ಸದಾಶಿವ ಆಯೋಗ-ಕಾಂತರಾಜು ಆಯೋಗಗಳ ವರದಿ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ಡಿಎಸ್‌ಎಸ್ ಆಗ್ರಹ

Date:


ಸದಾಶಿವ ಆಯೋಗ-ಕಾಂತರಾಜು ಆಯೋಗಗಳ ವರದಿ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ಡಿಎಸ್‌ಎಸ್ ಆಗ್ರಹ
ಹಾವೇರಿ: ಸದಾಶಿವ ಆಯೋಗದ ವರಿದಿ ಹಾಗೂ ಕಾಂತರಾಜು ಆಯೋಗದ ವರದಿಗಳನ್ನು ಬೆಳಾಗಾವಿಯ ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಸಿ, ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಪಾರಸು ಮಾಡಲು ಆಗ್ರಹಿಸಿ ಡಿ.೩ ರಂದು ಭಾನುವಾರ ಇಲ್ಲಿನ ಬಸವೇಶ್ವರ ನಗರದಲ್ಲಿನ ಶಾಸಕ ಬಸವರಾಜ ಶಿವಣ್ಣನವರಿಗೆ ಕರ್ನಾಟಕ ಸಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದಿಂದ ಮನವಿ ಅರ್ಪಿಸಲಾಯಿತು.
ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ೧೦೧ ಜಾತಿಗಳ ಪೈಕಿ ಮಾದಿಗ ಮತ್ತು ಮಾದಿಗ ಸಂಬಂಧಿತ ೪೯ ಜಾತಿಗಳ ಜನಸಂಖ್ಯೆ ಹೆಚ್ಚಾಗಿರುತ್ತದೆ. ಈ ಸಮಾಜಕ್ಕೆ ಶಿಕ್ಷಣ, ಸರ್ಕಾರಿ ಸೇವೆ ಮತ್ತು ರಾಜಕೀಯ ಮತ್ತಿತರರ ಎಲ್ಲಾ ರಂಗಗಳಲ್ಲಿ ಸೂಕ್ತ ಪ್ರಾತಿನಿಧ್ಯ ಇಲ್ಲದೆ ತೀರ ಹಿಂದುಳಿದಿವೆ. ಈ ಅನ್ಯಾಯವನ್ನು ಪ್ರತಿಭಟಿಸಿ ಮಾದಿಗರು ನಡೆಸಿದ ಹೋರಾಟಕ್ಕೆ ಮಣಿದು ಧರ್ಮಸಿಂಗ್ ಸರ್ಕಾರ ೨೦೦೫ ರಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗವನ್ನು ರಚಿಸಿತು. ಈ ಆಯೋಗವು ಸತತವಾಗಿ ೭ ವರ್ಷಗ ಅಧ್ಯಯನ ನಡೆಸಿ ೨೦೧೨ ರಲ್ಲಿ ಅಂದಿನ ಸಿಎಂಸದಾನಂದಗೌಡರವರ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತು.
ಈ ವರದಿಯ ಸೋರಿಕೆಯಾದ ಅಂಶಗಳ ಪ್ರಕಾರ ಮಾದಿಗ ಮತ್ತು ಮಾದಿಗ ಸಂಬಂಧಿತ ೪೯ ಜಾತಿಗಳಿಗೆ ಶೇ. ೬% ಹೊಲೆಯ ಮತ್ತು ಹೊಲೆಯ ಸಂಬಂಧಿತ ೨೯ ಜಾತಿಗಳಿಗೆ ಶೇ. ೫% ಮತ್ತು ಭೋವಿ, ಬಂಜಾರ, ಕೊರಮ, ಕೊರಚ ಇತ್ಯಾದಿ ೧೩ ಸ್ಪೃಶ್ಯ ಜಾತಿಗಳಿಗೆ ೩% ಮತ್ತು ೧೧ ಅಸ್ಪೃಶ್ಯ ಅಲೆಮಾರಿ ಜಾತಿಗಳಿಗೆ ಶೇ. ೧% ಮೀಸಲಾತಿಯನ್ನು ಕಲ್ಪಿಸಲಾಗಿತ್ತು. ಆದರೆ ಇದೂವರೆವಿಗೂ ಸದಾಶಿವ ಆಯೋಗದ ವರದಿಯನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಲೇ ಇಲ್ಲ.
