ಹಾವೇರಿ: ವಿಧಾನಸಭಾ ಚುನಾವಣೆ: ಎರಡನೇ ದಿನ ಶನಿವಾರ ಮೂರು ನಾಮಪತ್ರ ಸಲ್ಲಿಕೆ
ಹಾವೇರಿ : ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಎರಡನೇ ದಿನವಾದ ಏಪ್ರಿಲ್ ೧೫ ರಂದು ಜಿಲ್ಲೆಯ ವಿವಿಧ ಪಕ್ಷಗಳ ಇಬ್ಬರು ಅಭ್ಯರ್ಥಿಗಳಿಂದ ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.
ಶಿಗ್ಗಾಂವ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವ ಸಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ ಮತ್ತಿತರರು ಇದ್ದರು.
ಶಿಗ್ಗಾಂವ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಶಂಭುಲಿಂಗ ಹುಕ್ಕೇರಿ ಅವರು ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಹಾನಗಲ್, ಹಾವೇರಿ ಹಾಗೂ ಬ್ಯಾಡಗಿ, ಹಿರೇಕೆರೂರು ಹಾಗೂ ರಾಣೇಬೆನ್ನೂರು ಕ್ಷೇತ್ರದಿಂದ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ. ಈವರೆಗೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಒಂಭತ್ತು ಅಭ್ಯರ್ಥಿಗಳಿಂದ ೧೩ ನಾಮಪತ್ರಗಳು ಸಲ್ಲಿಕೆಯಾಗಿವೆ. ಏಪ್ರಿಲ್ ೧೬ರ ಭಾನುವಾರ ಸಾರ್ವತ್ರಿಕ ರಜೆ ಕಾರಣ ನಾಮಪತ್ರ ಸಲ್ಲಿಕೆ ಇರುವುದಿಲ್ಲ.
ಹಾವೇರಿ: ವಿಧಾನಸಭಾ ಚುನಾವಣೆ: ಎರಡನೇ ದಿನ ಶನಿವಾರ ಮೂರು ನಾಮಪತ್ರ ಸಲ್ಲಿಕೆ
Date:
ಹಾವೇರಿ: ವಿಧಾನಸಭಾ ಚುನಾವಣೆ: ಎರಡನೇ ದಿನ ಶನಿವಾರ ಮೂರು ನಾಮಪತ್ರ ಸಲ್ಲಿಕೆ
ಹಾವೇರಿ : ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಎರಡನೇ ದಿನವಾದ ಏಪ್ರಿಲ್ ೧೫ ರಂದು ಜಿಲ್ಲೆಯ ವಿವಿಧ ಪಕ್ಷಗಳ ಇಬ್ಬರು ಅಭ್ಯರ್ಥಿಗಳಿಂದ ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.
ಶಿಗ್ಗಾಂವ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವ ಸಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ ಮತ್ತಿತರರು ಇದ್ದರು.
ಶಿಗ್ಗಾಂವ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಶಂಭುಲಿಂಗ ಹುಕ್ಕೇರಿ ಅವರು ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಹಾನಗಲ್, ಹಾವೇರಿ ಹಾಗೂ ಬ್ಯಾಡಗಿ, ಹಿರೇಕೆರೂರು ಹಾಗೂ ರಾಣೇಬೆನ್ನೂರು ಕ್ಷೇತ್ರದಿಂದ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ. ಈವರೆಗೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಒಂಭತ್ತು ಅಭ್ಯರ್ಥಿಗಳಿಂದ ೧೩ ನಾಮಪತ್ರಗಳು ಸಲ್ಲಿಕೆಯಾಗಿವೆ. ಏಪ್ರಿಲ್ ೧೬ರ ಭಾನುವಾರ ಸಾರ್ವತ್ರಿಕ ರಜೆ ಕಾರಣ ನಾಮಪತ್ರ ಸಲ್ಲಿಕೆ ಇರುವುದಿಲ್ಲ.