.
ಪಂಚ ಗ್ಯಾರಂಟಿ ಯೋಜನೆಗಳಲ್ಲಿನ ಎಲ್ಲ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ
-ಉಪಾಧ್ಯಕ್ಷ ಎಸ್.ಆರ್.ಪಾಟೀಲ
ಹಾವೇರಿ: ಪಂಚ ಗ್ಯಾರಂಟಿ ಯೋಜನೆಗಳಲ್ಲಿನ ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ತಿಳಿಸಿದರು. ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ೨೦೨೩ರ ಚುನಾವಣೆಯಲ್ಲಿ ಜನರಿಗೆ ನೀಡಲಾದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.
ಶಕ್ತಿ ಯೋಜನೆ ಜಾರಿಯಾದ ನಂತರ ಬೆಳಗಾವಿ ಕಂದಾಯ ವಿಭಾಗದ ವ್ಯಾಪ್ತಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಶೇ. ೪೦ ರ? ಹೆಚ್ಚಾಗಿದೆ. ಇದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕಳೆದ ಒಂದುವರೆ ವ?ಗಳಲ್ಲಿ ರೂ.೩,೯೦೦ ಕೋಟಿ ಆದಾಯ ಲಭಿಸಿದೆ. ಇ?ಲ್ಲಾ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗಿದ್ದರೂ ಪ್ರಯಾಣಿಕರಿಂದ ದೂರು ಬಾರದಂತೆ ಸಿಬ್ಬಂದಿ ಸೇವೆ ಸಲ್ಲಿಸಿದ್ದಾರೆ ಎಂದರು.
ಶಕ್ತಿ ಯೋಜನೆ ಜಾರಿಯಾದ ನಂತರ ಪ್ರತಿದಿನ ಸರಾಸರಿ ೨೪.೮೭ ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ. ಅದಕ್ಕೂ ಮೊದಲು ೧೬.೪೯ ಲಕ್ಷ ಮಂದಿ ಪ್ರಯಾಣಿಸುತ್ತಿದ್ದರು. ಪ್ರತಿ ದಿನ ಸರಾಸರಿ ೮ ಲಕ್ಷ ಮಂದಿ ಹೆಚ್ಚಳವಾಗಿದೆ. ಮೊದಲು ಮಹಿಳಾ ಪ್ರಯಾಣಿಕರ ಸಂಖ್ಯೆ ಶೇ.೩೦ ರಿಮದ ೪೦ರಷ್ಟಿದ್ದರೆ ಈಗ ಶೇ.೬೦ಕ್ಕೆ ಏರಿಕೆಯಾಗಿದೆ ಎಂದರು.
ಶಕ್ತಿ ಯೋಜನೆ ಪ್ರಾರಂಭದಿಂದ ೨೦೨೪ರ ಡಿಸೆಂಬರ್ ಅಂತ್ಯಕ್ಕೆ ಶಕ್ತಿ ಯೋಜನೆಯಡಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ೮೪.೧೦ ಕೋಟಿ ಮಹಿಳೆಯರು ಪ್ರಮಾಣ ಮಾಡಿದ್ದಾರೆ. ಈ ಪ್ರಯಾಣಿಕರಿಗೆ ವಿತರಿಸಿದ ಶೂನ್ಯ ಮೌಲ್ಯದ ಟಿಕೆಟ್ ಮೊತ್ತ ರೂ.೨,೧೫೮ ಕೋಟಿಗಳಾಗಿದೆ. ಇದೇ ಜನವರಿ ತಿಂಗಳ ಅಂತ್ಯಕ್ಕೆ ರೂ.೧,೮೧೯ ಕೋಟಿಗಳನ್ನು ರಾಜ್ಯ ಸರ್ಕಾರ ಸಂಸ್ಥೆಗೆ ಮರುಪಾವತಿ ಮಾಡಿದೆ ಎಂದು ತಿಳಿಸಿದರು.
