ಹೊರಗುತ್ತಿಗೆ ನೌಕರರ ನೇರಪಾವತಿಗೊಳಪಡಿಸಲು ಆಗ್ರಹಿಸಿ ನ. ೧೫ ರಂದು ಡಿ.ಸಿ. ಕಚೇರಿ ಎದುರು ಧರಣಿ;ರಾಜಪ್ಪ ಹೊಸಮನಿ
ಹಾವೇರಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ರಾಜ್ಯ ಸರಕಾರ ಪೌರಕಾರ್ಮಿಕರೊಟ್ಟಿಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ಹಾವೇರಿಜಿಲ್ಲೆಯಲ್ಲಿ ೧೨೫ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹೊರಗುತ್ತಿಗೆ ನೌಕರರು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಲು ಆಗ್ರಹಿಸಿ ನ.೧೫ ರಂದು ಡಿ.ಸಿ. ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಕ.ರಾ.ಪಾ.ನ.ಪು.ಪ.ಪಂ. ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜಪ್ಪ ಹೊಸಮನಿ ತಿಳಿಸಿದರು.
ನ.೧೧ರಂದು ಶನಿವಾರ ನಗರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾನಾಡಿದ ಅವರು ಕಾಂಗ್ರೆಸ್ ಪಕ್ಷ ತನ್ನ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಣೆಯಂತೆ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್ ಯೂಜಿಡಿ ಕಾರ್ಮಿಕರು ಸೇರಿದಂತೆ ೧೫ಸಾವಿರಕ್ಕು ಹೆಚ್ಚು ನೌಕರರು, ಹಾವೇರಿಜಿಲ್ಲೆಯಲ್ಲಿ ೧೨೫ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹೊರಗುತ್ತಿಗೆ ನೌಕರರು ಇದ್ದು ಪೌರಕಾರ್ಮಿಕರ ಮಾದರಿಯಲ್ಲಿ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೊಳಪಡಿಸಲು ಕಾಂಗ್ರೆಸ್ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.
ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. ೨೦೧೭ರಲ್ಲಿ ಪೌರಕಾರ್ಮಿPನೇಮಕಾತಿ ಗೊಳಿಸಿದಾಗಲೂ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಯಿತು. ೧೯೬೪ರ ಪೌರಾಡಳಿತ ಕಾಯ್ದೆ ಪ್ರಕಾರ ಕಸ ಸಾಗಿಸುವ ವಾಹನ ಚಾಲಕರು ಲೋಡ್ರ್ಸ್ ,ಕ್ಲೀನರ್ಸ್, ಹೆಲ್ಪರ್ಸ್, ಯೂಜಿಡಿ ಕಾರ್ಮಿಕರು ಸಹ ಪೌರಕಾರ್ಮಿಕರೆಂದು ಗುರುತಿಸಲಾಗಿದೆ. ಆದರೆ, ನಗರಾಭಿವೃದ್ಧಿ ಅಧಿಕಾರಿಗಳು ತಾರತಮ್ಯ ಎಸಗಿ ನೇರನೇಮಕಾತಿ ಹಾಗೂ ನೇರನೇಮಕಾತಿಯಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ ಎಸಗಿದ್ದಾರೆ. ಈಗಲೂ ಸಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಮುಂದುವರಿಸುವ ಸರಕಾರದ ನೀತಿ ಒಂದುಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ಮಧ್ಯೆ ಒಡೆದಾಳುವ ನೀತಿ ಅನುಸರಿಸುವುದು ಶೋಭೆಯಲ್ಲ
