“ವಾಲ್ಮೀಕಿ ಸಮಾಜದ ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ”
ವಾಲ್ಮೀಕಿ ಜಯಂತಿ ಬಹಿಷ್ಕಾರ ವಾಪಾಸ: ರಮೇಶ ಆನವಟ್ಟಿ
ಹಾವೇರಿ:ರಾಜ್ಯದ ವಾಲ್ಮೀಕಿ ಜನಾಂಗದ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿರಿಸಿದ್ದ ೧೮೭ ಕೋಟಿ ರೂಪಾಯಿ ದುರ್ಬಳಕೆ ಆಗಿರುವುದು,ಸಮಾಜದ ಹಿತ ಕಡೆಗಣನೆ, ವಿವಿಧ ಇಲಾಖೆಗಳ ಆರ್ಥಿಕ ಸೌಲಭ್ಯಗಳು ವಾಲ್ಮೀಕಿಸಮಾಜದವರಿಗೆ ದೊರೆಯದಿರುವ ನಮ್ಮ ಸಮಾಜದ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದಅ. ೧೭ ರಂದು ನಡೆಯಲಿರುವ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ವಾಲ್ಮೀಕಿ ನಾಯಕ ಮಹಸಭಾ ಹಾಗೂ ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ರಮೇಶ್ ಆನವಟ್ಟಿ ತಿಳಿಸಿದ್ದಾರೆ.
ವಾಲ್ಮೀಕಿ ಜಯಂತಿ ಬಹಿಷ್ಕಾರ ವಾಪಾಸ: ರಮೇಶ ಆನವಟ್ಟಿ
ಹಾವೇರಿ:ರಾಜ್ಯದ ವಾಲ್ಮೀಕಿ ಜನಾಂಗದ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿರಿಸಿದ್ದ ೧೮೭ ಕೋಟಿ ರೂಪಾಯಿ ದುರ್ಬಳಕೆ ಆಗಿರುವುದು,ಸಮಾಜದ ಹಿತ ಕಡೆಗಣನೆ, ವಿವಿಧ ಇಲಾಖೆಗಳ ಆರ್ಥಿಕ ಸೌಲಭ್ಯಗಳು ವಾಲ್ಮೀಕಿಸಮಾಜದವರಿಗೆ ದೊರೆಯದಿರುವ ನಮ್ಮ ಸಮಾಜದ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದಅ. ೧೭ ರಂದು ನಡೆಯಲಿರುವ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ವಾಲ್ಮೀಕಿ ನಾಯಕ ಮಹಸಭಾ ಹಾಗೂ ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ರಮೇಶ್ ಆನವಟ್ಟಿ ತಿಳಿಸಿದ್ದಾರೆ.
ಅ.೧೪ರಂದು ಹಾವೇರಿ ಪತ್ರಿಕಾ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವ ಬಗ್ಗೆ ಜಿಲ್ಲಾಡಳಿತ, ತಾಲೂಕಾ ಆಡಳಿತ ಕರೆದ ಪೂರ್ವಬಾವಿ ಸಭೆಗಳಲ್ಲಿ ವಾಲ್ಮೀಕಿ ಸಮಾಜಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಸಮಾಜದ ಮುಖಂಡರು ಸರ್ಕಾರ ಆಚರಿಸುವ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದರು.
ಈ ಬಗ್ಗೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ನಮ್ಮ ಸಮಾಜದ ರಾಜ್ಯ, ಜಿಲ್ಲೆಯ, ತಾಲೂಕುಗಳಪ್ರಮುಖರು, ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಅ.೯ರಂದು ಭೇಟಿಯಾಗಿ ನಮ್ಮ ಸಮಾಜದ ಬೇಡಿಕೆಗಳ ಬಗ್ಗೆ ಗಮನ ಸೆಳೆಯಲಾಯಿತು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದೆ ಎನ್ನಲಾದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು, ತಳವಾರ ಹೆಸರಿನಲ್ಲಿ ನಕಲಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ಪಡೆಯುತ್ತಿರುವದನ್ನು ತಡೆಯಲು ಅಗತ್ಯ ಕ್ರಮವಹಿಸಲು ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಭಿವೃದ್ಧಿ ನಿಗಮದಲ್ಲಿ ದುರ್ಬಳಕೆ ಯಾದ ೧೮೭ಕೋಟಿ ರೂ. ಜತೆಗೆ, ಅಭಿವೃದ್ಧಿಗೆ ಹೆಚ್ಚಿನಹಣ ನೀಡುವ ಜತೆಗೆ ಎಲ್ಲ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಅ.೧೭ರಂದು ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆಯಲ್ಲಿ ಸಮಾಜ ಬಾಂಧವರು ಭಾಗವಹಿಸುವಂತೆ ರಮೇಶ ಆನವಟ್ಟಿ ಮನವಿ ಮಾಡಿದ್ದಾರೆ.
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವ ಬಗ್ಗೆ ಜಿಲ್ಲಾಡಳಿತ, ತಾಲೂಕಾ ಆಡಳಿತ ಕರೆದ ಪೂರ್ವಬಾವಿ ಸಭೆಗಳಲ್ಲಿ ವಾಲ್ಮೀಕಿ ಸಮಾಜಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಸಮಾಜದ ಮುಖಂಡರು ಸರ್ಕಾರ ಆಚರಿಸುವ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದರು.
ಈ ಬಗ್ಗೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ನಮ್ಮ ಸಮಾಜದ ರಾಜ್ಯ, ಜಿಲ್ಲೆಯ, ತಾಲೂಕುಗಳಪ್ರಮುಖರು, ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಅ.೯ರಂದು ಭೇಟಿಯಾಗಿ ನಮ್ಮ ಸಮಾಜದ ಬೇಡಿಕೆಗಳ ಬಗ್ಗೆ ಗಮನ ಸೆಳೆಯಲಾಯಿತು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದೆ ಎನ್ನಲಾದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು, ತಳವಾರ ಹೆಸರಿನಲ್ಲಿ ನಕಲಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ಪಡೆಯುತ್ತಿರುವದನ್ನು ತಡೆಯಲು ಅಗತ್ಯ ಕ್ರಮವಹಿಸಲು ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಭಿವೃದ್ಧಿ ನಿಗಮದಲ್ಲಿ ದುರ್ಬಳಕೆ ಯಾದ ೧೮೭ಕೋಟಿ ರೂ. ಜತೆಗೆ, ಅಭಿವೃದ್ಧಿಗೆ ಹೆಚ್ಚಿನಹಣ ನೀಡುವ ಜತೆಗೆ ಎಲ್ಲ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಅ.೧೭ರಂದು ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆಯಲ್ಲಿ ಸಮಾಜ ಬಾಂಧವರು ಭಾಗವಹಿಸುವಂತೆ ರಮೇಶ ಆನವಟ್ಟಿ ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರುಗಳಾದ ನ್ಯಾ.ಬಸವರಾಜ್ ಹಾದಿಮನಿ, ನ್ಯಾ.ಶೇಖರ ಕಳ್ಳಿಮನಿ, ಅಶೋಕ ಹರನಗಿರಿ, ಕೃಷ್ಣ ಜವಳಿ, ನಾಗರಾಜ ಬಡಮ್ಮನವರ ಇದ್ದರು.