ಸಾಲಬಾಧೆ, ಒಂದೇ ಕುಟುಂಬದ ಮೂವರ ಆತ್ಮಹತ್ಯೆ, ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಘಟನೆ
ಹಾವೇರಿ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಮಾಡಿಕೊಂಡಿರುವ. ಘಟನೆ ಜಿಲ್ಲೆಯ ಸವಣೂರು ತಾಲೂಕಿನ ತಾಲ್ಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.
ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡವರನ್ನು
ಒಂದೇ ಕುಟುಂಬದ ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22)ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಶರಣು.
ಹನುಮಂತಗೌಡ ಪಾಟೀಲ ಸಾಲಮಾಡಿ ಮಗಳ ಮದುವೆಯನ್ನ ಮಾಡಿದ್ದರು ಎನ್ನಲಾಗಿದೆ.
ಸಾಲಬಾಧೆ ತಾಳಲಾರದೆ ತಂದೆ ತಾಯಿ ಆತ್ಮಹತ್ಯೆಮಾಡಿಕೊಂಡಿದ್ದರೆಂದು
ನನ್ನಿಂದ ತಂದೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನೊಂದು ಮಗಳು ನೇತ್ರ ಆತ್ಮಹತ್ಯೆಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.ಹನುಮಂತಗೌಡ ಪಾಟೀಲ ಸುಮಾರು 25 ಲಕ್ಷರೂಪಾಯಿ ಸಾಲ ಮಾಡಿದ್ದರು ಎನ್ನಲಾಗುತ್ತಿದೆ.
ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