ಕಳೆದ ಐದು ವ?ಗಳಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಯಾವುದೇ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ. ಆದರೆ ಶಕ್ತಿ ಯೋಜನೆ ಪ್ರಾರಂಭವಾದ ನಂತರ ೮೪೬ ಬಸ್ಸುಗಳನ್ನು ಸೇರ್ಪಡೆ ಮಾಡಲಾಗಿದೆ. ಇನ್ನೂ ೮೦೦ ಬಸ್ಸುಗಳ ಅವಶ್ಯಕತೆಯಿದೆ. ಹಾಗೆಯೇ ಹೊಸದಾಗಿ ೧೦೨೫ ಚಾಲಕರನ್ನು ಹೊರಗುತ್ತಿಗೆಯಲ್ಲಿ ನೇಮಕ ಮಾಡಲು ಮಂಡಳಿಯ ಅನುಮತಿ ದೊರೆತಿದ್ದು, ೭೨೮ ನೌಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಉಳಿದ ೨೯೭ ನೌಕರರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ವ್ಯಾಪ್ತಿಯಲ್ಲಿ ಪ್ರತಿದಿನದ ಶೆಡ್ಯೂಲ್ ಸಂಖ್ಯೆ ೪೭೬೮ ಆಗಿದೆ ಎಂದು ಮಾಹಿತಿ ನೀಡಿದರು.
ಶಕ್ತಿ ಯೋಜನೆ ಜಾರಿಯಾದ ನಂತರ ೧೨೭ ಬಸ್ಸುಗಳು ಸೇರ್ಪಡೆಯಾಗಿವೆ. ೨೦೦ ಬಸ್ಸುಗಳಿಗೆ ಬೇಡಿಕೆ ಸಲ್ಲಿಸಿದ್ದು, ೩೫೩ ಮಂದಿ ಹೊಸ ಚಾಲಕ-ನಿರ್ವಾಹಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರತಿದಿನ ೨೯೨ ಸರತಿಗಳು ಸಂಚರಿಸುತ್ತವೆ. ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ೩೩ ಡಿಪೋ ಕಟ್ಟಡಗಳನ್ನು ನಿರ್ಮಿಸಲಾಗಿದ್ದರೆ, ವಿಜಯಪುರ ಜಿಲ್ಲೆಯಲ್ಲಿ ೩ ಡಿಪೋ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂದರು.
ಸಾರಿಗೆ ಸಂಸ್ಥೆಯ ಪ್ರತಿ ಘಟಕಗಳ ವ್ಯಾಪ್ತಿಯಲ್ಲಿ ಮಹಿಳೆಯರ ಸುರಕ್ಷತೆಯ ಹಿತದೃಷ್ಟಿಯಿಂದ ಪ್ರತ್ಯೇಕವಾದ ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆಯನ್ನು ನಿರ್ವಹಿಸಲಾಗಿದೆ. ಮಕ್ಕಳಿಗೆ ಮಹಿಳೆಯರು ಹಾಲು ಕುಡಿಸುವ ಸಲುವಾಗಿ ಫೀಡಿಂಗ್ ಕೊಠಡಿಗಳ ವ್ಯವಸ್ಥೆ ಸಹ ಮಾಡಲಾಗಿದೆ. ಈ ವ್ಯವಸ್ಥೆ ಇಲ್ಲದ ಕಡೆಗಳಲ್ಲಿ ಫೀಡಿಂಗ್ ಕೊಠಡಿಗಳ ನಿರ್ಮಾಣಕ್ಕೆ, ಆದ್ಯತೆ ನೀಡಲಾಗುತ್ತಿದೆ. ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಹಾವೇರಿ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ಪ್ರಯತ್ನ ಮಾಡಲಾಗುತ್ತಿದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ಆರೋಗ್ಯ ಸಮಸ್ಯೆಯಿಂದ ಗೃಹಲಕ್ಷ್ಮೀ ಯೋಜನೆ ಹಣ ಜಮೆಯಾಗುವುದು ವಿಳಂವಾಗಿದೆ, ಶೀಘ್ರದಲ್ಲೇ ಬಿಡುಗಡೆಮಾಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಇನ್ನು ಮುಂದು ೧೦ ಕೆ.ಜಿ. ವಿತರಣೆ ಮಾಡಲಾಗುವುದು, ಕಳಪೆ ಗುಣಮಪಟ್ಟ ಜೋಳ ವಿತರಣೆ ಸ್ಥಗಿತಗೊಳಿಸಲಾಗಿದೆ. ಯುವನಿಧಿ ಯೋಜನೆಯಡಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಣ ನೀಡುವ ಬದಲು ತರಬೇತಿ ನೀಡಲು ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಹಿರೇಮಠ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ. ಪಿ.ಎಸ್.ಬಿಷ್ಟನಗೌಡ್ರ ಇತರರು ಉಪಸ್ಥಿತರಿದ್ದರು.
