ಹಾವೇರಿಯ ಬಳಿ ಅಪಘಾತದಲ್ಲಿ ಮೃತ ಪಟ್ಟಿರುವ ೧೩ ಜನರ ಕುಟುಂಬದವರಿಗೆ ತಲಾ ೫೦ಸಾವಿರರೂ ಪರಿಹಾರ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

Date:

ಹಾವೇರಿಯ ಬಳಿ ಅಪಘಾತದಲ್ಲಿ ಮೃತ ಪಟ್ಟಿರುವ ೧೩ ಜನರ ಕುಟುಂಬದವರಿಗೆ ತಲಾ ೫೦ಸಾವಿರರೂ ಪರಿಹಾರ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಹಾವೇರಿ: ಬ್ಯಾಡಗಿ ಸಮೀಪದ ಗುಂಡೇನಹಳ್ಳಿಕ್ರಾಸ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೧೩ ಜನ ದುರ್ಮರಣಕ್ಕೀಡಾಗಿರುವುದು ತೀವ್ರ ನೋವಿನ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ. ಘಟನೆ ಬಗ್ಗೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು , ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ವೈಯಕ್ತಿಕವಾಗಿ ತಲಾ ೫೦ ಸಾವಿರ ರೂ. ಪರಿಹಾರ ವಿತರಣೆ ಮಾಡಿದ್ದಾರೆ. ಶುಕ್ರವಾರ ಸಚಿವರ ಪರವಾಗಿ ಪರಿಹಾರದ ಹಣವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಕಾಂಗ್ರೆಸ್ ಮುಖಂಡರಗಳಾದ ಕೆ.ಆರ್.ಬಸೇಗೆಣ್ಣಿ, ಪ್ರಭು ಬಿಷ್ಟನಗೌಡ್ರ ಮತ್ತಿತರರು ಹಾವೇರಿಯ ಬಳಿ ಅಪಘಾತದಲ್ಲಿ ಮೃತ ಪಟ್ಟಿರುವ ೧೩ ಜನರ ಕುಟುಂಬದವರಿಗೆ ತಲಾ ೫೦ಸಾವಿರರೂ ಪರಿಹಾರ ನೀಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹಾವೇರಿಯ ಬಳಿ ಅಪಘಾತದಲ್ಲಿ ಮೃತ ಪಟ್ಟಿರುವ ೧೩ ಜನರ ಕುಟುಂಬದವರಿಗೆ ತಲಾ ೫೦ಸಾವಿರರೂ ಪರಿಹಾರ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಹಾವೇರಿ: ಬ್ಯಾಡಗಿ ಸಮೀಪದ ಗುಂಡೇನಹಳ್ಳಿಕ್ರಾಸ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೧೩ ಜನ ದುರ್ಮರಣಕ್ಕೀಡಾಗಿರುವುದು ತೀವ್ರ ನೋವಿನ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ. ಘಟನೆ ಬಗ್ಗೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು , ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ವೈಯಕ್ತಿಕವಾಗಿ ತಲಾ ೫೦ ಸಾವಿರ ರೂ. ಪರಿಹಾರ ವಿತರಣೆ ಮಾಡಿದ್ದಾರೆ. ಶುಕ್ರವಾರ ಸಚಿವರ ಪರವಾಗಿ ಪರಿಹಾರದ ಹಣವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಕಾಂಗ್ರೆಸ್ ಮುಖಂಡರಗಳಾದ ಕೆ.ಆರ್.ಬಸೇಗೆಣ್ಣಿ, ಪ್ರಭು ಬಿಷ್ಟನಗೌಡ್ರ ಮತ್ತಿತರರು ಹಾವೇರಿಯ ಬಳಿ ಅಪಘಾತದಲ್ಲಿ ಮೃತ ಪಟ್ಟಿರುವ ೧೩ ಜನರ ಕುಟುಂಬದವರಿಗೆ ತಲಾ ೫೦ಸಾವಿರರೂ ಪರಿಹಾರ ನೀಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...