ಹರ ಘರ ತಿರಂಗಾ ಅಭಿಯಾನ ಜಾಥಾಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಚಾಲನೆ

Date:

 ಹರ ಘರ ತಿರಂಗಾ ಅಭಿಯಾನ ಜಾಥಾಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಚಾಲನೆ

ಹಾವೇರಿ: ಪ್ರತಿ ಪ್ರಜೆಯಲ್ಲೂ ರಾಷ್ಟ್ರಾಭಿಮಾನ ಜಾಗೃತಗೊಳಿಸುವ ಹಿನ್ನಲ್ಲೆಯಲ್ಲಿ ಹರ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಆಧುನಿಕ ಭರಾಟೆಯಲ್ಲಿರುವ ಯುವ ಸಮೂಹ ದೇಶಪ್ರೇಮ ಹಾಗೂ ರಾಷ್ಟ್ರಭಕ್ತಿ ಮೈಗೂಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು.
ನಗರದ ಜಿ.ಎಚ್.ಕಾಲೇಜ್ ಆವರಣದಲ್ಲಿ ಮಂಗಳವಾರ ಪ್ರತಿಜ್ಞಾವಿಧಿ ಬೋಧಿಸಿ, ಹರ ಘರ್ ತಿರಂಗಾ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನಿಕ ಹುದ್ದೆ ಹೊಂದಿದವರಿಗೆ ಮಾತ್ರ ರಾಷ್ಟ್ರಧ್ವಜಾರೋಹಣ ಮಾಡಲು ಅವಕಾಶ ಇತ್ತು. ಆದರೆ ಮಾನ್ಯ ಪ್ರಧಾನ ಮಂತ್ರಿಗಳ ಆದೇಶದಂತೆ ೨೦೨೨ ರಲ್ಲಿ ೭೫ನೇ ಆಜಾದಿಕ ಅಮೃತ ಮಹೋತ್ಸವ ಅಂಗವಾಗಿ ಹರ ಘರ್ ತಿರಂಗಾ ಅಭಿಯಾನವನ್ನು ಅತ್ಯಂತ ವಿಬೃಂಭಣೆಯಿಂದ ಆಚರಿಸಲಾಗಿತ್ತು. ಈಗ ಅದರ ಭಾಗವಾಗಿ ಮತ್ತೆ ಮನೆಗಳ ಮೇಲೆ ಧ್ವಜಾರೋಹಣ ಮಾಡುವ ಅವಕಾಶ ಒದಗಿಬಂದಿದ್ದು, ಶಿಷ್ಟಾಚಾರದ ಪ್ರಕಾರ ಧ್ವಜಾರೋಹಣ ಮಾಡಬೇಕು ಎಂದು ಸಲಹೆ ನೀಡಿದರು.
ಹರ ಘರ್ ತಿರಂಗಾ ಅಭಿಯಾನ ಅಂಗವಾಗಿ ಜಾಥಾ, ರ್‍ಯಾಲಿ, ಮ್ಯಾರಥಾನ್ ಆಯೋಜಿಸಲು ಕೇಂದ್ರ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ರಾಷ್ಟ್ರಾಭಿಮಾನ ಮೂಡಿಸುವ ವಿವಿಧ ವೈವಿಧ್ಯಮ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಪ್ರತಿಯೊಬ್ಬರಲ್ಲಿಯೂ ರಾಷ್ಟ್ರಭಕ್ತಿ ಮೂಡಿಸುವ ಜೊತೆಗೆ ಸುಭದ್ರ ರಾಷ್ಟ್ರಕಟ್ಟುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.
ಧ್ವಜ ಹಸ್ತಾಂತರ: ರಾಷ್ಟ್ರಧ್ವಜವನ್ನು ಜಿಲ್ಲಾಧಿಕಾರಿಗಳು ಕಾಲೇಜು ವಿದ್ಯಾರ್ಥಿನಿಯರಿಗೆ ಹಸ್ತಾಂತರ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜದ ಮಹತ್ವ ತಿಳಿಸಿದರು.
ಆಕರ್ಷಕ ಜಾಥಾ: ಹರ ಘರ್ ತಿರಂಗಾ ಅಭಿಯಾನ ಜಾಥಾ ಅತ್ಯಂತ ಆಕರ್ಷಕವಾಗಿತ್ತು, ಗೊಂಬೆ ಕುಣಿತ, ಕಾಲೇಜು ವಿದ್ಯಾರ್ಥಿಗಳ ಘೋಷವಾಕ್ಯಗಳು ಪ್ರತಿ ನಾಗರೀಕರಲ್ಲಿ ರಾಷ್ಟ್ರಭಕ್ತಿ ಜಾಗೃತಗೊಳ್ಳುವಂತೆ ಮಾಡಿತು. ಜಾಥಾದಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಚೆನ್ನಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಕಟ್ಟಿ, ತಹಶೀಲ್ದಾರ ಶಂಕರ, ಎಂ.ಸಿ.ಕೊಳ್ಳಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನೂರಾರು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

 ಹರ ಘರ ತಿರಂಗಾ ಅಭಿಯಾನ ಜಾಥಾಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಚಾಲನೆ

