

ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ವರ್ಣರಂಜಿತ ತೆರೆ
ಸದೃಢವಾದ ದೇಹಕ್ಕೆ ಸದೃಢವಾದ ಮನಸ್ಸು ನೆಲೆಗೊಳ್ಳಲು ಕ್ರೀಡೆ ಸಹಕಾರಿ
-ಪೊಲೀಸ್ ಮಹಾ ನಿರೀಕ್ಷಕ ಡಾ.ಬಿ.ಆರ್.ರವಿಕಾಂತೇಗೌಡ
ಹಾವೇರಿ::
ಸದೃಢವಾದ ದೇಹಕ್ಕೆ ಸದೃಢ ವಾದ ಮನಸ್ಸು ನೆಲೆಗೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಸದೃಢ ದೇಹದ ಜೊತೆಗೆ ಮಾನಸಿಕ ಸದೃಢತೆ ಅವಶ್ಯಕತೆ ಇದೆ ಎಂದು
ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ.ಬಿ.ಆರ್.ರವಿಕಾಂತೇಗೌಡ ಅವರು ಹೇಳಿದರು.
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಹಾವೇರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ಸೋಲು – ಗೆಲುವು ಸಾಮಾನ್ಯ, ಸೋತವರು ಮುಂದಿನ ಬಾರಿ ಗೆಲ್ಲುತ್ತೇವೆ ಎಂಬಆತ್ಮವಿಶ್ವಾಸವಿರಬೇಕು. ಹಾವೇರಿ ಜಿಲ್ಲಾ ಪೊಲೀಸ್ ರಾಜ್ಯಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆಯಲಿ ಎಂದು ಶುಭ ಹಾರೈಸಿದರು.
ಕ್ರೀಡಾಕೂಟಗಳು ನಮ್ಮ ಇಲಾಖೆಯಲ್ಲಿ ನಡೆದ ಹಾಗೆ ಎಲ್ಲಿಯೂ ಇಷ್ಟು ಅಚ್ಚುಕಟ್ಟಾಗಿ ಯಾವುದೆ ಇಲಾಖೆಯಲ್ಲಿ ನಡೆಯುವುದಿಲ್ಲ. ಮುಂದೆ ಸಹ ಹೀಗೆ ಅಚ್ಚುಕಟ್ಟಾಗಿ ಕ್ರೀಡಾಕೂಟ ಆಯೋಜಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.
*ಬಹುಮಾನ ವಿತರಣೆ:* ಕಳೆದ ಮೂರುದಿನಗಳಿಂದ ಜರುಗಿದ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
*ವರ್ಣರಂಜಿತ ತೆರೆ* : ಬಾನoಗಳದಲ್ಲಿ ವಿವಿಧ ಚಿತ್ತಾರಗಳ ಸಿಡಿಮದ್ದು ಸಿಡಿಸುವ ಮೂಲಕ ಕ್ರೀಡಾಕೂಟಕ್ಕೆ
ವರ್ಣರಂಜಿವಾಗಿ ತೆರೆ ಎಳೆಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ ಸ್ವಾಗತಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ಶಿರಕೋಳ ವಂದಿಸಿದರು.

