ವಿದ್ಯುತ್ ತಗುಲಿ ತಂದೆ-ಮಗನ ದಾರುಣ ಸಾವು

Date:

ವಿದ್ಯುತ್ ತಗುಲಿ ತಂದೆ-ಮಗನ ದಾರುಣ ಸಾವು
ಹಾವೇರಿ: ಪಂಪ್‌ಸೆಟ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕರಬಸಪ್ಪ ಕಡೇನಾಯಕನಹಳ್ಳಿ (೫೦) ಹಾಗೂ ಅವರ ಪುತ್ರ ದರ್ಶನ ಕಡೇನಾಯಕನಹಳ್ಳಿ (೨೬) ಎಂದು ಗುರುತಿಸಲಾಗಿದೆ.
ಕರಬಸಪ್ಪ ಮತ್ತು ದರ್ಶನ ಇಬ್ಬರೂ ಸೇರಿಕೊಂಡು ಪಂಪ್ ಸೆಟ್ ದುರಸ್ತಿ ಮಾಡಲು ಮುಂದಾಗಿದ್ದರು. ಭತ್ತದ ಬೆಳೆಗೆ ನೀರು ಹಾಯಿಸಲು ಮೋಟಾರ್‌ಆನ್ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಕ್ಕೆ ಪಂಪ್ ಸೆಟ್ ಮೇಲೆಯೇ ಬಿದ್ದು ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಈ ರೀತಿಯ ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಹಿಸಿ ಎಂದು ಹೆಸ್ಕಾಂ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ವಿದ್ಯುತ್ ತಗುಲಿ ತಂದೆ-ಮಗನ ದಾರುಣ ಸಾವು
ಹಾವೇರಿ: ಪಂಪ್‌ಸೆಟ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕರಬಸಪ್ಪ ಕಡೇನಾಯಕನಹಳ್ಳಿ (೫೦) ಹಾಗೂ ಅವರ ಪುತ್ರ ದರ್ಶನ ಕಡೇನಾಯಕನಹಳ್ಳಿ (೨೬) ಎಂದು ಗುರುತಿಸಲಾಗಿದೆ.
ಕರಬಸಪ್ಪ ಮತ್ತು ದರ್ಶನ ಇಬ್ಬರೂ ಸೇರಿಕೊಂಡು ಪಂಪ್ ಸೆಟ್ ದುರಸ್ತಿ ಮಾಡಲು ಮುಂದಾಗಿದ್ದರು. ಭತ್ತದ ಬೆಳೆಗೆ ನೀರು ಹಾಯಿಸಲು ಮೋಟಾರ್‌ಆನ್ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಕ್ಕೆ ಪಂಪ್ ಸೆಟ್ ಮೇಲೆಯೇ ಬಿದ್ದು ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಈ ರೀತಿಯ ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಹಿಸಿ ಎಂದು ಹೆಸ್ಕಾಂ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...