ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮೈಲಾರೆಪ್ಪನಿಗೆ ಇಪ್ಪತ್ತು ವರ್ಷ ಜೈಲು
ಹಾವೇರಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಮೈಲಾರೆಪ್ಪ ನಿಂಗಪ್ಪ ಗೋಮಾಳ ಹಾಗೂ ಕೃತ್ಯಕ್ಕೆ ಸಹಕರಿಸಿ ಆರೋಪಿ ಮಂಜುನಾಥ ಸುಭಾಷ ತೊಗರಳ್ಳಿ ಎಂಬುವರಿಗೆ ೨೦ ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ರೂ.೩೯ ಸಾವಿರ ದಂಡ ವಿಧಿಸಿ ಹಾವೇರಿ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-೧ ದ ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು ಬುಧವಾರ ತೀರ್ಪು ನೀಡಿದ್ದಾರೆ.
ಮುಂಡಗೋಡ ತಾಲೂಕಿನ ಹರಗನಹಳ್ಳಿ ಗ್ರಾಮದ ಮೈಲಾರೆಪ್ಪ ನಿಂಗಪ್ಪ ಗೋಮಾಳ ಎಂಬಾತ ಅಪ್ರಾಪ್ತ ಬಾಲಕಿಗೆ ಫೋನ್ ಹಾಗೂ ಮೇಸೆಜ್ ಮಾಡುತ್ತಿದ್ದನು. ದಿನಾಂಕ ೦೮-೧೧-೨೦೨೧ ರಂದು ಬಾಲಕಿಯ ಶಾಲೆಯ ಹತ್ತಿರ ಮಂಜುನಾಥ ಸುಭಾಷ ತೊಗರಳ್ಳಿ ಈತನೊಂದಿಗೆ ಬೈಕಲ್ ಮೇಲೆ ಬಂದು, ಬಾಲಕಿಯನ್ನು ಅಪಹರಣಮಾಡಿಕೊಂಡು ಶಿರಸಿಗೆ ಹೋಗಿ, ಅಲ್ಲಿಂದ ಧರ್ಮಸ್ಥಳಕ್ಕೆ ಹಾಗೂ ಉಜರೆಗೆ ಕರೆದುಕೊಂಡು ಹೋಗಿ ಶಿರೋಡ ಲಾಡ್ಜ್ನಲ್ಲಿ ಎರಡು ದಿವಸ ಬಾಲಕಿಯ ಮೇಲೆ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಕ್ಕಾಗಿ ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹಾನಗಲ್ ವೃತ್ತದ ತನಿಖಾಧಿಕಾರಿ ಡಿವೈಎಸ್ಪಿ ಎಂ.ಎಸ್.ಪಾಟೀಲ್ ಅವರು ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆರೋಪಿ ಮೈಲಾರೆಪ್ಪ ನಿಂಗಪ್ಪ ಗೋಮಾಳ ಹಾಗೂ ಕೃತ್ಯಕ್ಕೆ ಸಹಕರಿಸಿ ಆರೋಪಿ ಮಂಜುನಾಥ ಸುಭಾಷ ತೊಗರ ಳ್ಳಿ ಮೇಲೆ ಹೊರಿಸಲಾದ ಆಪಾಧನೆಗಳಾದ ಕಲಂ ೩೬೩, ೩೭೬(೨)(ಎನ್), ಭಾ.ದಂ.ಸಂ ಮತ್ತು ಕಲಂ: ೪,೬,೧೭ ಪೋಕ್ಸೋ ಕಾಯ್ದೆ-೨೦೧೨ರ ಅಡಿಯಲ್ಲಿ ಅಪಾದನೆಗಳನ್ನು ಅಭಿಯೋಜನೆಯು ರುಜುವಾತುಪಡಿಸಿರುತ್ತದೆ. ನ್ಯಾಯಾಧೀಶರು ಮೇಲಿನಂತೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದು, ಸದರಿ ದಂಡದ ಹಣದಲ್ಲಿ ನೊಂದ ಬಾಲಕಿಗೆ ರೂ.೨೦ ಸಾವಿರ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಇರುವ ಪರಿಹಾರ ನಿಧಿಯಿಂದ ಕರ್ನಾಟಕ ಸರ್ಕಾರವು ನೊಂದ ಬಾಲಕಿಗೆ ರೂ. ೪,೦೦,೦೦೦/- ಗಳ ಪರಿಹಾರ ನೀಡಬೇಕೆಂದು ಎಂದು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಸರೋಜಾ ಕೂಡಲಗಿಮಠ ಅವರು ಪ್ರಕರಣ ನಡೆಸಿ ವಾದ ಮಂಡಿಸಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮೈಲಾರೆಪ್ಪನಿಗೆ ಇಪ್ಪತ್ತು ವರ್ಷ ಜೈಲು
Date:
ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮೈಲಾರೆಪ್ಪನಿಗೆ ಇಪ್ಪತ್ತು ವರ್ಷ ಜೈಲು
ಹಾವೇರಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಮೈಲಾರೆಪ್ಪ ನಿಂಗಪ್ಪ ಗೋಮಾಳ ಹಾಗೂ ಕೃತ್ಯಕ್ಕೆ ಸಹಕರಿಸಿ ಆರೋಪಿ ಮಂಜುನಾಥ ಸುಭಾಷ ತೊಗರಳ್ಳಿ ಎಂಬುವರಿಗೆ ೨೦ ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ರೂ.೩೯ ಸಾವಿರ ದಂಡ ವಿಧಿಸಿ ಹಾವೇರಿ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-೧ ದ ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು ಬುಧವಾರ ತೀರ್ಪು ನೀಡಿದ್ದಾರೆ.
