ವೀರ ವನಿತೆ ಒನಕೆ ಓಬವ್ವ ಜಯಂತಿ ಯಶಸ್ವಿ: ಶಂಭು ಕಳಸದ ಕೃತಜ್ಞತೆ
ಹಾವೇರಿ: ಕೋಟೆನಾಡು ಚಿತ್ರದುರ್ಗದಲ್ಲಿ ಡಿ.೧೮ರಂದು ಆಯೋಜಿಸಲಾಗಿದ್ದ ರಾಜ್ಯಮಟ್ಟದ ವೀರ ವನಿತೆ ಒನಕೆ ಓಬವ್ವ ಜಯಂತಿಗೆ ರಾಜ್ಯದ ಬೇರೆ ಬೇರೆ ಭಾಗಗಳಿಂದ ಒಂದು ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವ ಸಂಪುಟದ ಸಚಿವರು, ಹಾಲಿ-ಮಾಜಿ ಶಾಸಕರು, ಸಮಾಜದ ಮುಖಂಡರು ಪಕ್ಷಾತೀತವಾಗಿ ಭಾಗವಹಿಸಿ ಯಶಸ್ವಿಗೊಳಿಸಿದ್ದು, ಈ ಯಶಸ್ವಿಗೆ ಕಾರಣರಾದ ರಾಜ್ಯ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರು, ಹಾಗೂ ಹಾವೇರಿ ಶಾಸಕರಾದ ನೆಹರು ಓಲೇಕಾರ ಅವರಿಗೆ ಸಮಸ್ತರಿಗೂ ಹಾಗೂ ಸರ್ವ ಮಾಧ್ಯಮಪ್ರತಿನಿಧಿಗಳಿಗೆ ಜಿಲ್ಲಾ ಚಲವಾದಿ ಮಹಾಸಭಾದ ಅಧ್ಯಕ್ಷ ಶಂಭು ಕಳಸದ ಕೃತಜ್ಞತೆ ಸಲ್ಲಿಸಿದ್ದಾರೆ.
ಒನಕೆ ಓಬವ್ವನವರ ಹೆಸರಿನಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮವನ್ನು ಮುಂದಿನ ಆಯವ್ಯಯದಲ್ಲಿ ರೂಪಿಸಿ ಓಬವ್ವ ಹೆಸರಿನ ನಿಗಮವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹವಾಗಿದ್ದು, ಓಬವ್ವನವರ ಹೆಸರಿನಲ್ಲಿ ಮಹಿಳಾ ಕಾಲೇಜನ್ನು ಸ್ಥಾಪಿಸಲಾಗುವುದು. ಒನಕೆ ಓಬವ್ವ ಟ್ರಸ್ಟ್ ಹೆಸರಿನಲ್ಲಿ ಸಮುದಾಯಕ್ಕೆ ೮೦ ಎಕರೆ ಜಮೀನನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು. ಒನಕೆ ಓಬವ್ವನ ಜೀವನ ಸಾಧನೆಗಳ ಸಂಶೋಧನೆಗಾಗಿ ವಿಶ್ವವಿದ್ಯಾಲಯಲದಲ್ಲಿ ಅಧ್ಯಯನ ಪೀಠ ರಚಿಸಲಾಗುವುದು. ಸಮುದಾಯಕ್ಕೆ ಉದ್ಯೋಗ, ಭೂ ಒಡೆತನ ಸಮಸ್ಯೆಗಳಿಗೆ ಸೂಕ್ತ ಸಮಯದಲ್ಲಿ ನ್ಯಾಯ ಒದಗಿಸಲಾಗುವುದು ಎಂದು ಆಶ್ವಾಸನೆ ನೀಡಿರುವುದು ಬ್ರಹತ್ ಸಮಾವೇಶಕ್ಕೆ ಸಂದ ಯಶಸ್ಸಾಗಿದೆ ಎಂದು ಅವರು ತಿಳಿಸಿದ್ದಾರೆ.
