ಸಮಾಜದ ಕೊನೆಯ ವ್ಯಕ್ತಿಗೂ ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ-೭೭ನೇ ಸ್ವಾತಂತ್ರ್ಯೋತ್ಸವ : ಸಚಿವ ಶಿವಾನಂದ ಪಾಟೀಲ ಹೇಳಿಕೆ

Date:

ಸಮಾಜದ ಕೊನೆಯ ವ್ಯಕ್ತಿಗೂ ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ೭೭ನೇ ಸ್ವಾತಂತ್ರ್ಯೋತ್ಸವ : ಸಚಿವ ಶಿವಾನಂದ ಪಾಟೀಲ ಹೇಳಿಕೆ

ಹಾವೇರಿ: ರಾಜಕೀಯ ಸ್ವಾತಂತ್ರ್ಯದ ಜೊತೆಯಲ್ಲಿ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯವನ್ನೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದೇ ಅರ್ಥಪೂರ್ಣ ಸ್ವಾತಂತ್ರ್ಯಾಚರಣೆ ಎಂದು ನಮ್ಮ ಸರ್ಕಾರ ನಂಬಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ೭೭ನೇ ಸ್ವಾತಂತ್ರ್ಯೋತ್ಸವ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಅಧಿಕಾರ, ಅವಕಾಶ ಮತ್ತು ಸಂಪತ್ತು ಸಮಾಜದ ಎಲ್ಲ ಜನರಿಗೂ ಹಾಗೂ ವರ್ಗಗಳಿಗೂ ಹಂಚಿಕೆಯಾಗಬೇಕೆಂಬುದು ಪ್ರಜಾಪ್ರಭುತ್ವದ ಮೂಲ ಆಶಯ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಇದು ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದರು.
ಆಗಸ್ಟ್ ೧೫ ಭಾರತೀಯರಿಗೆ ಅತ್ಯಂತ ಮಹತ್ವದ ದಿನ. ನೂರಾರು ವರ್ಷಗಳ ಪರದಾಸ್ಯದಿಂದ ವಿಮುಕ್ತಿ ಹೊಂದಿದ ವಿರೋಚಿತ ಚರಿತ್ರೆ ಒಂದಾದರೆ, ಸ್ವಾತಂತ್ರ್ಯಗಳಿಸಿದ ನಾವು ಸ್ವಾತಂತ್ರ್ಯವನ್ನು ಹೇಗೆ ಗೌರವಿಸಿ ರಕ್ಷಿಸಿಕೊಂಡಿದ್ದೇವೆ ಎಂಬುದು ಮತ್ತೊಂದಾಗಿರುತ್ತದೆ. ಈ ಎರಡೂ ಪ್ರಶ್ನೆಗಳು ಪ್ರತಿಯೊಬ್ಬ ಭಾರತೀಯನಲ್ಲಿ ಮೂಡಿದಾಗ ಮಾತ್ರ ಸ್ವಾತಂತ್ರ್ಯ ಎಂಬ ಪದದ ಅರ್ಥ ಮತ್ತು ಮಹತ್ವ ಅರಿವಾಗಲು ಸಾಧ್ಯ ಎಂದರು.
ನಾವು ಪ್ರತಿ ವರ್ಷ ಆಗಸ್ಟ್ ೧೫ ರಂದು ಆಚರಿಸುವ ಸ್ವಾತಂತ್ರ್ಯ ದಿನಾಚರಣೆಯು ಪರಕೀಯರಿಂದ ಸ್ವಾತಂತ್ರ್ಯಗಳಿಸಿದೆವು ಎಂಬುದರ ವಿಜಯೋತ್ಸವ ಅಷ್ಟೇ ಅಲ್ಲಾ, ಬದಲಿಗೆ ಒಂದು ಬಲಿಷ್ಠ ಸ್ವತಂತ್ರ ರಾಷ್ಟ್ರ ಕಟ್ಟಿದ್ದೇವೆ ಎಂಬುದರ ದರ್ಶನವು ಆಗಬೇಕಿದೆ. ಮಹತ್ಕಾರ್ಯಗಳು ಒಬ್ಬ ವ್ಯಕ್ತಿ ಅಥವಾ ಒಂದು ವರ್ಗದಿಂದ ಒಂದೆರಡು ವರ್ಷಗಳಲ್ಲಿ ಸಾಧ್ಯವಿಲ್ಲ. ಈ ಮಹತ್ಕಾರ್ಯಕ್ಕೆ ಪ್ರತಿಯೊಬ್ಬ ಭಾರತೀಯನೂ ಕೊಡುಗೆ ನೀಡಿದಾಗ ಮಾತ್ರ ಸಾಧ್ಯ ಎಂದರು.
