ಮೇ.೩೧ಕ್ಕೆ ಹಾವೇರಿಯಲ್ಲಿ ಉದ್ಯೋಗ ಮೇಳ-ಆನ್ಲೈನ್ ಗೇಮ್ ನಿಷೇಧಕ್ಕೆ ಒತ್ತಾಯ
ಹಾವೇರಿ: ಹಾವೇರಿಯಲ್ಲಿ ಮೇ.೩೧ ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಹಮ್ಮಿ ಕೊಳ್ಳಲಾಗುವುದು. ಉದ್ಯೋಗ ಮೇಳವನ್ನು ಕ್ಷೇತ್ರಗಳಲ್ಲಿ ಬರುವ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಪದವೀಧರರ ಹಿತರಕ್ಷಣಾ ವೇದಿಕೆಯಿಂದ ಆಯೋಜಿಸಲಾಗುವುದು ಎಂದು ಸಂಘಟನೆಯ ರಾಜ್ಯಾಧ್ಯಕ್ಷ ರಾಘವೇಂದ್ರ ಬಾಸೂರು ತಿಳಿಸಿದರು.
ಬುಧವಾರ ಇಲ್ಲಿನ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಪದವೀಧರರ ಹಿತರಕ್ಷಣಾ ವೇದಿಕೆಯಿಂದ ಉದ್ಯೋಗ ಮೇಳ ಸೇರಿದಂತೆ ವಿದ್ಯಾವಂತ ಪದವಿಧರರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಂಪ್ಯೂಟರ ತರಬೇತಿ ಸೇರಿದಂತೆ ಅನೇಕ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ನೀರುದ್ಯೋಗಿಗಳಿಗೆ ಉದ್ಯೋಗ ಮತ್ತು ಸ್ವ ಉದ್ಯೋಗಕ್ಕೆ ಅವಕಾಶವನ್ನು ಕಲ್ಪಸಿಕೊಡಲಾಗುವುದು ಎಂದರು.
ಇತ್ತೀಚಿನ ದಿನಗಳಲ್ಲಿ ಕೆಲವು ವಿದ್ಯಾವಂತರು ಸರ್ಕಾರವೇ ಪರವಾನಿಗೆ ನೀಡಿರುವ ನಾನಾ ವೆಬ್ಸೈಟ್ಗಳಲ್ಲಿ ಲಭ್ಯ ಇರುವ ಆನ್ಲೈನ್ಗೇಮ್ ಚಟಕ್ಕೆ ದಾಸರಾಗಿರುವುದು ವಿಷಾದದ ಸಂಗತಿಯಾಗಿದೆ. ಪರೀಕ್ಷಾ ಶುಲ್ಕ ಕಟ್ಟಲು ಪಾಲಕರು ನೀಡಿದ ಹಣವನ್ನು ಆನ್ಲೈನ್ ಗೇಮ್ನಲ್ಲಿ ಆಡಿ ಹಣ ಕಳೆದುಕೊಂಡ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ರೀತಿಯ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸರ್ಕಾರಗಳು ತಡ ಮಾಡದೇ ತಕ್ಷಣ ಈ ಆನ್ಲೈನ್ ಗೇಮ್ ನಿಷೇಧಿಸಬೇಕು, ಈ ಗೇಮಿಂಗ್ ವೆಬ್ಸೈಟ್ಗಳನ್ನು ತಕ್ಷಣ ಬಂದ್ ಮಾಡಬೇಕೆಂದು ಅವರು ಒತ್ತಾಯಿಸಿದರು.
ಸರಕಾರಿ ನೌಕರರ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಮುಂದುವರೆಸಲು ಕರ್ನಾಟಕ ರಾಜ್ಯ ಪದವೀಧರರ ಹಿತರಕ್ಷಣಾ ವೇದಿಕೆಯ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಕಳೆದ ಒಂದು ವರ್ಷದಿಂದ ಸರ್ಕಾರಕ್ಕೆ ಪತ್ರಗಳನ್ನು ಬರೆಯುವ ಮೂಲಕ ಪತ್ರ ಚಳುವಳಿ ಮಾಡಲಾಗಿದೆ. ಚುಣಾವಣೆಯಲ್ಲಿ ಪದವೀಧgರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ಪದವಿಧರರ ಎನ್ರೋಲ್ ಮೆಂಟ್ ಆರಂಭಿಸಲಾಗಿದೆ. ಈಗಾಗಲೇ ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲಿ ಹತ್ತಾರು ಸಾವಿರ ಪದವಿಧರರ ಎನ್ರೋಲ್ ಮೆಂಟ್ ಮಾಡಲಾಗಿದೆ. ಆ ಮೂಲಕ ಮತದಾನ ಹಾಗೂ ಮತ ಚಲಾವಣೆ ಬಗ್ಗೆ ಅರಿವು ಮೂಡಿಸುತ್ತಿರುವುದಾಗಿ ಅವರು ಹೇಳಿದರು.