ಪಂಚ ಗ್ಯಾರಂಟಿ ಯೋಜನೆಗಳಲ್ಲಿನ ಎಲ್ಲ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ -ಉಪಾಧ್ಯಕ್ಷ ಎಸ್.ಆರ್.ಪಾಟೀಲ
Date:
.
ಪಂಚ ಗ್ಯಾರಂಟಿ ಯೋಜನೆಗಳಲ್ಲಿನ ಎಲ್ಲ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ
-ಉಪಾಧ್ಯಕ್ಷ ಎಸ್.ಆರ್.ಪಾಟೀಲ
ಹಾವೇರಿ: ಪಂಚ ಗ್ಯಾರಂಟಿ ಯೋಜನೆಗಳಲ್ಲಿನ ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ತಿಳಿಸಿದರು. ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ೨೦೨೩ರ ಚುನಾವಣೆಯಲ್ಲಿ ಜನರಿಗೆ ನೀಡಲಾದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.
ಶಕ್ತಿ ಯೋಜನೆ ಜಾರಿಯಾದ ನಂತರ ಬೆಳಗಾವಿ ಕಂದಾಯ ವಿಭಾಗದ ವ್ಯಾಪ್ತಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಶೇ. ೪೦ ರ? ಹೆಚ್ಚಾಗಿದೆ. ಇದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕಳೆದ ಒಂದುವರೆ ವ?ಗಳಲ್ಲಿ ರೂ.೩,೯೦೦ ಕೋಟಿ ಆದಾಯ ಲಭಿಸಿದೆ. ಇ?ಲ್ಲಾ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗಿದ್ದರೂ ಪ್ರಯಾಣಿಕರಿಂದ ದೂರು ಬಾರದಂತೆ ಸಿಬ್ಬಂದಿ ಸೇವೆ ಸಲ್ಲಿಸಿದ್ದಾರೆ ಎಂದರು.
ಶಕ್ತಿ ಯೋಜನೆ ಜಾರಿಯಾದ ನಂತರ ಪ್ರತಿದಿನ ಸರಾಸರಿ ೨೪.೮೭ ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ. ಅದಕ್ಕೂ ಮೊದಲು ೧೬.೪೯ ಲಕ್ಷ ಮಂದಿ ಪ್ರಯಾಣಿಸುತ್ತಿದ್ದರು. ಪ್ರತಿ ದಿನ ಸರಾಸರಿ ೮ ಲಕ್ಷ ಮಂದಿ ಹೆಚ್ಚಳವಾಗಿದೆ. ಮೊದಲು ಮಹಿಳಾ ಪ್ರಯಾಣಿಕರ ಸಂಖ್ಯೆ ಶೇ.೩೦ ರಿಮದ ೪೦ರಷ್ಟಿದ್ದರೆ ಈಗ ಶೇ.೬೦ಕ್ಕೆ ಏರಿಕೆಯಾಗಿದೆ ಎಂದರು.
ಶಕ್ತಿ ಯೋಜನೆ ಪ್ರಾರಂಭದಿಂದ ೨೦೨೪ರ ಡಿಸೆಂಬರ್ ಅಂತ್ಯಕ್ಕೆ ಶಕ್ತಿ ಯೋಜನೆಯಡಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ೮೪.೧೦ ಕೋಟಿ ಮಹಿಳೆಯರು ಪ್ರಮಾಣ ಮಾಡಿದ್ದಾರೆ. ಈ ಪ್ರಯಾಣಿಕರಿಗೆ ವಿತರಿಸಿದ ಶೂನ್ಯ ಮೌಲ್ಯದ ಟಿಕೆಟ್ ಮೊತ್ತ ರೂ.೨,೧೫೮ ಕೋಟಿಗಳಾಗಿದೆ. ಇದೇ ಜನವರಿ ತಿಂಗಳ ಅಂತ್ಯಕ್ಕೆ ರೂ.೧,೮೧೯ ಕೋಟಿಗಳನ್ನು ರಾಜ್ಯ ಸರ್ಕಾರ ಸಂಸ್ಥೆಗೆ ಮರುಪಾವತಿ ಮಾಡಿದೆ ಎಂದು ತಿಳಿಸಿದರು.