ಅಭಿವೃದ್ಧಿಯ ಸ್ವಾತಂತ್ರ್ಯಕ್ಕೆ ಮತ್ತಷ್ಟು ಬಲ ನೀಡಲು ಕರ್ನಾಟಕ ರಾಜ್ಯದಲ್ಲಿ ಹೊಸ ನಾಯಕತ್ವದಲ್ಲಿ ಒಂದಾಗಿದ್ದೇವೆ. ಹೊಸ ಭರವಸೆ, ಹೊಸ ಕನಸುಗಳನ್ನು ಹೊತ್ತಿರುವ ನಮ್ಮ ಸರ್ಕಾರ ಕರ್ನಾಟಕದ್ದೇ ಆದ ಹೊಸ ಆಡಳಿತ ಮಾದರಿಯನ್ನು ದೇಶಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಾರಂಭಮಾಡಿದೆ. ಅಭಿವೃದ್ದಿ ಮತ್ತು ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕಂಡೊಯ್ಯುವಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಮ ಸಮಾನತೆಯ ನೆಮ್ಮದಿಯ ಕರ್ನಾಟಕ ರಾಜ್ಯದ ಮುನ್ನೆಡೆಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ.
ಗ್ಯಾರಂಟಿ ಯೋಜನೆಗಳು: ಬಡವರ, ಶ್ರಮಿಕರ ಬದುಕಿಗೆ ನೆರವು ನೀಡಲು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಗೃಹಲಕ್ಷ್ಮೀ ಯೋಜನೆ ಈ ತಿಂಗಳಲ್ಲಿ ಜಾರಿಗೊಳ್ಳಲಿದೆ. ಯುವನಿಧಿ ಯೋಜನೆ ಡಿಸೆಂಬರ್ ಮಾಹೆಯಲ್ಲಿ ಜಾರಿಗೊಳಿಸಲು ಯೋಜಿಸಿದ್ದೇವೆ. ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧತೆಯನ್ನು ಹೊಂದಿದ್ದೇವೆ, ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೇಳಿದರು.
ಕೃಷಿಯೇ ಮೂಲ ಆದಾಯವಾಗಿರುವ ಹಾವೇರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ, ಉನ್ನತ ಶಿಕ್ಷಣ, ಪ್ರವಾಸೋದ್ಯಮ ಅಭಿವೃದ್ಧಿ ನನ್ನ ಆದ್ಯತೆಯಾಗಿದೆ. ಮುಂದಿನ ಒಂದುವರೆ ವರ್ಷದೊಳಗೆ ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಲು ನಾನು ಸಂಕಲ್ಪ ತೊಟ್ಟಿದ್ದೇನೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಕುಡಿಯುವ ನೀರಿನ ಯೋಜನೆಗಳಾದ ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಗೆ ೭೨೬ ಜನವಸತಿ ಪ್ರದೇಶದ ಕಾಮಗಾರಿಗಳು ಮಂಜೂರಾಗಿದೆ. ಈ ಪೈಕಿ ೪೧೦ ಜನವಸತಿಗಳಲ್ಲಿ ಕಾಮಗಾರಿಗಳು ಪೂರ್ಣಗೊಂಡಿವೆ. ೩೧೬ ಜನವಸತಿಗಳಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರತಿ ಮನೆಗೆ ಕಾರ್ಯಾತ್ಮಕ ನಳದ ಮೂಲಕ ಪ್ರತಿ ವ್ಯಕ್ತಿಗೆ ಕನಿಷ್ಠ ೫೫ ಲೀಟರ್ ನೀರು ಒದಗಿಸುವ ಈ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದರು.