ಜಾತಿವ್ಯವಸ್ಥೆಯಲ್ಲಿ ಅತ್ಯಂತ ತಳಸಮುದಾಯವಾದ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಕಣ್ಣಿರು ಒರೆಸಲು ಮೇಲ್ದಾತಿ ಪಕ್ಷಗಳ ರಾಜಕೀಯ ಇಚ್ಛಾ ಶಕ್ತಿ ಕೊರತೆಯಿಂದಲೋ, ಅಸಹಾಯಕತೆಯಿಂದಲೋ ಅಸಮರ್ಥತೆಯಿಂದಲೋ ಪರಿಹರಿಸಲು ಮುಂದಾಗುತ್ತಿಲ್ಲ. ಪರಿಶಿಷ್ಟ ಜಾತಿಗಳ ಮಧ್ಯೆ ವೈರುಧ್ಯವನ್ನು ಮುಂದುವರಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ.
೨೦೨೩ರ ಚುನಾವಣಾ ಪೂರ್ವದಲ್ಲಿ ತಮ್ಮ ಪ್ರನಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲನೇ ಸಚಿವ ಸಂಪುಟದಲ್ಲಿ ಚರ್ಚಿಸಿ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವುದಾಗಿ ಘೋಷಣೆ ಮಾಡಿರುತ್ತದೆ. ಆದರೆ ಗೆದ್ದು ಅಧಿಕಾರಕ್ಕೆ ಬಂದು ೬ ತಿಂಗಳು ಕಳೆಯುತ್ತಿದ್ದರೂ ಇದುವರೆಗೂ ಈ ಬಗ್ಗೆ ಮೌನವಹಿಸಿರುವುದು ಖಂಡನೀಯ. ಪರಿಶಿಷ್ಟ ಜಾತಿಯ ಮೀಸಲಾತಿ ಹಂಚಿಕೆಯಲ್ಲಿ ತಾರತಮ್ಯ ಸೃಷ್ಟಿಗೆ ಕಾರಣ ೭೫ ವರ್ಷಗಳು ರಾಜ್ಯವಾಳಿದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳೇ ಹೊಣೆಯಾಗಿವೆ. ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜು ಆಯೋಗದ ವರದಿಯನ್ನು ಬೆಳಗಾವಿ ಸುವರ್ಣ ಸೌಧದದಲ್ಲಿ ಚರ್ಚಿಸಿ, ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಮನವಿಯಲ್ಲಿ ತಿಳಿಸಲಾಗಿದೆ.
ಮನವಿ ಅರ್ಪಿಸುವ ಸಂದರ್ಭದಲ್ಲಿ ಡಿಎಸ್‌ಎಸ್ ಸಂಃಟನೆಯ ಪ್ರಮುಖರಾದ ನಾಗರಾಜ ಮಾಳಗಿ, ಮಾಲತೇಶ ಯಲ್ಲಾಪುರ, ಅಶೋಕ ಮರೆಣ್ಣನವರ, ನಿಂಗರಾಜ ದಂಡೆಮ್ಮನವರ, ಭೀಮಣ್ಣ ಯಲ್ಲಾಪುರ, ರಂಗಪ್ಪ ಮೈಲಮ್ಮನವರ, ಶಿವರಾಜ ದುಮ್ಮಿಹಾಳ,ನಿಂಗಪ್ಪ ನಿಂಬಕ್ಕನವರ, ಗುಡ್ಡಪ್ಪ ಚಿಕ್ಕಪ್ಪನವರ, ನವೀನ ಶಿದ್ದಣ್ಣನವರ, ಪ್ರಕಾಶ ನಾಗಣ್ಣನವರ, ಮಲ್ಲೇಶ ಕಡಕೋಳ, ಗುಡ್ಡಪ್ಪ ಬಣಕಾರ, ಬಸವರಾಜ ಹರಿಜನ, ಹೊನ್ನಪ್ಪ ಹುಣಸಿಮರದ ಸೇರಿದಂತೆ ಅನೇಕರು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular


ಸದಾಶಿವ ಆಯೋಗ-ಕಾಂತರಾಜು ಆಯೋಗಗಳ ವರದಿ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ಡಿಎಸ್‌ಎಸ್ ಆಗ್ರಹ
ಹಾವೇರಿ: ಸದಾಶಿವ ಆಯೋಗದ ವರಿದಿ ಹಾಗೂ ಕಾಂತರಾಜು ಆಯೋಗದ ವರದಿಗಳನ್ನು ಬೆಳಾಗಾವಿಯ ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಸಿ, ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಪಾರಸು ಮಾಡಲು ಆಗ್ರಹಿಸಿ ಡಿ.೩ ರಂದು ಭಾನುವಾರ ಇಲ್ಲಿನ ಬಸವೇಶ್ವರ ನಗರದಲ್ಲಿನ ಶಾಸಕ ಬಸವರಾಜ ಶಿವಣ್ಣನವರಿಗೆ ಕರ್ನಾಟಕ ಸಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದಿಂದ ಮನವಿ ಅರ್ಪಿಸಲಾಯಿತು.
ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ೧೦೧ ಜಾತಿಗಳ ಪೈಕಿ ಮಾದಿಗ ಮತ್ತು ಮಾದಿಗ ಸಂಬಂಧಿತ ೪೯ ಜಾತಿಗಳ ಜನಸಂಖ್ಯೆ ಹೆಚ್ಚಾಗಿರುತ್ತದೆ. ಈ ಸಮಾಜಕ್ಕೆ ಶಿಕ್ಷಣ, ಸರ್ಕಾರಿ ಸೇವೆ ಮತ್ತು ರಾಜಕೀಯ ಮತ್ತಿತರರ ಎಲ್ಲಾ ರಂಗಗಳಲ್ಲಿ ಸೂಕ್ತ ಪ್ರಾತಿನಿಧ್ಯ ಇಲ್ಲದೆ ತೀರ ಹಿಂದುಳಿದಿವೆ. ಈ ಅನ್ಯಾಯವನ್ನು ಪ್ರತಿಭಟಿಸಿ ಮಾದಿಗರು ನಡೆಸಿದ ಹೋರಾಟಕ್ಕೆ ಮಣಿದು ಧರ್ಮಸಿಂಗ್ ಸರ್ಕಾರ ೨೦೦೫ ರಲ್ಲಿ ನ್ಯಾಯಮೂರ್ತಿ ಸದಾಶಿವ ಆಯೋಗವನ್ನು ರಚಿಸಿತು. ಈ ಆಯೋಗವು ಸತತವಾಗಿ ೭ ವರ್ಷಗ ಅಧ್ಯಯನ ನಡೆಸಿ ೨೦೧೨ ರಲ್ಲಿ ಅಂದಿನ ಸಿಎಂಸದಾನಂದಗೌಡರವರ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತು.
ಈ ವರದಿಯ ಸೋರಿಕೆಯಾದ ಅಂಶಗಳ ಪ್ರಕಾರ ಮಾದಿಗ ಮತ್ತು ಮಾದಿಗ ಸಂಬಂಧಿತ ೪೯ ಜಾತಿಗಳಿಗೆ ಶೇ. ೬% ಹೊಲೆಯ ಮತ್ತು ಹೊಲೆಯ ಸಂಬಂಧಿತ ೨೯ ಜಾತಿಗಳಿಗೆ ಶೇ. ೫% ಮತ್ತು ಭೋವಿ, ಬಂಜಾರ, ಕೊರಮ, ಕೊರಚ ಇತ್ಯಾದಿ ೧೩ ಸ್ಪೃಶ್ಯ ಜಾತಿಗಳಿಗೆ ೩% ಮತ್ತು ೧೧ ಅಸ್ಪೃಶ್ಯ ಅಲೆಮಾರಿ ಜಾತಿಗಳಿಗೆ ಶೇ. ೧% ಮೀಸಲಾತಿಯನ್ನು ಕಲ್ಪಿಸಲಾಗಿತ್ತು. ಆದರೆ ಇದೂವರೆವಿಗೂ ಸದಾಶಿವ ಆಯೋಗದ ವರದಿಯನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಲೇ ಇಲ್ಲ.
