“ಶಿಗ್ಗಾಂವ ಕ್ಷೇತ್ರದ ನೀರಾವರಿ ಕಾಮಗಾರಿಗೆ ರೂ.೧೦೦ ಕೋಟಿ- ಕೆರೆಗಳ ಅಭಿವೃದ್ಧಿಗೆ ರೂ.೧೦ ಕೋಟಿ”
ಶಿಗ್ಗಾಂವ ತಾಲೂಕು ಮಟ್ಟದ ಜನತಾದರ್ಶನದಲ್ಲಿ ಶಾಸಕ ಯಾಸಿರ್ ಅಹ್ಮದಖಾನ್ ಪಠಾಣ ಹೇಳಿಕೆ
ಹಾವೇರಿ : ಶಿಗ್ಗಾಂವ ಕ್ಷೇತ್ರದ ನೀರಾವರಿ ಕಾಮಗಾರಿಗೆ ರೂ.೧೦೦ ಕೋಟಿ ಅನುದಾನ ಮಂಜೂರಾಗಿದ್ದು, ರೂ.೩೦ ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಯಾಸಿರ್ ಅಹ್ಮದ್ಖಾನ್ ಪಠಾಣ ಅವರು ಹೇಳಿದರು.
ತಡಸ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಜಿಲ್ಳಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಿಗ್ಗಾಂವ ತಾಲೂಕಾ ಆಡಳಿತದಿಂದ ಆಯೋಜಿಸಲಾದ ತಾಲೂಕಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೆಣ್ಣಿಹಳ್ಳ ಅಭಿವೃದ್ಧಿಗೆ ಮನವಿಗಳು ಬಂದಿದ್ದು, ಕೆರೆಗಳ ಅಭಿವೃದ್ಧಿಗೆ ರೂ. ೧೦ ಕೋಟಿ ಅನುದಾನ ಮಂಜೂರಾಗಿದೆ ಎಂದರು.
ಕೆರೆಗಳನ್ನು ಸುಂದರತಾಣವಾಗಿಸಲು ಆದ್ಯತೆ: ಶಿಕ್ಷಣ ಎಷ್ಟು ಮುಖ್ಯವೋ ಆರೋಗ್ಯವೂ ಅಷ್ಟೇ ಮುಖ್ಯವಾಗಿದೆ. ತಡಸ, ಬಂಕಾಪುರ, ನಾಗನೂರು, ಮೋತಿತಲಾಬ ಸೇರಿದಂತೆ ಐದು ಸಾವಿರ ಜನಸಂಖ್ಯೆ ಇರುವ ೧೦ ಗ್ರಾಮಗಳ ಕೆರೆಗಳನ್ನು ಗುರುತಿಸಲಾಗಿದ್ದು, ಕೆರೆಗಳನ್ನು ಸುಂದರತಾಣವಾಗಿಸಲು ಒತ್ತು ನೀಡಲಾಗಿದೆ ಹಾಗೂ ವಾಕಿಂಗ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಹೇಳಿದರು.