ಜಿಲ್ಲೆಯಲ್ಲಿ ೧೬ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಕಾರ್ಯಾಚರಣೆಯಲ್ಲಿವೆ. ಆಣೂರ, ತಡಸ, ಹಂಸಭಾವಿ ಬಹುಗ್ರಾಮ ಯೋಜನೆಗಳಡಿ ೪೫೧ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ರೂ.೧೩೬೫ ಕೋಟಿ ಯೋಜನೆಗಳು ಪ್ರಗತಿ ಹಂತದಲ್ಲಿವೆ. ಎಸ್.ಡಿ.ಪಿ. ೪೨೧೫ ಯೋಜನೆಯಡಿ ಯೋಜನೆಯಡಿ ರೂ.೫.೭೭ ಕೋಟಿ ಮೊತ್ತದ ೩೦೮ ಕಾಮಗಾರಿಗಳು ಅನುಮೋದನೆಗೊಂಡಿದ್ದು, ಈಗಾಗಲೇ ರೂ.೩.೮೬ ಕೋಟಿ ವೆಚ್ಚಮಾಡಲಾಗಿದೆ. ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಕ್ಕೆ ಕ್ರಮವಹಿಸಿ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಅಮೃತ ೨.೦ ನಗರ ಕುಡಿಯುವ ನೀರಿನ ಯೋಜನೆಯಡಿ ಜಿಲ್ಲೆಯಲ್ಲಿ ಶಿಗ್ಗಾಂವ, ಬಂಕಾಪೂರ, ಸವಣೂರ, ಹಿರೇಕೆರೂರು ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ರೂ. ೧೯೦ ಕೋಟಿ ಮೊತ್ತದ ಕಾಮಗಾರಿಗೆ ಅನುಮೋದನೆ ದೊರೆತಿದೆ. ಈ ಯೋಜನೆಗಳನ್ನು ತೀವ್ರಗತಿಯಲ್ಲಿ ಮುಗಿಸಲು ಕಾಲಮಿತಿ ನಿಗದಿಪಡಿಸಲಾಗಿದೆ. ಹಾವೇರಿ, ಗುತ್ತಲ, ರಟ್ಟಿಹಳ್ಳಿ ಹಾಗೂ ಹಾನಗಲ್ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ರೂ. ೨೧೩.೩೧ಕೋಟಿ ಮೊತ್ತದ ಕಾಮಗಾರಿಗೆ ಯೋಜನೆ ತಯಾರಿಸಿದ್ದು, ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದರು.
ಕರ್ನಾಟಕ ನೀರಾವರಿ ನಿಗಮದಿಂದ ತುಂಗಾ ಮೇಲ್ದಂಡೆ ಯೋಜನೆಯಡಿ ರಾಣೇಬೆನ್ನೂರ ವ್ಯಾಪ್ತಿಯಲ್ಲಿ ೧೩ ಏತ ನೀರಾವರಿ ಹಾಗೂ ಕೆರೆ ತುಂಬಿಸುವ ಯೋಜನೆಗಳಿದ್ದು, ಈ ಪೈಕಿ ೯ ಯೋಜನೆಗಳು ಪೂರ್ಣಗೊಳಿಸಲಾಗಿದೆ. ಬಾಕಿ ಉಳಿದಿರುವ ೪ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.
ಸಣ್ಣ ನೀರಾವರಿ ಇಲಾಖೆಯಲ್ಲಿ ೮೩ ಕಾಮಗಾರಿಗಳು ಮಂಜೂರಾಗಿದ್ದು, ೪೧ ಕಾಮಗಾರಿಗಳು ಪ್ರಗತಿಯಲ್ಲಿವೆ, ಬಾಕಿ ಇರುವ ೪೨ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಗಳು ರೈತರ ಉತ್ಪನ್ನಗಳಿಗೆ ಯೋಗ್ಯ ಬೆಲೆ ಒದಗಿಸಿ ಅವರ ಹಿತ ಕಾಯುವ ಸಂಸ್ಥೆಗಳು ಆಗಬೇಕು ಎಂಬ ಆಶಯ ನಮ್ಮ ಸರ್ಕಾರದ್ದಾಗಿದೆ. ಈ ಉದ್ದೇಶದಿಂದ ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ತರುವ ಪ್ರಕ್ರಿಯೆಗಳು ಆರಂಭಿಸಲಾಗಿದೆ.
ರೂ.೧೩೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಾಣೇಬೆನ್ನೂರಿನ ಹೂಲಿಹಳ್ಳಿ ಮೆಗಾಮಾರುಕಟ್ಟೆಯಲ್ಲಿ ಚಟುವಟಿಕೆಗಳನ್ನು ಶೀಘ್ರವೇ ಆರಂಭಿಸಲಾಗುವುದು. ಜಿಲ್ಲೆಯ ಹಾವೇರಿ, ಬ್ಯಾಡಗಿ, ಹಾನಗಲ್ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ರೂ. ೧೯ ಕೋಟಿ ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ತ್ವರಿತವಾಗಿ ಕಾಮಗಾರಿಗಳ ಪೂರ್ಣಗೊಳಿಸಲಾಗುವುದು.
