ಫೆ.೮-೯ಕ್ಕೆ ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆ-೨೦೨೪: ವಾಲ್ಮೀಕಿ ಪ್ರಸಾನ್ನಾನಂದಶ್ರೀ

Date:

ಫೆ.೮-೯ಕ್ಕೆ ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆ-೨೦೨೪: ವಾಲ್ಮೀಕಿ ಪ್ರಸಾನ್ನಾನಂದಶ್ರೀ
ಹಾವೇರಿ : ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ.೮ ಮತ್ತು ೯ ರಂದು ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆ-೨೦೨೪ ಆಯೋಜಿಸಲಾಗಿದೆ. ಈ ಜಾತ್ರೆಯಲ್ಲಿ ಸಮಾಜದ ಜಾಗೃತಿಗಾಗಿ ಹಾಗೂ ಸಮಾಜದ ಆಗೂ-ಹೋಗುಗಳ ಬಗ್ಗೆ, ನಕಲಿಜಾತಿ ಪ್ರಮಾಣ ಪತ್ರ ಸೇರಿದಂತೆ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸುವ ಮೂಲಕ ಸಮಾಜ ಬಾಂಧವರಲ್ಲಿ ಅರಿವು ಮೂಡಿಸಲಾಗುವುದು ಎಂದು ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸಾನ್ನಾನಂದ ಮಹಾಸ್ವಾಮೀಜಿ ಹೇಳಿದರು.
ಡಿ.೧೪ರಂದು ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಾತ್ರೆ-೨೦೨೪ರ ತಾಲೂಕು ಮಟ್ಟದ ಪೂರ್ವಭಾವಿ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಶ್ರೀಮಠದ ೨೬ನೇ ವಾರ್ಷಿಕೋತ್ಸವ, ಲಿಂ.ಜಗದ್ಗುರು ಪುಣ್ಯಾನಂದಪುರಿ ಮಹಾಸ್ವಾಮೀಜಿಯವರ ೧೭ನೇ ವರ್ಷದ ಪುಣ್ಯಾರಾಧನೆ ಹಾಗೂ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಯವರ ಪಟ್ಟಾಧಿಕಾರ ಮಹೋತ್ಸವ ಸಮಾರಂಭದ ನಡೆಲಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು, ಮನ ಧನದಿಮದ ಸಹಕಾರ ನೀಡುವಂತೆ ಕೋರಿದರು.
ಸಭೆಯ ಅಧ್ಯಕ್ಷತೆವಹಿಸಿದ್ದ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಅಧ್ಯಕ್ಷ ರಮೇಶ ಆನವಟ್ಟಿ ಮಾತನಾಡಿ ಹಾವೇರಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನದ ಕಾಮಗಾರಿ ಪೂರ್ಣಗೊಳಿಸಲು ಈಗಾಗಲೇ ಜನಪ್ರತಿನಿಧಿಗಳ ಹಾಗೂ ಜಿಲ್ಲಾಧಿಕಾರಿಗಳ ಗಮನ ತರಲಾಗಿದ್ದು, ಭವನದ ಕಾಮಗಾರಿ ಪೂರ್ಣಗೊಳಿಸಿ ಸಮಾಜಕ್ಕೆ ಶೀರ್ಘದಲ್ಲಿ ಅರ್ಪಿಸುವ ಭರವಸೆ ನೀಡಿದ್ದಾರೆ. ಮಹರ್ಷಿ ವಾಲ್ಮೀಕಿ ಸರ್ಕಲ್‌ನಲ್ಲಿ ವಾಲ್ಮೀಕಿ ಪುತ್ಥಳಿಯನ್ನು ಶೀರ್ಘದಲ್ಲಿಯೇ ಸ್ಥಾಪಿಸಲಾಗುವುದು. ರಾಜನಹಳ್ಳಿಯಲ್ಲಿ ನಡೆಯುವ ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆ-೨೦೨೪ಗೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಸಮಾಜದ ಮುಖಂಡರುಗಳಾದ ಸೋಮನೌಡ ಪಾಟೀಲ, ಅಶೋಕ ತಳವಾರ, ಅಶೋಕ ಹರನಗಿರಿ, ಲವೇಶ ಸೋಮನಕಟ್ಟಿ, ಉಮೇಶ ಮಾಗಳ, ಮಾಲತೇಶ ಅಂಗೂರ ಮತ್ತಿತರರು ಮಾತನಾಡಿದರು.