ಜೊಂಡಲಗಟ್ಟಿ ನಿವಾಸಿಗಳಿಗೆ ಪಟ್ಟಾ ನೀಡಲು ವ್ಯವಸ್ಥೆ ಮಾಡಿ: ಜೋಂಡಲಗಟ್ಟಿ ಗ್ರಾಮದಲ್ಲಿ ಕುಡಿಯಲು ನೀರಿಲ್ಲ, ವಿದ್ಯುತ್ ಸಂಪರ್ಕ ಇಲ್ಲ, ರಾತ್ರಿ ಕಾಡು ಪ್ರಾಣಿಗಳ ಮನೆ ಬಾಗಿಲಿಗೆ ಬರುತ್ತಿವೆ. ಕಳೆದ ೭೮ ವರ್ಷಗಳಿಂದ ವಾಸವಾಗಿರುವ ಸಾರ್ವಜನಿಕರಿಗೆ ಪಟ್ಟಾ ಇಲ್ಲದ ಕಾರಣ ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇದು ನಾಗರಿಕ ಸಮಾಜದಲ್ಲಿ ತಲೆತಗ್ಗಿಸುವ ಕೆಲಸವಾಗಿದೆ. ಆದಷ್ಟು ಶೀಘ್ರದಲ್ಲೇ ಜೊಂಡಲಗಟ್ಟಿ ಗ್ರಾಮಕ್ಕೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವ ಕೆಲಸವಾಗಬೇಕು. ಗ್ರಾಮದ ನಿವಾಸಿಗಳಿಗೆ ಪಟ್ಟಾ ನೀಡಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮನೆಗಳ ಸಕ್ರಮಕ್ಕೆ ಸೂಚನೆ: ಜೊಂಡಲಗಟ್ಟಿ, ಮೂಕಬಸರಿಕಟ್ಟಿ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಮನೆ ನಿರ್ಮಾಣಮಾಡಿಕೊಂಡು ಉತಾರ ಇಲ್ಲದ ಸುಮಾರು ೧೫ ಸಾವಿರ ಹಾಗೂ ಶಿಗ್ಗಾಂವ, ಬಂಕಾಪುರ ಹಾಗೂ ಸವಣೂರ ಪುರಸಭೆ ವ್ಯಾಪ್ತಿಯಲ್ಲಿ ಏಳರಿಂದ ಎಂಟು ಸಾವಿರ ಮನೆಗಳಿವೆ. ಮೂರು ದಿನಗಳ ವಿಶೇಷ ಶಿಬಿರ ಆಯೋಜನೆ ಮೂಲಕ ಉತಾರ ಇಲ್ಲದ ಮನೆಗಳ ಮಾಹಿತಿಯನ್ನು ಪಡೆದುಕೊಳ್ಳಬೇಕು. ಅಕ್ರಮ ಮನೆಗಳನ್ನು ಸಕ್ರಮಮಾಡಿ ಉತಾರ ನೀಡುವ ಕೆಲಸವನ್ನು ಆಯಾ ಅಧಿಕಾರಿಗಳು ಮಾಡಬೇಕು ಎಂದರು.
ದುಂಢಶಿ ಹಾಗೂ ತಡಸ ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಇಂತಹ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲಾಗುತ್ತಿದೆ. ಇವುಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಯೋಜನೆ ತಲುಪಲಿ: ಪಡಿತರ ಚೀಟಿ ಇಲ್ಲದ ಕಾರಣ ವಿಕಲಚೇತನರು ಸೇರಿ ಅನೇಕರಿಗೆ ಅರ್ಹ ಫಲಾನುಭವಿಗಳು ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳನ್ನು ತಲುಪಬೇಕು ಎಂದರು.
ಸಾರ್ವಜನಿಕರ ಮಧ್ಯ ಸಮನ್ವಯ: ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ನಾವು ಜನಪ್ರತಿನಿಧಿಗಳು ಸಮನ್ವಯ ಮಾಡುತ್ತೆವೆ. ಯಾವುದೇ ಅಧಿಕಾರಿಗಳು ಬೇಜಾರು ಮಾಡಿಕೊಳ್ಳಬಾರದು. ನಾವು-ನೀವು ಜನರ ಸೇವಕರು, ಸಾರ್ವಜನಿಕರ ಕೆಲಸ ಮಾಡಲು ಬಂದಿದ್ದೇವೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ನೀಡುವ ಕೆಲಸಮಾಡಬೇಕು ಎಂದು ಸಲಹೆ ನೀಡಿದರು.