ಹಾವೇರಿ: ಪ್ರತಿ ಪ್ರಜೆಯಲ್ಲೂ ರಾಷ್ಟ್ರಾಭಿಮಾನ ಜಾಗೃತಗೊಳಿಸುವ ಹಿನ್ನಲ್ಲೆಯಲ್ಲಿ ಹರ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಆಧುನಿಕ ಭರಾಟೆಯಲ್ಲಿರುವ ಯುವ ಸಮೂಹ ದೇಶಪ್ರೇಮ ಹಾಗೂ ರಾಷ್ಟ್ರಭಕ್ತಿ ಮೈಗೂಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು.
ನಗರದ ಜಿ.ಎಚ್.ಕಾಲೇಜ್ ಆವರಣದಲ್ಲಿ ಮಂಗಳವಾರ ಪ್ರತಿಜ್ಞಾವಿಧಿ ಬೋಧಿಸಿ, ಹರ ಘರ್ ತಿರಂಗಾ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನಿಕ ಹುದ್ದೆ ಹೊಂದಿದವರಿಗೆ ಮಾತ್ರ ರಾಷ್ಟ್ರಧ್ವಜಾರೋಹಣ ಮಾಡಲು ಅವಕಾಶ ಇತ್ತು. ಆದರೆ ಮಾನ್ಯ ಪ್ರಧಾನ ಮಂತ್ರಿಗಳ ಆದೇಶದಂತೆ ೨೦೨೨ ರಲ್ಲಿ ೭೫ನೇ ಆಜಾದಿಕ ಅಮೃತ ಮಹೋತ್ಸವ ಅಂಗವಾಗಿ ಹರ ಘರ್ ತಿರಂಗಾ ಅಭಿಯಾನವನ್ನು ಅತ್ಯಂತ ವಿಬೃಂಭಣೆಯಿಂದ ಆಚರಿಸಲಾಗಿತ್ತು. ಈಗ ಅದರ ಭಾಗವಾಗಿ ಮತ್ತೆ ಮನೆಗಳ ಮೇಲೆ ಧ್ವಜಾರೋಹಣ ಮಾಡುವ ಅವಕಾಶ ಒದಗಿಬಂದಿದ್ದು, ಶಿಷ್ಟಾಚಾರದ ಪ್ರಕಾರ ಧ್ವಜಾರೋಹಣ ಮಾಡಬೇಕು ಎಂದು ಸಲಹೆ ನೀಡಿದರು.
ಹರ ಘರ್ ತಿರಂಗಾ ಅಭಿಯಾನ ಅಂಗವಾಗಿ ಜಾಥಾ, ರ್‍ಯಾಲಿ, ಮ್ಯಾರಥಾನ್ ಆಯೋಜಿಸಲು ಕೇಂದ್ರ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ರಾಷ್ಟ್ರಾಭಿಮಾನ ಮೂಡಿಸುವ ವಿವಿಧ ವೈವಿಧ್ಯಮ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಪ್ರತಿಯೊಬ್ಬರಲ್ಲಿಯೂ ರಾಷ್ಟ್ರಭಕ್ತಿ ಮೂಡಿಸುವ ಜೊತೆಗೆ ಸುಭದ್ರ ರಾಷ್ಟ್ರಕಟ್ಟುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.
ಧ್ವಜ ಹಸ್ತಾಂತರ: ರಾಷ್ಟ್ರಧ್ವಜವನ್ನು ಜಿಲ್ಲಾಧಿಕಾರಿಗಳು ಕಾಲೇಜು ವಿದ್ಯಾರ್ಥಿನಿಯರಿಗೆ ಹಸ್ತಾಂತರ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜದ ಮಹತ್ವ ತಿಳಿಸಿದರು.
ಆಕರ್ಷಕ ಜಾಥಾ: ಹರ ಘರ್ ತಿರಂಗಾ ಅಭಿಯಾನ ಜಾಥಾ ಅತ್ಯಂತ ಆಕರ್ಷಕವಾಗಿತ್ತು, ಗೊಂಬೆ ಕುಣಿತ, ಕಾಲೇಜು ವಿದ್ಯಾರ್ಥಿಗಳ ಘೋಷವಾಕ್ಯಗಳು ಪ್ರತಿ ನಾಗರೀಕರಲ್ಲಿ ರಾಷ್ಟ್ರಭಕ್ತಿ ಜಾಗೃತಗೊಳ್ಳುವಂತೆ ಮಾಡಿತು. ಜಾಥಾದಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಚೆನ್ನಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮೃತಗೌಡ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಕಟ್ಟಿ, ತಹಶೀಲ್ದಾರ ಶಂಕರ, ಎಂ.ಸಿ.ಕೊಳ್ಳಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನೂರಾರು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ಹಾವೇರಿ:  ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ ಹಾವೇರಿ: ಜಿಲ್ಲೆಯ ನಾಲ್ಕು...

ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ

-ಹಾವೇರಿ : ವೃದ್ದನಿಗೆ ಕೊರೊನಾ ಪಾಸಿಟಿವ್, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ...

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ

ಹೋರಾಟ ಬೆಂಬಲಿಸಿದ ಜನ ಪ್ರತಿನಿಧಿಗಳಿಗೆ ಪೌರ ನೌಕರರ ಕೃತಜ್ಞತೆ ಹಾವೇರಿ; ವಿವಿಧ ಬೇಡಿಕೆಗಳ...