ಹಾವೇರಿ:ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅಣ್ಣಪ್ಪ ಕಬ್ಬೂರಿಗೆ ೨೦ ವರ್ಷ ಜೈಲು

Date:

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅಣ್ಣಪ್ಪ ಕಬ್ಬೂರಿಗೆ ೨೦ ವರ್ಷ ಜೈಲು
ಹಾವೇರಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಣ್ಣಪ್ಪ ಹನುಮಂತಪ್ಪ ಕಬ್ಬೂರ ಎಂಬಾತನಿಗೆ ೨೦ ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ರೂ.೧.೮೦ ಲಕ್ಷ ದಂಡ ವಿಧಿಸಿ ಹಾವೇರಿ ವಿಶೇಷ ಸತ್ರ ನ್ಯಾಯಾಲಯ(ಎಫ್.ಟಿ.ಎಸ್.ಸಿ-೧)ದ ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು ಮಂಗಳವಾರ ತೀರ್ಪು ನೀಡಿದ್ದಾರೆ.
ಹಿರೇಕೆರೂರು ತಾಲೂಕು ಪುರಕೊಂಡಿಕೊಪ್ಪದ ಆರೋಪಿ ಅಣ್ಣಪ್ಪ ಹನುಮಂತಪ್ಪ ಕಬ್ಬೂರ ಎಂಬಾತ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ದಿನಾಂಕ ೨೭-೦೯-೨೦೧೯ ರಂದು ರಾತ್ರಿ ಅಪಹರಣಮಾಡಿಕೊಂಡು ಹೋಗಿ, ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕು ದ್ಯಾರಮಕ್ಕಿ ಬಡಗದಬೈಲ್ ಗ್ರಾಮದ ಕಾಫಿ ಎಸ್ಟೇಟ್ ಮನೆಯಲ್ಲಿ ಬಾಕಿಲಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ನೊಂದ ಬಾಲಕಿಗೆ ಶಿವಮೊಗ್ಗದ ಗಣಪತಿ ದೇವಸ್ಥಾನದಲ್ಲಿ ತಾಳಿ ಕಟ್ಟಿ ಮದುವೆಯಾಗಿದ್ದಾಗಿ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹಿರೇಕೆರೂರು ವೃತ್ತದ ತನಿಖಾಧಿಕಾರಿ ಸಿಪಿಐ ಮಂಜುನಾಥ್ ಪಂಡಿತ್ ಅವರು ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆರೋಪಿ ಅಣ್ಣಪ್ಪ ಹನುಮಂತಪ್ಪ ಕಬ್ಬೂರ ಮೇಲೆ ಹೊರಿಸಲಾದ ಆಪಾಧನೆಗಳಾದ ಕಲಂ ೩೬೩, ೩೫೪(ಡಿ), ೩೪೩, ೩೭೬(೨)(ಎನ್) ಭಾ.ದಂ.ಸಂ ಮತ್ತು ಕಲಂ: ೪, ೬, ೧೨ ಪೋಕ್ಸೋ ಕಾಯ್ದೆ-೨೦೧೨ ಹಾಗೂ ೯ ಬಾಲ್ಯ ವಿವಾದ ನಿ?ಧ ಕಾಯ್ದೆ-೨೦೦೬ ರಡಿಯಲ್ಲಿ ಅಪಾದನೆಗಳನ್ನು ಅಭಿಯೋಜನೆಯು ರುಜುವಾತುಪಡಿಸಿರುತ್ತದೆ. ನ್ಯಾಯಾಧೀಶರು ಮೇಲಿನಂತೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದು, ಸದರಿ ದಂಡದ ಹಣದಲ್ಲಿ ನೊಂದ ಬಾಲಕಿಗೆ ರೂ.೧,೦೦,೦೦೦/-ಗಳ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಇರುವ ಪರಿಹಾರ ನಿಧಿಯಿಂದ ಕರ್ನಾಟಕ ಸರ್ಕಾರವು ನೊಂದ ಬಾಲಕಿಗೆ ರೂ. ೪,೦೦,೦೦೦/- ಗಳ ಪರಿಹಾರ ನೀಡಬೇಕೆಂದು ಎಂದು ನವೆಂಬರ್ ೦೭ರಂದು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ್ ಪ್ರಕರಣ ನಡೆಸಿ ವಾದ ಮಂಡಿಸಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಅಣ್ಣಪ್ಪ ಕಬ್ಬೂರಿಗೆ ೨೦ ವರ್ಷ ಜೈಲು
ಹಾವೇರಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಣ್ಣಪ್ಪ ಹನುಮಂತಪ್ಪ ಕಬ್ಬೂರ ಎಂಬಾತನಿಗೆ ೨೦ ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ರೂ.೧.೮೦ ಲಕ್ಷ ದಂಡ ವಿಧಿಸಿ ಹಾವೇರಿ ವಿಶೇಷ ಸತ್ರ ನ್ಯಾಯಾಲಯ(ಎಫ್.ಟಿ.ಎಸ್.ಸಿ-೧)ದ ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು ಮಂಗಳವಾರ ತೀರ್ಪು ನೀಡಿದ್ದಾರೆ.