ಒಂದು ಸಾವಿರ ಮನೆಗಳು ಬ್ಲಾಕ್: ಅತಿವೃಷ್ಟಿಯಿಂದ ಹಾನಿಯಾದ ಮನೆಗಳಿಗೆ ಅರ್ಜಿಸಲ್ಲಿಸಿದ ಒಂದು ಸಾವಿರ ಮನೆಗಳ ವಿವರ ಬ್ಲಾಕ್ ಆಗಿದೆ, ೨೦೦ ಮನೆಗಳಿಗೆ ಕಾರ್ಯಾದೇಶ ನೀಡಲಾಗಿದೆ, ಆದರೆ ಎನ್.ಡಿ.ಆರ್.ಎಫ್. ಮಾರ್ಗಸೂಚಿ ಅನುಸಾರ ಅನುದಾನ ನೀಡಿಲ್ಲ. ಅಧಿಕಾರಿಗಳು ಕೂಡಲೇ ಫಲಾನುಭವಿಗಳಿಗೆ ಹಣ ನೀಡುವ ಕೆಲಸ ಮಾಡಬೇಕು ಎಂದರು.
೭೨ ಗಂಟೆಯೊಳಗೆ ಆದೇಶ ಪತ್ರ ನೀಡಿ: ಸಾಮಾಜಿಕ ಭದ್ರತಾ ಯೋಜನೆಯಡಿ ಸಂಧ್ಯಾ ಸುರಕ್ಷತಾ, ವಿಧವಾ ವೇತನ ಸೇರಿದಂತೆ ವಿವಿಧ ಮಾಶಾಸನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳಿಗೆ ೭೨ ಗಂಟೆಯೊಳಗೆ ಆದೇಶ ಪತ್ರ ನೀಡಬೇಕು. ಅವರನ್ನು ಸುಮ್ಮನೆ ಅಲೆದಾಡಿಸಬಾರ ಎಂದು ಗ್ರಾಮ ಲೆಕ್ಕಾಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
೨೭ ಹೊಸ ಸರ್ವೇಯರ ನೇಮಕ: ಶಿಗ್ಗಾಂವ ಕ್ಷೇತ್ರಕ್ಕೆ ೨೭ ಹೊಸ ಸರ್ವೇಗಳು ಬಂದಿದ್ದು, ಯಾವುದೇ ಸರ್ವೇ ಕೆಲಸಗಳು ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಾರ್ವಜನಿಕರನ್ನು ಜಿಲ್ಲಾ ಹಾಗೂ ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಜನರ ಬಳಿಯೇ ಅವರ ಸಮಸ್ಯೆ ಆಲಿಸಲು ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ವಿವಿಧ ಮಾಶಾಸನ ಕಾರ್ಯಾದೇಶ: ಇದೇ ಸಂದರ್ಭದಲ್ಲಿ ಮನಶ್ವಿನಿ, ವೃದ್ಧಾಪ್ಯವೇತನ, ವಿಧವಾ, ರೈತ ವಿಧವಾ ಸೇರಿದಂತೆ ವಿವಿಧ ಮಾಶಾಸನ ಆದೇಶ ಪತ್ರಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು.
ಕಾರ್ಮಿಕ ಇಲಾಖೆಯಿಂದ ಹೆಚ್ಚು ಅಂಕ ಪಡೆದ ಕಾರ್ಮಿಕರ ಮಕ್ಕಳಿಗೆ ಲ್ಯಾಪಟಾಪ್ ಹಾಗೂ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ವಿತರಣೆ ಮಾಡಲಾಯಿತು.
