ಜಾತಿ ಕಾಲಂನಲ್ಲಿ “ಮಾದಿಗ” ಎಂದು ಬರೆಸಿ; ಮೇಗಳಮನಿ ಮನವಿ
ಹಾವೇರಿ: ಒಳ ಮೀಸಲಾತಿ ಜಾರಿ ಸಂಬಂಧ ಪರಿಶಿಷ್ಟಜಾತಿಗಳ ಸಮೀಕ್ಷೆ ಈಗಾಗಲೇ ಮೇ. ೫ ರಿಂದ ಆರಂಭವಾಗಿದ್ದು ಮೇ ೧೭ರವರೆಗೆ ಮೊದಲ ಹಂತ, ಎರಡನೇ ಹಂತದಲ್ಲಿ ಮೇ ೧೯ ರಿಂದ ಮೇ ೨೧ರವರೆಗೆ, ಮೇ ೧೯ ರಿಂದ ಮೇ ೨೩ರವರೆಗೆ ಮೂರನೇ ಹಂತದ ಗಣತಿ ಜರುಗಲಿದ್ದು, ಮಾದಿg ಸಮಾಜದ ಬಂಧುಗಳು ಯಾವುದೇ ಹಿಂಜರಿಕೆಯಿಲ್ಲದೇ ಜಾತಿ ಕಾಲಂನಲ್ಲಿ “ಮಾದಿಗ” ಎಂದು ಬರೆಸುವಂತೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ ಮನವಿ ಮಾಡಿದ್ದಾರೆ.
ಮೇ.೧೫ರಂದು ಇಲ್ಲಿನ ಇಜಾರಿಲಕಮಾಪುರದಲ್ಲಿ ತಮ್ಮ ನಿವಾಸಕ್ಕೆ ಪರಿಶಿಷ್ಟಜಾತಿಗಳ ಸಮೀಕ್ಷೆಗೆ ಭೇಟಿ ನೀಡಿದ್ದ ಬಿಇಓ ಎಂ.ಎಚ್.ಪಾಟೀಲ ಸೇರಿದಂತೆ ಗಣತಿದಾರರ ಸಿಬ್ಬಂದಿಯನ್ನು ಬರಮಾಡಿಕೊಂಡು, ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಮಾಹಿತಿ ನೀಡಿ, ಮಾದಿಗ ಬಂಧುಗಳಲ್ಲಿ ಈ ಬಗ್ಗೆ ಮನವಿ ಮಾಡಿರುವ ಅವರು “ಮಾದಿಗ” ಜಾತಿಯ ಒಬ್ಬನೇ ಒಬ್ಬ ವ್ಯಕ್ತಿ ಅಥವಾ ಕುಟುಂಬ ಈ ಜಾತಿ ಸಮೀಕ್ಷೆಯಿಂದ ಹೊರಗೆ ಉಳಿದರೆ ಅದರ ಪರಿಣಾಮವನ್ನು ಶತಶತಮಾನಗಳವರೆಗೂ ಎದುರಿಸಬೇಕಾಗುತ್ತದೆ. ಸಮಾಜದ ಅಳಿವು ಉಳಿವಿನ ಪ್ರಶ್ನೆ ಇದಾಗಿದೆ.
ಜಾತಿಗಣತಿ ಸರ್ವೇಗೆ ಅಧಿಕಾರಿಗಳು ಆಗಮಿಸಿದ ವೇಳೆ ಜಾತಿ ಕಲಂನಲ್ಲಿ ಮಾದಿಗ ಎಂದು ಬರೆಸಬೇಕು. ಎಲ್ಲರೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು, ಶಿಕ್ಷಣ, ಉದ್ಯೋಗ ಸಿಗಬೇಕೆಂದರೆ ಮಾದಿಗ ಎಂದು ನಮೂದಿಸಬೇಕು. ಜಾತಿ ಕಲಂ ಖಾಲಿ ಬಿಟ್ಟರೆ ಅರ್ಜಿ ರಿಜೆಕ್ಟ್ ಆಗಲಿದೆ. ಎಲ್ಲಾ ರೀತಿಯ ಸೌಲಭ್ಯಗಳಿಂದಲೂ ವಂಚಿತರಾಗುವ ಸಾಧ್ಯತೆಗಳಿವೆ. ಒಳಮೀಸಲಾತಿ ಕಲ್ಪಿಸಬೇಕೆಂದು ೩೦ ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಹೋರಾಟದ ಫಲವಾಗಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಕಲ್ಪಿಸುವುದು ಆಯಾ ರಾಜ್ಯಗಳಿಗೆ ಅಧಿಕಾರವಿದೆ ಎಂದು ಹೇಳಿದೆ.
