ಯೋಗ ಕೇವಲ ವ್ಯಾಯಾಮ ಅಲ್ಲ, ಆರೋಗ್ಯಕರ ಅಭ್ಯಾಸ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ

Date:

ಯೋಗ ಕೇವಲ ವ್ಯಾಯಾಮ ಅಲ್ಲ, ಆರೋಗ್ಯಕರ ಅಭ್ಯಾಸ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ
ಹಾವೇರಿ : ಯೋಗ ವೆಂದರೆ ಕೇವಲ ವ್ಯಾಯಾಮ ಅಲ, ಅದು ಆರೋಗ್ಯಕರ ಅಭ್ಯಾಸವಾಗಿದ್ದು, ಮಾನವನ ದೇಹ, ಮನಸ್ಸು ಮತ್ತು ಆತ್ಮವನ್ನು ಒಂದುಗೂಡಿಸುವ ಕೆಲಸವನ್ನು ಮಾಡುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ನಗರದ ರಜನಿ ಕಲ್ಯಾಣ ಮಂಟಪದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯು? ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾವೇರಿ ಇವರ ಸಹಯೋಗದಲ್ಲಿ ೧೧ ನೇ ಅಂತರರಾಷ್ಟೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಯೋಗವು ಕೇವಲ ವ್ಯಕ್ತಿಯ ಆರೋಗ್ಯಕ್ಕೆ ಮಾತ್ರವಲ್ಲದೆ ಸಮಾಜದ ಅರೋಗ್ಯಕ್ಕೂ ಮುಖ್ಯವಾಗಿದೆ.ಯೋಗವು ಆರೋಗ್ಯ ಮತ್ತು ಪರಿಸರ ಸಮತೋಲನೆಗೆ ಸಹಕಾರಿಯಾಗಿದೆ.ಈ ನಿಟ್ಟಿನಲ್ಲಿ ಜೂನ್ ೨೧ ರಂದು ವಿಶ್ವಾದ್ಯಾಂತ ಯೋಗ ದಿನಾಚರಣೆಯನ್ನು “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋ?ವಾಕ್ಯದೊಂದಿಗೆ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.
ಆಸ್ತಿ ಇದ್ದವರು ಮಾತ್ರ ಶ್ರೀಮಂತರಲ್ಲ. ಉತ್ತಮ ಅರೋಗ್ಯ ಹೊಂದಿದವರು ನಿಜವಾದ ಶ್ರೀಮಂತರು, ಜೀವನದಲ್ಲಿ ಕೇವಲ ಆಸ್ತಿ ಮುಖ್ಯವಲ್ಲ ಆಸ್ತಿ ಜೊತೆಗೆ ನಮಗೆ ಬೇಕಾಗಿರುವುದು ಒಳ್ಳೆಯ ಆರೋಗ್ಯ ಮತ್ತು ಯೋಗಕ್ಷೇಮ ಜೀವನದ ಸಂತೋ?ಕ್ಕೆ ಯೋಗ ಮುಖ್ಯ ಅಂಶವಾಗಿದೆ, ಕೇವಲ ಮಾತನಾಡುವುದರಿಂದ ಯಾವುದೇ ಪ್ರಯೋಜನವಿಲ್ಲ, ಯೋಗ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಉತ್ತಮ ಆರೋಗ್ಯ ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದರು.
ಯೋಗವು ಮಾನವ ಸಂಕುಲಕ್ಕೆ ಮತ್ತು ಪ್ರಾಚೀನ ಭಾರತಕ್ಕೆ ಒಂದು ಭವ್ಯ ಕೊಡುಗೆ ನೀಡಿದೆ.ಇವತ್ತಿನ ವೈವಿದ್ಯಮಯ ಜೀವನದಲ್ಲಿ ಸೌಹಾರ್ದತೆಯನ್ನು ಮೂಡಿಸಲು ಯೋಗವು ತುಂಬಾನೇ ಮಹತ್ವಧಾಯಕವಾಗಿದೆ ಈ ನಿಟ್ಟಿನಲ್ಲಿ ಜೂನ್ ೨೧ ಅನ್ನು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಇಡೀ ವಿಶ್ವದಾ ದ್ಯಾಂತ ಆಚರಿಸಲ್ಪಡುತ್ತದೆ ಅಂತಾರಾಷ್ಟ್ರೀಯ ಮಟ್ಟದ ವರೆಗೂ ಇಂದು ಯೋಗವು ಪಸರಿಸಿದೆ ಎಂದರು
ನಗರ ಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಮಾತನಾಡಿ, ಪ್ರತಿ ನಿತ್ಯ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವೃದ್ಧಿಗೆ ಸಹಕಾರಿಯಾಗಿದೆ. ಯೋಗದಿಂದ ಮನಸ್ಸು ಮತ್ತು ದೇಹವನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ಪ್ರತಿ ನಿತ್ಯ ಯೋಗ, ಪ್ರಾಣಾಯಾಮ ಮಾಡಿ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್ ಎಫ್ ಏನ್ ಗಾಜಿಗೌಡ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಜಿಲ್ಲಾ ಆಯು? ಅಧಿಕಾರಿ ಡಾ. ಜಿ.ಸಿ. ನಿಡಗುಂದಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಬಿ ಹೆಚ್, ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

