ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ನಿಂದ ಬ್ರಹತ್ ಪ್ರತಿಭಟನೆ
“ರಾಜ್ಯಪಾಲ ಹಟಾವೋ, ಕಾನೂನು ಬಚಾವೋ”
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ, ಸೋಮವಾರ ಜಿಲ್ಲಾಕಾಂಗ್ರೆಸ್ವತಿಯಿಂದ ಸಾವಿರಾರು ಕಾರ್ಯಕರ್ತರು, ಮುಖಂಡರು ನಗರದಲ್ಲಿನ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬ್ರಹತ್ ಪ್ರತಿಭಟನೆ ನಡೆಸಿ, ಹೆದ್ದಾರಿ ತಡೆನಡೆಸಿ “ರಾಜ್ಯಪಾಲ ಹಟಾವೋ, ಕಾನೂನು ಬಚಾವೋ”ಚಳುವಳಿ ನಡೆಸಿ ರಾಜ್ಯಪಾಲರನ್ನು ವಜಾಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಯಾವುದೇ ಕಪ್ಪುಚುಕ್ಕೆ ಇಲ್ಲದೇ ಅಧಿಕಾರ ನಡೆಸಿರುವ, ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರೀಯತೆ ಸಹಿಸಲಾರದೇ ರಾಜ್ಯಪಾಲರ ಕಚೇರಿಯನ್ನು ರಾಜಕೀಯ ದುರದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಪಕ್ಷ ಸಂವಿಧಾನದ ವಿರುದ್ಧ ನಡೆದುಕೊಳ್ಳುತ್ತಿದೆ. ರಾಜ್ಯಪಾಲರು ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೂಲಕ ವಿರೋಧ ಪಕ್ಷದ ಆಡಳಿತದ ರಾಜ್ಯ ಸರ್ಕಾರಗಳನ್ನು ಬಿಜೆಪಿ ಅಸ್ಥಿರಗೊಳಿಸುತ್ತಿರುವುದು ಈಗಾಗಲೇ ಜನರಿಗೆ ತಿಳಿದಿದೆ.
ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನಾರ್ಹವಾಗಿದೆ. ರಾಜ್ಯದ ಜನತೆ ಸಿದ್ದರಾಮಯ್ಯ ಅವರ ಪರ ನಿಂತಿದೆ. ಕಾನೂನಾತ್ಮಕ ಹೋರಾಟಕ್ಕೆ ನಾವು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಯ ಸರ್ವಾಧಿಕಾರಿ ಧೋರಣೆಯನ್ನು ಜನರಿಗೆ ತಿಳಿಸುವ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದ ಅವರು ರಾಜ್ಯಪಾಲರ ಮುಂದೆ ಅನೇಕ ಪ್ರಕರಣಗಳು ಹಲವು ವರ್ಷಗಳಿಂದ ಬಿದ್ದಿದ್ದಾವೆ. ಆದರೆ ಅವರು ನಿರ್ದಿಷ್ಟವಾಗಿ ಈ ಪ್ರಕರಣವನ್ನು ಎತ್ತಿಕೊಂಡಿರುವ ಉದ್ದೇಶವೆಂದರೆ ಜನರಿಂದ ಚುನಾಯಿತವಾದ ಸರ್ಕಾರವನ್ನು ಅಸ್ಥಿರಗೊಳಿಸುವುದಾಗಿದೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವುದು ಬಿಜೆಪಿಯವರ ಮನಸ್ಸಿನಲ್ಲಿದೆ. ಇದು ೨೦೧೬ರಿಂದ ನಿರಂತರವಾಗಿ ನಡೆದಿದೆ ಎಂದು ದೂರಿದರು.