ಹೀಗಾಗಿಒಳ ಮೀಸಲಾತಿ ಜಾರಿ ಸಂಬಂಧ ಸಮೀಕ್ಷೆ ನಡೆಯುತ್ತಿದೆ. ನಮ್ಮ ಸಮುದಾಯ ಅನಾದಿ ಕಾಲದಿಂದಲೂ ಅತ್ಯಂತ ಹಿಂದುಳಿದ ಸಮಾಜ ಆಗಿದೆ. ಸರ್ಕಾರಿ ಸವಲತ್ತು ಪಡೆಯುವಲ್ಲಿ ವಿಫಲರಾಗಿದ್ದೇವೆ. ಇತರೆ ಸಹೋದರ ಸಮಾಜದಂತೆ ನಾವು ಸಹ ಅಭಿವೃದ್ಧಿಯತ್ತ ಸಾಗಲು ಸತತ ಹೋರಾಟ ಮಾಡಿದ್ದ ಫಲವಾಗಿ ಒಳ ಮೀಸಲಾತಿ ಜಾರಿಗೆ ಸಮೀಕ್ಷೆ ನಡೆಸಲಾಗುತ್ತದೆ. ಈ ಸಮೀಕ್ಷೆ ಬಳಿಕ ಸಿಗುವ ಅಂಕಿ ಅಂಶ ಆಧರಿಸಿ ಮೀಸಲಾತಿ ಪ್ರಮಾಣ ಸಿಗುತ್ತದೆ. ಹೀಗಾಗಿ ಮಾದಿಗ ಸಮುದಾಯದ ಬಾಂಧವರು, ಕುಟುಂಬದವರು ಜಾತಿ ಕಾಲಂನಲ್ಲಿ ಮಾದಿಗ ಎಂದು ಮಾತ್ರ ಬರೆಯಿಸಬೇಕು ಎಂದು ಪರಮೇಶ್ವರಪ್ಪ ಮೇಗಳಮನಿ ವಿನಂತಿಸಿಕೊಂಡಿದ್ದಾರೆ.
ಜಾತಿ ಕಾಲಂನಲ್ಲಿ “ಮಾದಿಗ” ಎಂದು ಬರೆಸಿ; ಮೇಗಳಮನಿ ಮನವಿ
Date:
ಜಾತಿ ಕಾಲಂನಲ್ಲಿ “ಮಾದಿಗ” ಎಂದು ಬರೆಸಿ; ಮೇಗಳಮನಿ ಮನವಿ
ಹಾವೇರಿ: ಒಳ ಮೀಸಲಾತಿ ಜಾರಿ ಸಂಬಂಧ ಪರಿಶಿಷ್ಟಜಾತಿಗಳ ಸಮೀಕ್ಷೆ ಈಗಾಗಲೇ ಮೇ. ೫ ರಿಂದ ಆರಂಭವಾಗಿದ್ದು ಮೇ ೧೭ರವರೆಗೆ ಮೊದಲ ಹಂತ, ಎರಡನೇ ಹಂತದಲ್ಲಿ ಮೇ ೧೯ ರಿಂದ ಮೇ ೨೧ರವರೆಗೆ, ಮೇ ೧೯ ರಿಂದ ಮೇ ೨೩ರವರೆಗೆ ಮೂರನೇ ಹಂತದ ಗಣತಿ ಜರುಗಲಿದ್ದು, ಮಾದಿg ಸಮಾಜದ ಬಂಧುಗಳು ಯಾವುದೇ ಹಿಂಜರಿಕೆಯಿಲ್ಲದೇ ಜಾತಿ ಕಾಲಂನಲ್ಲಿ “ಮಾದಿಗ” ಎಂದು ಬರೆಸುವಂತೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ ಮನವಿ ಮಾಡಿದ್ದಾರೆ.