ಸಭೆಯಲ್ಲಿ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೇಖರ ಕಳ್ಳಿಮನಿ, ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ ನಾಗರಾಜ ಬಡಮ್ಮನವರ, ತಾಲೂಕ ಯುವ ಘಟಕದ ಅಧ್ಯಕ್ಷ ಮಾಲತೇಶ ರಿತ್ತಿ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸಂಗಪ್ಪ ಮಲ್ಲಿಗಾರ, ತಾಲೂಕಾ ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜ ಭೀಮಕ್ಕನವರ, ಉಮೇಶ ನಾಗಣ್ಣನವರ, ಶಿವಣ್ಣ ಜವಳಿ, ಮಾರುತಿ ಕನವಳ್ಳಿ, ಮಾಲತೇಶ ಮರೋಳ, ಪ್ರದೀಪ ಹಾವೇರಿ, ವೀರೇಶ ಹ್ಯಾಡ್ಲ್, ಆನಂದ ಬಾಸೂರ, ಜಗದೀಶ ಕೊಂಡೆಮ್ಮನವರ, ಮಂಜು ಮದಕರಿ ಮತ್ತಿತರರು ಭಾಗವಹಿಸಿದ್ದರು.
ವಾಲ್ಮೀಕಿ ಜಾಗೃತಿ ಜಾತ್ರೆಗೆ ಪದಾಧಿಕಾರಿಗಳ ಆಯ್ಕೆ: ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ.೮ ಮತ್ತು ೯ ರಂದು ನಡೆಯುವ ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆ-೨೦೨೪ರ ಹಾವೇರಿ ತಾಲೂಕಾ ಮುಖ್ಯಸ್ಥರನ್ನಾಗಿ ರಮೇಶ ಆನವಟ್ಟಿ,ಉಮೇಶ ಮಾಗಳ, ನಾಗರಾಜ ಬಡಮ್ಮನವರ, ಮಲ್ಲಿಕಾರ್ಜುನ ಬೂದಗಟ್ಟಿ, ಸಂಗಪ್ಪ ಮಲ್ಲಿಗಾರ, ಉಮೇಶ ನಾಗಮ್ಮನವರ ಅವರುಗಳನ್ನು ಜಗದ್ಗುರು ವಾಲ್ಮೀಕಿ ಪ್ರಸಾನ್ನಾನಂದ ಮಹಾಸ್ವಾಮೀಜಿ ಆಯ್ಕೆಮಾಡಿ, ಘೋಷಣೆ ಮಾಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಫೆ.೮-೯ಕ್ಕೆ ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆ-೨೦೨೪: ವಾಲ್ಮೀಕಿ ಪ್ರಸಾನ್ನಾನಂದಶ್ರೀ
ಹಾವೇರಿ : ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ.೮ ಮತ್ತು ೯ ರಂದು ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆ-೨೦೨೪ ಆಯೋಜಿಸಲಾಗಿದೆ. ಈ ಜಾತ್ರೆಯಲ್ಲಿ ಸಮಾಜದ ಜಾಗೃತಿಗಾಗಿ ಹಾಗೂ ಸಮಾಜದ ಆಗೂ-ಹೋಗುಗಳ ಬಗ್ಗೆ, ನಕಲಿಜಾತಿ ಪ್ರಮಾಣ ಪತ್ರ ಸೇರಿದಂತೆ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸುವ ಮೂಲಕ ಸಮಾಜ ಬಾಂಧವರಲ್ಲಿ ಅರಿವು ಮೂಡಿಸಲಾಗುವುದು ಎಂದು ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸಾನ್ನಾನಂದ ಮಹಾಸ್ವಾಮೀಜಿ ಹೇಳಿದರು.
ಡಿ.೧೪ರಂದು ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಾತ್ರೆ-೨೦೨೪ರ ತಾಲೂಕು ಮಟ್ಟದ ಪೂರ್ವಭಾವಿ ಸಭೆಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಶ್ರೀಮಠದ ೨೬ನೇ ವಾರ್ಷಿಕೋತ್ಸವ, ಲಿಂ.ಜಗದ್ಗುರು ಪುಣ್ಯಾನಂದಪುರಿ ಮಹಾಸ್ವಾಮೀಜಿಯವರ ೧೭ನೇ ವರ್ಷದ ಪುಣ್ಯಾರಾಧನೆ ಹಾಗೂ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಯವರ ಪಟ್ಟಾಧಿಕಾರ ಮಹೋತ್ಸವ ಸಮಾರಂಭದ ನಡೆಲಿದ್ದು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು, ಮನ ಧನದಿಮದ ಸಹಕಾರ ನೀಡುವಂತೆ ಕೋರಿದರು.