ಹಿರೇಕೆರೂರು ತಾಲೂಕು ಪುರಕೊಂಡಿಕೊಪ್ಪದ ಆರೋಪಿ ಅಣ್ಣಪ್ಪ ಹನುಮಂತಪ್ಪ ಕಬ್ಬೂರ ಎಂಬಾತ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ದಿನಾಂಕ ೨೭-೦೯-೨೦೧೯ ರಂದು ರಾತ್ರಿ ಅಪಹರಣಮಾಡಿಕೊಂಡು ಹೋಗಿ, ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕು ದ್ಯಾರಮಕ್ಕಿ ಬಡಗದಬೈಲ್ ಗ್ರಾಮದ ಕಾಫಿ ಎಸ್ಟೇಟ್ ಮನೆಯಲ್ಲಿ ಬಾಕಿಲಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ನೊಂದ ಬಾಲಕಿಗೆ ಶಿವಮೊಗ್ಗದ ಗಣಪತಿ ದೇವಸ್ಥಾನದಲ್ಲಿ ತಾಳಿ ಕಟ್ಟಿ ಮದುವೆಯಾಗಿದ್ದಾಗಿ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹಿರೇಕೆರೂರು ವೃತ್ತದ ತನಿಖಾಧಿಕಾರಿ ಸಿಪಿಐ ಮಂಜುನಾಥ್ ಪಂಡಿತ್ ಅವರು ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆರೋಪಿ ಅಣ್ಣಪ್ಪ ಹನುಮಂತಪ್ಪ ಕಬ್ಬೂರ ಮೇಲೆ ಹೊರಿಸಲಾದ ಆಪಾಧನೆಗಳಾದ ಕಲಂ ೩೬೩, ೩೫೪(ಡಿ), ೩೪೩, ೩೭೬(೨)(ಎನ್) ಭಾ.ದಂ.ಸಂ ಮತ್ತು ಕಲಂ: ೪, ೬, ೧೨ ಪೋಕ್ಸೋ ಕಾಯ್ದೆ-೨೦೧೨ ಹಾಗೂ ೯ ಬಾಲ್ಯ ವಿವಾದ ನಿ?ಧ ಕಾಯ್ದೆ-೨೦೦೬ ರಡಿಯಲ್ಲಿ ಅಪಾದನೆಗಳನ್ನು ಅಭಿಯೋಜನೆಯು ರುಜುವಾತುಪಡಿಸಿರುತ್ತದೆ. ನ್ಯಾಯಾಧೀಶರು ಮೇಲಿನಂತೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದು, ಸದರಿ ದಂಡದ ಹಣದಲ್ಲಿ ನೊಂದ ಬಾಲಕಿಗೆ ರೂ.೧,೦೦,೦೦೦/-ಗಳ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಇರುವ ಪರಿಹಾರ ನಿಧಿಯಿಂದ ಕರ್ನಾಟಕ ಸರ್ಕಾರವು ನೊಂದ ಬಾಲಕಿಗೆ ರೂ. ೪,೦೦,೦೦೦/- ಗಳ ಪರಿಹಾರ ನೀಡಬೇಕೆಂದು ಎಂದು ನವೆಂಬರ್ ೦೭ರಂದು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ್ ಪ್ರಕರಣ ನಡೆಸಿ ವಾದ ಮಂಡಿಸಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...