ಜಿಲ್ಲೆಯ ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡುವುದು ನನ್ನ ಆಶಯವಾಗಿದೆ. ಈ ಹಿನ್ನಲೆಯಲ್ಲಿ ರೂ.೩೬೫ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಹಾವೇರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಕಟ್ಟಡ ಈಗಾಗಲೇ ಶೇ.೭೮ ರಷ್ಟು ಪ್ರಮಾಣದಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಇದೇ ವರ್ಷದಲ್ಲಿ ಮೊದಲ ಮತ್ತು ಎರಡನೇ ವರ್ಷದ ವೈದ್ಯಕೀಯ ತರಗತಿಗಳನ್ನು ಹೊಸ ಕಟ್ಟಡದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಕಾಮಗಾರಿಗೆ ವೇಗ ನೀಡಲಾಗಿದೆ ಎಂದರು.
ಹೊಸದಾಗಿ ರೂ.೨೦೬ ಕೋಟಿ ವೆಚ್ಚದಲ್ಲಿ ೪೫೦ ಹಾಸಿಗೆಯ ವೈದ್ಯಕೀಯ ಕಾಲೇಜ್ ಬೋಧನಾ ಆಸ್ಪತ್ರೆ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲೆಯ ಪ್ರವಾಸಿ ಕ್ಷೇತ್ರಗಳಿಗೆ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರನ್ನು ಆಕರ್ಷಿಸಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಅಂದಾಜು ೬೦೦ ಎಕರೆಗೂ ಹೆಚ್ಚು ವಿಸ್ತೀರ್ಣ ಹೊಂದಿರುವ ಹೆಗ್ಗೇರಿ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು.
ಕುಡಿಯುವ ನೀರು, ನೀರಾವರಿ ಯೋಜನೆಗಳು, ಪ್ರವಾಸೋದ್ಯಮ ಅಭಿವೃದ್ಧಿ, ಉನ್ನತ ಶಿಕ್ಷಣಕ್ಕೆ ಆದ್ಯತೆ, ನಿರುದ್ಯೋಗ ಸಮಸ್ಯೆಗೆ ಪರಿಹಾರ ನನ್ನ ಆದ್ಯತಾ ವಲಯವಾಗಿದೆ. ಕಾಲಮಿತಿಯೊಳಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಈ ಮೂಲಕ ತಮ್ಮಲ್ಲಿ ಹೇಳಲು ಇಚ್ಚಿಸುತ್ತೇನೆ. ಮಾನವ ಅಭಿವೃದ್ಧಿ ಸೂಚ್ಯಾಂಕದಲ್ಲಿ ಜಿಲ್ಲೆಯ ಹಿಂದುಳಿದ ವಲಯಗಳ ಉನ್ನತೀಕರಣಕ್ಕೆ ಪ್ರಾಮಾಣಿಕ ಪ್ರಯತ್ನಮಾಡುವ ಇಚ್ಚೆ ನನ್ನದಾಗಿದೆ. ಜಿಲ್ಲೆಯ ಹಲವು ಸಮಸ್ಯೆಗಳ ನಿವಾರಣೆಗೆ ನಮ್ಮ ಎಲ್ಲ ಶಾಸಕರೂ ಜೊತೆಗೂಡಿ ಪ್ರಾಮಾಣಿಕ ಪ್ರಯತ್ನ ಮಾಡಲು ಇಚ್ಚಿಸಿದ್ದೇವೆ. ನಿಮ್ಮೆಲ್ಲರ ಬೆಂಬಲ, ಸಹಕಾರ ಸದಾ ನಮ್ಮೊಂದಿಗಿರಲಿ ಎಂದರು.