ಪಶ್ಚಿಮ ಪದವೀಧರರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ: ನಾನು ಬಿಇ ಇಂಜನಿಯರಿಂಗ್ ಪದವಿಧರನಾಗಿದ್ದು, ಸ್ವಯಂ ಉದ್ಯೋಗ ಆರಂಭಿಸುವ ಮೂಲಕ ಸಾಮಾಜಿಕ ರಂಗದಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವೆ. ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ದೊಡ್ಡ ರಾಜಕಾರಣಿಗಳ ಪುತ್ರರು, ದೊಡ್ಡವರು ಆಯ್ಕೆಯಾಗುತ್ತಾ ಬಂದಿದ್ದಾರೆ. ಇವರಿಂದ ಪದವೀಧರರಿಗೆ ನ್ಯಾಯ ಸಿಕ್ಕಿಲ್ಲ ಎನ್ನುವುದು ನನ್ನ ಅನುಭವ, ಹೀಗಾಗಿ ನಾನು ಸಹ ಪಶ್ಚಿಮ ಪದವೀಧರರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಯಾವ ರಾಜಕೀಯ ಪಕ್ಷದಿಂದ ಎನ್ನುವುದನ್ನು ಇನ್ನು ತೀರ್ಮಾನಿಸಿಲ್ಲ, ರಾಷ್ಟ್ರೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿ ಹೌದು ಎಂದು ರಾಘವೇಂದ್ರ ಬಾಸೂರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಉಪಾಧ್ಯಕ್ಷ ಶಂಕರ ಮೆಹರವಾಡೆ , ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಪಾಟೀಲ್, ನಗರಸಭೆಯ ಸದಸ್ಯ ಗಣೇಶ ಭಿಷ್ಟಣ್ಣನವರ್ ಮಾಜಿ ಸದಸ್ಯ ಬಾಬಣ್ಣ ಮೊಮಿನಗಾರ, ಈರಣ್ಣ, ಸಂತೋಷ್ ಬಾಸೂರು ಮತ್ತಿತರರು ಇದ್ದರು.
ಮೇ.೩೧ಕ್ಕೆ ಹಾವೇರಿಯಲ್ಲಿ ಉದ್ಯೋಗ ಮೇಳ-ಆನ್ಲೈನ್ ಗೇಮ್ ನಿಷೇಧಕ್ಕೆ ಒತ್ತಾಯ
Date:
ಮೇ.೩೧ಕ್ಕೆ ಹಾವೇರಿಯಲ್ಲಿ ಉದ್ಯೋಗ ಮೇಳ-ಆನ್ಲೈನ್ ಗೇಮ್ ನಿಷೇಧಕ್ಕೆ ಒತ್ತಾಯ
ಹಾವೇರಿ: ಹಾವೇರಿಯಲ್ಲಿ ಮೇ.೩೧ ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಹಮ್ಮಿ ಕೊಳ್ಳಲಾಗುವುದು. ಉದ್ಯೋಗ ಮೇಳವನ್ನು ಕ್ಷೇತ್ರಗಳಲ್ಲಿ ಬರುವ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಪದವೀಧರರ ಹಿತರಕ್ಷಣಾ ವೇದಿಕೆಯಿಂದ ಆಯೋಜಿಸಲಾಗುವುದು ಎಂದು ಸಂಘಟನೆಯ ರಾಜ್ಯಾಧ್ಯಕ್ಷ ರಾಘವೇಂದ್ರ ಬಾಸೂರು ತಿಳಿಸಿದರು.
ಬುಧವಾರ ಇಲ್ಲಿನ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಪದವೀಧರರ ಹಿತರಕ್ಷಣಾ ವೇದಿಕೆಯಿಂದ ಉದ್ಯೋಗ ಮೇಳ ಸೇರಿದಂತೆ ವಿದ್ಯಾವಂತ ಪದವಿಧರರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಂಪ್ಯೂಟರ ತರಬೇತಿ ಸೇರಿದಂತೆ ಅನೇಕ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ನೀರುದ್ಯೋಗಿಗಳಿಗೆ ಉದ್ಯೋಗ ಮತ್ತು ಸ್ವ ಉದ್ಯೋಗಕ್ಕೆ ಅವಕಾಶವನ್ನು ಕಲ್ಪಸಿಕೊಡಲಾಗುವುದು ಎಂದರು.