ಶಾಸಕರುಗಳಾದ ಯು.ಬಿ.ಬಣಕಾರ, ಅರಣ್ಯ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮತ್ತಿತರರು ಮಾತನಾಡಿ ನುಡಿದಂತೆ ನಡೆದು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ಹಾಗೂ ಕೇಂದ್ರ ಸರ್ಕಾರವು ಷಡ್ಯಂತ್ರ ರೂಪಿಸಿದ್ದಾರೆ. ಬಿಜೆಪಿ ಪ್ರಮುಖರ ಒತ್ತಡಕ್ಕೆ ಮಣಿದು ರಾಜ್ಯಪಾಲರು ಯಾವುದೇ ದಾಖಲೆ ಪರಿಶೀಲನೆ ನಡೆಸದೆ ನೇರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.
ರಾಜ್ಯಪಾಲರು ರಾಜಭವನವನ್ನು ಬಿಜೆಪಿ ಕಚೇರಿಯಾಗಿ ಪರಿವರ್ತಿಸಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ. ಈ ಮೂಲಕ ಗೌರವಯುತ ಸ್ಥಾನದಲ್ಲಿರುವ ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟ್ ಆಗಿ ಕೆಲಸ ಮಾಡಿ ತಮ್ಮ ಘನತೆ ಕಳೆದುಕೊಂಡಿದ್ದಾರೆ. ಇದು ರಾಜ್ಯಪಾಲರ ಗೌರವಯುತ ಸ್ಥಾನಕ್ಕೆ ಕಳಂಕ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ೫ ಗ್ಯಾರಂಟಿ ಯೋಜನೆಗಳ ಮೂಲಕ ಜನಪರ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಹಾಗೂ ಕೇಂದ್ರ ಸರ್ಕಾರವು ಅಸ್ಥಿರಗೊಳಿಸುವ ವಿಫಲ ಪ್ರಯತ್ನ ನಡೆಸುವ ಮೂಲಕ ಸಂಚು ರೂಪಿಸಿದ್ದಾರೆ ಎಂದು ಅವರು ಆರೋಪಿಸಿದರು.
ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದ, ಸಚಿವರು, ಶಾಸಕರು, ಸರ್ಕಾರ ಹಾಗೂ ಇಡೀ ರಾಜ್ಯದ ಜನತೆ ಸಿದ್ದರಾಮಯ್ಯ ಅವರ ಜೊತೆಗಿದೆ.ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರ ಸರ್ಕಾರದ ಷಡ್ಯಂತ್ರಕ್ಕೆ ನಾವು ಸುಮ್ಮನೆ ಕೂರಲ್ಲ ನಾವು ಹೋರಾಟ ಮಾಡ್ತೀವಿ ಹಾಗೂ ಬಿಜೆಪಿ, ಜೆಡಿಎಸ್ ಅವಧಿಯ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವ ಮೂಲಕ ಅವರನ್ನು ಬೆತ್ತಲೆ ಮಾಡುತ್ತೇವೆ ಎಂದರು.
ಇಲ್ಲಿನ ಮುರುಗಾಮಠದಿಂದ ಆರಂಭವಾದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಪರ ಜಯಕಾರ ಹಾಕಿ, ರಾಜ್ಯಪಾಲರ ಹಾಗೂ ಬಿಜೆಪಿ-ಜೆಡಿಎಸ್ ಮುಖಂಡರ ವಿರುದ್ಧ ಧಿಕ್ಕಾರಕೂಗಿದರು. ಪ್ರತಿಭಟನೆಯಲ್ಲಿ ಪ್ರಮುಖರಾದ ಸೈಯದ್ ಅಜ್ಜಫೀರ್ಖಾದ್ರಿ, ಎಂ.ಎಂ.ಹಿರೇಮಠ, ಶ್ರೀಧರ ದೊಡ್ಡಮನಿ, ಡಾ.ಪ್ರಕಾಶಗೌಡ ಪಾಟೀಲ, ಯಾಸೀರ್ಖಾನ್ ಪಠಾಣ, ಗುರುನಗೌಡ ಪಾಟೀಲ,ಅಶೋಕ ಹರನಗಿರಿ, ಚಂದ್ರಶೇಖರ ಮುದುಕಣ್ಣನವರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ನಿಂದ ಬ್ರಹತ್ ಪ್ರತಿಭಟನೆ “ರಾಜ್ಯಪಾಲ ಹಟಾವೋ, ಕಾನೂನು ಬಚಾವೋ”