ಬಹುಭಾಷೆ, ಬಹುಧರ್ಮ ಮತ್ತು ಬಹು ಸಂಸ್ಕೃತಿಗಳ ದೇಶ ನಮ್ಮದು. ಈ ವೈವಿಧ್ಯತೆಯಲ್ಲಿಯೇ ಏಕತೆಯನ್ನು ಕಂಡುಕೊಂಡ ಹೆಮ್ಮೆಯ ಪರಂಪರೆಯ ವಾರಸುದಾರರು ನಾವು. ಈ ಭಾವ ಸಂಬಂಧ ಮುರಿದು ಬೀಳಲು ಅವಕಾಶ ನೀಡದೇ, ಎಲ್ಲರೂ ಒಗ್ಗೂಡಿ ರಕ್ಷಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ. ಭಾರತ ಸಂವಿಧಾನದ ಮೂಲ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ನ್ಯಾಯ ಮತ್ತು ಜಾತ್ಯಾತೀತತೆಯನ್ನು ನಮ್ಮ ಜೀವನ ಮೌಲ್ಯಗಳಾಗಿ ನಾವು ಅಳವಡಿಸಿಕೊಂಡಾಗ ಮಾತ್ರ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿ.ಪಂ.ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಸಮಾಜದ ಕೊನೆಯ ವ್ಯಕ್ತಿಗೂ ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ೭೭ನೇ ಸ್ವಾತಂತ್ರ್ಯೋತ್ಸವ : ಸಚಿವ ಶಿವಾನಂದ ಪಾಟೀಲ ಹೇಳಿಕೆ

ಹಾವೇರಿ: ರಾಜಕೀಯ ಸ್ವಾತಂತ್ರ್ಯದ ಜೊತೆಯಲ್ಲಿ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯವನ್ನೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದೇ ಅರ್ಥಪೂರ್ಣ ಸ್ವಾತಂತ್ರ್ಯಾಚರಣೆ ಎಂದು ನಮ್ಮ ಸರ್ಕಾರ ನಂಬಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ೭೭ನೇ ಸ್ವಾತಂತ್ರ್ಯೋತ್ಸವ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಅಧಿಕಾರ, ಅವಕಾಶ ಮತ್ತು ಸಂಪತ್ತು ಸಮಾಜದ ಎಲ್ಲ ಜನರಿಗೂ ಹಾಗೂ ವರ್ಗಗಳಿಗೂ ಹಂಚಿಕೆಯಾಗಬೇಕೆಂಬುದು ಪ್ರಜಾಪ್ರಭುತ್ವದ ಮೂಲ ಆಶಯ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಇದು ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದರು.
ಆಗಸ್ಟ್ ೧೫ ಭಾರತೀಯರಿಗೆ ಅತ್ಯಂತ ಮಹತ್ವದ ದಿನ. ನೂರಾರು ವರ್ಷಗಳ ಪರದಾಸ್ಯದಿಂದ ವಿಮುಕ್ತಿ ಹೊಂದಿದ ವಿರೋಚಿತ ಚರಿತ್ರೆ ಒಂದಾದರೆ, ಸ್ವಾತಂತ್ರ್ಯಗಳಿಸಿದ ನಾವು ಸ್ವಾತಂತ್ರ್ಯವನ್ನು ಹೇಗೆ ಗೌರವಿಸಿ ರಕ್ಷಿಸಿಕೊಂಡಿದ್ದೇವೆ ಎಂಬುದು ಮತ್ತೊಂದಾಗಿರುತ್ತದೆ. ಈ ಎರಡೂ ಪ್ರಶ್ನೆಗಳು ಪ್ರತಿಯೊಬ್ಬ ಭಾರತೀಯನಲ್ಲಿ ಮೂಡಿದಾಗ ಮಾತ್ರ ಸ್ವಾತಂತ್ರ್ಯ ಎಂಬ ಪದದ ಅರ್ಥ ಮತ್ತು ಮಹತ್ವ ಅರಿವಾಗಲು ಸಾಧ್ಯ ಎಂದರು.
ನಾವು ಪ್ರತಿ ವರ್ಷ ಆಗಸ್ಟ್ ೧೫ ರಂದು ಆಚರಿಸುವ ಸ್ವಾತಂತ್ರ್ಯ ದಿನಾಚರಣೆಯು ಪರಕೀಯರಿಂದ ಸ್ವಾತಂತ್ರ್ಯಗಳಿಸಿದೆವು ಎಂಬುದರ ವಿಜಯೋತ್ಸವ ಅಷ್ಟೇ ಅಲ್ಲಾ, ಬದಲಿಗೆ ಒಂದು ಬಲಿಷ್ಠ ಸ್ವತಂತ್ರ ರಾಷ್ಟ್ರ ಕಟ್ಟಿದ್ದೇವೆ ಎಂಬುದರ ದರ್ಶನವು ಆಗಬೇಕಿದೆ. ಮಹತ್ಕಾರ್ಯಗಳು ಒಬ್ಬ ವ್ಯಕ್ತಿ ಅಥವಾ ಒಂದು ವರ್ಗದಿಂದ ಒಂದೆರಡು ವರ್ಷಗಳಲ್ಲಿ ಸಾಧ್ಯವಿಲ್ಲ. ಈ ಮಹತ್ಕಾರ್ಯಕ್ಕೆ ಪ್ರತಿಯೊಬ್ಬ ಭಾರತೀಯನೂ ಕೊಡುಗೆ ನೀಡಿದಾಗ ಮಾತ್ರ ಸಾಧ್ಯ ಎಂದರು.