೧೭೫ ದೂರು: ವಿದ್ಯುತ್ ಕಂಬ ಸ್ಥಳಾಂತರ, ಮನೆಗಳ ಪಟ್ಟಾ, ಅರಣ್ಯ ಇಲಾಖೆ, ದಿನಗೂಲಿ ನೌಕರರ ವೇತನ ವಿಳಂಬ, ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು ದೂರು ಸಲ್ಲಿಸಿದರು. ಕಲ್ಯಾಣ ಜಮೀನಿಗೆ ದಾರಿ, ಹನಕನಹಳ್ಳಿ ಗ್ರಾಮಸ್ಥರಿಂದ ಮತಗಟ್ಟೆ ಬೇಡಿಕೆ, ಶಿಗ್ಗಾಂವ ಏತ ನೀರಾವರಿ ಯೋಜನೆಗೆ ಭೂಮಿ ಸ್ವಾಧಿನ ಪರಿಹಾರ, ಮನೆಗಳ ನಿರ್ಮಾಣಕ್ಕೆ ಅನುದಾನ ವಿಳಂಬ, ವಿವಿಧ ಗ್ರಾಮಗಳಲ್ಲಿ ಸ್ಮಾನಕ್ಕೆ ಭೂಮಿ ಬೇಡಿಕೆ ಸೇರಿದಂತೆ ಸಂಜೆ ೫-೩೦ರವರೆಗೆ ೧೭೫ ಅರ್ಜಿಗಳು ಸಲ್ಲಿಕೆಯಾಗಿದ್ದವು.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಶೇಖಪ್ಪ ಮಣಕಟ್ಟಿ, ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ರಜೀಯಾ ಅರಳಿಕಟ್ಟಿ, ಉಪಾಧ್ಯಕ್ಷ ಪ್ರಭು ನಿಂಜಪ್ಪನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್, ತಹಶೀಲ್ದಾರ ರವಿ ಕೊರವರ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಕುಮಾರ ಮಣ್ಣವಡ್ಡರ ಇತರರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಅಂಬಿಗೇರ ಸ್ವಾಗತಿಸಿದರು.
“ಶಿಗ್ಗಾಂವ ಕ್ಷೇತ್ರದ ನೀರಾವರಿ ಕಾಮಗಾರಿಗೆ ರೂ.೧೦೦ ಕೋಟಿ- ಕೆರೆಗಳ ಅಭಿವೃದ್ಧಿಗೆ ರೂ.೧೦ ಕೋಟಿ” ಶಿಗ್ಗಾಂವ ತಾಲೂಕು ಮಟ್ಟದ ಜನತಾದರ್ಶನದಲ್ಲಿ ಶಾಸಕ ಯಾಸಿರ್ ಅಹ್ಮದಖಾನ್ ಪಠಾಣ ಹೇಳಿಕೆ
Date:
“ಶಿಗ್ಗಾಂವ ಕ್ಷೇತ್ರದ ನೀರಾವರಿ ಕಾಮಗಾರಿಗೆ ರೂ.೧೦೦ ಕೋಟಿ- ಕೆರೆಗಳ ಅಭಿವೃದ್ಧಿಗೆ ರೂ.೧೦ ಕೋಟಿ”
ಶಿಗ್ಗಾಂವ ತಾಲೂಕು ಮಟ್ಟದ ಜನತಾದರ್ಶನದಲ್ಲಿ ಶಾಸಕ ಯಾಸಿರ್ ಅಹ್ಮದಖಾನ್ ಪಠಾಣ ಹೇಳಿಕೆ
ಹಾವೇರಿ : ಶಿಗ್ಗಾಂವ ಕ್ಷೇತ್ರದ ನೀರಾವರಿ ಕಾಮಗಾರಿಗೆ ರೂ.೧೦೦ ಕೋಟಿ ಅನುದಾನ ಮಂಜೂರಾಗಿದ್ದು, ರೂ.೩೦ ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಯಾಸಿರ್ ಅಹ್ಮದ್ಖಾನ್ ಪಠಾಣ ಅವರು ಹೇಳಿದರು.
ತಡಸ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಜಿಲ್ಳಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಿಗ್ಗಾಂವ ತಾಲೂಕಾ ಆಡಳಿತದಿಂದ ಆಯೋಜಿಸಲಾದ ತಾಲೂಕಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೆಣ್ಣಿಹಳ್ಳ ಅಭಿವೃದ್ಧಿಗೆ ಮನವಿಗಳು ಬಂದಿದ್ದು, ಕೆರೆಗಳ ಅಭಿವೃದ್ಧಿಗೆ ರೂ. ೧೦ ಕೋಟಿ ಅನುದಾನ ಮಂಜೂರಾಗಿದೆ ಎಂದರು.