ಕಳೆದ ಬಿಜೆಪಿ ಸರಕಾರದಲ್ಲಿ ತೀವ್ರ ಹೋರಾಟದ ಪರಿಣಾಮ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೊಳಿಸುವ ಸಂಬಂಧ ಕಡತ ಹಣಕಾಸು ಇಲಾಖೆಯ ಪರಿಶೀಲನೆಯಲ್ಲಿರುವಾಗಲೆ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಘೋಷಣೆಯಾಗಿ ಕಡತ ನಗರಾಭಿವೃದ್ಧಿ ಇಲಾಖೆಗೆ ವಾಪಸ್ ಆಗಿದ್ದು, ಈ ಸಂಬಂದ ಕಡತವನ್ನು ಸಂಪುಟದಲ್ಲಿ ಅಂಗೀಕರಿಸಬೇಕು. ಕಳೆದ ವಿಧಾನಸಭಾ ಚುನಾವಣಾ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರಲು ನುಡಿದಂತೆ ನಡೆಯಿರಿ ಘೋಷಣೆಯೊಂದಿಗೆ ನ. ೧೫ ರಂದು ಉಸ್ತುವಾರಿ ಸಚಿವರ ಕಚೇರಿ ಎದುರು ಒಂದು ದಿನದ ಧರಣಿ ನಡೆಸಿ ಸರಕಾರಕ್ಕೆ ಮನವಿ ಅರ್ಪಿಸಲಾಗುವುದು ಎಂದು ರಾಜಪ್ಪ ಹೊಸಮನಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಮುಖಂಡರಾದ ಶಿವಪ್ಪ ಕಟ್ಟಿಮನಿ, ಗುರುನಾಥ ಬಡುವೆಣ್ಣನವರ, ರಾಜು ಮಾಳಗಿ, ಮಲ್ಲೇಶಪ್ಪ ಕೊಪ್ಪದ ಮತ್ತಿತರರು ಇದ್ದರು.
ಹೊರಗುತ್ತಿಗೆ ನೌಕರರ ನೇರಪಾವತಿಗೊಳಪಡಿಸಲು ಆಗ್ರಹಿಸಿ ನ. ೧೫ ರಂದು ಡಿ.ಸಿ. ಕಚೇರಿ ಎದುರು ಧರಣಿ;ರಾಜಪ್ಪ ಹೊಸಮನಿ
Date:
ಹೊರಗುತ್ತಿಗೆ ನೌಕರರ ನೇರಪಾವತಿಗೊಳಪಡಿಸಲು ಆಗ್ರಹಿಸಿ ನ. ೧೫ ರಂದು ಡಿ.ಸಿ. ಕಚೇರಿ ಎದುರು ಧರಣಿ;ರಾಜಪ್ಪ ಹೊಸಮನಿ
ಹಾವೇರಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ರಾಜ್ಯ ಸರಕಾರ ಪೌರಕಾರ್ಮಿಕರೊಟ್ಟಿಗೆ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ಹಾವೇರಿಜಿಲ್ಲೆಯಲ್ಲಿ ೧೨೫ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹೊರಗುತ್ತಿಗೆ ನೌಕರರು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಲು ಆಗ್ರಹಿಸಿ ನ.೧೫ ರಂದು ಡಿ.ಸಿ. ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಕ.ರಾ.ಪಾ.ನ.ಪು.ಪ.ಪಂ. ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜಪ್ಪ ಹೊಸಮನಿ ತಿಳಿಸಿದರು.
ನ.೧೧ರಂದು ಶನಿವಾರ ನಗರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾನಾಡಿದ ಅವರು ಕಾಂಗ್ರೆಸ್ ಪಕ್ಷ ತನ್ನ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಣೆಯಂತೆ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್ ಯೂಜಿಡಿ ಕಾರ್ಮಿಕರು ಸೇರಿದಂತೆ ೧೫ಸಾವಿರಕ್ಕು ಹೆಚ್ಚು ನೌಕರರು, ಹಾವೇರಿಜಿಲ್ಲೆಯಲ್ಲಿ ೧೨೫ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹೊರಗುತ್ತಿಗೆ ನೌಕರರು ಇದ್ದು ಪೌರಕಾರ್ಮಿಕರ ಮಾದರಿಯಲ್ಲಿ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೊಳಪಡಿಸಲು ಕಾಂಗ್ರೆಸ್ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.
ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. ೨೦೧೭ರಲ್ಲಿ ಪೌರಕಾರ್ಮಿPನೇಮಕಾತಿ ಗೊಳಿಸಿದಾಗಲೂ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಉಳಿಸಲಾಯಿತು. ೧೯೬೪ರ ಪೌರಾಡಳಿತ ಕಾಯ್ದೆ ಪ್ರಕಾರ ಕಸ ಸಾಗಿಸುವ ವಾಹನ ಚಾಲಕರು ಲೋಡ್ರ್ಸ್ ,ಕ್ಲೀನರ್ಸ್, ಹೆಲ್ಪರ್ಸ್, ಯೂಜಿಡಿ ಕಾರ್ಮಿಕರು ಸಹ ಪೌರಕಾರ್ಮಿಕರೆಂದು ಗುರುತಿಸಲಾಗಿದೆ. ಆದರೆ, ನಗರಾಭಿವೃದ್ಧಿ ಅಧಿಕಾರಿಗಳು ತಾರತಮ್ಯ ಎಸಗಿ ನೇರನೇಮಕಾತಿ ಹಾಗೂ ನೇರನೇಮಕಾತಿಯಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ ಎಸಗಿದ್ದಾರೆ. ಈಗಲೂ ಸಹ ಹೊರಗುತ್ತಿಗೆ ನೌಕರರನ್ನು ಗುತ್ತಿಗೆಯಲ್ಲಿ ಮುಂದುವರಿಸುವ ಸರಕಾರದ ನೀತಿ ಒಂದುಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬಂತಾಗಿದೆ. ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ಮಧ್ಯೆ ಒಡೆದಾಳುವ ನೀತಿ ಅನುಸರಿಸುವುದು ಶೋಭೆಯಲ್ಲ
ಕಳೆದ ಬಿಜೆಪಿ ಸರಕಾರದಲ್ಲಿ ತೀವ್ರ ಹೋರಾಟದ ಪರಿಣಾಮ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೊಳಿಸುವ ಸಂಬಂಧ ಕಡತ ಹಣಕಾಸು ಇಲಾಖೆಯ ಪರಿಶೀಲನೆಯಲ್ಲಿರುವಾಗಲೆ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಘೋಷಣೆಯಾಗಿ ಕಡತ ನಗರಾಭಿವೃದ್ಧಿ ಇಲಾಖೆಗೆ ವಾಪಸ್ ಆಗಿದ್ದು, ಈ ಸಂಬಂದ ಕಡತವನ್ನು ಸಂಪುಟದಲ್ಲಿ ಅಂಗೀಕರಿಸಬೇಕು. ಕಳೆದ ವಿಧಾನಸಭಾ ಚುನಾವಣಾ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರಲು ನುಡಿದಂತೆ ನಡೆಯಿರಿ ಘೋಷಣೆಯೊಂದಿಗೆ ನ. ೧೫ ರಂದು ಉಸ್ತುವಾರಿ ಸಚಿವರ ಕಚೇರಿ ಎದುರು ಒಂದು ದಿನದ ಧರಣಿ ನಡೆಸಿ ಸರಕಾರಕ್ಕೆ ಮನವಿ ಅರ್ಪಿಸಲಾಗುವುದು ಎಂದು ರಾಜಪ್ಪ ಹೊಸಮನಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಮುಖಂಡರಾದ ಶಿವಪ್ಪ ಕಟ್ಟಿಮನಿ, ಗುರುನಾಥ ಬಡುವೆಣ್ಣನವರ, ರಾಜು ಮಾಳಗಿ, ಮಲ್ಲೇಶಪ್ಪ ಕೊಪ್ಪದ ಮತ್ತಿತರರು ಇದ್ದರು.