ಅಭಿವೃದ್ಧಿಯ ಸ್ವಾತಂತ್ರ್ಯಕ್ಕೆ ಮತ್ತಷ್ಟು ಬಲ ನೀಡಲು ಕರ್ನಾಟಕ ರಾಜ್ಯದಲ್ಲಿ ಹೊಸ ನಾಯಕತ್ವದಲ್ಲಿ ಒಂದಾಗಿದ್ದೇವೆ. ಹೊಸ ಭರವಸೆ, ಹೊಸ ಕನಸುಗಳನ್ನು ಹೊತ್ತಿರುವ ನಮ್ಮ ಸರ್ಕಾರ ಕರ್ನಾಟಕದ್ದೇ ಆದ ಹೊಸ ಆಡಳಿತ ಮಾದರಿಯನ್ನು ದೇಶಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಾರಂಭಮಾಡಿದೆ. ಅಭಿವೃದ್ದಿ ಮತ್ತು ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕಂಡೊಯ್ಯುವಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಮ ಸಮಾನತೆಯ ನೆಮ್ಮದಿಯ ಕರ್ನಾಟಕ ರಾಜ್ಯದ ಮುನ್ನೆಡೆಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ.
ಗ್ಯಾರಂಟಿ ಯೋಜನೆಗಳು: ಬಡವರ, ಶ್ರಮಿಕರ ಬದುಕಿಗೆ ನೆರವು ನೀಡಲು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಗೃಹಲಕ್ಷ್ಮೀ ಯೋಜನೆ ಈ ತಿಂಗಳಲ್ಲಿ ಜಾರಿಗೊಳ್ಳಲಿದೆ. ಯುವನಿಧಿ ಯೋಜನೆ ಡಿಸೆಂಬರ್ ಮಾಹೆಯಲ್ಲಿ ಜಾರಿಗೊಳಿಸಲು ಯೋಜಿಸಿದ್ದೇವೆ. ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧತೆಯನ್ನು ಹೊಂದಿದ್ದೇವೆ, ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೇಳಿದರು.
ಕೃಷಿಯೇ ಮೂಲ ಆದಾಯವಾಗಿರುವ ಹಾವೇರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಹಾಗೂ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ, ಉನ್ನತ ಶಿಕ್ಷಣ, ಪ್ರವಾಸೋದ್ಯಮ ಅಭಿವೃದ್ಧಿ ನನ್ನ ಆದ್ಯತೆಯಾಗಿದೆ. ಮುಂದಿನ ಒಂದುವರೆ ವರ್ಷದೊಳಗೆ ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಲು ನಾನು ಸಂಕಲ್ಪ ತೊಟ್ಟಿದ್ದೇನೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಕುಡಿಯುವ ನೀರಿನ ಯೋಜನೆಗಳಾದ ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಗೆ ೭೨೬ ಜನವಸತಿ ಪ್ರದೇಶದ ಕಾಮಗಾರಿಗಳು ಮಂಜೂರಾಗಿದೆ. ಈ ಪೈಕಿ ೪೧೦ ಜನವಸತಿಗಳಲ್ಲಿ ಕಾಮಗಾರಿಗಳು ಪೂರ್ಣಗೊಂಡಿವೆ. ೩೧೬ ಜನವಸತಿಗಳಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರತಿ ಮನೆಗೆ ಕಾರ್ಯಾತ್ಮಕ ನಳದ ಮೂಲಕ ಪ್ರತಿ ವ್ಯಕ್ತಿಗೆ ಕನಿಷ್ಠ ೫೫ ಲೀಟರ್ ನೀರು ಒದಗಿಸುವ ಈ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದರು.
