ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖರ ಜೊತೆ ಯಾದಗಿರಿಯಲ್ಲಿ
ಎಐಸಿಸಿ ಅಧ್ಯಕ್ಷ ಖರ್ಗೆ ಸಮ್ಮುಖದಲ್ಲಿ ಮಾಜಿ ಶಾಸಕ ನೆಹರು ಓಲೇಕಾರ ಕಾಂಗ್ರೆಸ್ ಸೇರ್ಪಡೆ
ಹಾವೇರಿ: ಕಳೆದ ಹಲವಾರು ದಿನಗಳಿಂದ ಮಾಜಿ ಶಾಸಕ ನೆಹರು ಓಲೇಕಾರ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎನ್ನುವ ಹರಿದಾಡುತ್ತಿದ್ದ ಉಹಾಪುಹದ ಸುದ್ದಿಗೆ ಮೇ.೨ರ ಬುಧವಾರ ಅಂತಿಮ ತೆರೆ ಬಿದ್ದಿದೆ. ಮಾಜಿ ಶಾಸಕ ಓಲೇಕಾರ ಅವರು ಬುಧವಾರ ಯಾದಗಿರಿಯಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರ, ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮತ್ತಿತರರು ಕಾಂಗ್ರೆಸ್ ಭಾವುಟವನ್ನು ನೆಹರು ಅವರಿಗೆ ನೀಡುವ ಮೂಲಕ ಕಾಂಗ್ರೆಸ್ ಶಾಲನ್ನು ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.
ಬುಧವಾರ ಬೆಳಿಗ್ಗೆ ಹೊಸಪೇಟೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನೆಹರು ಓಲೇಕಾರ ಅವರು ಹೊಸಪೇಟೆ ರೆಸಾರ್ಟ್ ಒಂದರಲ್ಲಿ ಮಾತುಕತೆ ನಡೆಸಿದರು. ಈ ವೇಳೆ ನೆಹರು ಓಲೇಕಾರ ಅವರು ಕಾಂಗ್ರೆಸ್ ಪಕ್ಷ ಸೇರಲು ಸಿಎಂ ಸೇರಿದಂತೆ ಅನೇಕ ಪ್ರಮುಖರು ಸಹಮತ ವ್ಯಕ್ತಪಡಿದಿದರೆಂದು ತಿಳಿದು ಬಂದಿದೆ.
ಅನೇಕ ಕಾರ್ಯಕರ್ತರೊಂದಿಗೆ ಮಾಜಿ ಶಾಸಕರಾದ ನೆಹರು ಓಲೇಕಾರ ಅವರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವುದು ಖಚಿತ ವಾಗಿತ್ತು.
ಸುರಪುರದಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಓಏಕಾರ ಅವರನ್ನು ಬರಲು ತಿಳಿಸಲಾಗಿತ್ತು. ಅಂತಿಮವಾಗಿ ಯಾದರಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರು , ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಓಲೇಕಾರ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಯಾದಗಿರಿಗೆ ಬರುವಂತೆ ತಿಳಿಸಿದ ಹಿನ್ನೆಯಲ್ಲಿ ಓಲೇಕಾರ ಅವರು ಯಾದಗಿರಿಗೆ ತೆರಳಿ ಅಲ್ಲಿ ನಡೆದ ಸಮಾರಂಭದಲ್ಲಿ ಕಮಲ ಬಿಟ್ಟು, ಕೈಹಿಡಿದರು.
ಹೊಸಪೇಟೆ ನಗರದ ಕಮಲಾಪೂರದ ಅರೇಂಜ್ ಕೌಂಟಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರೊಂದಿಗೆ ನಡೆದ ಮಾತುಕತೆ ಯ ವೇಳೆ ಬ್ಯಾಡಗಿ ಶಾಸಕರಾದ ಬಸವರಾಜ ಶಿವಣ್ಣನವರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿಅವರ ಜೊತೆಗೆ ಮಾಜಿ ಶಾಸಕರಾದ ನೆಹರು ಓಲೇಕಾರ ರವರು ಸುದೀರ್ಘ ಮಾತುಕತೆ ನಡೆಸಿದರು. ಲೋಕಸಭಾ ಚುನಾವಣೆಗೆ ಆರುದಿನಗಳು ಇರುವಾಗ ಬಿಜೆಪಿ ತೊರೆದು ನೆಹರು ಓಲೇಕಾರ ಅವರು ಕಾಂಗ್ರೆಸ್ ಸೇರ್ಪಡೆ ಯಾಗಿರುವುದು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ಪಕ್ಷದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.