Date:
ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ನಿಂದ ಬ್ರಹತ್ ಪ್ರತಿಭಟನೆ
“ರಾಜ್ಯಪಾಲ ಹಟಾವೋ, ಕಾನೂನು ಬಚಾವೋ”
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ, ಸೋಮವಾರ ಜಿಲ್ಲಾಕಾಂಗ್ರೆಸ್ವತಿಯಿಂದ ಸಾವಿರಾರು ಕಾರ್ಯಕರ್ತರು, ಮುಖಂಡರು ನಗರದಲ್ಲಿನ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬ್ರಹತ್ ಪ್ರತಿಭಟನೆ ನಡೆಸಿ, ಹೆದ್ದಾರಿ ತಡೆನಡೆಸಿ “ರಾಜ್ಯಪಾಲ ಹಟಾವೋ, ಕಾನೂನು ಬಚಾವೋ”ಚಳುವಳಿ ನಡೆಸಿ ರಾಜ್ಯಪಾಲರನ್ನು ವಜಾಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಯಾವುದೇ ಕಪ್ಪುಚುಕ್ಕೆ ಇಲ್ಲದೇ ಅಧಿಕಾರ ನಡೆಸಿರುವ, ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರೀಯತೆ ಸಹಿಸಲಾರದೇ ರಾಜ್ಯಪಾಲರ ಕಚೇರಿಯನ್ನು ರಾಜಕೀಯ ದುರದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಪಕ್ಷ ಸಂವಿಧಾನದ ವಿರುದ್ಧ ನಡೆದುಕೊಳ್ಳುತ್ತಿದೆ. ರಾಜ್ಯಪಾಲರು ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೂಲಕ ವಿರೋಧ ಪಕ್ಷದ ಆಡಳಿತದ ರಾಜ್ಯ ಸರ್ಕಾರಗಳನ್ನು ಬಿಜೆಪಿ ಅಸ್ಥಿರಗೊಳಿಸುತ್ತಿರುವುದು ಈಗಾಗಲೇ ಜನರಿಗೆ ತಿಳಿದಿದೆ.
ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನಾರ್ಹವಾಗಿದೆ. ರಾಜ್ಯದ ಜನತೆ ಸಿದ್ದರಾಮಯ್ಯ ಅವರ ಪರ ನಿಂತಿದೆ. ಕಾನೂನಾತ್ಮಕ ಹೋರಾಟಕ್ಕೆ ನಾವು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಯ ಸರ್ವಾಧಿಕಾರಿ ಧೋರಣೆಯನ್ನು ಜನರಿಗೆ ತಿಳಿಸುವ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದ ಅವರು ರಾಜ್ಯಪಾಲರ ಮುಂದೆ ಅನೇಕ ಪ್ರಕರಣಗಳು ಹಲವು ವರ್ಷಗಳಿಂದ ಬಿದ್ದಿದ್ದಾವೆ. ಆದರೆ ಅವರು ನಿರ್ದಿಷ್ಟವಾಗಿ ಈ ಪ್ರಕರಣವನ್ನು ಎತ್ತಿಕೊಂಡಿರುವ ಉದ್ದೇಶವೆಂದರೆ ಜನರಿಂದ ಚುನಾಯಿತವಾದ ಸರ್ಕಾರವನ್ನು ಅಸ್ಥಿರಗೊಳಿಸುವುದಾಗಿದೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವುದು ಬಿಜೆಪಿಯವರ ಮನಸ್ಸಿನಲ್ಲಿದೆ. ಇದು ೨೦೧೬ರಿಂದ ನಿರಂತರವಾಗಿ ನಡೆದಿದೆ ಎಂದು ದೂರಿದರು.