ಜಿಲ್ಲೆಯಲ್ಲಿ ೧೬ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಕಾರ್ಯಾಚರಣೆಯಲ್ಲಿವೆ. ಆಣೂರ, ತಡಸ, ಹಂಸಭಾವಿ ಬಹುಗ್ರಾಮ ಯೋಜನೆಗಳಡಿ ೪೫೧ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ರೂ.೧೩೬೫ ಕೋಟಿ ಯೋಜನೆಗಳು ಪ್ರಗತಿ ಹಂತದಲ್ಲಿವೆ. ಎಸ್.ಡಿ.ಪಿ. ೪೨೧೫ ಯೋಜನೆಯಡಿ ಯೋಜನೆಯಡಿ ರೂ.೫.೭೭ ಕೋಟಿ ಮೊತ್ತದ ೩೦೮ ಕಾಮಗಾರಿಗಳು ಅನುಮೋದನೆಗೊಂಡಿದ್ದು, ಈಗಾಗಲೇ ರೂ.೩.೮೬ ಕೋಟಿ ವೆಚ್ಚಮಾಡಲಾಗಿದೆ. ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಕ್ಕೆ ಕ್ರಮವಹಿಸಿ ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಅಮೃತ ೨.೦ ನಗರ ಕುಡಿಯುವ ನೀರಿನ ಯೋಜನೆಯಡಿ ಜಿಲ್ಲೆಯಲ್ಲಿ ಶಿಗ್ಗಾಂವ, ಬಂಕಾಪೂರ, ಸವಣೂರ, ಹಿರೇಕೆರೂರು ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ರೂ. ೧೯೦ ಕೋಟಿ ಮೊತ್ತದ ಕಾಮಗಾರಿಗೆ ಅನುಮೋದನೆ ದೊರೆತಿದೆ. ಈ ಯೋಜನೆಗಳನ್ನು ತೀವ್ರಗತಿಯಲ್ಲಿ ಮುಗಿಸಲು ಕಾಲಮಿತಿ ನಿಗದಿಪಡಿಸಲಾಗಿದೆ. ಹಾವೇರಿ, ಗುತ್ತಲ, ರಟ್ಟಿಹಳ್ಳಿ ಹಾಗೂ ಹಾನಗಲ್ ಪಟ್ಟಣಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ರೂ. ೨೧೩.೩೧ಕೋಟಿ ಮೊತ್ತದ ಕಾಮಗಾರಿಗೆ ಯೋಜನೆ ತಯಾರಿಸಿದ್ದು, ಸರ್ಕಾರಕ್ಕೆ ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದರು.
ಕರ್ನಾಟಕ ನೀರಾವರಿ ನಿಗಮದಿಂದ ತುಂಗಾ ಮೇಲ್ದಂಡೆ ಯೋಜನೆಯಡಿ ರಾಣೇಬೆನ್ನೂರ ವ್ಯಾಪ್ತಿಯಲ್ಲಿ ೧೩ ಏತ ನೀರಾವರಿ ಹಾಗೂ ಕೆರೆ ತುಂಬಿಸುವ ಯೋಜನೆಗಳಿದ್ದು, ಈ ಪೈಕಿ ೯ ಯೋಜನೆಗಳು ಪೂರ್ಣಗೊಳಿಸಲಾಗಿದೆ. ಬಾಕಿ ಉಳಿದಿರುವ ೪ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.
ಸಣ್ಣ ನೀರಾವರಿ ಇಲಾಖೆಯಲ್ಲಿ ೮೩ ಕಾಮಗಾರಿಗಳು ಮಂಜೂರಾಗಿದ್ದು, ೪೧ ಕಾಮಗಾರಿಗಳು ಪ್ರಗತಿಯಲ್ಲಿವೆ, ಬಾಕಿ ಇರುವ ೪೨ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಗಳು ರೈತರ ಉತ್ಪನ್ನಗಳಿಗೆ ಯೋಗ್ಯ ಬೆಲೆ ಒದಗಿಸಿ ಅವರ ಹಿತ ಕಾಯುವ ಸಂಸ್ಥೆಗಳು ಆಗಬೇಕು ಎಂಬ ಆಶಯ ನಮ್ಮ ಸರ್ಕಾರದ್ದಾಗಿದೆ. ಈ ಉದ್ದೇಶದಿಂದ ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ತರುವ ಪ್ರಕ್ರಿಯೆಗಳು ಆರಂಭಿಸಲಾಗಿದೆ.
ರೂ.೧೩೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಾಣೇಬೆನ್ನೂರಿನ ಹೂಲಿಹಳ್ಳಿ ಮೆಗಾಮಾರುಕಟ್ಟೆಯಲ್ಲಿ ಚಟುವಟಿಕೆಗಳನ್ನು ಶೀಘ್ರವೇ ಆರಂಭಿಸಲಾಗುವುದು. ಜಿಲ್ಲೆಯ ಹಾವೇರಿ, ಬ್ಯಾಡಗಿ, ಹಾನಗಲ್ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ರೂ. ೧೯ ಕೋಟಿ ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ತ್ವರಿತವಾಗಿ ಕಾಮಗಾರಿಗಳ ಪೂರ್ಣಗೊಳಿಸಲಾಗುವುದು.