ಮುಂಡಗೋಡ ತಾಲೂಕಿನ ಹರಗನಹಳ್ಳಿ ಗ್ರಾಮದ ಮೈಲಾರೆಪ್ಪ ನಿಂಗಪ್ಪ ಗೋಮಾಳ ಎಂಬಾತ ಅಪ್ರಾಪ್ತ ಬಾಲಕಿಗೆ ಫೋನ್ ಹಾಗೂ ಮೇಸೆಜ್ ಮಾಡುತ್ತಿದ್ದನು. ದಿನಾಂಕ ೦೮-೧೧-೨೦೨೧ ರಂದು ಬಾಲಕಿಯ ಶಾಲೆಯ ಹತ್ತಿರ ಮಂಜುನಾಥ ಸುಭಾಷ ತೊಗರಳ್ಳಿ ಈತನೊಂದಿಗೆ ಬೈಕಲ್ ಮೇಲೆ ಬಂದು, ಬಾಲಕಿಯನ್ನು ಅಪಹರಣಮಾಡಿಕೊಂಡು ಶಿರಸಿಗೆ ಹೋಗಿ, ಅಲ್ಲಿಂದ ಧರ್ಮಸ್ಥಳಕ್ಕೆ ಹಾಗೂ ಉಜರೆಗೆ ಕರೆದುಕೊಂಡು ಹೋಗಿ ಶಿರೋಡ ಲಾಡ್ಜ್ನಲ್ಲಿ ಎರಡು ದಿವಸ ಬಾಲಕಿಯ ಮೇಲೆ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಕ್ಕಾಗಿ ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹಾನಗಲ್ ವೃತ್ತದ ತನಿಖಾಧಿಕಾರಿ ಡಿವೈಎಸ್ಪಿ ಎಂ.ಎಸ್.ಪಾಟೀಲ್ ಅವರು ಪ್ರಕರಣದ ತನಿಖೆ ನಡೆಸಿ ದೋಷರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆರೋಪಿ ಮೈಲಾರೆಪ್ಪ ನಿಂಗಪ್ಪ ಗೋಮಾಳ ಹಾಗೂ ಕೃತ್ಯಕ್ಕೆ ಸಹಕರಿಸಿ ಆರೋಪಿ ಮಂಜುನಾಥ ಸುಭಾಷ ತೊಗರ ಳ್ಳಿ ಮೇಲೆ ಹೊರಿಸಲಾದ ಆಪಾಧನೆಗಳಾದ ಕಲಂ ೩೬೩, ೩೭೬(೨)(ಎನ್), ಭಾ.ದಂ.ಸಂ ಮತ್ತು ಕಲಂ: ೪,೬,೧೭ ಪೋಕ್ಸೋ ಕಾಯ್ದೆ-೨೦೧೨ರ ಅಡಿಯಲ್ಲಿ ಅಪಾದನೆಗಳನ್ನು ಅಭಿಯೋಜನೆಯು ರುಜುವಾತುಪಡಿಸಿರುತ್ತದೆ. ನ್ಯಾಯಾಧೀಶರು ಮೇಲಿನಂತೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದು, ಸದರಿ ದಂಡದ ಹಣದಲ್ಲಿ ನೊಂದ ಬಾಲಕಿಗೆ ರೂ.೨೦ ಸಾವಿರ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಇರುವ ಪರಿಹಾರ ನಿಧಿಯಿಂದ ಕರ್ನಾಟಕ ಸರ್ಕಾರವು ನೊಂದ ಬಾಲಕಿಗೆ ರೂ. ೪,೦೦,೦೦೦/- ಗಳ ಪರಿಹಾರ ನೀಡಬೇಕೆಂದು ಎಂದು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಸರೋಜಾ ಕೂಡಲಗಿಮಠ ಅವರು ಪ್ರಕರಣ ನಡೆಸಿ ವಾದ ಮಂಡಿಸಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.