ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

Date:

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ
ಹಾವೇರಿ; ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೌರ ನೌಕರರು ಮೇ ೨೭ ರಿಂದ ಮೇ ೩೦ರವರೆಗೆ ನಡೆಸಿದ ಮುಷ್ಕರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪೌರ ನೌಕರರ ಬೇಡಿಕೆಗಳ ಈಡೇರಿಕೆಗೆ ಕಾಲಾವಕಾಶ ಕೋರಿ ಕರ್ನಾಟಕ ರಾಜ್ಯ ಪೌರ ನೌಕರರ ರಾಜ್ಯ ಸಂಘದ ಮುಖಂಡರೊಂದಿಗೆ ಮಾತನಾಡಿ ಮುಷ್ಕರವನ್ನು ವಾಪಸ ಪಡೆಯುವಂತೆ ಕೋರಿದ ಹಿನ್ನಲೆಯಲ್ಲಿ, ಸಾರ್ವಜನಿಕ ಹಿತ ದೃಷ್ಟಿಯಿಂದ ಮುಷ್ಕರವನ್ನು ವಾಪಾಸ ಪಡೆದಿರುವುದಾಗಿ, ಮುಷ್ಕರವನ್ನು ಬೆಂಬಲಿಸಿದ ಜನಪ್ರತಿನಿಧಿಗಳಿಗೆ, ವಿವಿಧ ಸಂಘ-ಸಂಸ್ಥೆಗಳಿಗೆ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಪೌರ ನೌಕರರನ್ನು ಸರ್ಕಾರಿ ನೌಕರರು ಎಂದು ಘೋಷಿಸುವುದು, ಕೆ.ಜಿ.ಅಯ್.ಡಿ-ಜಿ.ಪಿ.ಎಫ್, ಜ್ಯೋತಿ ಸಂಜೀವಿನಿ ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡುವುದು ಹಾಗೂ ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ಸ್ ಕ್ಲಿನರ್ಸ,ಪೌರ ಕಾರ್ಮಿಕರು , ಸೂಪರ್ವೈಸರ್, ವಾಹನ ಚಾಲಕರು, ಕಂಪ್ಯೂಟರ್ ಆಪರೇಟರ್, ಜೂನಿಯರ್ ಪ್ರೋಗ್ರಾಮರ್, ಇನ್ನಿತರ ಗುತ್ತಿಗೆ ಹೊರಗುತ್ತಿಗೆ ಮೂಲಕ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ನೇರ ಪಾವತಿ ವೇತನ ನೀಡುವು ಇತರೆ ೧೯ ನ್ಯಾಯಯುತ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಗಿತ್ತು.
ಪೌರ ನೌಕರರ ಮುಷ್ಕರವನ್ನು ಬೆಂಬಲಿಸಿದ ವಿಧಾನಸಭೆಯ ಉಪಸಭಾಪತಿಗಳು, ಶಾಸಕರಾದ ರುದ್ರಪ್ಪ ಲಮಾಣಿ, ಹಾವೇರಿನಗರಸಭೆಯ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ರಾಮು ಮಾಳಗಿ, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಸಾತೇನಹಳ್ಳಿ ಸೇರಿದಂತೆ ನಗರಸಭೆಯ ಸದಸ್ಯರಿಗೆ, ಸಾರ್ವಜನಿಕರಿಗೆ ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ಘಟಕದ ಹಾಗೂ ಹೊರಗುತ್ತಿಗೆ ನೌಕರರ ಸಂಘದವತಿಯಿಂದ ಪದಾಧಿಕಾರಿಗಳಾದ ಚಂದ್ರು ಬಿದರಿ, ನಾಗರಾಜ ಮರಡಿಮನಿ, ಮಾಲತೇಶ ತಿಗಳಣ್ಣನವರ, ರಮೇಶ ಮಂಜೋಜಿ, ರಾಜು ಹೊಸಮನಿ, ರಾಜು ಮಾಳಗಿ, ನಾಗೇಶ ಮಲ್ಲೋಲ, ಯಲ್ಲಪ್ಪ ಕೋಡಬಾಳ,ಸುಮಂತ ಬಣಕಾರ, ಮಹಮ್ಮದಗೌಸ ಅಗಡಿ ಮತ್ತಿತರರು ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ
ಹಾವೇರಿ; ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೌರ ನೌಕರರು ಮೇ ೨೭ ರಿಂದ ಮೇ ೩೦ರವರೆಗೆ ನಡೆಸಿದ ಮುಷ್ಕರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪೌರ ನೌಕರರ ಬೇಡಿಕೆಗಳ ಈಡೇರಿಕೆಗೆ ಕಾಲಾವಕಾಶ ಕೋರಿ ಕರ್ನಾಟಕ ರಾಜ್ಯ ಪೌರ ನೌಕರರ ರಾಜ್ಯ ಸಂಘದ ಮುಖಂಡರೊಂದಿಗೆ ಮಾತನಾಡಿ ಮುಷ್ಕರವನ್ನು ವಾಪಸ ಪಡೆಯುವಂತೆ ಕೋರಿದ ಹಿನ್ನಲೆಯಲ್ಲಿ, ಸಾರ್ವಜನಿಕ ಹಿತ ದೃಷ್ಟಿಯಿಂದ ಮುಷ್ಕರವನ್ನು ವಾಪಾಸ ಪಡೆದಿರುವುದಾಗಿ, ಮುಷ್ಕರವನ್ನು ಬೆಂಬಲಿಸಿದ ಜನಪ್ರತಿನಿಧಿಗಳಿಗೆ, ವಿವಿಧ ಸಂಘ-ಸಂಸ್ಥೆಗಳಿಗೆ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಪೌರ ನೌಕರರನ್ನು ಸರ್ಕಾರಿ ನೌಕರರು ಎಂದು ಘೋಷಿಸುವುದು, ಕೆ.ಜಿ.ಅಯ್.ಡಿ-ಜಿ.ಪಿ.ಎಫ್, ಜ್ಯೋತಿ ಸಂಜೀವಿನಿ ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡುವುದು ಹಾಗೂ ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ಸ್ ಕ್ಲಿನರ್ಸ,ಪೌರ ಕಾರ್ಮಿಕರು , ಸೂಪರ್ವೈಸರ್, ವಾಹನ ಚಾಲಕರು, ಕಂಪ್ಯೂಟರ್ ಆಪರೇಟರ್, ಜೂನಿಯರ್ ಪ್ರೋಗ್ರಾಮರ್, ಇನ್ನಿತರ ಗುತ್ತಿಗೆ ಹೊರಗುತ್ತಿಗೆ ಮೂಲಕ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ನೇರ ಪಾವತಿ ವೇತನ ನೀಡುವು ಇತರೆ ೧೯ ನ್ಯಾಯಯುತ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಗಿತ್ತು.
ಪೌರ ನೌಕರರ ಮುಷ್ಕರವನ್ನು ಬೆಂಬಲಿಸಿದ ವಿಧಾನಸಭೆಯ ಉಪಸಭಾಪತಿಗಳು, ಶಾಸಕರಾದ ರುದ್ರಪ್ಪ ಲಮಾಣಿ, ಹಾವೇರಿನಗರಸಭೆಯ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ರಾಮು ಮಾಳಗಿ, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಸಾತೇನಹಳ್ಳಿ ಸೇರಿದಂತೆ ನಗರಸಭೆಯ ಸದಸ್ಯರಿಗೆ, ಸಾರ್ವಜನಿಕರಿಗೆ ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ಘಟಕದ ಹಾಗೂ ಹೊರಗುತ್ತಿಗೆ ನೌಕರರ ಸಂಘದವತಿಯಿಂದ ಪದಾಧಿಕಾರಿಗಳಾದ ಚಂದ್ರು ಬಿದರಿ, ನಾಗರಾಜ ಮರಡಿಮನಿ, ಮಾಲತೇಶ ತಿಗಳಣ್ಣನವರ, ರಮೇಶ ಮಂಜೋಜಿ, ರಾಜು ಹೊಸಮನಿ, ರಾಜು ಮಾಳಗಿ, ನಾಗೇಶ ಮಲ್ಲೋಲ, ಯಲ್ಲಪ್ಪ ಕೋಡಬಾಳ,ಸುಮಂತ ಬಣಕಾರ, ಮಹಮ್ಮದಗೌಸ ಅಗಡಿ ಮತ್ತಿತರರು ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ರೈತ ಆತ್ಮಹತ್ಯೆಯಲ್ಲಿ ಹಾವೇರಿಜಿಲ್ಲೆಗಿದೆ ರಾಜ್ಯದಲ್ಲಿ  ಪ್ರಥಮ ಸ್ಥಾನ

ಕಳೆದ ವರ್ಷಅತಿ ವ್ಯಷ್ಟಿ ಯಿಂದ ಬೆಳೆದ ಬೆಳೆ ನೀರು ಪಾಲಾಗಿರುವುದು. -ಸರ್ಕಾರಕ್ಕೆ ಎರಡು...