಹಿಸಿದ ನಗರಸಭೆಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಜಾನಪದ ವಿವಿಯ ಪ್ರಸಾರಾಂಗ ಪ್ರಕಟಿಸಿದ ಅಂತೂರು-ಬೆAತೂರಿನ ಕುಮಾರ ಸ್ವಾಮಿಗಳ ವಿರಚಿತ ವಚನಾನುಶೀಲತೆ ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು.
ಸಮಾರಂಭದಲ್ಲಿ ರಾವೂರಿನ ಸಿದ್ಧಲಿಂಗ ಸ್ವಾಮೀಜಿ, ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ, ಹುಬ್ಬಳ್ಳಿಯ ಅಭಿನವ ಸಿದ್ಧಾರೂಢ ಸ್ವಾಮೀಜಿ, ಕುಮಾರ ಸ್ವಾಮೀಜಿ, ಅಕ್ಕಿಆಲೂರಿನ ಶಿವಬಸವ ಸ್ವಾಮೀಜಿ, ಸಂಜೀವಕುಮಾರ ನೀರಲಗಿ, ಕೆ. ಮಂಜಪ್ಪ, ಮಹೇಶ ಚಿನ್ನಿಕಟ್ಟಿ, ರಾಜಶೇಖರ ಮಾಗನೂರ, ಶಿವರಾಜ ಸಜ್ಜನರ, ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಅಗಡಿ, ಎಂ.ಎಸ್. ಕೋರಿಶೆಟ್ಟರ, ನಿರಂಜನ ತಾಂಡೂರ, ಮಹಾಂತೇಶ ಮಳಿಮಠ, ಪಿ.ಡಿ. ಶಿರೂರ, ಬಿ. ಬಸವರಾಜ, ಶಿವಬಸಪ್ಪ ಹಲಗಣ್ಣನವರ, ಸುಭಾಷ್ ಹುರಳಿಕುಪ್ಪಿ, ಅಶೋಕ ಹೇರೂರ, ಆನಂದ ಅಟವಾಳಗಿ, ಕೃಷ್ಣಮೂರ್ತಿ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.
ಅಕ್ಕನ ಬಳಗದ ಸದಸ್ಯರು ಪ್ರಾರ್ಥಿಸಿದರು. ಎಸ್.ಎಸ್.ಮುಷ್ಠಿ ಸ್ವಾಗತಿಸಿದರು. ಶಿವಬಸವ ಮರಳಿಹಳ್ಳಿ ನಿರೂಪಿಸಿದರು. ಕೊನೆಯಲ್ಲಿ ಶಿವಯೋಗಿ ವಾಲಿಶೆಟ್ಟರ ವಂದಿಸಿದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಪಂಡಿತ ಪುಟ್ಟರಾಜ ಗವಾಯಿಗಳ ಜಯಂತಿ ಆಚರಣೆ

ಪಂಡಿತ ಪುಟ್ಟರಾಜ ಗವಾಯಿಗಳ ಜಯಂತಿ ಆಚರಣೆ ಹಾವೇರಿ : ಭಾರತೀಯ ರೆಡ್ ಕ್ರಾಸ್...

ಹಾವೇರಿಯಲ್ಲಿ  ಹೋಳಿ ಹಬ್ಬದ ನಿಮಿತ್ತ  ಮಾರ್ಚ್ ೪ರವರೆಗೆ ವಿಶೇಷ ಕಾರ್ಯಕ್ರಮ

ಹಾವೇರಿಯಲ್ಲಿ  ಹೋಳಿ ಹಬ್ಬದ ನಿಮಿತ್ತ  ಮಾರ್ಚ್ ೪ರವರೆಗೆ ವಿಶೇಷ ಕಾರ್ಯಕ್ರಮ ಹಾವೇರಿ:...

ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಡಿಸಿಸಿ ಬ್ಯಾಂಕ್: ಬಹುದಿನಗಳ ಕನಸು ನನಸು: ಸಂಸದ ಬೊಮ್ಮಾಯಿ

ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಡಿಸಿಸಿ ಬ್ಯಾಂಕ್: ಬಹುದಿನಗಳ ಕನಸು...

ವಚನ ಸಾಹಿತ್ಯದ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿದ ಕವಿ ಸರ್ವಜ್ಞ -ಅಧ್ಯಕ್ಷ ಹಿರೇಮಠ

    ವಚನ ಸಾಹಿತ್ಯದ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿದ ಕವಿ ಸರ್ವಜ್ಞ -ಅಧ್ಯಕ್ಷ ಹಿರೇಮಠ ಹಾವೇರಿ:...