ಹಾವೇರಿ:ಬೆಂಕಿ ಅವಘಡ, ಏಳು ಲಕ್ಷ ರೂ ಮೌಲ್ಯದ ಮೆಕ್ಕೆಜೋಳ ನಾಶ 

Date:

ಹಾವೇರಿ:ಬೆಂಕಿ ಅವಘಡ, ಏಳು ಲಕ್ಷ ರೂ ಮೌಲ್ಯದ ಮೆಕ್ಕೆಜೋಳ ನಾಶ

ಹಾವೇರಿ ; ಇಲ್ಲಿನ ನಾಗೇಂದ್ರನ ಮಟ್ಟಿಯಲ್ಲಿರುವ ಕಣಿಯ ಬಳಿ ಕಣದಲ್ಲಿ ಸಂಗ್ರಹಿಸಲಾಗಿದ್ದ ಅಂದಾಜು 17 ಟ್ಯಾಕ್ಟರ್ ಮೆಕ್ಕೆಜೋಳದ ತೆನೆಯಬಣವಿಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಅಂದಾಜು 7 ಲಕ್ಷ ರೂ ಮೌಲ್ಯದ ಮೆಕ್ಕೆಜೋಳ ಸುಟ್ಟು ಬಸ್ಮವಾಗಿರುವ ಘಟನೆ ಭಾನುವಾರ ನಡೆದಿದೆ.
 ನಾಗೇಂದ್ರ ಮಟ್ಟಿಯಲ್ಲಿ ಭಾನುವಾರ ಸಿದ್ದರಾಮೇಶ್ವರ ಜಾತ್ರೆಯಲ್ಲಿ ಜನತೆ ಭಾಗವಹಿಸಿದ್ದ ವೇಳೆ ಯಾರೋ ದುಷ್ಕರ್ಮಿಗಳು ಮೆಕ್ಕೆಜೋಳದ ಬಣವಿಗೆ ಬೆಂಕಿ ಹಚ್ಚಿದ ಕಾರಣ ಶಿವಬಸಪ್ಪ ಮುದ್ದಿ ಎನ್ನುವವರಿಗೆ ಸೇರಿದ್ದ ಮೆಕ್ಕೆಜೋಳದ ಬಣವಿ ಸುಟ್ಟು ಹೋಗಿದೆ.
 ಸ್ಥಳಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವಾಹನಗಳಲ್ಲಿ ಆಗಮಿಸಿ ಬೆಂಕಿ ನಂದಿಸಲು ಶ್ರಮಿಸಿದರು.ಆದರೆ ಅದಾಗಲೇ ಬೆಂಕಿಯ ಕೆನ್ನಾಲಿಗೆ ಮೆಕ್ಕೆಜೋಳದ ಬಣವಿಯನ್ನು ಆವರಿಸಿಕೊಂಡು ಮೆಕ್ಕೆಜೋಳದ ತೆನೆಗಳು ಸುಟ್ಟು ಹೋಗಿವೆ. ಸ್ಥಳೀಯರು ಸಹ ಬೆಂಕಿ ನಂದಿಸಲು ಶ್ರಮಿಸಿದರು ಬೆಂಕಿ ಹತೋಟಿಗೆ ಬರದೆ ಮೆಕ್ಕೆಜೋಳದ ಬಣವಿ ಸುಟ್ಟಿದೆ.
 ಶಿವಬಸಪ್ಪ ಮುದ್ದಿ ಅವರು ತಮ್ಮ೧೭ ಎಕರೆ ನೀರಾವರಿ ಹಾಗೂ ಮಳೆಯಾಶ್ರಿತ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆದಿದ್ದರು.ಇನ್ನೇನು ಮೆಕ್ಕೆಜೋಳ ದ ಒಕ್ಕಲುಮಾಡಬೇಕೆಂದುತಯಾರಿದ್ದರು.ಆದರೆ   ಅಗ್ನಿ ಅವಘಡದಿಂದ ೭ಲಕ್ಷರೂ ಮೌಲ್ಯ ದ ಬೆಳೆಹಾಳಾಗಿದೆ.
ಪರಿಹಾರ ಕ್ಕೆ ಆಗ್ರಹ :೧೭ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸುಟ್ಟಿದ್ದು, ಆಕಸ್ಮಿಕವಾಗಿ ಬೆಂಕಿ ತಗಲಿ ಅಂದಾಜು 7 ಲಕ್ಷ ರೂ ಮೌಲ್ಯದ ಮೆಕ್ಕೆಜೋಳ ಹಾಳಾಗಿದ್ದು, ಜಿಲ್ಲಾಡಳಿತ ಸೂಕ್ತ ಪರಿಹಾರವನ್ನು ನೀಡಬೇಕೆಂದು ನಗರಸಭೆಯ ಮಾಜಿ ಸದಸ್ಯ  ಮಲ್ಲೇಶಪ್ಪ ಪಟ್ಟಣಶೆಟ್ಟಿ ಆಗ್ರಹಿಸಿದ್ದಾರೆ.