ಕೆಲವರು ಈ ಬೆಳವಣಿಗೆ ಕಾಂಗ್ರೆಸ್ ಪಕ್ಷಕ್ಕೆ ವರವಾಗಬಹುದು ಎಂದು ವಿಶ್ಲೇಷಣೆ ಮಾಡುತ್ತಿದ್ದಾರೆ. ಹೊಸಪೇಟೆ ಯಲ್ಲಿ ನಡೆದ ಬೆಳವಣಿಗೆಗಳಿಗೆ ನೆಹರು ಓಲೇಕಾರ ಅವರ ಬೆಂಬಲಿಗರಾದ ಶ್ರೀಕಾಂತ ಪೂಜಾರ, ಸಂಗಮೇಶ ಸುಳ್ಳಳ್ಳಿ, ಶಿವರಾಜ ಮತ್ತಿಹಳ್ಳಿ ಹಾಗೂ ಹನಮಂತಪ್ಪ ಶರಸೂರಿ, ಕೃಷ್ಣಾ ಜವಳಿ, ಹನಮಂತಪ್ಪ ಕುಮ್ಮಣ್ಣನವರ, ಮಂಜುನಾಥ ಇಟಗಿ, ಶಂಬು ಕಳಸದ, ರವಿ ಗೊಡ್ಡೆಮ್ಮಿ, ದರ್ಶನ ಮಿರ್ಜಕರ್, ಸುಮಂತ ಮಲ್ಲನಗೌಡ್ರ ಮತ್ತಿತರರು ಸಾಕ್ಷಿಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಖರ್ಗೆ ಸಮ್ಮುಖದಲ್ಲಿ ಮಾಜಿ ಶಾಸಕ ನೆಹರು ಓಲೇಕಾರ ಕಾಂಗ್ರೆಸ್ ಸೇರ್ಪಡೆ
ಹಾವೇರಿ: ಕಳೆದ ಹಲವಾರು ದಿನಗಳಿಂದ ಮಾಜಿ ಶಾಸಕ ನೆಹರು ಓಲೇಕಾರ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎನ್ನುವ ಹರಿದಾಡುತ್ತಿದ್ದ ಉಹಾಪುಹದ ಸುದ್ದಿಗೆ ಮೇ.೨ರ ಬುಧವಾರ ಅಂತಿಮ ತೆರೆ ಬಿದ್ದಿದೆ. ಮಾಜಿ ಶಾಸಕ ಓಲೇಕಾರ ಅವರು ಬುಧವಾರ ಯಾದಗಿರಿಯಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಶಿವಣ್ಣನವರ, ಹಾವೇರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮತ್ತಿತರರು ಕಾಂಗ್ರೆಸ್ ಭಾವುಟವನ್ನು ನೆಹರು ಅವರಿಗೆ ನೀಡುವ ಮೂಲಕ ಕಾಂಗ್ರೆಸ್ ಶಾಲನ್ನು ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.
ಬುಧವಾರ ಬೆಳಿಗ್ಗೆ ಹೊಸಪೇಟೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ನೆಹರು ಓಲೇಕಾರ ಅವರು ಹೊಸಪೇಟೆ ರೆಸಾರ್ಟ್ ಒಂದರಲ್ಲಿ ಮಾತುಕತೆ ನಡೆಸಿದರು. ಈ ವೇಳೆ ನೆಹರು ಓಲೇಕಾರ ಅವರು ಕಾಂಗ್ರೆಸ್ ಪಕ್ಷ ಸೇರಲು ಸಿಎಂ ಸೇರಿದಂತೆ ಅನೇಕ ಪ್ರಮುಖರು ಸಹಮತ ವ್ಯಕ್ತಪಡಿದಿದರೆಂದು ತಿಳಿದು ಬಂದಿದೆ.