ಕೆರೆಗಳನ್ನು ಸುಂದರತಾಣವಾಗಿಸಲು ಆದ್ಯತೆ: ಶಿಕ್ಷಣ ಎಷ್ಟು ಮುಖ್ಯವೋ ಆರೋಗ್ಯವೂ ಅಷ್ಟೇ ಮುಖ್ಯವಾಗಿದೆ. ತಡಸ, ಬಂಕಾಪುರ, ನಾಗನೂರು, ಮೋತಿತಲಾಬ ಸೇರಿದಂತೆ ಐದು ಸಾವಿರ ಜನಸಂಖ್ಯೆ ಇರುವ ೧೦ ಗ್ರಾಮಗಳ ಕೆರೆಗಳನ್ನು ಗುರುತಿಸಲಾಗಿದ್ದು, ಕೆರೆಗಳನ್ನು ಸುಂದರತಾಣವಾಗಿಸಲು ಒತ್ತು ನೀಡಲಾಗಿದೆ ಹಾಗೂ ವಾಕಿಂಗ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಹೇಳಿದರು.
ಜೊಂಡಲಗಟ್ಟಿ ನಿವಾಸಿಗಳಿಗೆ ಪಟ್ಟಾ ನೀಡಲು ವ್ಯವಸ್ಥೆ ಮಾಡಿ: ಜೋಂಡಲಗಟ್ಟಿ ಗ್ರಾಮದಲ್ಲಿ ಕುಡಿಯಲು ನೀರಿಲ್ಲ, ವಿದ್ಯುತ್ ಸಂಪರ್ಕ ಇಲ್ಲ, ರಾತ್ರಿ ಕಾಡು ಪ್ರಾಣಿಗಳ ಮನೆ ಬಾಗಿಲಿಗೆ ಬರುತ್ತಿವೆ. ಕಳೆದ ೭೮ ವರ್ಷಗಳಿಂದ ವಾಸವಾಗಿರುವ ಸಾರ್ವಜನಿಕರಿಗೆ ಪಟ್ಟಾ ಇಲ್ಲದ ಕಾರಣ ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇದು ನಾಗರಿಕ ಸಮಾಜದಲ್ಲಿ ತಲೆತಗ್ಗಿಸುವ ಕೆಲಸವಾಗಿದೆ. ಆದಷ್ಟು ಶೀಘ್ರದಲ್ಲೇ ಜೊಂಡಲಗಟ್ಟಿ ಗ್ರಾಮಕ್ಕೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವ ಕೆಲಸವಾಗಬೇಕು. ಗ್ರಾಮದ ನಿವಾಸಿಗಳಿಗೆ ಪಟ್ಟಾ ನೀಡಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮನೆಗಳ ಸಕ್ರಮಕ್ಕೆ ಸೂಚನೆ: ಜೊಂಡಲಗಟ್ಟಿ, ಮೂಕಬಸರಿಕಟ್ಟಿ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಮನೆ ನಿರ್ಮಾಣಮಾಡಿಕೊಂಡು ಉತಾರ ಇಲ್ಲದ ಸುಮಾರು ೧೫ ಸಾವಿರ ಹಾಗೂ ಶಿಗ್ಗಾಂವ, ಬಂಕಾಪುರ ಹಾಗೂ ಸವಣೂರ ಪುರಸಭೆ ವ್ಯಾಪ್ತಿಯಲ್ಲಿ ಏಳರಿಂದ ಎಂಟು ಸಾವಿರ ಮನೆಗಳಿವೆ. ಮೂರು ದಿನಗಳ ವಿಶೇಷ ಶಿಬಿರ ಆಯೋಜನೆ ಮೂಲಕ ಉತಾರ ಇಲ್ಲದ ಮನೆಗಳ ಮಾಹಿತಿಯನ್ನು ಪಡೆದುಕೊಳ್ಳಬೇಕು. ಅಕ್ರಮ ಮನೆಗಳನ್ನು ಸಕ್ರಮಮಾಡಿ ಉತಾರ ನೀಡುವ ಕೆಲಸವನ್ನು ಆಯಾ ಅಧಿಕಾರಿಗಳು ಮಾಡಬೇಕು ಎಂದರು.