ಶಾಸಕರುಗಳಾದ ಯು.ಬಿ.ಬಣಕಾರ, ಅರಣ್ಯ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮತ್ತಿತರರು ಮಾತನಾಡಿ ನುಡಿದಂತೆ ನಡೆದು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ಹಾಗೂ ಕೇಂದ್ರ ಸರ್ಕಾರವು ಷಡ್ಯಂತ್ರ ರೂಪಿಸಿದ್ದಾರೆ. ಬಿಜೆಪಿ ಪ್ರಮುಖರ ಒತ್ತಡಕ್ಕೆ ಮಣಿದು ರಾಜ್ಯಪಾಲರು ಯಾವುದೇ ದಾಖಲೆ ಪರಿಶೀಲನೆ ನಡೆಸದೆ ನೇರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.
ರಾಜ್ಯಪಾಲರು ರಾಜಭವನವನ್ನು ಬಿಜೆಪಿ ಕಚೇರಿಯಾಗಿ ಪರಿವರ್ತಿಸಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ. ಈ ಮೂಲಕ ಗೌರವಯುತ ಸ್ಥಾನದಲ್ಲಿರುವ ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟ್ ಆಗಿ ಕೆಲಸ ಮಾಡಿ ತಮ್ಮ ಘನತೆ ಕಳೆದುಕೊಂಡಿದ್ದಾರೆ. ಇದು ರಾಜ್ಯಪಾಲರ ಗೌರವಯುತ ಸ್ಥಾನಕ್ಕೆ ಕಳಂಕ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ೫ ಗ್ಯಾರಂಟಿ ಯೋಜನೆಗಳ ಮೂಲಕ ಜನಪರ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಹಾಗೂ ಕೇಂದ್ರ ಸರ್ಕಾರವು ಅಸ್ಥಿರಗೊಳಿಸುವ ವಿಫಲ ಪ್ರಯತ್ನ ನಡೆಸುವ ಮೂಲಕ ಸಂಚು ರೂಪಿಸಿದ್ದಾರೆ ಎಂದು ಅವರು ಆರೋಪಿಸಿದರು.
ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದ, ಸಚಿವರು, ಶಾಸಕರು, ಸರ್ಕಾರ ಹಾಗೂ ಇಡೀ ರಾಜ್ಯದ ಜನತೆ ಸಿದ್ದರಾಮಯ್ಯ ಅವರ ಜೊತೆಗಿದೆ.ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರ ಸರ್ಕಾರದ ಷಡ್ಯಂತ್ರಕ್ಕೆ ನಾವು ಸುಮ್ಮನೆ ಕೂರಲ್ಲ ನಾವು ಹೋರಾಟ ಮಾಡ್ತೀವಿ ಹಾಗೂ ಬಿಜೆಪಿ, ಜೆಡಿಎಸ್ ಅವಧಿಯ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವ ಮೂಲಕ ಅವರನ್ನು ಬೆತ್ತಲೆ ಮಾಡುತ್ತೇವೆ ಎಂದರು.
ಇಲ್ಲಿನ ಮುರುಗಾಮಠದಿಂದ ಆರಂಭವಾದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಪರ ಜಯಕಾರ ಹಾಕಿ, ರಾಜ್ಯಪಾಲರ ಹಾಗೂ ಬಿಜೆಪಿ-ಜೆಡಿಎಸ್ ಮುಖಂಡರ ವಿರುದ್ಧ ಧಿಕ್ಕಾರಕೂಗಿದರು. ಪ್ರತಿಭಟನೆಯಲ್ಲಿ ಪ್ರಮುಖರಾದ ಸೈಯದ್ ಅಜ್ಜಫೀರ್ಖಾದ್ರಿ, ಎಂ.ಎಂ.ಹಿರೇಮಠ, ಶ್ರೀಧರ ದೊಡ್ಡಮನಿ, ಡಾ.ಪ್ರಕಾಶಗೌಡ ಪಾಟೀಲ, ಯಾಸೀರ್ಖಾನ್ ಪಠಾಣ, ಗುರುನಗೌಡ ಪಾಟೀಲ,ಅಶೋಕ ಹರನಗಿರಿ, ಚಂದ್ರಶೇಖರ ಮುದುಕಣ್ಣನವರ ಸೇರಿದಂತೆ ಅನೇಕರು ಭಾಗವಹಿಸಿದ್ದರು.