Popular

ಯೋಗ ಕೇವಲ ವ್ಯಾಯಾಮ ಅಲ್ಲ, ಆರೋಗ್ಯಕರ ಅಭ್ಯಾಸ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ
ಹಾವೇರಿ : ಯೋಗ ವೆಂದರೆ ಕೇವಲ ವ್ಯಾಯಾಮ ಅಲ, ಅದು ಆರೋಗ್ಯಕರ ಅಭ್ಯಾಸವಾಗಿದ್ದು, ಮಾನವನ ದೇಹ, ಮನಸ್ಸು ಮತ್ತು ಆತ್ಮವನ್ನು ಒಂದುಗೂಡಿಸುವ ಕೆಲಸವನ್ನು ಮಾಡುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ನಗರದ ರಜನಿ ಕಲ್ಯಾಣ ಮಂಟಪದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯು? ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾವೇರಿ ಇವರ ಸಹಯೋಗದಲ್ಲಿ ೧೧ ನೇ ಅಂತರರಾಷ್ಟೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಯೋಗವು ಕೇವಲ ವ್ಯಕ್ತಿಯ ಆರೋಗ್ಯಕ್ಕೆ ಮಾತ್ರವಲ್ಲದೆ ಸಮಾಜದ ಅರೋಗ್ಯಕ್ಕೂ ಮುಖ್ಯವಾಗಿದೆ.ಯೋಗವು ಆರೋಗ್ಯ ಮತ್ತು ಪರಿಸರ ಸಮತೋಲನೆಗೆ ಸಹಕಾರಿಯಾಗಿದೆ.ಈ ನಿಟ್ಟಿನಲ್ಲಿ ಜೂನ್ ೨೧ ರಂದು ವಿಶ್ವಾದ್ಯಾಂತ ಯೋಗ ದಿನಾಚರಣೆಯನ್ನು “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋ?ವಾಕ್ಯದೊಂದಿಗೆ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.
ಆಸ್ತಿ ಇದ್ದವರು ಮಾತ್ರ ಶ್ರೀಮಂತರಲ್ಲ. ಉತ್ತಮ ಅರೋಗ್ಯ ಹೊಂದಿದವರು ನಿಜವಾದ ಶ್ರೀಮಂತರು, ಜೀವನದಲ್ಲಿ ಕೇವಲ ಆಸ್ತಿ ಮುಖ್ಯವಲ್ಲ ಆಸ್ತಿ ಜೊತೆಗೆ ನಮಗೆ ಬೇಕಾಗಿರುವುದು ಒಳ್ಳೆಯ ಆರೋಗ್ಯ ಮತ್ತು ಯೋಗಕ್ಷೇಮ ಜೀವನದ ಸಂತೋ?ಕ್ಕೆ ಯೋಗ ಮುಖ್ಯ ಅಂಶವಾಗಿದೆ, ಕೇವಲ ಮಾತನಾಡುವುದರಿಂದ ಯಾವುದೇ ಪ್ರಯೋಜನವಿಲ್ಲ, ಯೋಗ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಉತ್ತಮ ಆರೋಗ್ಯ ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದರು.
ಯೋಗವು ಮಾನವ ಸಂಕುಲಕ್ಕೆ ಮತ್ತು ಪ್ರಾಚೀನ ಭಾರತಕ್ಕೆ ಒಂದು ಭವ್ಯ ಕೊಡುಗೆ ನೀಡಿದೆ.ಇವತ್ತಿನ ವೈವಿದ್ಯಮಯ ಜೀವನದಲ್ಲಿ ಸೌಹಾರ್ದತೆಯನ್ನು ಮೂಡಿಸಲು ಯೋಗವು ತುಂಬಾನೇ ಮಹತ್ವಧಾಯಕವಾಗಿದೆ ಈ ನಿಟ್ಟಿನಲ್ಲಿ ಜೂನ್ ೨೧ ಅನ್ನು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಇಡೀ ವಿಶ್ವದಾ ದ್ಯಾಂತ ಆಚರಿಸಲ್ಪಡುತ್ತದೆ ಅಂತಾರಾಷ್ಟ್ರೀಯ ಮಟ್ಟದ ವರೆಗೂ ಇಂದು ಯೋಗವು ಪಸರಿಸಿದೆ ಎಂದರು
ನಗರ ಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಮಾತನಾಡಿ, ಪ್ರತಿ ನಿತ್ಯ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವೃದ್ಧಿಗೆ ಸಹಕಾರಿಯಾಗಿದೆ. ಯೋಗದಿಂದ ಮನಸ್ಸು ಮತ್ತು ದೇಹವನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ಪ್ರತಿ ನಿತ್ಯ ಯೋಗ, ಪ್ರಾಣಾಯಾಮ ಮಾಡಿ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್ ಎಫ್ ಏನ್ ಗಾಜಿಗೌಡ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಜಿಲ್ಲಾ ಆಯು? ಅಧಿಕಾರಿ ಡಾ. ಜಿ.ಸಿ. ನಿಡಗುಂದಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಬಿ ಹೆಚ್, ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Subscribe

