ಹಾವೇರಿ ಬ್ರೇಕಿಂಗ್: ಮಾರಕಾಸ್ತ್ರಗಳಿಂದ ವ್ಯಕ್ತಿಯೊರ್ವನ ಹತ್ಯೆ, ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮದಲ್ಲಿ ಘಟನೆ
ಹಾವೇರಿ; ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಹತ್ಯೆಮಾಡಿ ಚಾಪೆಯಲ್ಲಿ ಸುತ್ತಿ ಜಮೀನಿನಲ್ಲಿ ಬಿಸಾಕಿರುವ ಘಟ ಜಿಲ್ಲೆಯ ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮದಬಳಿ ನಡೆದಿದೆ. ವ್ಯಕ್ತಿಯ ತಲೆ ಹಾಗೂ ಗುಪ್ತಾಂಗಕ್ಕೆ ಹೊಡೆದು ಅಪರಿಚಿತ ವ್ಯಕ್ತಿಯ ಕೊಲೆಯಾಗಿದೆ. ದುಷ್ಕರ್ಮಿಗಳು ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಈ ಕೃತ್ಯ ಮಾಡಿದ್ದಾರೆ ಎನ್ನಲಾಗತ್ತಿದೆ.
ಮೃತನು ಒಂದು ಕೋಮಿಗೆ ಸೇರಿದವನು ಎಂದು ಗುರುತಿಸಲಾಗಿದೆ. ಭಯಾನಕವಾಗಿ ಕೊಲೆಗೈದು ಬಿಸಾಡಿರುವ ಮೃತದೇಹ ಕಂಡು ಜಮೀನು ಮಾಲೀಕ ಹಾಗೂ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮದ ಬಳಿ ಚಂದ್ರಕಾಂತ ಕುಬಿಹಾಳ ಎಂಬುವವರ ಜಮೀನಿನಲ್ಲಿ ಗಂಡಸಿನ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ ಎಂದು ತಿಳಿದು ಬಂದಿದೆ.
ಹಾವೇರಿ ಬ್ರೇಕಿಂಗ್: ಮಾರಕಾಸ್ತ್ರಗಳಿಂದ ವ್ಯಕ್ತಿಯೊರ್ವನ ಹತ್ಯೆ, ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮದಲ್ಲಿ ಘಟನೆ
Date:
ಹಾವೇರಿ ಬ್ರೇಕಿಂಗ್: ಮಾರಕಾಸ್ತ್ರಗಳಿಂದ ವ್ಯಕ್ತಿಯೊರ್ವನ ಹತ್ಯೆ, ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮದಲ್ಲಿ ಘಟನೆ
ಹಾವೇರಿ; ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಹತ್ಯೆಮಾಡಿ ಚಾಪೆಯಲ್ಲಿ ಸುತ್ತಿ ಜಮೀನಿನಲ್ಲಿ ಬಿಸಾಕಿರುವ ಘಟ ಜಿಲ್ಲೆಯ ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮದಬಳಿ ನಡೆದಿದೆ. ವ್ಯಕ್ತಿಯ ತಲೆ ಹಾಗೂ ಗುಪ್ತಾಂಗಕ್ಕೆ ಹೊಡೆದು ಅಪರಿಚಿತ ವ್ಯಕ್ತಿಯ ಕೊಲೆಯಾಗಿದೆ. ದುಷ್ಕರ್ಮಿಗಳು ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಈ ಕೃತ್ಯ ಮಾಡಿದ್ದಾರೆ ಎನ್ನಲಾಗತ್ತಿದೆ.
ಮೃತನು ಒಂದು ಕೋಮಿಗೆ ಸೇರಿದವನು ಎಂದು ಗುರುತಿಸಲಾಗಿದೆ. ಭಯಾನಕವಾಗಿ ಕೊಲೆಗೈದು ಬಿಸಾಡಿರುವ ಮೃತದೇಹ ಕಂಡು ಜಮೀನು ಮಾಲೀಕ ಹಾಗೂ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಹಾನಗಲ್ ತಾಲೂಕಿನ ಜಿಗಳಿಕೊಪ್ಪ ಗ್ರಾಮದ ಬಳಿ ಚಂದ್ರಕಾಂತ ಕುಬಿಹಾಳ ಎಂಬುವವರ ಜಮೀನಿನಲ್ಲಿ ಗಂಡಸಿನ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ ಎಂದು ತಿಳಿದು ಬಂದಿದೆ.