
ಮನೆಯ ಜಿಪಿಎಸ್ ಮಾಡಿಸಿಕೊಡಲು ಲಂಚ ಸ್ವೀಕಾರ, ಕಾರಡಗಿ ಗ್ರಾಮ ಪಂಚಾಯಿತಿ ಸದಸ್ಯನ ಬಂಧನ
ಹಾವೇರಿ:ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿಕೊಡಲು ಲಂಚ ಸ್ವೀಕರಿಸಿದ ಗ್ರಾಮ ಪಂಚಾಯತಿ ಸದಸ್ಯ ನನ್ನು ನ.೨೨ರಂದು ಸಂಜೆ ಲೋಕಾಯುಕ್ತ ಪೊಲೀಸ್ ರು ಬಂಧಿಸಿದ್ದಾರೆ.
ಸವಣೂರು ತಾಲ್ಲೂಕಿನ ಕಾರಡಗಿ ಗ್ರಾಮದ ದಾದಾಪೀರ ಮಹೃದಗೌಸ ಲೋಹಾರ ಇವರಿಗೆ ಮನೆ ಕಟ್ಟಿಸಿಕೊಳ್ಳಲು ಸರ್ಕಾರದಿಂದ 5 ಲಕ್ಷ ಹಣ ಮಂಜೂರಾಗಿದ್ದು, ಕಾರಡಗಿ ಗ್ರಾಮ ಪಂಚಾಯಿತಿ ಸದಸ್ಯನಾದ ಮಹಮದ್ ಜಾಫರ ಸಂಶಿ
ಪ್ರಕರಣದ ಪಿರ್ಯಾದಿದಾರ ದಾದಪೀರನ ಮನೆಯ ಜಿಪಿಎಸ್ ಮಾಡಿಸಿಕೊಡಲು ರೂ 40,000/- ಗಳಿಗೆ ಬೇಡಿಕೆ ಇಟ್ಟು ಮುಂಗಡವಾಗಿ ರೂ 20,000/- ಲಂಚದ ಹಣವನ್ನು ಪಡೆದುಕೊಳ್ಳುವಾಗ ಯಶಸ್ವಿಯಾಗಿ ಲೋಕಾಯುಕ್ತ ಪೊಲೀಸರು ದಾಳಿಯ ಟ್ರ್ಯಾಪ್ ಮಾಡಿದ್ದಾರೆ.
ಪ್ರಕರಣದ ತನಿಖೆಯನ್ನು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಕೈಗೊಂಡು, ಬಿ ಪಿ ಚಂದ್ರಶೇಖರ, ಡಿವೈಎಸ್ಪಿ ಕರ್ನಾಟಕ ಲೋಕಾಯುಕ್ತರವರ ನೇತೃತ್ವದಲ್ಲಿ ತನಿಖಾಧಿಕಾರಿಗಳಾದ ಆಂಜನೇಯ ಎನ್ಎಚ್, ಪೊಲೀಸ್ ನಿರೀಕ್ಷಕರು, ಮುಸ್ತಾಕ್ ಅಹ್ಮದ್ ಶೇಖ, ಪೊಲೀಸ್ ನಿರೀಕ್ಷಕರು’ ಮಂಜುನಾಥ ಪಂಡಿತ್ ಪಿ ಎನ್, ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ಎಮ್ ಕೆ ನದಾಫ, ಟಿ ಇ ತಿರುಮಲೆ, ಬಿ ಎಮ್ ಕರ್ಜಗಿ, ಎಮ್ ಕೆ ಲಕ್ಷ್ಮೀಶ್ವರ, ಆನಂದ ತಳಕಲ್ಲ, ಎಸ್ಎನ್ ಕಡಕೋಳ, ಎ ಜಿ ಶೆಟ್ಟರ, ಬಸವರಾಜ ಸಂಕಣ್ಣನವರ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿರುತ್ತಾರೆ.
ಸದರಿ ಆರೋಪಿತರನ್ನು ಕಾರಡಗಿ ಗ್ರಾಮದ ಹರಿಜನ ಕೇರಿಯ ದ್ಯಾಮವ್ವನಪಾದಗಟ್ಟೆ ಹತ್ತಿರ ದಸ್ತಗಿರಿ ಮಾಡಿದ್ದು, ತನಿಖೆ ಮುಂದುವರೆದಿದೆ.