
ಹಾವೇರಿ: ಪ್ರೋತ್ಸಾಹ ಧನ ಬಿಡುಗಡೆಗೆ ಲಂಚ-ಸಮಾಲೋಚಕ ಲೋಕಾಯುಕ್ತ ಬಲೆಗೆ
ಹಾವೇರಿ: ಪ್ರೋತ್ಸಾಹ ಧನ ಬಿಡುಗಡೆಗೆ ಲಂಚ ಪಡೆಯುತ್ತಿದ್ದ ವೇಳೆ ಪ್ರವಾಸೋದ್ಯಮ ಇಲಾಖೆ ಜಿಲ್ಲಾ ಸಮಾಲೋಚಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿಯಲ್ಲಿ ಮಂಗಳವಾರ ನಡೆದಿದೆ. ಮೊಬೈಲ್ ಕ್ಯಾಂಟಿನ್ ಪೋತ್ಸಾಹ ಧನ ಬಿಡುಗಡೆಗೆ ೨೦ ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲಂಚ ಸ್ವೀಕಾರ ಮಾಡುತ್ತಿದ್ದ ಮಲಕಸಾಬ್ ನದಾಫ್ ಲೋಕಾ ಬಲೆಗೆ ಬಿದ್ದಿದ್ದಾರೆ.
ರವಿಚಂದ್ರ ಮೈದೂರು ಎನ್ನುವವರು ಮೊಬೈಲ್ ಕ್ಯಾಂಟೀನ್ ಪೋತ್ಸಾಹ ಧನಕ್ಕೆ ಅರ್ಜಿ ಹಾಕಿದ್ದರು. ಪ್ರೋತ್ಸಾಹ ಧನ ಬಿಡುಗಡೆಗೆ ಹಾವೇರಿ ನಗರದ ಜಿಲ್ಲಾಕ್ರೀಡಾಂಗಣದ ಬಳಿ ಇರುವ ರಸ್ತೆಯಲ್ಲಿ ಮಲಕಸಾಬ್ ಲಂಚ ಸ್ವೀಕಾರ ಮಾಡುತ್ತಿದ್ದರು. ಪ್ರವಾಸೋದ್ಯಮ ಇಲಾಖೆ ಜಿಲ್ಲಾ ಸಮಾಲೋಚಕ ಮಲಕಸಾಬ್ ನನ್ನ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಮಧುಸೂದನ್ ನೇತೃತ್ವದಲ್ಲಿ ಆರೋಪಿ ಬಂಧಿಸಲಾಗಿದೆ. ಈ ಕುರಿತಂತೆ ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