ಜಿಲ್ಲೆಯ ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡುವುದು ನನ್ನ ಆಶಯವಾಗಿದೆ. ಈ ಹಿನ್ನಲೆಯಲ್ಲಿ ರೂ.೩೬೫ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಹಾವೇರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಕಟ್ಟಡ ಈಗಾಗಲೇ ಶೇ.೭೮ ರಷ್ಟು ಪ್ರಮಾಣದಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಇದೇ ವರ್ಷದಲ್ಲಿ ಮೊದಲ ಮತ್ತು ಎರಡನೇ ವರ್ಷದ ವೈದ್ಯಕೀಯ ತರಗತಿಗಳನ್ನು ಹೊಸ ಕಟ್ಟಡದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಕಾಮಗಾರಿಗೆ ವೇಗ ನೀಡಲಾಗಿದೆ ಎಂದರು.
ಹೊಸದಾಗಿ ರೂ.೨೦೬ ಕೋಟಿ ವೆಚ್ಚದಲ್ಲಿ ೪೫೦ ಹಾಸಿಗೆಯ ವೈದ್ಯಕೀಯ ಕಾಲೇಜ್ ಬೋಧನಾ ಆಸ್ಪತ್ರೆ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲೆಯ ಪ್ರವಾಸಿ ಕ್ಷೇತ್ರಗಳಿಗೆ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರನ್ನು ಆಕರ್ಷಿಸಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಅಂದಾಜು ೬೦೦ ಎಕರೆಗೂ ಹೆಚ್ಚು ವಿಸ್ತೀರ್ಣ ಹೊಂದಿರುವ ಹೆಗ್ಗೇರಿ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು.
ಕುಡಿಯುವ ನೀರು, ನೀರಾವರಿ ಯೋಜನೆಗಳು, ಪ್ರವಾಸೋದ್ಯಮ ಅಭಿವೃದ್ಧಿ, ಉನ್ನತ ಶಿಕ್ಷಣಕ್ಕೆ ಆದ್ಯತೆ, ನಿರುದ್ಯೋಗ ಸಮಸ್ಯೆಗೆ ಪರಿಹಾರ ನನ್ನ ಆದ್ಯತಾ ವಲಯವಾಗಿದೆ. ಕಾಲಮಿತಿಯೊಳಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಈ ಮೂಲಕ ತಮ್ಮಲ್ಲಿ ಹೇಳಲು ಇಚ್ಚಿಸುತ್ತೇನೆ. ಮಾನವ ಅಭಿವೃದ್ಧಿ ಸೂಚ್ಯಾಂಕದಲ್ಲಿ ಜಿಲ್ಲೆಯ ಹಿಂದುಳಿದ ವಲಯಗಳ ಉನ್ನತೀಕರಣಕ್ಕೆ ಪ್ರಾಮಾಣಿಕ ಪ್ರಯತ್ನಮಾಡುವ ಇಚ್ಚೆ ನನ್ನದಾಗಿದೆ. ಜಿಲ್ಲೆಯ ಹಲವು ಸಮಸ್ಯೆಗಳ ನಿವಾರಣೆಗೆ ನಮ್ಮ ಎಲ್ಲ ಶಾಸಕರೂ ಜೊತೆಗೂಡಿ ಪ್ರಾಮಾಣಿಕ ಪ್ರಯತ್ನ ಮಾಡಲು ಇಚ್ಚಿಸಿದ್ದೇವೆ. ನಿಮ್ಮೆಲ್ಲರ ಬೆಂಬಲ, ಸಹಕಾರ ಸದಾ ನಮ್ಮೊಂದಿಗಿರಲಿ ಎಂದರು.
ಬಹುಭಾಷೆ, ಬಹುಧರ್ಮ ಮತ್ತು ಬಹು ಸಂಸ್ಕೃತಿಗಳ ದೇಶ ನಮ್ಮದು. ಈ ವೈವಿಧ್ಯತೆಯಲ್ಲಿಯೇ ಏಕತೆಯನ್ನು ಕಂಡುಕೊಂಡ ಹೆಮ್ಮೆಯ ಪರಂಪರೆಯ ವಾರಸುದಾರರು ನಾವು. ಈ ಭಾವ ಸಂಬಂಧ ಮುರಿದು ಬೀಳಲು ಅವಕಾಶ ನೀಡದೇ, ಎಲ್ಲರೂ ಒಗ್ಗೂಡಿ ರಕ್ಷಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ. ಭಾರತ ಸಂವಿಧಾನದ ಮೂಲ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ನ್ಯಾಯ ಮತ್ತು ಜಾತ್ಯಾತೀತತೆಯನ್ನು ನಮ್ಮ ಜೀವನ ಮೌಲ್ಯಗಳಾಗಿ ನಾವು ಅಳವಡಿಸಿಕೊಂಡಾಗ ಮಾತ್ರ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿ.ಪಂ.ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...