ಸಭೆಯ ಅಧ್ಯಕ್ಷತೆವಹಿಸಿದ್ದ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಅಧ್ಯಕ್ಷ ರಮೇಶ ಆನವಟ್ಟಿ ಮಾತನಾಡಿ ಹಾವೇರಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನದ ಕಾಮಗಾರಿ ಪೂರ್ಣಗೊಳಿಸಲು ಈಗಾಗಲೇ ಜನಪ್ರತಿನಿಧಿಗಳ ಹಾಗೂ ಜಿಲ್ಲಾಧಿಕಾರಿಗಳ ಗಮನ ತರಲಾಗಿದ್ದು, ಭವನದ ಕಾಮಗಾರಿ ಪೂರ್ಣಗೊಳಿಸಿ ಸಮಾಜಕ್ಕೆ ಶೀರ್ಘದಲ್ಲಿ ಅರ್ಪಿಸುವ ಭರವಸೆ ನೀಡಿದ್ದಾರೆ. ಮಹರ್ಷಿ ವಾಲ್ಮೀಕಿ ಸರ್ಕಲ್‌ನಲ್ಲಿ ವಾಲ್ಮೀಕಿ ಪುತ್ಥಳಿಯನ್ನು ಶೀರ್ಘದಲ್ಲಿಯೇ ಸ್ಥಾಪಿಸಲಾಗುವುದು. ರಾಜನಹಳ್ಳಿಯಲ್ಲಿ ನಡೆಯುವ ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆ-೨೦೨೪ಗೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಸಮಾಜದ ಮುಖಂಡರುಗಳಾದ ಸೋಮನೌಡ ಪಾಟೀಲ, ಅಶೋಕ ತಳವಾರ, ಅಶೋಕ ಹರನಗಿರಿ, ಲವೇಶ ಸೋಮನಕಟ್ಟಿ, ಉಮೇಶ ಮಾಗಳ, ಮಾಲತೇಶ ಅಂಗೂರ ಮತ್ತಿತರರು ಮಾತನಾಡಿದರು.
ಸಭೆಯಲ್ಲಿ ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೇಖರ ಕಳ್ಳಿಮನಿ, ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ ನಾಗರಾಜ ಬಡಮ್ಮನವರ, ತಾಲೂಕ ಯುವ ಘಟಕದ ಅಧ್ಯಕ್ಷ ಮಾಲತೇಶ ರಿತ್ತಿ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸಂಗಪ್ಪ ಮಲ್ಲಿಗಾರ, ತಾಲೂಕಾ ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜ ಭೀಮಕ್ಕನವರ, ಉಮೇಶ ನಾಗಣ್ಣನವರ, ಶಿವಣ್ಣ ಜವಳಿ, ಮಾರುತಿ ಕನವಳ್ಳಿ, ಮಾಲತೇಶ ಮರೋಳ, ಪ್ರದೀಪ ಹಾವೇರಿ, ವೀರೇಶ ಹ್ಯಾಡ್ಲ್, ಆನಂದ ಬಾಸೂರ, ಜಗದೀಶ ಕೊಂಡೆಮ್ಮನವರ, ಮಂಜು ಮದಕರಿ ಮತ್ತಿತರರು ಭಾಗವಹಿಸಿದ್ದರು.
ವಾಲ್ಮೀಕಿ ಜಾಗೃತಿ ಜಾತ್ರೆಗೆ ಪದಾಧಿಕಾರಿಗಳ ಆಯ್ಕೆ: ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ.೮ ಮತ್ತು ೯ ರಂದು ನಡೆಯುವ ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆ-೨೦೨೪ರ ಹಾವೇರಿ ತಾಲೂಕಾ ಮುಖ್ಯಸ್ಥರನ್ನಾಗಿ ರಮೇಶ ಆನವಟ್ಟಿ,ಉಮೇಶ ಮಾಗಳ, ನಾಗರಾಜ ಬಡಮ್ಮನವರ, ಮಲ್ಲಿಕಾರ್ಜುನ ಬೂದಗಟ್ಟಿ, ಸಂಗಪ್ಪ ಮಲ್ಲಿಗಾರ, ಉಮೇಶ ನಾಗಮ್ಮನವರ ಅವರುಗಳನ್ನು ಜಗದ್ಗುರು ವಾಲ್ಮೀಕಿ ಪ್ರಸಾನ್ನಾನಂದ ಮಹಾಸ್ವಾಮೀಜಿ ಆಯ್ಕೆಮಾಡಿ, ಘೋಷಣೆ ಮಾಡಿದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಯಾಲಕ್ಕಿ ಕಂಪಿನ ನಗರ ಹಾವೇರಿಗೆ ಅಂಟುತ್ತಿರುವ ರೌಡಿಗಳ ರಕ್ತವಾಸನೆಯ ನಂಟು!

ಯಾಲಕ್ಕಿ ಕಂಪಿನ ನಗರ ಹಾವೇರಿಗೆ ಅಂಟುತ್ತಿರುವ ರೌಡಿಗಳ ರಕ್ತವಾಸನೆಯ ನಂಟು! ಹಾವೇರಿ: ದಾಸರು,...

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...