ವೀರ ವನಿತೆ ಒನಕೆ ಓಬವ್ವ ಜಯಂತಿ ಯಶಸ್ವಿ: ಶಂಭು ಕಳಸದ ಕೃತಜ್ಞತೆ
Date:
ವೀರ ವನಿತೆ ಒನಕೆ ಓಬವ್ವ ಜಯಂತಿ ಯಶಸ್ವಿ: ಶಂಭು ಕಳಸದ ಕೃತಜ್ಞತೆ
ಹಾವೇರಿ: ಕೋಟೆನಾಡು ಚಿತ್ರದುರ್ಗದಲ್ಲಿ ಡಿ.೧೮ರಂದು ಆಯೋಜಿಸಲಾಗಿದ್ದ ರಾಜ್ಯಮಟ್ಟದ ವೀರ ವನಿತೆ ಒನಕೆ ಓಬವ್ವ ಜಯಂತಿಗೆ ರಾಜ್ಯದ ಬೇರೆ ಬೇರೆ ಭಾಗಗಳಿಂದ ಒಂದು ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವ ಸಂಪುಟದ ಸಚಿವರು, ಹಾಲಿ-ಮಾಜಿ ಶಾಸಕರು, ಸಮಾಜದ ಮುಖಂಡರು ಪಕ್ಷಾತೀತವಾಗಿ ಭಾಗವಹಿಸಿ ಯಶಸ್ವಿಗೊಳಿಸಿದ್ದು, ಈ ಯಶಸ್ವಿಗೆ ಕಾರಣರಾದ ರಾಜ್ಯ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರು, ಹಾಗೂ ಹಾವೇರಿ ಶಾಸಕರಾದ ನೆಹರು ಓಲೇಕಾರ ಅವರಿಗೆ ಸಮಸ್ತರಿಗೂ ಹಾಗೂ ಸರ್ವ ಮಾಧ್ಯಮಪ್ರತಿನಿಧಿಗಳಿಗೆ ಜಿಲ್ಲಾ ಚಲವಾದಿ ಮಹಾಸಭಾದ ಅಧ್ಯಕ್ಷ ಶಂಭು ಕಳಸದ ಕೃತಜ್ಞತೆ ಸಲ್ಲಿಸಿದ್ದಾರೆ.
ಒನಕೆ ಓಬವ್ವನವರ ಹೆಸರಿನಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮವನ್ನು ಮುಂದಿನ ಆಯವ್ಯಯದಲ್ಲಿ ರೂಪಿಸಿ ಓಬವ್ವ ಹೆಸರಿನ ನಿಗಮವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹವಾಗಿದ್ದು, ಓಬವ್ವನವರ ಹೆಸರಿನಲ್ಲಿ ಮಹಿಳಾ ಕಾಲೇಜನ್ನು ಸ್ಥಾಪಿಸಲಾಗುವುದು. ಒನಕೆ ಓಬವ್ವ ಟ್ರಸ್ಟ್ ಹೆಸರಿನಲ್ಲಿ ಸಮುದಾಯಕ್ಕೆ ೮೦ ಎಕರೆ ಜಮೀನನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು. ಒನಕೆ ಓಬವ್ವನ ಜೀವನ ಸಾಧನೆಗಳ ಸಂಶೋಧನೆಗಾಗಿ ವಿಶ್ವವಿದ್ಯಾಲಯಲದಲ್ಲಿ ಅಧ್ಯಯನ ಪೀಠ ರಚಿಸಲಾಗುವುದು. ಸಮುದಾಯಕ್ಕೆ ಉದ್ಯೋಗ, ಭೂ ಒಡೆತನ ಸಮಸ್ಯೆಗಳಿಗೆ ಸೂಕ್ತ ಸಮಯದಲ್ಲಿ ನ್ಯಾಯ ಒದಗಿಸಲಾಗುವುದು ಎಂದು ಆಶ್ವಾಸನೆ ನೀಡಿರುವುದು ಬ್ರಹತ್ ಸಮಾವೇಶಕ್ಕೆ ಸಂದ ಯಶಸ್ಸಾಗಿದೆ ಎಂದು ಅವರು ತಿಳಿಸಿದ್ದಾರೆ.