ಮೇ.೧೫ರಂದು ಇಲ್ಲಿನ ಇಜಾರಿಲಕಮಾಪುರದಲ್ಲಿ ತಮ್ಮ ನಿವಾಸಕ್ಕೆ ಪರಿಶಿಷ್ಟಜಾತಿಗಳ ಸಮೀಕ್ಷೆಗೆ ಭೇಟಿ ನೀಡಿದ್ದ ಬಿಇಓ ಎಂ.ಎಚ್.ಪಾಟೀಲ ಸೇರಿದಂತೆ ಗಣತಿದಾರರ ಸಿಬ್ಬಂದಿಯನ್ನು ಬರಮಾಡಿಕೊಂಡು, ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಮಾಹಿತಿ ನೀಡಿ, ಮಾದಿಗ ಬಂಧುಗಳಲ್ಲಿ ಈ ಬಗ್ಗೆ ಮನವಿ ಮಾಡಿರುವ ಅವರು “ಮಾದಿಗ” ಜಾತಿಯ ಒಬ್ಬನೇ ಒಬ್ಬ ವ್ಯಕ್ತಿ ಅಥವಾ ಕುಟುಂಬ ಈ ಜಾತಿ ಸಮೀಕ್ಷೆಯಿಂದ ಹೊರಗೆ ಉಳಿದರೆ ಅದರ ಪರಿಣಾಮವನ್ನು ಶತಶತಮಾನಗಳವರೆಗೂ ಎದುರಿಸಬೇಕಾಗುತ್ತದೆ. ಸಮಾಜದ ಅಳಿವು ಉಳಿವಿನ ಪ್ರಶ್ನೆ ಇದಾಗಿದೆ.
ಜಾತಿಗಣತಿ ಸರ್ವೇಗೆ ಅಧಿಕಾರಿಗಳು ಆಗಮಿಸಿದ ವೇಳೆ ಜಾತಿ ಕಲಂನಲ್ಲಿ ಮಾದಿಗ ಎಂದು ಬರೆಸಬೇಕು. ಎಲ್ಲರೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು, ಶಿಕ್ಷಣ, ಉದ್ಯೋಗ ಸಿಗಬೇಕೆಂದರೆ ಮಾದಿಗ ಎಂದು ನಮೂದಿಸಬೇಕು. ಜಾತಿ ಕಲಂ ಖಾಲಿ ಬಿಟ್ಟರೆ ಅರ್ಜಿ ರಿಜೆಕ್ಟ್ ಆಗಲಿದೆ. ಎಲ್ಲಾ ರೀತಿಯ ಸೌಲಭ್ಯಗಳಿಂದಲೂ ವಂಚಿತರಾಗುವ ಸಾಧ್ಯತೆಗಳಿವೆ. ಒಳಮೀಸಲಾತಿ ಕಲ್ಪಿಸಬೇಕೆಂದು ೩೦ ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಹೋರಾಟದ ಫಲವಾಗಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಕಲ್ಪಿಸುವುದು ಆಯಾ ರಾಜ್ಯಗಳಿಗೆ ಅಧಿಕಾರವಿದೆ ಎಂದು ಹೇಳಿದೆ.
ಹೀಗಾಗಿಒಳ ಮೀಸಲಾತಿ ಜಾರಿ ಸಂಬಂಧ ಸಮೀಕ್ಷೆ ನಡೆಯುತ್ತಿದೆ. ನಮ್ಮ ಸಮುದಾಯ ಅನಾದಿ ಕಾಲದಿಂದಲೂ ಅತ್ಯಂತ ಹಿಂದುಳಿದ ಸಮಾಜ ಆಗಿದೆ. ಸರ್ಕಾರಿ ಸವಲತ್ತು ಪಡೆಯುವಲ್ಲಿ ವಿಫಲರಾಗಿದ್ದೇವೆ. ಇತರೆ ಸಹೋದರ ಸಮಾಜದಂತೆ ನಾವು ಸಹ ಅಭಿವೃದ್ಧಿಯತ್ತ ಸಾಗಲು ಸತತ ಹೋರಾಟ ಮಾಡಿದ್ದ ಫಲವಾಗಿ ಒಳ ಮೀಸಲಾತಿ ಜಾರಿಗೆ ಸಮೀಕ್ಷೆ ನಡೆಸಲಾಗುತ್ತದೆ. ಈ ಸಮೀಕ್ಷೆ ಬಳಿಕ ಸಿಗುವ ಅಂಕಿ ಅಂಶ ಆಧರಿಸಿ ಮೀಸಲಾತಿ ಪ್ರಮಾಣ ಸಿಗುತ್ತದೆ. ಹೀಗಾಗಿ ಮಾದಿಗ ಸಮುದಾಯದ ಬಾಂಧವರು, ಕುಟುಂಬದವರು ಜಾತಿ ಕಾಲಂನಲ್ಲಿ ಮಾದಿಗ ಎಂದು ಮಾತ್ರ ಬರೆಯಿಸಬೇಕು ಎಂದು ಪರಮೇಶ್ವರಪ್ಪ ಮೇಗಳಮನಿ ವಿನಂತಿಸಿಕೊಂಡಿದ್ದಾರೆ.