ವಂಶವೃಕ್ಷ ನೀಡಲು ಲಂಚ-ಉಪ‌ತಹಶೀಲ್ದಾರ, ಕಂಪ್ಯೂಟ‌ರ್ ಆಪರೇಟ‌ರ್ ಲೋಕಾ ಬಲೆಗೆ

Date:

ವಂಶವೃಕ್ಷ ನೀಡಲು ಲಂಚ-ಉಪ‌ತಹಶೀಲ್ದಾರ, ಕಂಪ್ಯೂಟ‌ರ್ ಆಪರೇಟ‌ರ್ ಲೋಕಾ ಬಲೆಗೆ
ಹಾವೇರಿ: ವಂಶವೃಕ್ಷ ನೀಡಲು ಲಂಚ ಪಡೆದ ಆರೋಪದಡಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯ ಉಪ ತಹಶೀಲ್ದಾ‌ರ್ ನಾಗರಾಜ ಸೂರ್ಯವಂಶಿ ಹಾಗೂ ಕಂಪ್ಯೂಟ‌ರ್ ಆಪರೇಟ‌ರ್ ಕಿರಣ ಮುದಕಣ್ಣನವರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಗಂಗಾಧರ ರಾಮಪ್ಪ ಕ್ಯಾತನಕೇರಿ ಎಂಬುವವರು ಲಂಚದ ಬಗ್ಗೆ ಲೋಕಾಯುಕ್ತ ಜಿಲ್ಲಾ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ದಾಖಲಿಸಿಕೊಂಡಿದ್ದ ಪೊಲೀಸರು, ಕಾರ್ಯಾಚರಣೆ ನಡೆಸಿ ಲಂಚದ ಹಣದ ಸಮೇತ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.
ದೂರುದಾರ ಗಂಗಾಧರ ಅವರ ಸಂಬಂಧಿ ದಯಾನಂದ ರುದ್ರಪ್ಪ ಯಲಿಗಾರ ಅವರು ತಮ್ಮ ವಂಶವೃಕ್ಷ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಉಪ ತಹಶೀಲ್ದಾ‌ರ್ ನಾಗರಾಜ ಹಾಗೂ ಕಂಪ್ಯೂಟ‌ರ್ ಆಪರೇಟರ್ ಕಿರಣ ಮುದಕಣನವರ ವಂಶವೃಕ್ಷ ನೀಡಲು ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇಬ್ಬರೂ ಆರೋಪಿಗಳು, ನಾಡಕಚೇರಿಯಲ್ಲಿಯೇ ದೂರುದಾರರಿಂದ ಗುರುವಾರ ₹2,000 ಲಂಚ ಪಡೆದಿದ್ದರು. ಇದೇ ಸಂದರ್ಭದಲ್ಲಿ ದಾಳಿ ಮಾಡಿ, ಹಣದ ಸಮೇತ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಇಬ್ಬರನ್ನೂ ಬಂಧಿಸಿ ತನಿಖೆ ಮುಂದುವರಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್‌ ಡಿವೈಎಸ್ಪಿ ಮಧುಸೂದನ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ವಂಶವೃಕ್ಷ ನೀಡಲು ಲಂಚ-ಉಪ‌ತಹಶೀಲ್ದಾರ, ಕಂಪ್ಯೂಟ‌ರ್ ಆಪರೇಟ‌ರ್ ಲೋಕಾ ಬಲೆಗೆ
ಹಾವೇರಿ: ವಂಶವೃಕ್ಷ ನೀಡಲು ಲಂಚ ಪಡೆದ ಆರೋಪದಡಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯ ಉಪ ತಹಶೀಲ್ದಾ‌ರ್ ನಾಗರಾಜ ಸೂರ್ಯವಂಶಿ ಹಾಗೂ ಕಂಪ್ಯೂಟ‌ರ್ ಆಪರೇಟ‌ರ್ ಕಿರಣ ಮುದಕಣ್ಣನವರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಗಂಗಾಧರ ರಾಮಪ್ಪ ಕ್ಯಾತನಕೇರಿ ಎಂಬುವವರು ಲಂಚದ ಬಗ್ಗೆ ಲೋಕಾಯುಕ್ತ ಜಿಲ್ಲಾ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ದಾಖಲಿಸಿಕೊಂಡಿದ್ದ ಪೊಲೀಸರು, ಕಾರ್ಯಾಚರಣೆ ನಡೆಸಿ ಲಂಚದ ಹಣದ ಸಮೇತ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.
ದೂರುದಾರ ಗಂಗಾಧರ ಅವರ ಸಂಬಂಧಿ ದಯಾನಂದ ರುದ್ರಪ್ಪ ಯಲಿಗಾರ ಅವರು ತಮ್ಮ ವಂಶವೃಕ್ಷ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಉಪ ತಹಶೀಲ್ದಾ‌ರ್ ನಾಗರಾಜ ಹಾಗೂ ಕಂಪ್ಯೂಟ‌ರ್ ಆಪರೇಟರ್ ಕಿರಣ ಮುದಕಣನವರ ವಂಶವೃಕ್ಷ ನೀಡಲು ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇಬ್ಬರೂ ಆರೋಪಿಗಳು, ನಾಡಕಚೇರಿಯಲ್ಲಿಯೇ ದೂರುದಾರರಿಂದ ಗುರುವಾರ ₹2,000 ಲಂಚ ಪಡೆದಿದ್ದರು. ಇದೇ ಸಂದರ್ಭದಲ್ಲಿ ದಾಳಿ ಮಾಡಿ, ಹಣದ ಸಮೇತ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಇಬ್ಬರನ್ನೂ ಬಂಧಿಸಿ ತನಿಖೆ ಮುಂದುವರಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್‌ ಡಿವೈಎಸ್ಪಿ ಮಧುಸೂದನ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ

ಹಾವೇರಿಯಲ್ಲಿ  ಶ್ರದ್ಧಾ-ಭಕ್ತಿಯಿಂದ ರಾಮನವಮಿ  ಆಚರಣೆ ಹಾವೇರಿ: ಶ್ರೀರಾಮಚಂದ್ರನ ಜನ್ಮ ದಿನವನ್ನು ಶುಕ್ರವಾರ  ಶ್ರದ್ಧಾ-ಭಕ್ತಿಯಿಂದ...

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ

ಹಾವೇರಿ: ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರ ಆರಂಭ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ...

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ ಜೈಲು ಶಿಕ್ಷೆ ಹಾಗೂ ರೂ.೧೮ ಸಾವಿರ ದಂಡ

ಹಾವೇರಿ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜಾತಿ ನಿಂದನೆ ಮಾಡಿದವರಿಗೆ ೨ ವರ್ಷ...

ರಾಣೆಬೆನ್ನೂರ ಅರಣ್ಯದಲ್ಲಿ “೩೫೦೦ ವರ್ಷಗಳ ಹಿಂದಿನ ಶಿಲಾಗೋರಿ” ಪತ್ತೆ.!!

  ರಾಣೆಬೆನ್ನೂರ ಅರಣ್ಯದಲ್ಲಿ "೩೫೦೦ ವರ್ಷಗಳ ಹಿಂದಿನ ಶಿಲಾಗೋರಿ" ಪತ್ತೆ.!! ರಾಣೆಬೆನ್ನೂರ: ಪುರಾತತ್ವ...