ಜಾತಿವ್ಯವಸ್ಥೆಯಲ್ಲಿ ಅತ್ಯಂತ ತಳಸಮುದಾಯವಾದ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಕಣ್ಣಿರು ಒರೆಸಲು ಮೇಲ್ದಾತಿ ಪಕ್ಷಗಳ ರಾಜಕೀಯ ಇಚ್ಛಾ ಶಕ್ತಿ ಕೊರತೆಯಿಂದಲೋ, ಅಸಹಾಯಕತೆಯಿಂದಲೋ ಅಸಮರ್ಥತೆಯಿಂದಲೋ ಪರಿಹರಿಸಲು ಮುಂದಾಗುತ್ತಿಲ್ಲ. ಪರಿಶಿಷ್ಟ ಜಾತಿಗಳ ಮಧ್ಯೆ ವೈರುಧ್ಯವನ್ನು ಮುಂದುವರಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ.
೨೦೨೩ರ ಚುನಾವಣಾ ಪೂರ್ವದಲ್ಲಿ ತಮ್ಮ ಪ್ರನಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲನೇ ಸಚಿವ ಸಂಪುಟದಲ್ಲಿ ಚರ್ಚಿಸಿ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವುದಾಗಿ ಘೋಷಣೆ ಮಾಡಿರುತ್ತದೆ. ಆದರೆ ಗೆದ್ದು ಅಧಿಕಾರಕ್ಕೆ ಬಂದು ೬ ತಿಂಗಳು ಕಳೆಯುತ್ತಿದ್ದರೂ ಇದುವರೆಗೂ ಈ ಬಗ್ಗೆ ಮೌನವಹಿಸಿರುವುದು ಖಂಡನೀಯ. ಪರಿಶಿಷ್ಟ ಜಾತಿಯ ಮೀಸಲಾತಿ ಹಂಚಿಕೆಯಲ್ಲಿ ತಾರತಮ್ಯ ಸೃಷ್ಟಿಗೆ ಕಾರಣ ೭೫ ವರ್ಷಗಳು ರಾಜ್ಯವಾಳಿದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳೇ ಹೊಣೆಯಾಗಿವೆ. ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜು ಆಯೋಗದ ವರದಿಯನ್ನು ಬೆಳಗಾವಿ ಸುವರ್ಣ ಸೌಧದದಲ್ಲಿ ಚರ್ಚಿಸಿ, ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಮನವಿಯಲ್ಲಿ ತಿಳಿಸಲಾಗಿದೆ.
ಮನವಿ ಅರ್ಪಿಸುವ ಸಂದರ್ಭದಲ್ಲಿ ಡಿಎಸ್‌ಎಸ್ ಸಂಃಟನೆಯ ಪ್ರಮುಖರಾದ ನಾಗರಾಜ ಮಾಳಗಿ, ಮಾಲತೇಶ ಯಲ್ಲಾಪುರ, ಅಶೋಕ ಮರೆಣ್ಣನವರ, ನಿಂಗರಾಜ ದಂಡೆಮ್ಮನವರ, ಭೀಮಣ್ಣ ಯಲ್ಲಾಪುರ, ರಂಗಪ್ಪ ಮೈಲಮ್ಮನವರ, ಶಿವರಾಜ ದುಮ್ಮಿಹಾಳ,ನಿಂಗಪ್ಪ ನಿಂಬಕ್ಕನವರ, ಗುಡ್ಡಪ್ಪ ಚಿಕ್ಕಪ್ಪನವರ, ನವೀನ ಶಿದ್ದಣ್ಣನವರ, ಪ್ರಕಾಶ ನಾಗಣ್ಣನವರ, ಮಲ್ಲೇಶ ಕಡಕೋಳ, ಗುಡ್ಡಪ್ಪ ಬಣಕಾರ, ಬಸವರಾಜ ಹರಿಜನ, ಹೊನ್ನಪ್ಪ ಹುಣಸಿಮರದ ಸೇರಿದಂತೆ ಅನೇಕರು ಹಾಜರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...