 

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿ:ಬೆಂಕಿ ಅವಘಡ, ಏಳು ಲಕ್ಷ ರೂ ಮೌಲ್ಯದ ಮೆಕ್ಕೆಜೋಳ ನಾಶ

ಹಾವೇರಿ ; ಇಲ್ಲಿನ ನಾಗೇಂದ್ರನ ಮಟ್ಟಿಯಲ್ಲಿರುವ ಕಣಿಯ ಬಳಿ ಕಣದಲ್ಲಿ ಸಂಗ್ರಹಿಸಲಾಗಿದ್ದ ಅಂದಾಜು 17 ಟ್ಯಾಕ್ಟರ್ ಮೆಕ್ಕೆಜೋಳದ ತೆನೆಯಬಣವಿಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಅಂದಾಜು 7 ಲಕ್ಷ ರೂ ಮೌಲ್ಯದ ಮೆಕ್ಕೆಜೋಳ ಸುಟ್ಟು ಬಸ್ಮವಾಗಿರುವ ಘಟನೆ ಭಾನುವಾರ ನಡೆದಿದೆ.
 ನಾಗೇಂದ್ರ ಮಟ್ಟಿಯಲ್ಲಿ ಭಾನುವಾರ ಸಿದ್ದರಾಮೇಶ್ವರ ಜಾತ್ರೆಯಲ್ಲಿ ಜನತೆ ಭಾಗವಹಿಸಿದ್ದ ವೇಳೆ ಯಾರೋ ದುಷ್ಕರ್ಮಿಗಳು ಮೆಕ್ಕೆಜೋಳದ ಬಣವಿಗೆ ಬೆಂಕಿ ಹಚ್ಚಿದ ಕಾರಣ ಶಿವಬಸಪ್ಪ ಮುದ್ದಿ ಎನ್ನುವವರಿಗೆ ಸೇರಿದ್ದ ಮೆಕ್ಕೆಜೋಳದ ಬಣವಿ ಸುಟ್ಟು ಹೋಗಿದೆ.
 ಸ್ಥಳಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವಾಹನಗಳಲ್ಲಿ ಆಗಮಿಸಿ ಬೆಂಕಿ ನಂದಿಸಲು ಶ್ರಮಿಸಿದರು.ಆದರೆ ಅದಾಗಲೇ ಬೆಂಕಿಯ ಕೆನ್ನಾಲಿಗೆ ಮೆಕ್ಕೆಜೋಳದ ಬಣವಿಯನ್ನು ಆವರಿಸಿಕೊಂಡು ಮೆಕ್ಕೆಜೋಳದ ತೆನೆಗಳು ಸುಟ್ಟು ಹೋಗಿವೆ. ಸ್ಥಳೀಯರು ಸಹ ಬೆಂಕಿ ನಂದಿಸಲು ಶ್ರಮಿಸಿದರು ಬೆಂಕಿ ಹತೋಟಿಗೆ ಬರದೆ ಮೆಕ್ಕೆಜೋಳದ ಬಣವಿ ಸುಟ್ಟಿದೆ.
 ಶಿವಬಸಪ್ಪ ಮುದ್ದಿ ಅವರು ತಮ್ಮ೧೭ ಎಕರೆ ನೀರಾವರಿ ಹಾಗೂ ಮಳೆಯಾಶ್ರಿತ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆದಿದ್ದರು.ಇನ್ನೇನು ಮೆಕ್ಕೆಜೋಳ ದ ಒಕ್ಕಲುಮಾಡಬೇಕೆಂದುತಯಾರಿದ್ದರು.ಆದರೆ   ಅಗ್ನಿ ಅವಘಡದಿಂದ ೭ಲಕ್ಷರೂ ಮೌಲ್ಯ ದ ಬೆಳೆಹಾಳಾಗಿದೆ.
ಪರಿಹಾರ ಕ್ಕೆ ಆಗ್ರಹ :೧೭ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸುಟ್ಟಿದ್ದು, ಆಕಸ್ಮಿಕವಾಗಿ ಬೆಂಕಿ ತಗಲಿ ಅಂದಾಜು 7 ಲಕ್ಷ ರೂ ಮೌಲ್ಯದ ಮೆಕ್ಕೆಜೋಳ ಹಾಳಾಗಿದ್ದು, ಜಿಲ್ಲಾಡಳಿತ ಸೂಕ್ತ ಪರಿಹಾರವನ್ನು ನೀಡಬೇಕೆಂದು ನಗರಸಭೆಯ ಮಾಜಿ ಸದಸ್ಯ  ಮಲ್ಲೇಶಪ್ಪ ಪಟ್ಟಣಶೆಟ್ಟಿ ಆಗ್ರಹಿಸಿದ್ದಾರೆ.

 

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ: ಸಚಿವ ಸಂಪುಟ ಅಸ್ತು

೫೨ ಕೋಟಿ ರೂ. ವೆಚ್ಚದಲ್ಲಿ ಮದಗ-ಮಾಸೂರು ಕೆರೆ ನಾಲೆಗಳ ದುರಸ್ತಿ:...

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್  

ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ :ಕೆ.ವಿ.ಪ್ರಭಾಕರ್     ಹಾವೇರಿ : ರಾಗಿಕಾಳಿಗೆ ಭೂಮಿಯನ್ನೇ...

ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ

  ಹಾವೇರಿಯ ಗೆಳೆಯರ ಬಳಗಕ್ಕೆ ಪ್ರತಿಷ್ಠಿತ ರಾ.ಹ. ದೇಶಪಾಂಡೆ ಪ್ರಶಸ್ತಿಯ ಸಂಭ್ರಮ ಹಾವೇರಿ _...

“ಎಕ್ಕ ಪೈಸಾ ವಸೂಲಿ ಪಕ್ಕಾ”

"ಎಕ್ಕ ಪೈಸಾ ವಸೂಲಿ ಪಕ್ಕಾ" ಬಹುದಿನಗಳ ನಂತರ ಪಕ್ಕಾ ಪೈಸಾ ವಸೂಲಿ ಎನ್ನಬಹುದಾದ...