ದುಂಢಶಿ ಹಾಗೂ ತಡಸ ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಇಂತಹ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲಾಗುತ್ತಿದೆ. ಇವುಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಯೋಜನೆ ತಲುಪಲಿ: ಪಡಿತರ ಚೀಟಿ ಇಲ್ಲದ ಕಾರಣ ವಿಕಲಚೇತನರು ಸೇರಿ ಅನೇಕರಿಗೆ ಅರ್ಹ ಫಲಾನುಭವಿಗಳು ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳನ್ನು ತಲುಪಬೇಕು ಎಂದರು.
ಸಾರ್ವಜನಿಕರ ಮಧ್ಯ ಸಮನ್ವಯ: ಅಧಿಕಾರಿಗಳು ಹಾಗೂ ಸಾರ್ವಜನಿಕರ ನಡುವೆ ನಾವು ಜನಪ್ರತಿನಿಧಿಗಳು ಸಮನ್ವಯ ಮಾಡುತ್ತೆವೆ. ಯಾವುದೇ ಅಧಿಕಾರಿಗಳು ಬೇಜಾರು ಮಾಡಿಕೊಳ್ಳಬಾರದು. ನಾವು-ನೀವು ಜನರ ಸೇವಕರು, ಸಾರ್ವಜನಿಕರ ಕೆಲಸ ಮಾಡಲು ಬಂದಿದ್ದೇವೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ನೀಡುವ ಕೆಲಸಮಾಡಬೇಕು ಎಂದು ಸಲಹೆ ನೀಡಿದರು.
ಒಂದು ಸಾವಿರ ಮನೆಗಳು ಬ್ಲಾಕ್: ಅತಿವೃಷ್ಟಿಯಿಂದ ಹಾನಿಯಾದ ಮನೆಗಳಿಗೆ ಅರ್ಜಿಸಲ್ಲಿಸಿದ ಒಂದು ಸಾವಿರ ಮನೆಗಳ ವಿವರ ಬ್ಲಾಕ್ ಆಗಿದೆ, ೨೦೦ ಮನೆಗಳಿಗೆ ಕಾರ್ಯಾದೇಶ ನೀಡಲಾಗಿದೆ, ಆದರೆ ಎನ್.ಡಿ.ಆರ್.ಎಫ್. ಮಾರ್ಗಸೂಚಿ ಅನುಸಾರ ಅನುದಾನ ನೀಡಿಲ್ಲ. ಅಧಿಕಾರಿಗಳು ಕೂಡಲೇ ಫಲಾನುಭವಿಗಳಿಗೆ ಹಣ ನೀಡುವ ಕೆಲಸ ಮಾಡಬೇಕು ಎಂದರು.