ಇತ್ತೀಚಿನ ದಿನಗಳಲ್ಲಿ ಕೆಲವು ವಿದ್ಯಾವಂತರು ಸರ್ಕಾರವೇ ಪರವಾನಿಗೆ ನೀಡಿರುವ ನಾನಾ ವೆಬ್ಸೈಟ್ಗಳಲ್ಲಿ ಲಭ್ಯ ಇರುವ ಆನ್ಲೈನ್ಗೇಮ್ ಚಟಕ್ಕೆ ದಾಸರಾಗಿರುವುದು ವಿಷಾದದ ಸಂಗತಿಯಾಗಿದೆ. ಪರೀಕ್ಷಾ ಶುಲ್ಕ ಕಟ್ಟಲು ಪಾಲಕರು ನೀಡಿದ ಹಣವನ್ನು ಆನ್ಲೈನ್ ಗೇಮ್ನಲ್ಲಿ ಆಡಿ ಹಣ ಕಳೆದುಕೊಂಡ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ರೀತಿಯ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸರ್ಕಾರಗಳು ತಡ ಮಾಡದೇ ತಕ್ಷಣ ಈ ಆನ್ಲೈನ್ ಗೇಮ್ ನಿಷೇಧಿಸಬೇಕು, ಈ ಗೇಮಿಂಗ್ ವೆಬ್ಸೈಟ್ಗಳನ್ನು ತಕ್ಷಣ ಬಂದ್ ಮಾಡಬೇಕೆಂದು ಅವರು ಒತ್ತಾಯಿಸಿದರು.
ಸರಕಾರಿ ನೌಕರರ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಮುಂದುವರೆಸಲು ಕರ್ನಾಟಕ ರಾಜ್ಯ ಪದವೀಧರರ ಹಿತರಕ್ಷಣಾ ವೇದಿಕೆಯ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಕಳೆದ ಒಂದು ವರ್ಷದಿಂದ ಸರ್ಕಾರಕ್ಕೆ ಪತ್ರಗಳನ್ನು ಬರೆಯುವ ಮೂಲಕ ಪತ್ರ ಚಳುವಳಿ ಮಾಡಲಾಗಿದೆ. ಚುಣಾವಣೆಯಲ್ಲಿ ಪದವೀಧgರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ಪದವಿಧರರ ಎನ್ರೋಲ್ ಮೆಂಟ್ ಆರಂಭಿಸಲಾಗಿದೆ. ಈಗಾಗಲೇ ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲಿ ಹತ್ತಾರು ಸಾವಿರ ಪದವಿಧರರ ಎನ್ರೋಲ್ ಮೆಂಟ್ ಮಾಡಲಾಗಿದೆ. ಆ ಮೂಲಕ ಮತದಾನ ಹಾಗೂ ಮತ ಚಲಾವಣೆ ಬಗ್ಗೆ ಅರಿವು ಮೂಡಿಸುತ್ತಿರುವುದಾಗಿ ಅವರು ಹೇಳಿದರು.
ಪಶ್ಚಿಮ ಪದವೀಧರರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ: ನಾನು ಬಿಇ ಇಂಜನಿಯರಿಂಗ್ ಪದವಿಧರನಾಗಿದ್ದು, ಸ್ವಯಂ ಉದ್ಯೋಗ ಆರಂಭಿಸುವ ಮೂಲಕ ಸಾಮಾಜಿಕ ರಂಗದಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವೆ. ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ದೊಡ್ಡ ರಾಜಕಾರಣಿಗಳ ಪುತ್ರರು, ದೊಡ್ಡವರು ಆಯ್ಕೆಯಾಗುತ್ತಾ ಬಂದಿದ್ದಾರೆ. ಇವರಿಂದ ಪದವೀಧರರಿಗೆ ನ್ಯಾಯ ಸಿಕ್ಕಿಲ್ಲ ಎನ್ನುವುದು ನನ್ನ ಅನುಭವ, ಹೀಗಾಗಿ ನಾನು ಸಹ ಪಶ್ಚಿಮ ಪದವೀಧರರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಯಾವ ರಾಜಕೀಯ ಪಕ್ಷದಿಂದ ಎನ್ನುವುದನ್ನು ಇನ್ನು ತೀರ್ಮಾನಿಸಿಲ್ಲ, ರಾಷ್ಟ್ರೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿ ಹೌದು ಎಂದು ರಾಘವೇಂದ್ರ ಬಾಸೂರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಉಪಾಧ್ಯಕ್ಷ ಶಂಕರ ಮೆಹರವಾಡೆ , ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಪಾಟೀಲ್, ನಗರಸಭೆಯ ಸದಸ್ಯ ಗಣೇಶ ಭಿಷ್ಟಣ್ಣನವರ್ ಮಾಜಿ ಸದಸ್ಯ ಬಾಬಣ್ಣ ಮೊಮಿನಗಾರ, ಈರಣ್ಣ, ಸಂತೋಷ್ ಬಾಸೂರು ಮತ್ತಿತರರು ಇದ್ದರು.