ಸಂಪತ್ತು, ಅಧಿಕಾರ-ಅವಕಾಶ ಸಮನಾಗಿ ಎಲ್ಲರಿಗೂ ಹಂಚಿಕೆಯಾಗಬೇಕು
-ಸಚಿವ ಶಿವಾನಂದ ಪಾಟೀಲ
ಹಾವೇರಿ : ಸಂವಿಧಾನದ ಆಶಯಗಳು ಸಾಕಾರಗೊಳ್ಳಬೇಕು, ಈ ದೇಶದ ಸಾರ್ವಭೌಮನಾದ ಜನ ಸಾಮಾನ್ಯನ ಬದುಕು ಸುಂದರವಾಗಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದ ದಿ.ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಬಾನುವಾರ ೭೬ನೇ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಮ್ಮ ಸರ್ಕಾರ ಸರ್ವರನ್ನೂ ಒಳಗೊಂಡ, ಸರ್ವರನ್ನು ಬೆಸೆಯುವ ಮತ್ತು ಸರ್ವರಿಗೂ ಸಮಪಾಲು-ಸಮಬಾಳು ನೀಡಬೇಕೆಂಬ ಪ್ರಾಮಾಣಿಕ ಆಶಯದ ಸರ್ಕಾರವಾಗಿ ಬಡವರ, ದಮನಿತರ, ಶೋಷಿತರ ಏಳಿಗೆಗಾಗಿ ವಿಶೇಷ ಒತ್ತು ನೀಡಿದೆ ಎಂದು ಹೇಳಿದರು.
ನಮ್ಮ ಸಂವಿಧಾನ, ನಮಗೆ ಅಪರಿಮಿತ ಹಕ್ಕುಗಳನ್ನು ಕೊಟ್ಟಿರುವಂತೆ, ಕರ್ತವ್ಯಗಳನ್ನೂ ಸೂಚಿಸಿದೆ. ನಮ್ಮ ಸಂವಿಧಾನದ ನಿರ್ದೇಶಕ ಸೂತ್ರಗಳು, ಭಾರತೀಯರಾದ ನಾವು ಎಂಥ ದೇಶವನ್ನು ರೂಪುಗೊಳಿಸಬೇಕೆಂಬ ಕನಸುಗಳನ್ನು ನೀಡಿದೆ. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪವಂತಾಗಬೇಕು ಎಂದರು.
ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮನಾಗಿ ಎಲ್ಲರಿಗೂ ಹಂಚಿಕೆಯಾಗಬೇಕು ಎಂಬ ಆಶಯದೊಂದಿಗೆ ಕಾರ್ಯನಿರ್ವಹಿಸಿಕೊಂಡು ಬಂದಿದ್ದೇವೆ. ನುಡಿದಂತೆ ನಡೆದಿದ್ದೇವೆ ಹಾಗೂ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನಾವು ಜನತೆಗೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಉಚಿತ ಸಾರಿಗೆ ಪ್ರಯಾಣದ ಶಕ್ತಿಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ ೯.೫೪ ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಹಾವೇರಿ ವಿಭಾಗಕ್ಕೆ ೮೬ ಹೊಸ ಬಸ್ಗಳನ್ನು ನೀಡಲಾಗಿದೆ ಎಂದರು.
ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯ ೪.೨ ಲಕ್ಷ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಈ ಕುಟುಂಬಗಳಿಗೆ ಶೂನ್ಯ ವಿದ್ಯುತ್ ಬಿಲ್ ವಿತರಿಸಲಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ ೩.೮೦ ಲಕ್ಷ ಕುಟುಂಬದ ಯಜಮಾನತಿಯರಿಗೆ ಪ್ರತಿ ಮಾಹೆ ರೂ.೨೦೦೦ರಂತೆ ಒಟ್ಟು ವರ್ಷಕ್ಕೆ ರೂ.೯೨ ಕೋಟಿ ಜಮೆ ಮಾಡಲಾಗಿದೆ. ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಜಿಲ್ಲೆಯಲ್ಲಿ ೫,೧೦೪ ಪದವಿ ಹಾಗೂ ಡಿಪ್ಲೋಮೊ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಜನವರಿ-೨೦೨೪ ರಿಂದ ನವೆಂಬರ್ ತಿಂಗಳವರೆಗೆ ರೂ. ೫.೬೮ ಕೋಟಿ ಮೊತ್ತ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಮಳೆಯಿಂದ ಹಾನಿಯಾದ ೪೧೪ ಮನೆ ಹಾಗೂ ೩೧,೦೭೦ ಹೆಕ್ಷೇರ್ಕ್ಷೇತ ಬೆಳೆಹಾನಿಯಾದ ಸಂತ್ರಸ್ಥರಿಗೆ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಮಾರ್ಗಸೂಚಿ ಅನುಸಾರ ರೂ.೨೩.೪೭ ಕೋಟಿ ಪರಿಹಾರ ಪಾವತಿಸಲಾಗಿದೆ.
ಬೇಸಿಗೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ೭.೪೫ ಲಕ್ಷ ಟನ್ ಮೇವು ಲಭ್ಯವಿದೆ. ಮುಂದಿನ ೪೬ ವಾರಗಳವರೆಗೆ ಜಾನುವಾರುಗಳಿಗೆ ಯಾವುದೇ ಮೇವಿನ ಕೊರತೆ ಇರುವುದಿಲ್ಲ. ಪ್ರಸಕ್ತ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಮೃತಪಟ್ಟ ೯೮ ಜಾನುವಾರುಗಳ ಮಾಲೀಕರಿಗೆ ರೂ.೨.೨೦ಲಕ್ಷ ಪರಿಹಾರ ಮೊತ್ತ ಪಾವತಿಸಲಾಗಿದೆ. ೧೧.೩೨ ಲಕ್ಷ ಜಾನುವಾರುಗಳಿಗೆ ವಿವಿಧ ಲಸಿಕೆ ನೀಡಲಾಗಿದೆ ಎಂದರು.
ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ೭೨೬ ಕಾಮಗಾರಿಗಳನ್ನು ಆರಂಭಿಸಿ, ಈಗಾಗಲೇ ೬೪೯ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದ ೭೭ ಕಾಮಗಾರಿಗಳನ್ನು ಮಾರ್ಚ್ -೨೦೨೫ರೊಳಗಾಗಿ ಪೂರ್ಣಗೊಳಿಸಿ ಜಿಲ್ಲೆಯ ಎಲ್ಲ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಾಗುವುದು ಎಂದು ಹೇಳಿದರು.
ಸನ್ಮಾನ: ಕ್ರೀಡೆ, ಶಿಕ್ಷಣ, ಸಾಮಾಜಿಕ, ಪರಿಸರ, ಮಾಧ್ಯಮ ಹಾಗೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ೧೮ ಜನ ಸಾಧಕರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಹಿರೇಮಠ, ನಗರಸಭೆ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಮಾಳಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಡಾ.ನಾಗಾರಜ ಎಲ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಉಪ ವಿಭಾಗಾಧಿಕಾರಿ ಚನ್ನಪ್ಪ, ತಹಶೀಲ್ದಾರ ಶ್ರೀಮತಿ ಶರಣಮ್ಮ ಇತರರು ಉಪಸ್ಥಿತರಿದ್ದರು.
ಸಂಪತ್ತು, ಅಧಿಕಾರ-ಅವಕಾಶ ಸಮನಾಗಿ ಎಲ್ಲರಿಗೂ ಹಂಚಿಕೆಯಾಗಬೇಕು -ಸಚಿವ ಶಿವಾನಂದ ಪಾಟೀಲ
Date:
ಸಂಪತ್ತು, ಅಧಿಕಾರ-ಅವಕಾಶ ಸಮನಾಗಿ ಎಲ್ಲರಿಗೂ ಹಂಚಿಕೆಯಾಗಬೇಕು
-ಸಚಿವ ಶಿವಾನಂದ ಪಾಟೀಲ
ಹಾವೇರಿ : ಸಂವಿಧಾನದ ಆಶಯಗಳು ಸಾಕಾರಗೊಳ್ಳಬೇಕು, ಈ ದೇಶದ ಸಾರ್ವಭೌಮನಾದ ಜನ ಸಾಮಾನ್ಯನ ಬದುಕು ಸುಂದರವಾಗಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದ ದಿ.ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಬಾನುವಾರ ೭೬ನೇ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಮ್ಮ ಸರ್ಕಾರ ಸರ್ವರನ್ನೂ ಒಳಗೊಂಡ, ಸರ್ವರನ್ನು ಬೆಸೆಯುವ ಮತ್ತು ಸರ್ವರಿಗೂ ಸಮಪಾಲು-ಸಮಬಾಳು ನೀಡಬೇಕೆಂಬ ಪ್ರಾಮಾಣಿಕ ಆಶಯದ ಸರ್ಕಾರವಾಗಿ ಬಡವರ, ದಮನಿತರ, ಶೋಷಿತರ ಏಳಿಗೆಗಾಗಿ ವಿಶೇಷ ಒತ್ತು ನೀಡಿದೆ ಎಂದು ಹೇಳಿದರು.
ನಮ್ಮ ಸಂವಿಧಾನ, ನಮಗೆ ಅಪರಿಮಿತ ಹಕ್ಕುಗಳನ್ನು ಕೊಟ್ಟಿರುವಂತೆ, ಕರ್ತವ್ಯಗಳನ್ನೂ ಸೂಚಿಸಿದೆ. ನಮ್ಮ ಸಂವಿಧಾನದ ನಿರ್ದೇಶಕ ಸೂತ್ರಗಳು, ಭಾರತೀಯರಾದ ನಾವು ಎಂಥ ದೇಶವನ್ನು ರೂಪುಗೊಳಿಸಬೇಕೆಂಬ ಕನಸುಗಳನ್ನು ನೀಡಿದೆ. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪವಂತಾಗಬೇಕು ಎಂದರು.
ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮನಾಗಿ ಎಲ್ಲರಿಗೂ ಹಂಚಿಕೆಯಾಗಬೇಕು ಎಂಬ ಆಶಯದೊಂದಿಗೆ ಕಾರ್ಯನಿರ್ವಹಿಸಿಕೊಂಡು ಬಂದಿದ್ದೇವೆ. ನುಡಿದಂತೆ ನಡೆದಿದ್ದೇವೆ ಹಾಗೂ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನಾವು ಜನತೆಗೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಉಚಿತ ಸಾರಿಗೆ ಪ್ರಯಾಣದ ಶಕ್ತಿಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ ೯.೫೪ ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಹಾವೇರಿ ವಿಭಾಗಕ್ಕೆ ೮೬ ಹೊಸ ಬಸ್ಗಳನ್ನು ನೀಡಲಾಗಿದೆ ಎಂದರು.
ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯ ೪.೨ ಲಕ್ಷ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಈ ಕುಟುಂಬಗಳಿಗೆ ಶೂನ್ಯ ವಿದ್ಯುತ್ ಬಿಲ್ ವಿತರಿಸಲಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ ೩.೮೦ ಲಕ್ಷ ಕುಟುಂಬದ ಯಜಮಾನತಿಯರಿಗೆ ಪ್ರತಿ ಮಾಹೆ ರೂ.೨೦೦೦ರಂತೆ ಒಟ್ಟು ವರ್ಷಕ್ಕೆ ರೂ.೯೨ ಕೋಟಿ ಜಮೆ ಮಾಡಲಾಗಿದೆ. ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಜಿಲ್ಲೆಯಲ್ಲಿ ೫,೧೦೪ ಪದವಿ ಹಾಗೂ ಡಿಪ್ಲೋಮೊ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಜನವರಿ-೨೦೨೪ ರಿಂದ ನವೆಂಬರ್ ತಿಂಗಳವರೆಗೆ ರೂ. ೫.೬೮ ಕೋಟಿ ಮೊತ್ತ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಮಳೆಯಿಂದ ಹಾನಿಯಾದ ೪೧೪ ಮನೆ ಹಾಗೂ ೩೧,೦೭೦ ಹೆಕ್ಷೇರ್ಕ್ಷೇತ ಬೆಳೆಹಾನಿಯಾದ ಸಂತ್ರಸ್ಥರಿಗೆ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಮಾರ್ಗಸೂಚಿ ಅನುಸಾರ ರೂ.೨೩.೪೭ ಕೋಟಿ ಪರಿಹಾರ ಪಾವತಿಸಲಾಗಿದೆ.
ಬೇಸಿಗೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ೭.೪೫ ಲಕ್ಷ ಟನ್ ಮೇವು ಲಭ್ಯವಿದೆ. ಮುಂದಿನ ೪೬ ವಾರಗಳವರೆಗೆ ಜಾನುವಾರುಗಳಿಗೆ ಯಾವುದೇ ಮೇವಿನ ಕೊರತೆ ಇರುವುದಿಲ್ಲ. ಪ್ರಸಕ್ತ ಸಾಲಿನಲ್ಲಿ ಪ್ರಕೃತಿ ವಿಕೋಪದಿಂದ ಮೃತಪಟ್ಟ ೯೮ ಜಾನುವಾರುಗಳ ಮಾಲೀಕರಿಗೆ ರೂ.೨.೨೦ಲಕ್ಷ ಪರಿಹಾರ ಮೊತ್ತ ಪಾವತಿಸಲಾಗಿದೆ. ೧೧.೩೨ ಲಕ್ಷ ಜಾನುವಾರುಗಳಿಗೆ ವಿವಿಧ ಲಸಿಕೆ ನೀಡಲಾಗಿದೆ ಎಂದರು.
ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ೭೨೬ ಕಾಮಗಾರಿಗಳನ್ನು ಆರಂಭಿಸಿ, ಈಗಾಗಲೇ ೬೪೯ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದ ೭೭ ಕಾಮಗಾರಿಗಳನ್ನು ಮಾರ್ಚ್ -೨೦೨೫ರೊಳಗಾಗಿ ಪೂರ್ಣಗೊಳಿಸಿ ಜಿಲ್ಲೆಯ ಎಲ್ಲ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಾಗುವುದು ಎಂದು ಹೇಳಿದರು.
ಸನ್ಮಾನ: ಕ್ರೀಡೆ, ಶಿಕ್ಷಣ, ಸಾಮಾಜಿಕ, ಪರಿಸರ, ಮಾಧ್ಯಮ ಹಾಗೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ೧೮ ಜನ ಸಾಧಕರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಹಿರೇಮಠ, ನಗರಸಭೆ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಮಾಳಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಡಾ.ನಾಗಾರಜ ಎಲ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಉಪ ವಿಭಾಗಾಧಿಕಾರಿ ಚನ್ನಪ್ಪ, ತಹಶೀಲ್ದಾರ ಶ್ರೀಮತಿ ಶರಣಮ್ಮ ಇತರರು ಉಪಸ್ಥಿತರಿದ್ದರು.