ಕಳೆದ ಐದು ವ?ಗಳಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಯಾವುದೇ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ. ಆದರೆ ಶಕ್ತಿ ಯೋಜನೆ ಪ್ರಾರಂಭವಾದ ನಂತರ ೮೪೬ ಬಸ್ಸುಗಳನ್ನು ಸೇರ್ಪಡೆ ಮಾಡಲಾಗಿದೆ. ಇನ್ನೂ ೮೦೦ ಬಸ್ಸುಗಳ ಅವಶ್ಯಕತೆಯಿದೆ. ಹಾಗೆಯೇ ಹೊಸದಾಗಿ ೧೦೨೫ ಚಾಲಕರನ್ನು ಹೊರಗುತ್ತಿಗೆಯಲ್ಲಿ ನೇಮಕ ಮಾಡಲು ಮಂಡಳಿಯ ಅನುಮತಿ ದೊರೆತಿದ್ದು, ೭೨೮ ನೌಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಉಳಿದ ೨೯೭ ನೌಕರರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ವ್ಯಾಪ್ತಿಯಲ್ಲಿ ಪ್ರತಿದಿನದ ಶೆಡ್ಯೂಲ್ ಸಂಖ್ಯೆ ೪೭೬೮ ಆಗಿದೆ ಎಂದು ಮಾಹಿತಿ ನೀಡಿದರು.
ಶಕ್ತಿ ಯೋಜನೆ ಜಾರಿಯಾದ ನಂತರ ೧೨೭ ಬಸ್ಸುಗಳು ಸೇರ್ಪಡೆಯಾಗಿವೆ. ೨೦೦ ಬಸ್ಸುಗಳಿಗೆ ಬೇಡಿಕೆ ಸಲ್ಲಿಸಿದ್ದು, ೩೫೩ ಮಂದಿ ಹೊಸ ಚಾಲಕ-ನಿರ್ವಾಹಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರತಿದಿನ ೨೯೨ ಸರತಿಗಳು ಸಂಚರಿಸುತ್ತವೆ. ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ೩೩ ಡಿಪೋ ಕಟ್ಟಡಗಳನ್ನು ನಿರ್ಮಿಸಲಾಗಿದ್ದರೆ, ವಿಜಯಪುರ ಜಿಲ್ಲೆಯಲ್ಲಿ ೩ ಡಿಪೋ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂದರು.
ಸಾರಿಗೆ ಸಂಸ್ಥೆಯ ಪ್ರತಿ ಘಟಕಗಳ ವ್ಯಾಪ್ತಿಯಲ್ಲಿ ಮಹಿಳೆಯರ ಸುರಕ್ಷತೆಯ ಹಿತದೃಷ್ಟಿಯಿಂದ ಪ್ರತ್ಯೇಕವಾದ ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆಯನ್ನು ನಿರ್ವಹಿಸಲಾಗಿದೆ. ಮಕ್ಕಳಿಗೆ ಮಹಿಳೆಯರು ಹಾಲು ಕುಡಿಸುವ ಸಲುವಾಗಿ ಫೀಡಿಂಗ್ ಕೊಠಡಿಗಳ ವ್ಯವಸ್ಥೆ ಸಹ ಮಾಡಲಾಗಿದೆ. ಈ ವ್ಯವಸ್ಥೆ ಇಲ್ಲದ ಕಡೆಗಳಲ್ಲಿ ಫೀಡಿಂಗ್ ಕೊಠಡಿಗಳ ನಿರ್ಮಾಣಕ್ಕೆ, ಆದ್ಯತೆ ನೀಡಲಾಗುತ್ತಿದೆ. ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಹಾವೇರಿ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ಪ್ರಯತ್ನ ಮಾಡಲಾಗುತ್ತಿದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ಆರೋಗ್ಯ ಸಮಸ್ಯೆಯಿಂದ ಗೃಹಲಕ್ಷ್ಮೀ ಯೋಜನೆ ಹಣ ಜಮೆಯಾಗುವುದು ವಿಳಂವಾಗಿದೆ, ಶೀಘ್ರದಲ್ಲೇ ಬಿಡುಗಡೆಮಾಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಇನ್ನು ಮುಂದು ೧೦ ಕೆ.ಜಿ. ವಿತರಣೆ ಮಾಡಲಾಗುವುದು, ಕಳಪೆ ಗುಣಮಪಟ್ಟ ಜೋಳ ವಿತರಣೆ ಸ್ಥಗಿತಗೊಳಿಸಲಾಗಿದೆ. ಯುವನಿಧಿ ಯೋಜನೆಯಡಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಣ ನೀಡುವ ಬದಲು ತರಬೇತಿ ನೀಡಲು ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಹಿರೇಮಠ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ. ಪಿ.ಎಸ್.ಬಿಷ್ಟನಗೌಡ್ರ ಇತರರು ಉಪಸ್ಥಿತರಿದ್ದರು.