ಅನೇಕ ಕಾರ್ಯಕರ್ತರೊಂದಿಗೆ ಮಾಜಿ ಶಾಸಕರಾದ ನೆಹರು ಓಲೇಕಾರ ಅವರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವುದು ಖಚಿತ ವಾಗಿತ್ತು.
ಸುರಪುರದಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಓಏಕಾರ ಅವರನ್ನು ಬರಲು ತಿಳಿಸಲಾಗಿತ್ತು. ಅಂತಿಮವಾಗಿ ಯಾದರಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರು , ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಓಲೇಕಾರ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಯಾದಗಿರಿಗೆ ಬರುವಂತೆ ತಿಳಿಸಿದ ಹಿನ್ನೆಯಲ್ಲಿ ಓಲೇಕಾರ ಅವರು ಯಾದಗಿರಿಗೆ ತೆರಳಿ ಅಲ್ಲಿ ನಡೆದ ಸಮಾರಂಭದಲ್ಲಿ ಕಮಲ ಬಿಟ್ಟು, ಕೈಹಿಡಿದರು.
ಹೊಸಪೇಟೆ ನಗರದ ಕಮಲಾಪೂರದ ಅರೇಂಜ್ ಕೌಂಟಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರೊಂದಿಗೆ ನಡೆದ ಮಾತುಕತೆ ಯ ವೇಳೆ ಬ್ಯಾಡಗಿ ಶಾಸಕರಾದ ಬಸವರಾಜ ಶಿವಣ್ಣನವರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿಅವರ ಜೊತೆಗೆ ಮಾಜಿ ಶಾಸಕರಾದ ನೆಹರು ಓಲೇಕಾರ ರವರು ಸುದೀರ್ಘ ಮಾತುಕತೆ ನಡೆಸಿದರು. ಲೋಕಸಭಾ ಚುನಾವಣೆಗೆ ಆರುದಿನಗಳು ಇರುವಾಗ ಬಿಜೆಪಿ ತೊರೆದು ನೆಹರು ಓಲೇಕಾರ ಅವರು ಕಾಂಗ್ರೆಸ್ ಸೇರ್ಪಡೆ ಯಾಗಿರುವುದು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ಪಕ್ಷದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.
ಕೆಲವರು ಈ ಬೆಳವಣಿಗೆ ಕಾಂಗ್ರೆಸ್ ಪಕ್ಷಕ್ಕೆ ವರವಾಗಬಹುದು ಎಂದು ವಿಶ್ಲೇಷಣೆ ಮಾಡುತ್ತಿದ್ದಾರೆ. ಹೊಸಪೇಟೆ ಯಲ್ಲಿ ನಡೆದ ಬೆಳವಣಿಗೆಗಳಿಗೆ ನೆಹರು ಓಲೇಕಾರ ಅವರ ಬೆಂಬಲಿಗರಾದ ಶ್ರೀಕಾಂತ ಪೂಜಾರ, ಸಂಗಮೇಶ ಸುಳ್ಳಳ್ಳಿ, ಶಿವರಾಜ ಮತ್ತಿಹಳ್ಳಿ ಹಾಗೂ ಹನಮಂತಪ್ಪ ಶರಸೂರಿ, ಕೃಷ್ಣಾ ಜವಳಿ, ಹನಮಂತಪ್ಪ ಕುಮ್ಮಣ್ಣನವರ, ಮಂಜುನಾಥ ಇಟಗಿ, ಶಂಬು ಕಳಸದ, ರವಿ ಗೊಡ್ಡೆಮ್ಮಿ, ದರ್ಶನ ಮಿರ್ಜಕರ್, ಸುಮಂತ ಮಲ್ಲನಗೌಡ್ರ ಮತ್ತಿತರರು ಸಾಕ್ಷಿಯಾಗಿದ್ದಾರೆ.