೭೨ ಗಂಟೆಯೊಳಗೆ ಆದೇಶ ಪತ್ರ ನೀಡಿ: ಸಾಮಾಜಿಕ ಭದ್ರತಾ ಯೋಜನೆಯಡಿ ಸಂಧ್ಯಾ ಸುರಕ್ಷತಾ, ವಿಧವಾ ವೇತನ ಸೇರಿದಂತೆ ವಿವಿಧ ಮಾಶಾಸನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳಿಗೆ ೭೨ ಗಂಟೆಯೊಳಗೆ ಆದೇಶ ಪತ್ರ ನೀಡಬೇಕು. ಅವರನ್ನು ಸುಮ್ಮನೆ ಅಲೆದಾಡಿಸಬಾರ ಎಂದು ಗ್ರಾಮ ಲೆಕ್ಕಾಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
೨೭ ಹೊಸ ಸರ್ವೇಯರ ನೇಮಕ: ಶಿಗ್ಗಾಂವ ಕ್ಷೇತ್ರಕ್ಕೆ ೨೭ ಹೊಸ ಸರ್ವೇಗಳು ಬಂದಿದ್ದು, ಯಾವುದೇ ಸರ್ವೇ ಕೆಲಸಗಳು ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಾರ್ವಜನಿಕರನ್ನು ಜಿಲ್ಲಾ ಹಾಗೂ ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಜನರ ಬಳಿಯೇ ಅವರ ಸಮಸ್ಯೆ ಆಲಿಸಲು ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ವಿವಿಧ ಮಾಶಾಸನ ಕಾರ್ಯಾದೇಶ: ಇದೇ ಸಂದರ್ಭದಲ್ಲಿ ಮನಶ್ವಿನಿ, ವೃದ್ಧಾಪ್ಯವೇತನ, ವಿಧವಾ, ರೈತ ವಿಧವಾ ಸೇರಿದಂತೆ ವಿವಿಧ ಮಾಶಾಸನ ಆದೇಶ ಪತ್ರಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು.
ಕಾರ್ಮಿಕ ಇಲಾಖೆಯಿಂದ ಹೆಚ್ಚು ಅಂಕ ಪಡೆದ ಕಾರ್ಮಿಕರ ಮಕ್ಕಳಿಗೆ ಲ್ಯಾಪಟಾಪ್ ಹಾಗೂ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ವಿತರಣೆ ಮಾಡಲಾಯಿತು.
೧೭೫ ದೂರು: ವಿದ್ಯುತ್ ಕಂಬ ಸ್ಥಳಾಂತರ, ಮನೆಗಳ ಪಟ್ಟಾ, ಅರಣ್ಯ ಇಲಾಖೆ, ದಿನಗೂಲಿ ನೌಕರರ ವೇತನ ವಿಳಂಬ, ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು ದೂರು ಸಲ್ಲಿಸಿದರು. ಕಲ್ಯಾಣ ಜಮೀನಿಗೆ ದಾರಿ, ಹನಕನಹಳ್ಳಿ ಗ್ರಾಮಸ್ಥರಿಂದ ಮತಗಟ್ಟೆ ಬೇಡಿಕೆ, ಶಿಗ್ಗಾಂವ ಏತ ನೀರಾವರಿ ಯೋಜನೆಗೆ ಭೂಮಿ ಸ್ವಾಧಿನ ಪರಿಹಾರ, ಮನೆಗಳ ನಿರ್ಮಾಣಕ್ಕೆ ಅನುದಾನ ವಿಳಂಬ, ವಿವಿಧ ಗ್ರಾಮಗಳಲ್ಲಿ ಸ್ಮಾನಕ್ಕೆ ಭೂಮಿ ಬೇಡಿಕೆ ಸೇರಿದಂತೆ ಸಂಜೆ ೫-೩೦ರವರೆಗೆ ೧೭೫ ಅರ್ಜಿಗಳು ಸಲ್ಲಿಕೆಯಾಗಿದ್ದವು.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಶೇಖಪ್ಪ ಮಣಕಟ್ಟಿ, ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ರಜೀಯಾ ಅರಳಿಕಟ್ಟಿ, ಉಪಾಧ್ಯಕ್ಷ ಪ್ರಭು ನಿಂಜಪ್ಪನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್, ತಹಶೀಲ್ದಾರ ರವಿ ಕೊರವರ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಕುಮಾರ ಮಣ್ಣವಡ್ಡರ ಇತರರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಅಂಬಿಗೇರ ಸ್ವಾಗತಿಸಿದರು.