spot_imgspot_img

More like this
Related

ಬಹುಮುಖ ಪ್ರತಿಭೆಯ ಸಂವೇದನಾಶೀಲ ವ್ಯೆದ್ಯ ಡಾ. ಸಂಜಯ್ ಡಾಂಗೆ

ಬಹುಮುಖ ಪ್ರತಿಭೆಯ ಸಂವೇದನಾಶೀಲ ವ್ಯೆದ್ಯ ಡಾ. ಸಂಜಯ್ ಡಾಂಗೆ ಸಣ್ಣ ಝರಿಯಾಗಿ ಎಲ್ಲೊ...

ಎಸ್‌ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ-ಜಿಲ್ಲಾ ಜಾಗೃತಿ ಸಮಿತಿಗೆ ನೇಮಕ  

ಎಸ್‌ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ-ಜಿಲ್ಲಾ ಜಾಗೃತಿ ಸಮಿತಿಗೆ ನೇಮಕ   ಹಾವೇರಿ: ಪರಿಶಿಷ್ಟ ಜಾತಿ-...

ಇನಸ್ಟಾಗ್ರಾಮ್ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ ೧೫ ಲಕ್ಷರೂ ವಂಚನೆ

ಇನಸ್ಟಾಗ್ರಾಮ್ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ ೧೫ ಲಕ್ಷರೂ ವಂಚನೆ ಹಾವೇರಿ:...